News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಆದಿವಾಸಿಗಳ ಪಾಲಿಗೆ ಮರಣ ಶಾಸನವಾದ ನೂತನ ಅರಣ್ಯ ಕಾಯ್ದೆ,.ಇದನ್ನೊಮ್ಮೆ ಓದಿ …!

253

ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ ಆದಿವಾಸಿಗಳ ಅರಣ್ಯದ ಮೇಲಿನ ಹಕ್ಕುಗಳ ಅರ್ಜಿಗಳ ಪರಿಶೀಲನಾ ಕಾರ್ಯಕೂಡ ಬಿರುಸಿನಿಂದ ನಡೆಯುತ್ತಿದೆ. 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಆದಿವಾಸಿಗಳಿಗೆ ದಯಪಾಲಿಸಿದ್ದ ಇದೇ ಸರ್ವೋಚ್ಛನ್ಯಾಯಾಲಯವು ಇದೀಗ ಎಲ್ಲರನ್ನು ಸಾಮೂಹಿಕವಾಗಿ ಅರಣ್ಯಗಳಿಂದ ತೆರವುಗೊಳಿಸಬೇಕು ಎಂಬ ತೀರ್ಪು ನೀಡುವುದರ ಮೂಲಕ ತನ್ನ ಧ್ವಂದ್ವ ನೀತಿಯನ್ನು ಅನಾವರಣಗೊಳಿಸಿದೆ.

ಮೂರು ಕೋಟಿಗೂ ಅಧಿಕ ಮಂದಿ ಬುಡಕಟ್ಟು ಸಮುದಾಯದ ಜನತೆ ಭಾರತದ ಅರಣ್ಯಗಳಲ್ಲಿ ಅನೇಕ ಶತಮಾನಗಳದಿಂದಲೂ ಬದುಕು ಕಟ್ಟಿಕೊಂಡಿದ್ದಾರೆ. ಅವರ ಜೊತೆಗೆ ಅರಣ್ಯದಂಚಿನಲ್ಲಿ ಬದುಕುತ್ತಿರುವ ಹಿಂದುಳಿದ ಹಲವಾರು ಸಮುದಾಯಗಳು, ಬೇಸಾಯ ಮತ್ತು ಅರಣ್ಯದ ಕಿರುಉತ್ಪನ್ನಗಳನ್ನು ನಂಬಿ ಬದುಕುತ್ತಿವೆ. ಈ ತೀರ್ಪಿನ ವಿರುದ್ಧ ಈಗಾಗಲೇ ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳು ಮೇಲ್ಮನವಿ ಸಲ್ಲಿಸಿವೆ. ಜೊತೆಗೆ ದೇಶ್ಯಾದ್ಯಂತ ನಾಗರೀಕರಿಂದ ಪ್ರತಿಭಟನೆ ಮತ್ತು ಟೀಕೆಗಳು ವ್ಯಕ್ತವಾಗಿದ್ದವು. ಇದನ್ನು ಮನಗಂಡ ನ್ಯಾಯಾಲಯ ತಾತ್ಕಾಲಿಕವಾಗಿ ತನ್ನ ತೀರ್ಪನ್ನು ತಡೆ ಹೊಡಿದಿದೆ. ಈ ನಡುವೆ ಕೇಂದ್ರ ಸರ್ಕಾರದ ಅರಣ್ಯ ಸಚಿವಾಲಯವು ಅತ್ಯಂತ ಗುಪ್ತವಾಗಿ ನೂತನ ಅರಣ್ಯಕಾಯ್ದೆಯೊಂದನ್ನು ರಚಿಸಿದ್ದು, ಅದನ್ನು ಜಾರಿಗೆ ತರಲು ಹುನ್ನಾರ ನಡೆಸಿದೆ. ಅಕಸ್ಮಾತ್ ಈ ಕಾಯ್ದೆಯು ಜಾರಿಗೆ ಬಂದಿದ್ದೇ ಆದರೆ, ಇದನ್ನು ನಾವು ಭಾರತದ ಆದಿವಾಸಿಗಳ ಪಾಲಿಗೆ ಮರಣ ಶಾಸನ ಎಂದು ಬಣ್ಣಿಸಬಹುದು.

