ಸುದ್ದಿ

ಹೇರ್ ಫಾಲ್ ಟೆನ್ಶನ್ ಇಲ್ಲಿಗೆ ಬಿಡಿ, ಇನ್ಮುಂದೆ ನ್ಯಾಚುರಲ್ ಪರಿಹಾರ ಟ್ರೈ ಮಾಡಿ,..!

181

ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ.

ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್‍ನಿಂದ ಕೂಡ ಕೂದಲು ಉದುರೋಕೆ ಶುರುವಾಗುತ್ತದೆ. ಸಾಮಾನ್ಯವಾಗಿ ಎಲ್ಲರಿಗೂ ಕೂದಲು ಉದುರತ್ತೆ. ಆದ್ರೆ ಕೂದಲು ಉದುರಿರುವ ಸ್ಥಳದಲ್ಲಿ ಮತ್ತೆ ಕೂದಲು ಬೆಳೆಯದಿದ್ದರೆ ಅದಕ್ಕೆ ಹೇರ್ ಫಾಲ್ ಸಮಸ್ಯೆ ಎನ್ನುತ್ತಾರೆ. ನಾವು ತಿಳಿಸುವ ಸುಲಭ ಹಾಗೂ ನೈಸರ್ಗಿಕ ಮದ್ದನ್ನು ಹಾಗೂ ಕೆಲವು ಆರೋಗ್ಯದ ಸಲಹೆಯನ್ನು ಪಾಲಿಸಿದರೆ ನೀವು ನಿಮ್ಮ ಹೇರ್ ಫಾಲ್ ಸಮಸ್ಯೆಯಿಂದ ಹೊರಬರಬಹುದು. ಹೌದು ಆ ಸುಲಭ, ನೈಸರ್ಗಿಕ ಸಲಹೆಗಳು ಇಲ್ಲಿವೆ ನೋಡಿ.

ಯಾವೆಲ್ಲಾ ವಿಟಮಿನ್ಸ್ ಬರಿತ ಆಹಾರ ಸೇವಿಸಬೇಕು ಹೇರ್ ಫಾಲ್ ನಿಯಂತ್ರಿಸಲು ವಿಟಿಮಿನ್-ಎ, ವಿಟಮಿನ್-ಬಿ, ಓಮೆಗಾ-3 ಹಾಗೂ ವಿಟಮಿನ್-ಇ ಸಮೃದ್ಧವಾಗಿರುವ ಆಹಾರವನ್ನು ಸೇವಿಸಬೇಕು. ಇದರಿಂದ ಕೂದಲ ಬೆಳವಣಿಗೆಗೆ ಉತ್ತಮ ವಿಟಮಿನ್ ಅಂಶ ದೊರಕಿ ಹೇರ್ ಫಾಲ್ ಕಡಿಮೆಯಾಗುತ್ತದೆ.

ಆಂಟಿ ಆಕ್ಸಿಡೆಂಟ್ ಗುಣಗಳುಳ್ಳ ವಿಟಮಿನ್-ಎ ಪದಾರ್ಥಗಳು ಆರೋಗ್ಯಕರ ಕೂದಲು ಮತ್ತು ಕೂದಲು ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಸಿಹಿ ಆಲೂಗೆಡ್ಡೆ, ಕ್ಯಾರೆಟ್, ಕರಿಬೇವಿನ ಸೊಪ್ಪು, ಒಣಗಿದ ಏಪ್ರಿಕಾಟ್, ಸ್ವೀಟ್ ಕೆಂಪು ಮೆಣಸು, ಟ್ಯೂನಾ ಮೀನು, ಉಷ್ಣವಲಯದ ಹಣ್ಣುಗಳು(ಮಾವು) ವಿಟಮಿನ್-ಎ ಅಂಶವನ್ನು ಒಳಗೊಂಡಿರುತ್ತದೆ. ಇದು ಕೂದಲ ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಮತ್ತು ಕೂದಲು ನಷ್ಟವನ್ನು ತಡೆಯುತ್ತದೆ. ಮೊಟ್ಟೆ, ಮೀನು, ಮತ್ತು ಹಾಲು ನಮ್ಮ ಆಹಾರದಲ್ಲಿ ಒಮೆಗಾ -3 ಅಂಶವಿರುತ್ತದೆ. ಬೀಜಗಳು (ಬಾದಾಮಿ), ಶೆಲ್ಫಿಶ್, ಮೀನು, ಆಲಿವ್ ಎಣ್ಣೆ, ಬ್ರೊಕೊಲಿನಲ್ಲಿ ವಿಟಮಿನ್ ಇ ಅಂಶ ಅಡಕವಾಗಿರುತ್ತದೆ. ವಿಟಮಿನ್ ಇ ಆರೋಗ್ಯ ಸುಧಾರಣೆಗೆ ಸಹಾಯ ಮಾಡಿ ದೇಹದಲ್ಲಿ ರಕ್ತದ ಸಂಚಲನವನ್ನು ಉತ್ತಮಗೊಳಿಸುತ್ತದೆ. ಮಾಂಸ, ಮೊಟ್ಟೆಗಳು, ಮೀನುಗಳು ಅಥವಾ ಡೈರಿ ಆಹಾರಗಳು ವಿಟಮಿನ್-ಬಿಯಿಂದ ಸಮೃದ್ಧವಾಗಿವೆ. ಈ ವಿಟಮಿನ್‍ಗಳು ಮೆಲನಿನ್ ಅನ್ನು ಉತ್ಪಾದಿಸಲು ಸಹಾಯ ಮಾಡುತ್ತವೆ, ಇದು ಕೂದಲಿಗೆ ಆರೋಗ್ಯಕರ ಬಣ್ಣವನ್ನು ನೀಡುತ್ತದೆ. ಜೊತೆಗೆ ರಕ್ತ ಸಂಚಲವನ್ನು ಸುಧಾರಿಸುತ್ತದೆ ಮತ್ತು ಕೂದಲು ಉದುರುವಿಕೆಯನ್ನು ನಿಲ್ಲುಸುತ್ತದೆ.


