ಸುದ್ದಿ

ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

91

ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ

ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ರೈಲ್ವೆ ಸಚಿವ ಪಿಯೂಶ್‌ ಗೋಯಲ್‌ಗೆ ಪತ್ರ ಬರೆದಿದ್ದೇನೆ,”ಎಂದು ಗಡ್ಕರಿ ಹೇಳಿದ್ದಾರೆ.  ಪ್ರಸ್ತುತ ವಾರಾಣಸಿ ಮತ್ತು ರಾಯ್‌ ಬರೇಲಿಯ ಎರಡು ರೈಲ್ವೆ ನಿಲ್ದಾಣಗಳಲ್ಲಿ ಜೇಡಿ ಮಣ್ಣಿನಿಂದ ಮಾಡಿದ ಲೋಟಗಳು, ಕುಡಿಕೆಗಳು ಮತ್ತು ತಟ್ಟೆಗಳನ್ನು ಬಳಸಲಾಗುತ್ತಿದೆ. ಇದನ್ನು ದೇಶದ ಇತರೆ ರೈಲ್ವೆ ನಿಲ್ದಾಣಗಳಿಗೂ ವಿಸ್ತರಿಸಬೇಕು ಎನ್ನುವುದು ಗಡ್ಕರಿ ಅವರ ಸಲಹೆ. 

”ಏರ್‌ಪೋರ್ಟ್‌ಗಳು ಮತ್ತು ರಾಜ್ಯ ಸಾರಿಗೆ ಸಂಸ್ಥೆಗಳ ಅಧೀನದಲ್ಲಿ ಬರುವ ಬಸ್‌ ಡಿಪೋಗಳಲ್ಲಿನ ಟೀ ಸ್ಟಾಲ್‌ಗಳಲ್ಲಿ ಮಣ್ಣಿನ ಲೋಟಗಳ ಬಳಕೆಯನ್ನು ಕಡ್ಡಾಯಗೊಳಿಸಬೇಕು. ನಾವು ಮಾಲ್‌ಗಳಲ್ಲೂ ಇಂಥ ವ್ಯವಸ್ಥೆಗೆ ಉತ್ತೇಜನ ನೀಡಬೇಕು,”ಎಂದು ಗಡ್ಕರಿ ಹೇಳಿದ್ದಾರೆ. ಇದೇ ವೇಳೆ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ(ಕೆವಿಐಸಿ) ನಿರ್ದೇಶನ ನೀಡಿದ್ದಾರೆ. 

ಉತ್ಪಾದಕತೆ ಹೆಚ್ಚಿಸುವ ಸಲುವಾಗಿ ಸರಕಾರವು ಸಶಕ್ತಿಕರಣ್‌ ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್‌ ಚಕ್ರಗಳನ್ನು ವಿತರಿಸುತ್ತಿದೆ. ಮಡಿಕೆ ಉತ್ಪಾದಕರನ್ನು ಉತ್ತೇಜಿಸಲು2004ರಲ್ಲಿಯೇ ರೈಲ್ವೆ ಸಚಿವರು ಮಣ್ಣಿನ ಲೋಟಗಳನ್ನು ಬಳಸುವ ಪದ್ಧತಿಗೆ ಚಾಲನೆ ನೀಡಿದ್ದರು. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಬಾಳೆಲೆ ಊಟ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ! ಹಲವು ಜನರಿಗೆ ತಿಳಿದಿಲ್ಲ.

    ಸಾಮಾನ್ಯವಾಗಿ ಬಾಳೆಲೆ ಊಟ ಹಿಂದಿನ ಕಾಲದಿಂದಲೂ ಬಳಕೆಯಲ್ಲಿದೆ ಹಾಗೂ ಪ್ರತಿಯೊಬ್ಬರಿಗೂ ಸಾಮಾನ್ಯವಾಗಿ ದೊರೆಯುವ ಬಾಳೆಲೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ. ಮಾಡುವೆ ಸಮಾರಂಭಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಾಗೂ ಇತ್ತೀಚಿನ ದಿನಗಳಲ್ಲಿ ಹೋಟಲ್ ರೆಸ್ಟೋರೆಂಟ್ಗಳಲ್ಲಿ ಸಹ ಬಾಳೆಲೆ ಉಪಯೋಗಕಾರಿಯಾಗಿದೆ. ಚಿನ್ನದ ತಟ್ಟೆಗಿಂತ ಬೆಲ್ಲೆಲಿ ಊಟ ಮಾಡೋದು ಬೆಸ್ಟ್ ಅನ್ನೋದು ಯಾಕೆ ಅನ್ನೋದನ್ನ ತಿಳಿಸುತ್ತೇವೆ ಮುಂದೆ ನೋಡಿ. ಮನುಷ್ಯನಿಗೆ ಅರೋಗ್ಯ ಅತಿ ಹೆಚ್ಚು ಅವಶ್ಯಕ ಹಾಗಾಗಿ ಬೇಲಿ ಊಟ ಮಾಡುವುದರಿಂದ ದೇಹಕ್ಕೆ ಹೆಚ್ಚಿನ ಅರೋಗ್ಯ ದೊರೆಯುತ್ತದೆ ಹಾಗೂ ನಾನಾ ತರಹದ ರೋಗಗಳನ್ನು…

  • ಆರೋಗ್ಯ

    ಹಲಸಿನ ಹಣ್ಣಿನ ಈ ಪ್ರಯೋಜನಗಳನ್ನು ಕೇಳಿದ್ರೆ, ನೀವು ತಿನ್ನದೇ ಸುಮ್ಮನೆ ಇರಲ್ಲ…

    ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಸುದ್ದಿ

    1.5 ಕೋಟಿ ಮೊತ್ತದ ಪ್ರಶಸ್ತಿಗೆ ಸುಳ್ಳು ದಾಖಲೆ: ಕೃತಿ ಕಾರಂತ್ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಆರೋಪ….

    ಇತ್ತೀಚೆಗಷ್ಟೇ 1.5 ಕೋಟಿ ರೂಪಾಯಿ ಮೊತ್ತದ ಪ್ರತಿಷ್ಠಿತ ರೋಲೆಕ್ಸ್ ಪ್ರಶಸ್ತಿಗೆ ಪಾತ್ರರಾದ ವನ್ಯಜೀವಿ ತಜ್ಞೆ ಕೃತಿ ಕಾರಂತ್ ಅವರು, ಪ್ರಶಸ್ತಿಗಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಅರಣ್ಯ ಇಲಾಖೆ ಆರೋಪಿಸಿದೆ. ಖ್ಯಾತ ವನ್ಯಜೀವಿ ತಜ್ಞ ಉಲ್ಲಾಸ್ ಕಾರಂತ್ ಅವರ ಮಗಳು ಮತ್ತು ಖ್ಯಾತ ಸಾಹಿತಿ ದಿ. ಶಿವರಾಮ ಕಾರಂತ್ ಅವರ ಮೊಮ್ಮಗಳಾದ ಕೃತಿ ಕಾರಂತ್, ಆಧಾರ ರಹಿತ ಮತ್ತು ನಕಲಿ ದಾಖಲೆಗಳನ್ನು ನೀಡಿ ಈ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ಅರಣ್ಯ ಇಲಾಖೆ ಗಂಭೀರ ಆರೋಪ ಮಾಡಿದೆ. ಈ…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…