ಆದಿವಾಸಿಗಳೆಂದರೆ, ಆರಣ್ಯ ನಾಶಕರು ಎಂದು ನಂಬಿರುವ ಇಂದಿನ ಆಡಳಿತ ವ್ಯವಸ್ಥೆಯ ತಲೆಯೊಳಗೆ ಮಲ ತುಂಬಿಕೊಂಡಿದೆ ಎಂದರೆ, ತಪ್ಪಾಗಲಾರದು. ಈ ದೇಶದಲ್ಲಿ ಇನ್ನೂ ಅರಣ್ಯ ಮತ್ತು ಅಲ್ಲಿನ ಜೀವಸಂಕುಲ ಜೀವಂತವಾಗಿದ್ದರೆ ಅಥವಾ ಸುರಕ್ಷಿತವಾಗಿದ್ದರೆ ಅದು ಅರಣ್ಯವಾಸಿಗಳಾದ ಆದಿವಾಸಿಗಳಿಂದ ಮತ್ತು ಅವರು ನಂಬಿಕೊಂಡು ಬಂದಿರುವ ನಮ್ಮ ನೆಲಮೂಲ ಸಂಸ್ಕೃತಿ ಮತ್ತು ಪರಂಪರೆಯಿಂದ ಎಂಬುದನ್ನು ನಾವ್ಯಾರೂ ಮರೆಯುವಂತಿಲ್ಲ. ಇದರ ಜೊತೆಗೆ ನಮ್ಮ ಜನಪದರು ಗ್ರಾಮೀಣ ಭಾಗದಲ್ಲಿ ನಾಗಬಮ. ದೇವರ ಕಾಡು ಹೆಸರಿನಲ್ಲಿ ಅರಣ್ಯವನ್ನು ಪೋಷಿಸಿಕೊಂಡು ಬಂದಿದ್ದಾರೆ. ಅರಣ್ಯಾಧಿಕಾರಿಗಳು ಎಂಬ ಈ ಬಿಳಿಯಾನೆಗಳಿಂದ ಭಾರತದಲ್ಲಿ ಅರಣ್ಯಗಳು ಮತ್ತು ಅಲ್ಲಿನ ಪ್ರಾಣಿ ಮತ್ತು ಪಕ್ಷಿ ಸಂಕುಲ ಅಭಿವೃದ್ಧಿಯಾಗಿದ್ದರೆ ಅದು ಅವರ ಕಡತಗಳಲ್ಲಿ ಮಾತ್ರ.

