News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ದಿನ ಭವಿಷ್ಯ , ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ….

71

ನಿತ್ಯ ಭವಿಷ್ಯ…………
ಮೇಷ ರಾಶಿ
ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು.

ವೃಷಭ ರಾಶಿ
ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು.  ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ ಮಹತ್ವ ನೀಡದೆ

ಮಿಥುನ ರಾಶಿ
ಹಣಕಾಸಿನ ಹರಿವಿಗೆ ಇದ್ದ ಅಡೆತಡೆಗಳು ನಿವಾರಣೆಯಾಗಿ ಹಣ ಬರುವ ಮಾರ್ಗ ನಿಚ್ಚಳವಾಗುವುದು. ದಿಢೀರ್‌ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದಲ್ಲ. ಯಾವುದಕ್ಕೂ ಹಿಂದುಮುಂದು ಯೋಚಿಸಿ ಕಾರ್ಯಪ್ರವೃತ್ತರಾಗಿ.

ಕಟಕ ರಾಶಿ
ನಿಮ್ಮ ಹತ್ತಿರದ ಜನರು ವಿನಾಕಾರಣ ಜಗಳಗಳಿಗೆ ಮುಂದಾಗುವ ಸಂಭವವಿದೆ. ಬೇಸರಿಸಬೇಡಿ. ಜೀವನದ ಪ್ರತಿ ಘಟನೆಯು ನಿಮಗೆ ಉತ್ತಮ ಪಾಠ ನೀಡುವುದು. ಹಣಕಾಸಿನ ಸ್ಥಿತಿ ಸಾಧಾರಣವಾಗಿರುತ್ತದೆ.

ಸಿಂಹ ರಾಶಿ
ನಿಮ್ಮ ಮಾತಿಗೆ ಬೆಲೆವುಂಟು ಎಂಬುದು ಒಳ್ಳೆಯದೇ. ಆದರೆ ಜನ ಒಂದೇ ರೀತಿಯಾಗಿ ಚಿಂತಿಸುವುದಿಲ್ಲ. ಹಾಗಾಗಿ ಮೇಲ್ನೋಟಕ್ಕೆ ನಿಮ್ಮಂತೆ ಇದ್ದರೂ ಅವರ ಒಳ ವಿಚಾರಧಾರೆಗಳು ನಿಮ್ಮನ್ನು ಸಂಕಷ್ಟಕ್ಕೆ ಗುರಿ ಮಾಡುವುದೇ ಆಗಿರುತ್ತದೆ. ಕೆಲ ಗ್ರಹಸ್ಥಿತಿಗಳು ನೀವು ಕೈಗೊಳ್ಳುವ ಕಾರ್ಯದಲ್ಲಿ ವಿಳಂಬ ಉಂಟು ಮಾಡುವುದು.

ಕನ್ಯಾ ರಾಶಿ
ಎಷ್ಟೇ ರೀತಿಯ ಜನರು ನಿಮ್ಮ ಮೇಲೆ ಪರಿಣಾಮ ಬೀರಿರಬಹುದು. ಆದರೆ ಇತ್ತೀಚೆಗೆ ಪರಿಚಯವಾದ ಗಣ್ಯರ ಮಾತು ನಿಮ್ಮ ಜನಜೀವನಕ್ಕೆ ಹತ್ತಿರವಾದಂತೆ ಎನಿಸುತ್ತಿರುವುದರಿಂದ ಅವರ ಬಗ್ಗೆ ಗೌರವ ಆದರಗಳು ಹೆಚ್ಚಾಗುವುವು. ಎಲ್ಲೆಡೆಯೂ ನಿಮ್ಮ ಕಾರ್ಯವೈಖರಿಯ ಬಗ್ಗೆ ಚರ್ಚೆ ನಡೆಯುವುದು.

