ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್ಶಿಪ್ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್ನ ಜಪಾನ್ನ ನಜೊಮಿ ಒಕುಹರಾ ವಿರುದ್ಧ21-7, 21-7ರ ಅಂತರದ ಗೆಲುವು ದಾಖಲಿಸಿ ಇತಿಹಾಸ ಪುಟ ಸೇರಿದ್ದಾರೆ.

ಭಾರತದ ಬ್ಯಾಡ್ಮಿಂಟನ್ ಕಣ್ಮಣಿ ಪಿ.ವಿ ಸಿಂಧೂ, ಸತತವಾದ ಐದನೇ ಪ್ರಯತ್ನದಲ್ಲಿ ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.24ರ ಹರೆಯದ ಹೈದರಾಬಾದ್ ಆಟಗಾರ್ತಿ2017 ಮತ್ತು 2018ರ ಆವೃತ್ತಿಗಳಲ್ಲಿ ಫೈನಲ್ ಪ್ರವೇಶಿಸಿ, ಪ್ರಶಸ್ತಿ ಸೆಣಸಾಟದಲ್ಲಿ ಸೋತು ಬೆಳ್ಳಿ ಪದಕಕ್ಕೆ ಸಮಾಧಾನ ಪಟ್ಟುಕೊಂಡಿದ್ದರು. ಅದರಲ್ಲೂ ವಿಶೇಷವಾಗಿ2017ರ ಫೈನಲ್ನಲ್ಲಿ ಜಪಾನ್ನ ನಜೊಮಿ ಒಕುಹರಾ ವಿರುದ್ಧ ಕೇವಲ ಎರಡು ಅಂಕಗಳ ಹಿನ್ನಡೆಯೊಂದಿಗೆ ಸೋತು ನಿರಾಸೆ ಅನುಭವಿಸಿದ್ದರು. ಜೀವಮಾನದಲ್ಲೇ ಅತ್ಯುನ್ನತ ಫಾರ್ಮ್ನಲ್ಲಿರುವ ಪಿವಿ ಸಿಂಧೂ, ಪಂದ್ಯದ ಆರಂಭದಿಂದಲೇ ಎದುರಾಳಿ ಮೇಲೆ ಪ್ರಹಾರ ಮಾಡ ತೊಡಗಿದರು. ಸಿಂಧೂ ಬಲವಾದ ಹೊಡೆತಕ್ಕೆ ಓಕುಹರಾ ಬಳಿ ಉತ್ತರವೇ ಇಲ್ಲ. ಇದರಿಂದಾಗಿ ಒಂದು ಹಂತದಲ್ಲಿ16-2ರ ಅಂತರದ ಮುನ್ನಡೆ ದಾಖಲಿಸಿದರು. ಅಲ್ಲದೆ ಮೊದಲ ಸುತ್ತನ್ನು21-7 ರ ಅಂತರದ ಸುಲಭವಾಗಿ ವಶಪಡಿಸಿಕೊಂಡರು.

ನಿರ್ಣಾಯಕ ದ್ವಿತೀಯ ಸುತ್ತಿನಲ್ಲೂ ಆಕ್ರಮಣಕಾರಿ ಆಟವನ್ನು ಮುಂದುವರಿಸಿದ ಸಿಂಧೂ, ಎದುರಾಳಿಯ ಮೇಲೆ ನಿರಂತರ ಒತ್ತಡವನ್ನು ಹೇರುತ್ತಲೇ ಸಾಗಿದರು. ಹಿಂದಿನ ಪ್ರದರ್ಶನಕ್ಕೆ ಹೋಲಿಸಿದರೆ ಅನಗತ್ಯ ತಪ್ಪುಗಳಿಗೆ ಯಾವುದೇ ಆಸ್ಪದ ನೀಡದ ಸಿಂಧೂ, ತಮ್ಮ ಬಲವಾದ ಹೊಡೆತದಿಂದಲೇ ಎದುರಾಳಿ ಮೇಲೆ ಸವಾರಿ ಮಾಡಿದರು. ಹಾಗೆಯೇ ದ್ವಿತೀಯ ಸುತ್ತಿನಲ್ಲೂ ಒಂದು ಹಂತದಲ್ಲಿ16-4ರ ಮುನ್ನಡೆ ಗಳಿಸಿ ಪ್ರಶಸ್ತಿಯತ್ತ ಮುನ್ನಡೆದರು. ಅಂತಿಮವಾಗಿ ದ್ವಿತೀಯ ಗೇಮ್ 21-7ರ ಅಂತರದಲ್ಲಿ ವಶಪಡಿಸಿ ಚಿನ್ನದ ಹಾರವನ್ನುಕೊರಳಿಗೆ ಹಾಕಿಕೊಂಡರು.

ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಮೂರನೇ ಶ್ರೇಯಾಂಕದ ಆಟಗಾರ್ತಿ ಚೀನಾದ ಚೆನ್ ಯು ಫಿ ಅವರನ್ನು21-7 ಮತ್ತು 21-14 ಗೇಮ್ಗಳಿಂದ ಮಣಿಸಿ ಅಂತಿಮ ಹಣಾಹಣಿಗೆ ವೇದಿಕೆ ನಿರ್ಮಿಸಿಕೊಂಡರು. ಇದರೊಂದಿಗೆ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಸತತ 3ನೇ ಬಾರಿಗೆ ಫೈನಲ್ ಪ್ರವೇಶಿಸಿದ ವಿಶ್ವದ ಮೊದಲ ಆಟಗಾರ್ತಿಯೆನ್ನುವ ಹೆಗ್ಗಳಿಕೆಯನ್ನೂ ತಮ್ಮದಾಗಿಸಿಕೊಂಡರು. 2013ರ ಆವೃತ್ತಿಯಲ್ಲಿ ಸಿಂಧೂ ಕಂಚಿನ ಪದಕ ಜಯಿಸಿದ್ದರು. ಆಗ ಅವರಿಗೆ ಕೇವಲ 18 ವರ್ಷ. ಅದಾದ ಬಳಿಕ 2014ರ ಆವೃತ್ತಿಯಲ್ಲೂ ಕಂಚಿನ ಪದಕ ಗೆದ್ದಿದ್ದರು. ಇದರೊಂದಿಗೆ, ರಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸಿಂಧೂ ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್ಷಿಪ್ನಲ್ಲಿ ಒಟ್ಟು 5 ಪದಕ (ಹಾಲಿ ಆವೃತ್ತಿಯದೂ ಸೇರಿ) ಗೆದ್ದಂತಾಗಿದೆ.
ಸಿಂಧೂ ಪ್ರಮುಖ ಸಾಧನೆಗಳು:
ಒಲಿಂಪಿಕ್:
2016 ರಿಯೋ ಡಿ ಜನೈರೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ವಿಶ್ವ ಚಾಂಪಿಯನ್ಶಿಪ್:
2019 ಬಾಸೆಲ್: ಚಿನ್ನ ಪದಕ (ಮಹಿಳಾ ಸಿಂಗಲ್ಸ್)
2018 ನಾನ್ಜಿಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2017 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಕೊಪೆನ್ಹ್ಯಾಗನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
2013 ಗುವಾಂಗ್ಝೌ: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಏಷ್ಯನ್ ಗೇಮ್ಸ್:
2018 ಜಕಾರ್ತ-ಪ್ಯಾಲೆಮ್ಬ್ಯಾಂಗ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಇಂಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಕಾಮನ್ವೆಲ್ತ್ ಗೇಮ್ಸ್:
2018 ಗೋಲ್ಡ್ ಕೋಸ್ಟ್: ಚಿನ್ನದ ಪದಕ (ಮಿಶ್ರ ತಂಡ)
2018 ಗೋಲ್ಡ್ ಕೋಸ್ಟ್: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
2014 ಗ್ಲ್ಯಾಸ್ಗೋ: ಬೆಳ್ಳಿ ಪದಕ (ಮಹಿಳಾ ಸಿಂಗಲ್ಸ್)
ಏಷ್ಯಾ ಚಾಂಪಿಯನ್ಶಿಪ್:
2014 ಗಿಮ್ಚಿಯಾನ್: ಕಂಚಿನ ಪದಕ (ಮಹಿಳಾ ಸಿಂಗಲ್ಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್ 11ರಂದು ಬೈಕ್ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ….
ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…
ಸೂಪರ್ ಸ್ಟಾರ್ ರಜನಿಕಾಂತ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಅಂತವರು ತಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದಕ್ಕಾಗಿ ತಮ್ಮ ಮಾತಿನಂತೆ ತಮಿಳುನಾಡಿನ ನೆರೆ ಸಂತ್ರಸ್ತರಿಗೆ ಮನೆಯನ್ನು ನೀಡುವ ಮೂಲಕ ಸಹಾಯವನ್ನು ಮಾಡಿದ್ದಾರೆ ಕಳೆದ ವರ್ಷ ತಮಿಳುನಾಡಿನಲ್ಲಿ ಸಂಭವಿಸಿದ ಸೈಕ್ಲೋನ್ ಬಗ್ಗೆ ನಿಮಗೆ ತಿಳಿದೇ ಇದೆ ಜನರು ತತ್ತರಿಸಿ ಹೋಗಿದ್ದು, ನೂರಾರು ಜನರು ಮನೆ, ಆಸ್ತಿ ಎಲ್ಲವನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದರು. ಈ ವೇಳೆ ಅನೇಕ ನಟರು ಅವರಿಗಾಗಿ ತಮ್ಮ ಕೈಲಾದ ಧನ ಸಹಾಯವನ್ನು ಮಾಡಿದ್ದರು. ಆದರೆ ರಜನಿಕಾಂತ್…
ನಮ್ಮ ಕರ್ನಾಟಕದವರಾದ ಮಾಲತಿ ಹೊಳ್ಳ ಇದಕ್ಕೊಂದು ಜ್ವಲಂತ ಉದಾಹರಣೆ. ನಮ್ಮ ನೆರೆಯ ಮಹಾರಾಷ್ಟ್ರದ ನಾಗ್ಪುರದಲ್ಲಿ ಜನಿಸಿದ ಜ್ಯೋತಿ ಆಮ್ಗೆ ಎಂಬ ಮಹಿಳೆಗೆ ಈಗ ಜ್ಯೋತಿ (ಜನನ: ಡಿಸೆಂಬರ್ 16, 1993). ಆದರೆ ಇವರನ್ನು ನೋಡಿದ ಯಾರೂ ಇವರಿಗೆ ಇಪ್ಪತ್ತೈದು ವರ್ಷ ವಯಸ್ಸು ಎಂದು ಹೇಳುವಿದಿಲ್ಲ ಬದಲಿಗೆ ಪುಟ್ಟ ಮಗುವಿರಬಹುದು ಎಂದೇ ತಿಳಿದುಕೊಳ್ಳುತ್ತಾರೆ.