ಪಕ್ಷಭೇದವಿಲ್ಲದೆ ಎಲ್ಲಾ ಕೇಂದ್ರ ಸರ್ಕಾರಗಳು ಆದಿವಾಸಿಗಳ ಬದುಕಿನ ಜೊತೆ ನಿರಂತರವಾಗಿ ಚೆಲ್ಲಾಟವಾಡುತ್ತಲೇ ಬಂದಿವೆ. ಅವರಿಗೊಂದು ಶಾಶ್ವತ ನೆಲೆ ಕಲ್ಪಿಸಿಕೊಡಲು ವಿಫಲವಾಗಿವೆ. ಈಗವರೆಗಿನ ಕಾನೂನುಗಳು, ತಿದ್ದುಪಡಿಗಳು ಮತ್ತು ಶಿಫಾರಸ್ಸುಗಳು ಅವರನ್ನೂ ಸದಾ ಅತಂತ್ರದ ಸ್ಥಿತಿಯಲ್ಲಿ ನಿಲ್ಲಿಸಿವೆ. 1976 ರಲ್ಲಿ ರಾಷ್ಟ್ರೀಯ ಕೃಷಿ ಆಯೋಗವು ಆದಿವಾಸಿಗಳನ್ನು ಅರಣ್ಯದಿಂದ ಹೊರದಬ್ಬಬೇಕೆಂದು ಶಿಫಾರಸ್ಸು ಮಾಡಿತ್ತು. ಇದರ ಅನ್ವಯ 1980ರಲ್ಲಿ ಭಾರತದ ಅರಣ್ಯ ರಕ್ಷಣಾ ಕಾಯ್ದೆಯು ಜಾರಿಗೆ ಬಂದಿತು. ಆದರೆ, 1988 ರಲ್ಲಿ ಜಾರಿಯಾದ ಮತ್ತೊಂದು ಭಾರದ ಅರಣ್ಯ ನಿಯಮವೊಂದು ಜಾರಿಗೆ ಬಂದು ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸದೆ ಕರುಣೆ ತೋರಿತು. ಜೊತೆಗೆ 1996 ರಲ್ಲಿ ಅಸ್ತಿತ್ವಕ್ಕೆ ತರಲಾದ ಬುಡಕಟ್ಟು ಜನಾಂಗಗಳ ರಕ್ಷಾಣಾ ಕಾಯ್ದೆಯು ಆದಿವಾಸಿಗಳ ಪಾಲಿಗೆ ರಕ್ಷಣಾ ಗೋಡೆಯಾಗಿ ಪರಿಣಮಿಸಿತು. ಇವೆಲ್ಲಾ ಗೊಂದಲಗಳ ನಡುವೆಯೂ ಅರಣ್ಯವಾಸಿಗಳ ಬಲುದಿನಗಳ ಬೇಡಿಕೆಯಾದ ‘ಜಲ್, ಜಂಗಲ್, ಜಮೀನ್’ ( ಜಲ, ಅರಣ್ಯ ಮತ್ತು ಜಮೀನು) ಪೂರ್ಣವಾಗಿ ಯಶಸ್ವಿಯಾಗಲಿಲ್ಲ. ನಕ್ಸಲ್ ಹಿಂಸಾಚಾರವನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮತ್ತು ಆದಿವಾಸಿಗಳು ಮಾವೋವಾದಿ ನಕ್ಸಲರ ಹಿಡಿತಕ್ಕೆ ಸಿಲುಕದಿರಲಿ ಎಂಬ ಆಲೋಚನೆಯಿಂದ 2006ರಲ್ಲಿ ಅರಣ್ಯದ ಕಿರು ಉತ್ಪನ್ನಗಳ ಮೇಲಿನ ಹಕ್ಕನ್ನು ಅವರಿಗೆ ದಯಪಾಲಿಸಿದ ಸುಪ್ರೀಂ ಕೋರ್ಟ್ ನ ಮಹತ್ವದ ತೀರ್ಪಿನಿಂದಾಗ ಅವರುಗಳು ಒಂದಿಷ್ಟು ಕಾಲ ನೆಮ್ಮದಿಯಿಂದ ಇದ್ದರು. ಜೊತೆಗೆ ತಮ್ಮ ಹಕ್ಕು ಸ್ಥಾಪಿಸಲು ಹೋರಾಡುತ್ತಿದ್ದಾರೆ. ಇಂದಿಗೂ ಕೂಡ ದೇಶಾದ್ಯಂತ ರಾಜ್ಯಗಳ ಅರಣ್ಯ ಇಲಾಖೆಗಳಲ್ಲಿ ಅರಣ್ಯವಾಸಿಗಳು ಅಧಿಕೃತ ವಾಸ ಕುರಿತಂತೆ ಮತ್ತು ಅವರು ಹೊಂದಿರುವ ಭೂಮಿ ಕುರಿತಂತೆ ನಾಲ್ಕು ಲಕ್ಷದ 21 ಸಾವಿರ ಅರ್ಜಿಗಳು ವಿಲೇವಾರಿಯಾಗದೆ ಕೊಳೆಯುತ್ತಿವೆ. ಈವರೆಗೆ 79 ಸಾವಿರ ಅರ್ಜಿಗಳು ಮಾತ್ರ ವಿಲೇವಾರಿಯಾಗಿವೆ. ಕರ್ನಾಟಕದಲ್ಲಿ 53 ಸಾವಿರದ 785 ಅರ್ಜಿಗಳು ಬಾಕಿ ಉಳಿದಿವೆ. ಛತ್ತೀಸ್ ಗಡ ರಾಜ್ಯದ ಒಟ್ಟು ವಿಸ್ತಿರ್ಣದ ಶೇಕಡ 44ರಷ್ಟು ಅರಣ್ಯ ಭೂಮಿಯಿದ್ದು ಅರಣ್ಯವಾಸಿಗಳಿಗೆ ಅದು ಶಾಶ್ವತ ನೆಲೆಯಾಗಿದೆ. ಜೊತೆಗೆ ಮಧ್ಯಪ್ರದೇಶ ಮತ್ತು ಒಡಿಸ್ಸಾ ರಾಜ್ಯದಲ್ಲಿಯೂ ಕೂಡ ಅತ್ಯಧಿಕ ಮಂದಿ ಅರಣ್ಯವಾಸಿಗಳಿದ್ದಾರೆ. ಸರ್ವೋಚ್ಛ ನ್ಯಾಯಾಲಯವು ವಿಚಾರಣೆಯ ಸಂದರ್ಭದಲ್ಲಿ ಇಂತಹ ಸೂಕ್ಷ್ಮವಾದ ವಿಷಯಗಳನ್ನು ಎಲ್ಲಾ ಆಯಾಮಗಳಿಂದಲೂ ಹಾಗೂ ಆದಿವಾಸಿಗಳ ಇತಿಹಾಸವನ್ನು, ಅವರ ವರ್ತಮಾನದ ಬದುಕನ್ನು ಮತ್ತು ಭವಿಷ್ಯವನ್ನು ಗಮನದಲ್ಲಿರಿಸಿಕೊಂಡು ತನ್ನ ತೀರ್ಪನ್ನು ನೀಡಬೇಕಿದೆ.