ತುಲಾ ರಾಶಿ
ನಿಮ್ಮ ಗುರಿಯನ್ನು ಬೆನ್ನುಹತ್ತಿ ಸೋತಿದ್ದೀರಿ ಎನ್ನುವ ಬಳಲಿಕೆ ಬೇಡ. ಮುನ್ನುಗ್ಗಿರಿ ಜಯಶೀಲರಾಗುವಿರಿ. ಪತ್ನಿಯ ಸಕಾಲಿಕ ಎಚ್ಚರಿಕೆ ಮಾತುಗಳನ್ನು ಆಲಿಸಿ ಮತ್ತು ಅದರಂತೆ ಕಾರ್ಯ ಪ್ರವೃತ್ತರಾಗುವುದರಿಂದ ಒಳಿತಾಗುವುದು. ಮುಂದೆ ಬರಬಹುದಾದ ಉತ್ತಮ ದಿನಗಳನ್ನು ಎದುರಿಸಲು ಸನ್ನದ್ಧರಾಗುವಿರಿ,

ವೃಶ್ಚಿಕ ರಾಶಿ
ಬಹುರೂಪಿಯಾದ ಮತ್ತು ಅತ್ಯಂತ ಕರುಣಾಮಯಿಯಾದ ಭಗವಂತನ ಅನುಗ್ರಹ ನಿಮ್ಮ ಮೇಲಿರುವುದರಿಂದ ಹೆದರುವ ಅವಶ್ಯಕತೆಯಿಲ್ಲ. ನಿಮ್ಮ ಮನೆಗೆ ನೂತನ ಸದಸ್ಯನ ಸೇರ್ಪಡೆ ಸಾಧ್ಯತೆ ಇದೆ. ಭೂವ್ಯವಹಾರಕ್ಕೆ ಸಂಬಂಧಪಟ್ಟಂತೆ ಮೋಸ ಹೋಗುವ ಸಾಧ್ಯತೆ ಇದೆ.

ಧನಸ್ಸು ರಾಶಿ
ಯಾರು ಏನೇ ಅನ್ನಲಿ, ಬಿಡಲಿ ನಿಮ್ಮ ಕಾರ್ಯವನ್ನು ನೀವು ಅಚ್ಚುಕಟ್ಟಾಗಿ ನಿರ್ವಹಿಸುವಿರಿ. ಇದು ನಿಮ್ಮನ್ನು ಇಚ್ಛಿತ ಗುರಿ ಎಡೆಗೆ ಕರೆದುಕೊಂಡು ಹೋಗುವುದು. ಮಕ್ಕಳ ವಿದ್ಯಾಭ್ಯಾಸದಲ್ಲಿನ ಪ್ರಗತಿ ನಿಮಗೆ ಸಂತಸ ನೀಡುವುದು. ಆಸ್ತಿ ಖರೀದಿಯ ಬಗ್ಗೆ ನಿಧಾನ ಪ್ರಗತಿಯುಂಟಾಗುವುದು. ಸ್ನೇಹಿತರು ಸಹಾಯ ಮಾಡುವರು.

ಮಕರ ರಾಶಿ
ಹಳೆಯ ವ್ಯಾಜ್ಯಗಳು ನಿಮ್ಮನ್ನು ಬಳಲಿಸುತ್ತವೆ. ಶಾಂತಿಯಿಂದ ಇರಿ. ಮಾತು ಮಾತಿಗೂ ಆಣೆ ಪ್ರಮಾಣಗಳನ್ನು ಮಾಡದಿರಿ. ಮಾತು ಆಡಿದರೆ ಹೋಯಿತು ಮುತ್ತು ಒಡೆದರೂ ಹೋಯಿತು ಎನ್ನುವಂತೆ ಮೌನ ಧರಿಸಿ. ಕುಟುಂಬದಲ್ಲಿ ಒಡಕು ಮೂಡುವ ಸಾಧ್ಯತೆ ಇದೆ. ಬಾಳಸಂಗಾತಿ ಮತ್ತು ಮಕ್ಕಳಿಂದ ಪದೇ ಪದೇ ಪ್ರಶ್ನೆಗಳು ಬರುತ್ತವೆ.

