ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು, ಮೊದಲ ಗಡುವು ಫೆಬ್ರವರಿ28ಕ್ಕೆ ಅಂತ್ಯವಾಗಿತ್ತು.

ಪೂರ್ಣ ಕೆವೈಸಿ ಅನಿವಾರ್ಯ : ಈ ಮೊದಲು ಮೊಬೈಲ್ಸಂಖ್ಯೆಗೆ ಒಟಿಪಿ ಆಧರಿಸಿ ಭಾಗಶಃ ಕೆವೈಸಿ ಮಾಡಬಹುದಿತ್ತು. ಆದರೆ, ಆರ್ಬಿಐ ಕಾನೂನುಗಳ ಪ್ರಕಾರವ್ಯಾಲೆಟ್ಗಳು ಸಕ್ರಿಯವಾಗಿರಲು ಪೂರ್ಣ ಕೆವೈಸಿ ಮಾಡಬೇಕಾಗಿದೆ. ಐಡಿ ಪ್ರೂಫ್ ಮತ್ತು ವಿಳಾಸಪುರಾವೆ ಸೇರಿದಂತೆ ವಿವಿಧ ದಾಖಲೆಗಳ ಸಲ್ಲಿಕೆಯನ್ನು ಕೆವೈಸಿ ಒಳಗೊಂಡಿದೆ.
ಭೌತಿಕ ಕೆವೈಸಿ : ಅಸ್ತಿತ್ವದಲ್ಲಿರುವ ನಮ್ಮ8,000 ಜನರ ಏಜೆಂಟ್ಗಳನ್ನು ಬಳಸಿಕೊಂಡು ನಮ್ಮ ಗ್ರಾಹಕರ ಭೌತಿಕ ಕೆವೈಸಿ ಮಾಡಲು ಯೋಜನೆಪ್ರಾರಂಭಿಸಲು ಚಿಂತನೆ ನಡೆಸುತ್ತಿದ್ದೇವೆ ಎಎಂದು ಫೋನ್ಪೇ ಸಹ-ಸಂಸ್ಥಾಪಕ ಮತ್ತು ಸಿಇಒ ಸಮೀರ್ನಿಗಮ್ ಹೇಳಿದ್ದಾರೆ. ಈ ಏಜೆಂಟ್ಗಳು ಈಗಾಗಲೇ ಫೋನ್ಪೆಯಲ್ಲಿ ಆಫ್ಲೈನ್ ವ್ಯಾಪಾರಿಗಳಿಗೆ ಕೆಲಸಮಾಡುತ್ತಿದ್ದಾರೆ. ವರ್ಷಾರಂಭದಲ್ಲಿ, ಅಮೆಜಾನ್ ಕೂಡ ತನ್ನ ವಾಲೆಟ್ ಅಮೆಜಾನ್ ಪೇ ಬಳಕೆದಾರರಿಗೆಇದೇ ರೀತಿಯ ಪ್ರಕ್ರಿಯೆ ಆರಂಭಿಸಿತ್ತು.

ಪರ್ಯಾಯ ಮಾರ್ಗಕ್ಕೆ ಅನುಮತಿಯಿಲ್ಲ ಬಳಕೆದಾರರ ಪರಿಶೀಲನೆಯನ್ನು ಪೂರ್ಣಗೊಳಿಸಲುವಿಡಿಯೋ ಕೆವೈಸಿಯಂತಹ ಪರ್ಯಾಯ ಆಯ್ಕೆಗಳನ್ನು ವ್ಯಾಲೆಟ್ ಕಂಪನಿಗಳು ನಿರೀಕ್ಷಿಸುತ್ತಿದ್ದವು. ಆದರೆ,ಆರ್ಬಿಐ ಇನ್ನೂ ಅಂತಹ ಯಾವುದೇ ಪರ್ಯಾಯ ವಿಧಾನಕ್ಕೆ ಅನುಮೋದನೆ ನೀಡಿಲ್ಲ. ಯುನಿಫೈಡ್ ಪೇಮೆಂಟ್ಸ್ಇಂಟರ್ಫೇಸ್ (ಯುಪಿಐ) ಮೂಲಕ ತನ್ನ ಬಹುಪಾಲು ವಹಿವಾಟುಗಳನ್ನು ನಿರ್ವಹಿಸುವ ಫೋನ್ಪೇ, ಸಣ್ಣ ಟಿಕೆಟ್ಗಾತ್ರದ ವಹಿವಾಟುಗಳಿಗೆ ವ್ಯಾಲೆಟ್ ಬಳಸುವ ಬಳಕೆದಾರರ ಸಕ್ರಿಯ ನೆಲೆಯನ್ನು ಹೊಂದಿದೆ. ಜುಲೈನಲ್ಲಿನಡೆದ 335 ಮಿಲಿಯನ್ ವಹಿವಾಟುಗಳಲ್ಲಿ, 300 ಮಿಲಿಯನ್ ವಹಿವಾಟುಗಳು ಯುಪಿಐನಿಂದ ಬಂದಿವೆ.
