ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರವಾಸೋದ್ಯಮ ಇಲಾಖೆಯೂ 40 ಪ್ರಮುಖ ಪ್ರವಾಸಿ ವರ್ತುಲ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ಅವರು ಗುರುವಾರ ಹೇಳಿದರು.

ವಿಕಾಸಸೌಧದಲ್ಲಿಂದು ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಪ್ರವಾಸೋದ್ಯಮಕ್ಕೆ ವಿಫಲ ಅವಕಾಶವಿದೆ, ಪ್ರಧಾನ ಮಂತ್ರಿಗಳು ದೇಶವನ್ನು ಟೂರಿಸ್ಟ್ ಹಬ್ ಮಾಡಲು ಉಲ್ಲೇಖ ಮಾಡಿದ್ದಾರೆ ಹೀಗಾಗಿ ದೇಶದ್ಯಂತ ಪ್ರಮುಖವಾಗಿ 17 ಸ್ಥಳಗಳನ್ನು ಗುರುತಿಸಿದ್ದಾರೆ ಅದರಲ್ಲಿ ಕರ್ನಾಟಕದ ಹಂಪಿ ಕೂಡ ಸೇರಿದೆ ಎಂದು ಅವರು ಮಾಹಿತಿ ನೀಡಿದರು.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಯಾವ ರೀತಿಯ ಅಭಿವೃದ್ಧಿ ಮಾಡಬಹುದು ಎಂದು ಅಧಿಕಾರಿಳ ಜೊತೆ ಚರ್ಚಿಸಿದ್ದೇನೆ. ಇನ್ನು ಖಾಸಗಿ ಪ್ರವಾಸೋದ್ಯಮದಲ್ಲಿ ಆಸಕ್ತಿ ಇರುವವರನ್ನು ಹೂಡಿಕೆಗೆ ಆಕರ್ಷಿಸಲು ಚಿಂತನೆ ಮಾಡಲಾಗಿದೆ ಎಂದರು.

ಸದ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ 243 ಅಧಿಕಾರಿಗಳ ಹುದ್ದೆ ಖಾಲಿ ಇದ್ದು, ಮುಂದಿನ ದಿನಗಳಲ್ಲಿ ಅವುಗಳನ್ನು ಭರ್ತಿ ಮಾಡಲಾಗುತ್ತದೆ, ಪ್ರಮುಖ ಪ್ರೇಕ್ಷಣೀಯ ಸ್ಥಳಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ನಿರ್ಧಾರ ಮಾಡಲಾಗಿದೆ, ಪ್ರದೇಶಕ್ಕೆ ಅನುಗುಣವಾಗಿ ಸ್ಟೇಡಿ ಮಾಡಿ ಸಬ್ಸಿಡಿ ಮೂಲಕ ಉದ್ಯೋಗ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

ಅಂತೆಯೇ ಗೋಲ್ಡನ್ ಚಾರಿಯಿಟಿಯಿಂದ ಇಲಾಖೆಗೆ 41ಕೋಟಿ ನಷ್ಟವಾಗಿದೆ, ಅದಕ್ಕಾಗಿ ಅದನ್ನು ಸ್ಥಗಿತಗೊಳಿಸಲಾಗಿದ್ದು, ಜಂಗಲ್ ಲಾಡ್ಜ್ ಮತ್ತು ಕೆಎಸ್ಟಿಡಿಸಿ ಲಾಭದಲ್ಲಿವೆ, ಅದನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಉದ್ದೇಶವಿದೆ, ಯಾತ್ರಿ ನಿವಾಸಗಳ ಬಳಕೆ ಬಗ್ಗೆಯೂ ಅಧ್ಯಯನ ವರದಿ ಕೇಳಿದ್ದೇವೆ ಬಳಿಕ ಅದನ್ನು ಗಮನಿಸಿ ಯೋಜನೆ ಬಗ್ಗೆ ನಿರ್ಧರಿಸುತ್ತೇವೆ ಎಂದು ಅವರು ನುಡಿದರು.