ಕುಂಭ ರಾಶಿ
ಕೆಲಸದ ಸ್ಥಳದಲ್ಲಿ ಬಾಸ್‌ನಿಂದ ಪ್ರಶಂಸೆ ಪಡೆಯುವ ಅವಕಾಶ ಅಧಿಕವಾಗಿದೆ. ಮುಂದಿನ ಪದೋನ್ನತಿಗೆ ದಾರಿ ನಿರಾಳವಾಗುವುದು. ನಿಮ್ಮ ಕಾಯಕದಲ್ಲಿ ನಿಷ್ಠೆ ತೋರಿ. ಭಗವಂತನ ಆಶೀರ್ವಾದ ನಿಮ್ಮ ಮೇಲೆ ಇರುವುದು. ಬಾಳಸಂಗಾತಿಯನ್ನು ನಿರ್ಲಕ್ಷಿಸದಿರಿ. ಬಾಳಸಂಗಾತಿಯ ಇಚ್ಛೆಯನ್ನು ಅರಿತು ಸ್ಪಂದಿಸಿದಲ್ಲಿ ಸಂಸಾರವು ಸುಖಮಯವಾಗಿರುವುದು.

ಮೀನ ರಾಶಿ
ಹಿರಿಯರ ಮಾತಿಗೂ ಬೆಲೆ ಕೊಡುವುದನ್ನು ಕಲಿತರೆ ಜೀವನ ಸುಂದರಮಯವಾಗಿರುತ್ತದೆ. ಸಂಗಾತಿಯು ಮಾತಾಡುವ ವಿಷಯಗಳಿಗೆ ಅಪಾರ್ಥ ಕಲ್ಪಿಸಕೊಳ್ಳದಿರಿ. ಅತಿ ಸೂಕ್ಷ್ಮಮತಿಗಳಾದ ನಿಮಗೆ ಕೆಲವು ವಿಚಾರಗಳನ್ನು ಜೀರ್ಣಿಸಿಕೊಳ್ಳಲು ಆಗುವುದಿಲ್ಲ. ಅಂತೆಯೇ ಒಂದು ಪ್ರಸಂಗವು ನಿಮ್ಮ ಚಿತ್ತ ಕ್ಷೋಭೆಯನ್ನು ಕದಡುವುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಹೊಸ ದೇಶ ಸ್ಥಾಪಿಸಿ ತಾನೇ ಅಧ್ಯಕ್ಷನೆಂದು ಘೋಷಿಸಿಕೊಂಡ ಭೂಪತಿ!ಹೀಗೂ ಇರ್ತಾರೆ ನೋಡಿ…

    ಪ್ರಪಂಚವೇ ಒಂತರಾ ವಿಚಿತ್ರ. ಯಾಕಂದ್ರೆ ಈ ಪರಪಂಚದಲ್ಲಿರುವ ಜನಗಳು ವಿಚಿತ್ರ. ಜನರು ಏನೇನೋ ವಿಚಿತ್ರ ಕೆಲಸಗಳನ್ನು ಮಾಡಿರುವುದು ಕೇಳಿದ್ದೇವೆ. ಅಂತಹವರಲ್ಲಿ ಅಮೆರಿಕದ ಜ್ಯಾಕ್ ಲ್ಯಾಂಡ್ಸ್ಬರ್ಗ್ ಅನ್ನುವ ವ್ಯೆಕ್ತಿಯೂ ಕೂಡ ಸೇರಿಕೊಂಡಿದ್ದಾರೆ. ಏಕೆಂದರೆ ಇವನು ಮಾಡಿರುವ ಅಚ್ಚರಿದಾಯಕ ಕೆಲಸ ಏನು ಗೊತ್ತಾ..

  • ಸುದ್ದಿ

    ಸ್ನಾಕ್ಸ್ ಗೆ ಮನೆಯಲ್ಲೇ ಸ್ಪೈಸಿ ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ,.!