ಫೋನ್ಪೇಯುಭೌತಿಕ ಕೆವೈಸಿಗೆ ಮುಂದಾಗಿರುವುದು ಏಕೆಂದರೆ, ಗ್ರಾಹಕರು ತನ್ನ ಪ್ಲಾಟ್ಫಾರ್ಮ್ನಲ್ಲಿ ವಹಿವಾಟುಮುಂದುವರಿಸಲಿ ಎಂಬುದು ಪ್ರಮುಖ ಅಂಶವಾಗಿದೆ. ಅಮೆಜಾನ್ನಂತಹ ಕಂಪನಿಗಳು ಸಹ ಇದೇ ಕಾರಣಗಳಿಗಾಗಿ ಭೌತಿಕಕೆವೈಸಿಯನ್ನು ಪ್ರಯತ್ನಿಸಿದ್ದವು. ಅಂದಾಜಿನ ಪ್ರಕಾರ ಕನಿಷ್ಠ 70% ವ್ಯಾಲೆಟ್ ಖಾತೆಗಳು ಸಂಪೂರ್ಣಕೆವೈಸಿ ಮಾನದಂಡಗಳಿಗೆ ಅನುಗುಣವಾಗಿಲ್ಲ ಎಂಬುದು ಕೂಡ ವರದಿಯಾಗಿದೆ

ದುಬಾರಿ ಪ್ರಕ್ರಿಯೆ : ಈ ಪ್ರಕ್ರಿಯೆ ದುಬಾರಿ ಮಾತ್ರವಲ್ಲದೆ, ವಾರದ ದಿನಗಳಲ್ಲಿಗ್ರಾಹಕರು ಹಾಜರಾಗಲು ಸಿದ್ಧರಿರುವ ಸಮಯ ಸ್ಲಾಟ್ಗಳನ್ನು ಹೊಂದಿಸುವುದು ಕಠಿಣವಾಗಿದೆ ಅಥವಾ ಅನೇಕವ್ಯಾಲೆಟ್ಗಳು ಕೂಡ ಇದೇ ಪ್ರಕ್ರಿಯೆ ನಡೆಸುತ್ತವೆ ಎಂದು ಉದ್ಯಮದ ಮೂಲಗಳು ತಿಳಿಸಿವೆ. ಹೆಚ್ಚಿನ ಗ್ರಾಹಕರುಸಾಮಾನ್ಯವಾಗಿ ತಮ್ಮ ಫೋನ್ನಲ್ಲಿ ಎರಡು ಅಥವಾ ಮೂರು ಮೊಬೈಲ್ ವ್ಯಾಲೆಟ್ಗಳನ್ನು ಹೊಂದಿರುತ್ತಾರೆ.ಈ ಮೊದಲು ಇ-ಕೆವೈಸಿ ಬೆಲೆ 15 ರೂ., ಈಗ ಭೌತಿಕ ಕೆವೈಸಿ ವೆಚ್ಚ ಕನಿಷ್ಠ 100 ರೂ. ಆಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ಹತ್ತಿರವಾಗುತ್ತಿದ್ದಂತೆ ಮತದಾನದ ಬಗ್ಗೆ ಹರಿವು ಮೂಡಿಸುವ ಅನೇಕ ಪ್ರಯತ್ನಗಳು ನಡೆಯುತ್ತಿವೆ.ಈಗಾಗಲೇ ಚುನಾವಣಾ ಆಯೋಗ ಕೂಡ ಹಲವು ವಿಡಿಯೋಗಳು ಸೇರಿದಂತೆ ಪ್ಲೆಕ್ಸ್ ಬ್ಯಾನರ್’ಗಳನ್ನೂ ಹಾಕಿ ಜನರಲ್ಲಿ ಮತದಾನದ ಹರಿವು ಮೂಡಿಸುತ್ತಿದ್ದಾರೆ. ಇದರ ಜೊತೆಗೆ ಹಲವು ಸಂಘಟನೆಗಳು ಕೂಡ ಜನರಲ್ಲಿ ಅದರಲ್ಲೂ ಯುವಕರಲ್ಲಿ, ವಿಧ್ಯಾರ್ಥಿಗಳಲ್ಲಿ ಮತದಾನದ ಹರಿವು ಮೂಡಿಸುವ ಸಲುವಾಗಿ ವಿಧ್ಯಾರ್ಥಿಗಳಿಗಾಗಿ ಹಲವು ಆಫರ್’ಗಳನ್ನೂ ನೀಡಲು ಮುಂದಾಗಿವೆ. ಹೌದು, ಬೆಂಗಳೂರಿನ ಸಂಘಟನೆಯೊಂದು ವೋಟ್ ಹಾಕುವ ವಿದ್ಯಾರ್ಥಿಗಳಿಗೆಲ್ಲಾ ಉಚಿತವಾಗಿ ಇಂಟರ್ ನೆಟ್…