ಈ ಹೊಸ ಕಾಯ್ದೆಯನ್ನು ರೂಪಿಸುವಾಗಪ್ರಜ್ಞಾಪೂರ್ವಕವಾಗಿ ಕೇಂದ್ರ ಬುಡಕಟ್ಟು ಸಚಿವಾಲಯದ ಅಧಿಕಾರಿಗಳನ್ನು ಮತ್ತು ಪರಿಸರವಾದಿಗಳು ಮತ್ತು ಮಾನವ ಹಕ್ಕು ಆಯೋಗದ ಸದಸ್ಯರನ್ನು ದೂರ ಇಟ್ಟು ಕೇವಲ ಅರಣ್ಯಾಧಿಕಾರಿಗಳು  ಮಾತ್ರ ಇದರಲ್ಲಿ ಭಾಗಿಯಾಗಿದ್ದಾರೆ. ಇದು ಆಡಳಿತ ಶಾಹಿಯ ಹುನ್ನಾರದಂತೆ ಕಾಣುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ತಂತ್ರಜ್ಞಾನ

    ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ.

  • ಉಪಯುಕ್ತ ಮಾಹಿತಿ

    ಮುಖೇಶ್ ಅಂಬಾನಿ ಕಾರ್ ಡ್ರೈವರ್‌ಗೆ ಕೊಡೋ ಸಂಬಳ ಎಷ್ಟು ಗೊತ್ತಾ? ಕೇಳಿದ್ರೆ ಶಾಕ್ ಆಗ್ತೀರಿ..! ತಿಳಿಯಲು ಇದನ್ನು ಓದಿ..

    ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್‌ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?

  • ಸರ್ಕಾರದ ಯೋಜನೆಗಳು

    ಪ್ರಧಾನ ಮಂತ್ರಿ ಈ ಯೋಜನೆ ಮಾಡಿಸಿದವರಿಗೆ ನೂರೆಂಟು ಲಾಭ! ತಿಳಿಯಲು ಈ ಲೇಖನ ಓದಿ..

    ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…

  • ಉಪಯುಕ್ತ ಮಾಹಿತಿ

    ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳ!

    ಬೆಂಗಳೂರು(05-01-2023): ವಸತಿ ಯೋಜನೆಗಳ ಫ‌ಲಾನುಭವಿಗಳಿಗೆ ಗ್ರಾಮೀಣ ಭಾಗದಲ್ಲಿ ನೀಡುತ್ತಿದ್ದ ಸಹಾಯಧನ ಮೊತ್ತವನ್ನು 1.20 ಲಕ್ಷ ರೂ.ನಿಂದ 3 ಲಕ್ಷ ರೂ.ಗೆ ಹಾಗೂ ನಗರ ಮತ್ತು ಪಟ್ಟಣ ಪ್ರದೇಶದಲ್ಲಿ ನೀಡುತ್ತಿದ್ದ 2.70 ಲಕ್ಷ ರೂ.ನಿಂದ 4 ಲಕ್ಷ ರೂ.ಗೆ ಹೆಚ್ಚಳ ಮಾಡುವ ಮಹತ್ವದ ತರ‍್ಮಾನಕ್ಕೆ ಸರ್ಕಾರ ಮುಂದಾಗಿದೆ. ಬಡತನರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಸೂರು ಕಲ್ಪಿಸುವ ಬಸವ, ಅಂಬೇಡ್ಕರ್‌ ಸೇರಿ ರಾಜ್ಯದಲ್ಲಿ ಜಾರಿಯಲ್ಲಿರುವ ವಸತಿ ಯೋಜನೆಗಳಿಗೆ ನೀಡುವ ಸಹಾಯಧನದ ಮೊತ್ತ ಹೆಚ್ಚಳವಾಗಲಿದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಮಾಡಿಕೊಡುವ ಹಾಗೂ…

  • ಸುದ್ದಿ

    ಈ ಜಾಗದಲ್ಲಿ ನಿಜಕ್ಕೂ ಸಿಗ್ತಾ 3350 ಟನ್ ಚಿನ್ನ, ಸತ್ಯ ಬಾಯ್ಬಿಟ್ಟ ವಿಜ್ಞಾನಿಗಳು.