    ಭಾನುವಾರ ರಜೆ ದಿನ. ಪ್ರತಿನಿತ್ಯ ಕೆಲಸ, ಶಾಲೆ ಎಂದು ಬ್ಯುಸಿಯಾಗಿರೋ ಕುಟುಂಬಸ್ಥರು ಮನೆಯಲ್ಲಿ ರೆಸ್ಟ್ ಮಾಡುತ್ತಾ ಇರುತ್ತಾರೆ. ಮಕ್ಕಳು ಸಹ ಇಂದು ಮನೆಯಲ್ಲಿಯೇ ಇರುತ್ತಾರೆ. ಎಲ್ಲರೂ ಒಟ್ಟಿಗೆ ಕುಳಿತು ರುಚಿ ರುಚಿಯಾದ ಮಸಲಾ ಚಾಟ್ಸ್ ತಿನ್ನೋ ಬಯಕೆ ಎಲ್ಲರಲ್ಲಿ ಮನೆ ಮಾಡಿರುತ್ತದೆ. ಹೊರಗಡೆ ತಂದ ತಿಂಡಿ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಾಗಿ ಮನೆಯಲ್ಲಿ ಏನು ಮಾಡಬೇಕೆಂದು ಚಿಂತೆಯಲ್ಲಿದ್ದೀರಾ. ಒಮ್ಮೆ ಸ್ಪೈಸಿ ಸೋಯಾ ಮಂಚೂರಿ ಮಾಡಿ ತಿನ್ನಿ. ಸ್ಪೈಸಿ ಸೋಯಾ ಮಂಚೂರಿ ಮಾಡುವ ವಿಧಾನ ಇಲ್ಲಿದೆ. ಬೇಕಾಗುವಸಾಮಾಗ್ರಿಗಳು* ಸೋಯಾ –…

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…

  • ಸುದ್ದಿ

    ಇಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡಲ್ಲಿ ಕಠಿಣ ಶಿಕ್ಷೆ ಪಕ್ಕಾ..!ಎಲ್ಲಿ ಗೊತ್ತ?

    ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…

  • ಸುದ್ದಿ

    ಕಣ್ಣಿಗೆ ನೀಲಿ ಟ್ಯಾಟೂ ಹಾಕಿಸಿಕೊಂಡ ಮಾಡೆಲ್ ನಂತರ ಏನಾಯ್ತು ಗೊತ್ತಾ,?ಇದನ್ನೊಮ್ಮೆ ಓದಿ,.!

    ಟ್ಯಾಟೂ ಎಂದರೆ  ಯಾರಿಗೆ  ತಾನೇ ಇಷ್ಟ ಇರಲ್ಲ  ಹೇಳಿ, ಈಗಿನ  ಕಾಲದಲ್ಲಿ ಎಲ್ಲರಿಗೂ  ಟ್ಯಾಟೂ ಹುಚ್ಚು ಹಾಗೆಯೇ ಇಲ್ಲೊಬ್ಬ  ಮಾಡೆಲ್. ದೇಹವನ್ನು ಬಗೆಬಗೆಯಾಗಿ ಮಾರ್ಪಾಡು ಮಾಡಿ ಮಿಂಚುವುದೆಂದರೆ ಈಕೆಗೆ ಬಲು ಇಷ್ಟವಂತೆ. ಇದಕ್ಕಾಗಿಯೇ ಸಾಕಷ್ಟು ಹಣವನ್ನು  ಖರ್ಚು ಮಾಡುತ್ತಿದ್ದಳು . ಆದರೆ, ಇದೀಗ ಇದೇ ಹುಚ್ಚು ಇವಳನ್ನು ಮೂರು ವಾರಗಳ ಕಾಲ ದೃಷ್ಟಿಯನ್ನೇ ಕಳೆದುಕೊಳ್ಳುವಂತೆ ಮಾಡಿದೆ. ನ್ಯೂ ಸೌತ್ ವೇಲ್ಸ್‌ನ ಬಾಡಿ ಮಾಡಿಫಯರ್ ಅಂಬೇರ್ ಲೂಕ್ 24 ಎಂಬಾಕೆ ಈ ಸಂಕಷ್ಟ ಅನುಭವಿಸಿದ್ದವಳು. ಈಕೆ ತನ್ನ ದೇಹವನ್ನು…

  • ವ್ಯಕ್ತಿ ವಿಶೇಷಣ

    ಸ್ವತಂತ್ರ ಭಾರತದ ಪ್ರಪ್ರಥಮ ಮತದಾರನ ಬಗ್ಗೆ ನಿಮಗೆಷ್ಟು ಗೊತ್ತು..?ಇಲ್ಲಿಯವರೆಗೂ ತಪ್ಪದೆ ಮತದಾನ ಮಾಡಿರುವ ಇವರ ಬಗ್ಗೆ ತಿಳಿಯಲು ಈ ಲೇಖನ ಓದಿ…

    ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್‌ ಶರಣ್‌ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.