News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
Sports

ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

30

ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ. 

ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.24ರ ಹರೆಯದ ಹೈದರಾಬಾದ್‌ ಆಟಗಾರ್ತಿ2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್‌ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ2017ರ ಫೈನಲ್‌ನಲ್ಲಿ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು. ಜೀವಮಾನದಲ್ಲೇ ಅತ್ಯುನ್ನತ ಫಾರ್ಮ್‌ನಲ್ಲಿರುವ ಪಿವಿ ಸಿಂಧೂ, ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ಮಾಡ ತೊಡಗಿದರು. ಸಿಂಧೂ ಬಲವಾದ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇಲ್ಲ. ಇದರಿಂದಾಗಿ ಒಂದು ಹಂತದಲ್ಲಿ16-2ರ ಅಂತರದ ಮುನ್ನಡೆ ದಾಖಲಿಸಿದರು. ಅಲ್ಲದೆ ಮೊದಲ ಸುತ್ತನ್ನು21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು. 

ನಿರ್ಣಾಯಕ ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ, ಎದುರಾಳಿಯ ಮೇಲೆ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಹಿಂದಿನ ಪ್ರದರ್ಶನಕ್ಕೆ ಹೋಲಿಸಿದರೆ ಅನಗತ್ಯ ತಪ್ಪುಗಳಿಗೆ ಯಾವುದೇ ಆಸ್ಪದ ನೀಡದ ಸಿಂಧೂ, ತಮ್ಮ ಬಲವಾದ ಹೊಡೆತದಿಂದಲೇ ಎದುರಾಳಿ ಮೇಲೆ ಸವಾರಿ ಮಾಡಿದರು. ಹಾಗೆಯೇ ದ್ವಿತೀಯ ಸುತ್ತಿನಲ್ಲೂ ಒಂದು ಹಂತದಲ್ಲಿ16-4ರ ಮುನ್ನಡೆ ಗಳಿಸಿ ಪ್ರಶಸ್ತಿಯತ್ತ ಮುನ್ನಡೆದರು. ಅಂತಿಮವಾಗಿ ದ್ವಿತೀಯ ಗೇಮ್ 21-7ರ ಅಂತರದಲ್ಲಿ ವಶಪಡಿಸಿ ಚಿನ್ನದ ಹಾರವನ್ನುಕೊರಳಿಗೆ ಹಾಕಿಕೊಂಡರು. 

ಶನಿವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಆಟಗಾರ್ತಿ ಚೀನಾದ ಚೆನ್‌ ಯು ಫಿ ಅವರನ್ನು21-7 ಮತ್ತು 21-14 ಗೇಮ್‌ಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ವೇದಿಕೆ ನಿರ್ಮಿಸಿಕೊಂಡರು. ಇದರೊಂದಿಗೆ ಬಿಡಬ್ಲ್ಯುಎಫ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಸತತ 3ನೇ ಬಾರಿಗೆ ಫೈನಲ್‌ ಪ್ರವೇಶಿಸಿದ ವಿಶ್ವದ ಮೊದಲ ಆಟಗಾರ್ತಿಯೆನ್ನುವ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು. 2013ರ ಆವೃತ್ತಿಯಲ್ಲಿ ಸಿಂಧೂ ಕಂಚಿನ ಪದಕ ಜಯಿಸಿದ್ದರು. ಆಗ ಅವರಿಗೆ ಕೇವಲ 18 ವರ್ಷ. ಅದಾದ ಬಳಿಕ 2014ರ ಆವೃತ್ತಿಯಲ್ಲೂ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ, ರಿಯೊ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಸಿಂಧೂ ಬಿಡಬ್ಲ್ಯುಎಫ್‌ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಒಟ್ಟು 5 ಪದಕ (ಹಾಲಿ ಆವೃತ್ತಿಯದೂ ಸೇರಿ) ಗೆದ್ದಂತಾಗಿದೆ.

ಸಿಂಧೂ ಪ್ರಮುಖ ಸಾಧನೆಗಳು: 
ಒಲಿಂಪಿಕ್: 
2016 ರಿಯೋ ಡಿ ಜನೈರೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
ವಿಶ್ವ ಚಾಂಪಿಯನ್‌ಶಿಪ್: 
2019 ಬಾಸೆಲ್: ಚಿನ್ನ ಪದಕ (ಮಹಿಳಾ ಸಿಂಗಲ್ಸ್) 
2018 ನಾನ್‌ಜಿಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2017 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2014 ಕೊಪೆನ್‌ಹ್ಯಾಗನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 
2013 ಗುವಾಂಗ್‌ಝೌ: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 
ಏಷ್ಯನ್ ಗೇಮ್ಸ್: 
2018 ಜಕಾರ್ತ-ಪ್ಯಾಲೆಮ್‌ಬ್ಯಾಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2014 ಇಂಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 
ಕಾಮನ್‌ವೆಲ್ತ್ ಗೇಮ್ಸ್: 
2018 ಗೋಲ್ಡ್ ಕೋಸ್ಟ್: ಚಿನ್ನದ ಪದಕ (ಮಿಶ್ರ ತಂಡ) 
2018 ಗೋಲ್ಡ್ ಕೋಸ್ಟ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
2014 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್) 
ಏಷ್ಯಾ ಚಾಂಪಿಯನ್‌ಶಿಪ್: 
2014 ಗಿಮ್ಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್) 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ರಾಜಕೀಯ

    ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

    ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

  • Sports

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಸಹಾಯಕ ಸಿಬ್ಬಂದಿಗೆ ಕೋವಿಡ್-19

    ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ  ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ  ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…

    Loading

  • ಹಣ

    ನಟಿ ಕಿಮ್ ಕರ್ದಾಶಿಯನ್ ಮಗಳ ಸ್ವಾಗತಕ್ಕೆ ನೀಡುತ್ತಿರುವ ಟೆಡ್ಡಿಬೇರ್ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಪ್ರಸಿದ್ಧ ಟಿವಿ ರಿಯಾಲಿಟಿ ಶೋ ನಟಿ ಕಿಮ್ ಕರ್ದಾಶಿಯನ್ ಮೂರನೇ ಬಾರಿ ಅಮ್ಮನಾಗಿದ್ದಾಳೆ. ಬಾಡಿಗೆ ತಾಯಿ ಮೂಲಕ ಕಿಮ್ ಮನೆಗೆ ಸೋಮವಾರ ಮಗುವೊಂದರ ಆಗಮನವಾಗಿದೆ. ಮಗಳ ಸ್ವಾಗತಕ್ಕೆ ಕಿಮ್ ಹಾಗೂ ಆಕೆ ಪತಿ ಕೆನ್ನೆ ವೆಸ್ಟ್ ವಿಶೇಷ ತಯಾರಿ ನಡೆಸಿದ್ದಾರೆ.

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಸುದ್ದಿ

    ಫ್ರೆಂಡ್​ಶಿಪ್ ಡೇಗೆ ಸ್ನೇಹಿತರೊಂದಿಗೆ ಪವರ್ ​ಸ್ಟಾರ್ ಪುನೀತ್ ಜಾಲಿ ಟ್ರಿಪ್…!

    ಪವರ್​ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್​ನಲ್ಲೇ ಆ್ಯಕ್ಷನ್. ಪವರ್​ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್​ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್​ಕುಮಾರ್ ಅವರು ಹಾಕಿರುವ ಈ…