    ಪ್ರತಿಯೊಂದು ದೇಶವೂ ಕೂಡ ತನ್ನ ದೇಶದ ಭೌಗೋಳಿಕ ಸಂಪತ್ತನ್ನು ಹುಡುಕುವ ಪ್ರಯತ್ನವನ್ನು ಯಾವಾಗಲೂ ಕೂಡ ಮಾಡುತ್ತಲೇ ಇರುತ್ತದೆ. ಅದೇ ರೀತಿಯಲ್ಲಿ ಭಾರತದಲ್ಲಿ ಕೂಡ ಅದೆಷ್ಟೋ ಭಾಗಗಲ್ಲಿ ಚಿನ್ನದ ಗಣಿಯನ್ನು ಹುಡುಕುವ ಅದೆಷ್ಟೋ ಪ್ರಯತ್ನಗಳು ನಡೆದಿದ್ದವು. ಆದರೆ ಯಾವುದು ಕೂಡ ಅಷ್ಟೊಂದು ದೊಡ್ಡ ಮಟ್ಟದ ಯಶಸ್ಸು ನೀಡಿರಲಿಲ್ಲ. ಆದರೆ ಸದ್ಯಕ್ಕೆ ಈಗ ಭಾರತದಲ್ಲಿ ಇರುವ ಒಟ್ಟಾರೆ ಚಿನ್ನದ ನಿಕ್ಷೇಪಕ್ಕಿಂತ ಐದು ಪಟ್ಟು ಹೆಚ್ಚು ಚಿನ್ನದ ಗಣಿ ಪತ್ತೆಯಾಗಿದೆ ಎನ್ನುವ ಸುದ್ದಿಯೊಂದು ಇದ್ದಕಿದ್ದಂತೆ ದೇಶದ ಎಲ್ಲ ಮಾಧ್ಯಮಗಳು ಈ ಸುದ್ದಿ…

  • ಸುದ್ದಿ

    ಸೊಪ್ಪು ಮಾರುವ ಹುಡುಗನನ್ನು ಲವ್ ಮಾಡಿ ಮದುವೆಯಾದ ಚೈತ್ರಾ ಕೋಟೂರ್ ;ಇವರು ಹೇಳಿದ ಈ ಕಥೆ ನಿಜಾನಾ?

    ಬಿಗ್ ಬಾಸ್ ಸೀಸನ್ ನಲ್ಲಿ ತುಂಬಾ ವಿಚಿತ್ರವಾದ ಸ್ಪರ್ದಿ ಎಂದರೆ ಅವರು ಚೈತ್ರಾ ಕೋಟೂರ್‌ .ಚೈತ್ರಾ ಕೋಟೂರ್‌ಗೆ ಈ ನವೆಂಬರ್ ಬಂದರೆ  ಮದುವೆಯಾಗಿ ಮೂರು ವರ್ಷ ಆಗುತ್ತಂತೆ. ಆ ಹುಡುಗ ಸೊಪ್ಪು ಮಾರುತ್ತಿದ್ದಾನಂತೆ. ಶಾಸ್ತ್ರೋಕ್ತವಾಗಿ ಮದುವೆಯಾಗಿಲ್ವಂತೆ, ಸೈನ್ ಮಾಡಿ ಮದುವೆಯಾಗಿದ್ದಾರಂತೆ. ವ್ಯಕ್ತಿತ್ವ ನೋಡಿ ಮದುವೆಯಾಗಬೇಕು. ಸೊಪ್ಪು ಮಾರುವವರಿಗೆ, ತರಕಾರಿ ಮಾರುವವರಿಗೂ ಕೂಡ ಓದಿರುವವರನ್ನು ಮದುವೆಯಾಗಬೇಕು ಎಂಬ ಆಸೆ ಇರತ್ತೆ ಎಂದಿದ್ದಾರೆ ಚೈತ್ರಾ ಕೋಟೂರ್‌. ಸೊಪ್ಪು ಮಾರುವವನ ಮೇಲೆ ಚೈತ್ರಾಗೆ ಲವ್ ಆಗಿದ್ದೇಗೆ?ಮಾರ್ಕೆಟ್‌ ವಿಚಾರವಾಗಿ ಚೈತ್ರಾರಿಗೆ ಶೈನ್ ಶೆಟ್ಟಿ, ಸುಜಾತಾ…