ಇನ್ನು ಜಿಲ್ಲೆಗಳಲ್ಲಿ ಬೇಡಿಕೆಯೇ ಇಲ್ಲದೆ ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ಕೊಡಲಾಗುತ್ತಿದೆ ಇದರಿಂದ ಫಲಾನುಭವಿಗಳಿಗೆ ಸಾಲದ ಹೊರೆ ಹೆಚ್ಚಿದ್ದು ಇದರ ಬಗ್ಗೆಯೂ ಕೂಡ ಅಧ್ಯಯನ ವರದಿ ಪಡೆದು ಮುಂದಿನ ನಿರ್ಧಾರ ಮಾಡಲಾಗಿದೆ ಇದುವರೆಗೆ 2,400 ಜನರಿಗೆ ಸಬ್ಸಿಡಿ ದರದಲ್ಲಿ ಟ್ಯಾಕ್ಸಿ ವಿತರಣೆ ಮಾಡಲಾಗಿದೆ, ಎಲ್ಲರನ್ನು ತೃಪ್ತಿ ಪಡಿಸಲು ಮಾತ್ರ ಪ್ರವಾಸೋದ್ಯಮ ಇಲಾಖೆ ಅನುದಾನ ಬಳಕೆಯಾಗುತ್ತಿದೆ ಹೊರತು ಪ್ರವಾಸೋದ್ಯಮ ಅಭಿವೃದ್ದಿಗೆ ಬಳಕೆಯಾಗುತ್ತಿಲ್ಲ ಎಂದು ಸಚಿವ ಸಿಟಿ ರವಿ ಅವರು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಡ್ರೋನ್ ಮೂಲಕ ಕೇವಲ 18 ನಿಮಿಷದಲ್ಲಿ 30 ಕಿ.ಮೀ ಸಂಚರಿಸಿ ರಕ್ತದ ಮಾದರಿಯನ್ನು ನೀಡಿದ ಘಟನೆ ಮೊದಲ ಬಾರಿಗೆ ಉತ್ತರಾಖಂಡದಲ್ಲಿ ನಡೆದಿದೆ.ನಂದಗೋನ್ನ ಜಿಲ್ಲಾಸ್ಪತ್ರೆಯಿಂದ ರಕ್ತದ ಮಾದರಿಯನ್ನು ಡ್ರೋನ್ ಮೂಲಕ ತೇರಿಯಲ್ಲಿರುವ ಆಸ್ಪತ್ರೆಗೆ ಕಳುಹಿಸಲಾಗಿದೆ. ಮೊದಲ ಪ್ರಯತ್ನದಲ್ಲೇ ಇದು ಸಫಲವಾಗಿದ್ದು, ಇದು ಭಾರತದ ಆರೋಗ್ಯದ ಸೇವೆಯಲ್ಲಿ ಇದೊಂದು ದೊಡ್ಡ ಹೆಜ್ಜೆ ಆಗಲಿದೆ. ಡ್ರೋನ್ ನಂದಗೋನದಿಂದ ತೇರಿ ನಡುವಿನ 30 ಕಿ.ಮೀ ದೂರವನ್ನು 18 ನಿಮಿಷದಲ್ಲಿ ಡ್ರೋನ್ ಕ್ರಮಿಸಿದೆ. ಡ್ರೋನ್ ಪ್ರತಿ ಗಂಟೆಗೆ 100 ಕಿ.ಮೀ ವೇಗದಲ್ಲಿ ಸಂಚರಿಸುವ ಸಾಮಥ್ರ್ಯ…
ಸಿನಿಮಾ ಸೆಲೆಬ್ರಿಟಿಗಳು ಬೇರೆಯವರ ಚಿತ್ರ ನೋಡದಿದ್ದರೂ ತಾವು ಬಣ್ಣ ಹಚ್ಚಿದ ಸಿನಿಮಾವನ್ನು ತಪ್ಪದೇ ಫರ್ಸ್ಟ್ ಡೇ ಫರ್ಸ್ಟ್ ಶೋ ನೋಡುತ್ತಾರೆ. ಆದರೆ ಇಲ್ಲೊಬ್ಬ ಕಲಾವಿದ ನಟಿಸಿದ್ದು ಸಾವಿರಕ್ಕೂ ಅಧಿಕ ಚಿತ್ರಗಳಾದರೂ, ಕಳೆದ 25 ವರ್ಷಗಳಿಂದ ಒಂದು ಬಾರಿಯೂ ಥಿಯೇಟರ್ಗೆ ಕಾಲಿಟ್ಟಿಲ್ಲವಂತೆ! ಯಾರವರು? ಕಾಮಿಡಿ ಕಿಂಗ್ ಬ್ರಹ್ಮಾನಂದಮ್..
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ಕನ್ನಡದ ಹೆಮ್ಮೆಯ ನಟ, ಅಭಿಮಾನಿಗಳ ಡಿ.ಬಾಸ್ ಸ್ಯಾಂಡಲ್ ವುಡ್ ನ ಬ್ರಾಂಡ್ ಅಂತೆಲ್ಲ ಕರೆಸಿಕೊಳ್ಳುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಕೂಡ ಚೀನಾ ವಸ್ತು ಹಾಗೂ ಅಪ್ಲಿಕೇಷನ್ ಅನ್ನು ಬ್ಯಾನ್ ಮಾಡುವ ನಿರ್ಧಾರ ಕೈಗೊಂಡಿದ್ದು, ಈ ವಿಚಾರವಾಗಿ ದರ್ಶನ್ ಫ್ಯಾನ್ಸ್ ಮೊದಲು ಟಿಕ್ ಟಾಕ್ ಗೆ ಗುಡ್ ಬೈ ಹೇಳಿದ್ದಾರೆ. ಟಿಕ್ ಟಾಕ್ ನಲ್ಲಿಯೂ ಡಿಬಾಸ್ ಹೆಸರು ದಾಖಲೆ ನಿರ್ಮಿಸಿತ್ತು. ಆದರೆ ಇದ್ಯಾವುದನ್ನು ಲೆಕ್ಕಿಸದೆ ದರ್ಶನ್ ಅಭಿಮಾನಿಗಳು ಖಾತೆ ಡಿಲೀಟ್ ಮಾಡಿ ರಾಷ್ಟ್ರ ಪ್ರೇಮ ಮೆರೆದಿದ್ದಾರೆ….