ಹೆಡ್ ಮಸಾಜ್  ಪ್ರತಿ ನಿತ್ಯ 15 ನಿಮಿಷಗಳ ಕಾಲ ನಿಮ್ಮ ತಲೆಯನ್ನು ಮಸಾಜ್ ಮಾಡುವುದರಿಂದ ನೆತ್ತಿಯಲ್ಲಿ ರಕ್ತ ಸಂಚಲನ ಉತ್ತಮ ರೀತಿಯಲ್ಲಿ ಆಗುತ್ತದೆ. ತಲೆ ಮಸಾಜ್ ಮಾಡಲು ತೆಂಗಿನ ಎಣ್ಣೆ ಅಥವಾ ಬಾದಾಮಿ ತೈಲವನ್ನು ಬಳಸಿದರೆ ಉತ್ತಮ. ಯಾಕೆಂದರೆ ಬಾದಾಮಿ ತೈಲ ನಿಮ್ಮ ನೆತ್ತಿಯನ್ನು ಮೃದುಗೊಳಿಸುವುದು. ಸಾಧ್ಯವಾದರೆ, ವಾರಕ್ಕೆ ಕನಿಷ್ಠ ಎರಡು ಬಾರಿ ಕೂದಲು ಉದುರುವಿಕೆಯನ್ನು ನಿಲ್ಲಿಸಲು ಬಾದಾಮಿ ತೈಲದಿಂದ ತಲೆಗೆ ಮಸಾಜ್ ಮಾಡಿಕೊಳ್ಳಿ ಉತ್ತಮ ಫಲಿತಾಂಶ ಪಡೆಯಿರಿ.

ಮೊಟ್ಟೆ  ವಾರದಲ್ಲಿ ಎರಡು ಬಾರಿ ಮೊಟ್ಟೆಯ ಬಿಳಿಯ ಬಿಳಿಯ ಭಾಗವನ್ನು ಬೇರ್ಪಡಿಸಿ ಅದನ್ನು ನಿಮ್ಮ ನೆತ್ತಿಯನ್ನು ಮಸಾಜ್ ಮಾಡುವುದರಿಂದ ಇದು ನಿಮ್ಮ ಕೂದಲನ್ನು ಬಲಪಡಿಸುತ್ತದೆ ಮತ್ತು ಪೋಷಣೆ ನೀಡುತ್ತದೆ. ಕೂದಲು ಉದುರುವಿಕೆಯನ್ನು ತಡೆಗಟ್ಟಿ ಕೂದಲು ವೇಗವಾಗಿ ಬೆಳೆಯಲು ಸಹಾಯ ಮಾಡುತ್ತದೆ.

ಬಿಸಿ ತೈಲ ಮಸಾಜ್  ತೆಂಗಿನ ಎಣ್ಣೆ, ಆಲಿವ್ ಎಣ್ಣೆ ಅಥವಾ ಕ್ಯಾನೋಲ ಎಣ್ಣೆಯನ್ನು ತೆಗೆದುಕೊಂಡು ಅದನ್ನು ಕೊಂಚ ಬಿಸಿ ಮಾಡಿ, ಕೆಲವು ನಿಮಿಷಗಳ ಕಾಲ ಈ ಬಿಸಿ ಎಣ್ಣೆಯಿಂದ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಬಳಿಕ ಒಂದು ಗಂಟೆ ಬಿಟ್ಟು ತಲೆ ಸ್ನಾನ ಮಾಡಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೂ ಕೂದಲ ಬೆಳವಣಿಗೆ ಆಗಲು ಕೂಡ ಇದು ಸಹಾಯ ಮಾಡುತ್ತದೆ.