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪುಲ್ವಾಮ ದಾಳಿ ನಂತ್ರ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಏರ್ ಸ್ಟ್ರೈಕ್ ನಡೆಸಿದೆ. ಗಡಿ ನಿಯಂತ್ರಣ ರೇಖೆಯಲ್ಲಿರುವ ಜೈಷ್ ಉಗ್ರ ಸಂಘಟನೆ ಅಡಗು ತಾಣದ ಮೇಲೆ ರಾತ್ರಿ ಸುಮಾರು 3.30 ರ ಸುಮಾರಿಗೆ ಬಾಂಬ್ ದಾಳಿ ನಡೆಸಿದ್ದವು. 12 ಮಿರಾಜ್-2000 ಯುದ್ಧ ವಿಮಾನಗಳು 1000 ಕೆ.ಜಿ ಬಾಂಬ್ ದಾಳಿ ಮಾಡಿದ್ದವು. ದಾಳಿ ಬಗ್ಗೆ ಪಾಕಿಸ್ತಾನಕ್ಕೆ ಸಣ್ಣ ಸುಳಿವೂ ಇರಲಿಲ್ಲ. ವ್ಯವಸ್ಥಿತವಾಗಿ ದಾಳಿ ನಡೆಸಿದ್ದ ಸೇನೆ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ….
ಗೃಹಲಕ್ಷ್ಮಿ ಹಣ ಬಾರದಿದ್ದಲ್ಲಿ ಏನು ಮಾಡಬೇಕು…? ಇಲ್ಲಿದೆ ಮಾಹಿತಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಕೆಲವೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ, ಹಾಗಿದ್ದರೆ ಹೇಗೆ ಚೆಕ್ ಮಾಡುವುದು? ನಿಮ್ಮ ಅರ್ಜಿ ಸರಿಯಾಗಿ ಸಲ್ಲಿಕೆ ಆಗಿದೆಯಾ? ಅಥವಾ ಇಲ್ಲ. ಸಲ್ಲಿಕೆ ಆಗಿದ್ದರೂ ಬ್ಯಾಂಕ್ ಖಾತೆಯ ಸಮಸ್ಯೆ ಇದೆಯಾ ಎಂಬುದನ್ನು ಮೊದಲಿಗೆ ತಿಳಿದು ಕೊಳ್ಳಬೇಕಾಗುತ್ತದೆ. ಲಕ್ಷಾಂತರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿದ್ದರೂ ಕೂಡ ಇದುವರೆಗೂ ಅಸಂಖ್ಯಾತ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. 1.1 ಕೋಟಿ…
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಇಂದು ಶನಿವಾರ , 31/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಲೋಹಗಳ ಉದ್ಯಮಿಗಳಿಗೆ ಹೆಚ್ಚಿನ ಪ್ರಗತಿ. ಕಲಾವಿದರಿಗೆ ಕನಸು ನನಸಾಗುವ ದಿನ. ವಿದೇಶ ಪ್ರಯಾಣಕ್ಕೆ ಯೋಜನೆ ನಿರ್ಮಾಣ ಮಾಡಲಿದ್ದೀರಿ. ಆರೋಗ್ಯ ವಿಷಯದಲ್ಲಿ ಉತ್ತಮ ದಿನವಾಗಿದೆ. ಯೋಗ್ಯ ವಯಸ್ಕರು ಕಂಕಣಧಾರಿಗಳಾದಾರು. ಚಿಲ್ಲರೆ ವ್ಯಾಪಾರಿಗಳಿಗೆ ತೃಪ್ತಿಕರ ಲಾಭ ವಿರುತ್ತದೆ. ದೈವಸಾನ್ನಿಧ್ಯದ ಬಗ್ಗೆ ಯಾತ್ರಾದಿಗಳಿರುತ್ತವೆ. ಭೂ ಖರೀದಿಗಳಿಗೆ ಅನುಕೂಲಕರ ವಾತಾವರಣ. ವೃಷಭ:- ಕಾರ್ಯಗಳು ಮುನ್ನಡೆಯನ್ನು ಸಾಧಿಸಲಿವೆ. ಅವಿರತ ಶ್ರಮದ ಬೆಲೆ ನಿಮಗೆ ನಿಶ್ಚಿತ ರೂಪದಲ್ಲಿ ಗೋಚರಕ್ಕೆ…