ನೈಸರ್ಗಿಕ ರಸಗಳು  ಬೆಳ್ಳುಳ್ಳಿ ರಸ, ಈರುಳ್ಳಿ ರಸ ಅಥವಾ ಶುಂಠಿಯ ರಸವನ್ನು ತೆಗೆದುಕೊಂಡು ಕೆಲವು ನಿಮಿಷಗಳ ಕಾಲ ನಿಮ್ಮ ನೆತ್ತಿಯನ್ನು ಮಸಾಜ್ ಮಾಡಿ. ಇದು ಉತ್ತಮ ಕೂದಲು ಬೆಳವಣಿಗೆಯನ್ನು ಸಹಾಯಕಾರಿ ಹಾಗೂ ಕೂದಲು ಉದುರುವುದನ್ನು ತಡೆಯುತ್ತದೆ.


ಯೋಗಾಸನ ಕೂದಲು ಉದುರುವಿಕೆಯನ್ನು ತಡೆಯಲು ಮತ್ತು ಕೂದಲ ಬೆಳವಣಿಗೆಯನ್ನು ಸುಧಾರಿಸಲು ಖಾಲಿ ಹೊಟ್ಟೆಯಲ್ಲಿ ಪ್ರತಿನಿತ್ಯ ಬೆಳಿಗ್ಗೆ ಅಥವಾ ಸಂಜೆ ಯೋಗಾಸನ ಮಾಡಬೇಕು. ಯೋಗಾಸನ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಸೂರ್ಯನಮಸ್ಕಾರ, ವಜ್ರಾಸನ, ಸರ್ವಂಗಾಸನ,ಹಲಾಸನ. ಪ್ರಾಣಾಯಾಮ ಮಾಡಿದರೆ ಉಳ್ಳೆದು.ಕೂದಲು ಉದುರುವಿಕೆಯನ್ನು ನೈಸರ್ಗಿಕವಾಗಿ ನಿಲ್ಲಿಸುವುದರಲ್ಲಿ ಪ್ರಾಣಾಯಾಮ ಪ್ರಮುಖ ಪಾತ್ರ ವಹಿಸುತ್ತದೆ. ನಿತ್ಯವೂ ಪ್ರಾಣಾಯಾಮ ಮಾಡುವುದರಿಂದ ಒತ್ತಡ ಮತ್ತು ಖಿನ್ನತೆ ಕಡಿಮೆಯಾಗುತ್ತದೆ. ನಿಮ್ಮ ಒತ್ತಡ ಮತ್ತು ಖಿನ್ನತೆಯನ್ನು ನೀವು ಕಡಿಮೆ ಮಾಡಿದರೆ, ನೀವು ಕೂದಲ ಉದುರುವಿಕೆಯನ್ನು ಕಡಿಮೆಗೊಳಿಸಬಹುದು. ಹೆಚ್ಚಿನ ಸಂದರ್ಭಗಳಲ್ಲಿ ಒತ್ತಡ ಮತ್ತು ಖಿನ್ನತೆಯೇ ಹೇರ್ ಫಾಲ್‍ಗೆ ಕಾರಣವಾಗಿರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…

  • ಉಪಯುಕ್ತ ಮಾಹಿತಿ

    ಕಾರಿನ ಹಿಂಭಾಗದಲ್ಲಿ ಈ ರೀತಿ ಶೇಪ್ ಯಾಕೆ ಇರುತ್ತದೆ ಗೊತ್ತಾ?

    ಕಾರು ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ, ಜೀವನದಲ್ಲಿ ನಾವು ಒಂದು ಒಳ್ಳೆಯ ಕಾರ್ ಖರೀದಿ ಮಾಡಬೇಕು ಅನ್ನುವ ಆಸೆ ಪ್ರತಿಯೊಬ್ಬರಿಗೂ ಇದ್ದೆ ಇರುತ್ತದೆ ಮತ್ತು ಕೆಲವರಿಂದ ಅದೂ ಸಾದ್ಯವಾದರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಇನ್ನು ಕಾರ್ ಗಳನ್ನ ಖರೀದಿ ಮಾಡದೆ ಇದ್ದರೆ ಏನು ಕಾರನ್ನ ಪ್ರತಿಯೊಬ್ಬರೂ ನೋಡಿರುತ್ತಾರೆ, ಇನ್ನು ಕಾರಿನ ಹಿಂಭಾಗದಲ್ಲಿ ಸ್ಪೋಲೈರ್ ಅನ್ನುವ ಒಂದು ಭಾಗ ಇರುತ್ತದೆ, ಹಾಗಾದರೆ ಸ್ಪೋಲೈರ್ ಎಲ್ಲಾ ಕಾರುಗಳಲ್ಲಿ ಯಾಕೆ ಇರುತ್ತದೆ ಮತ್ತು ಅದರಿಂದ ಆಗುವ…

  • ಸುದ್ದಿ

    65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನವನ್ನು ನಡೆಸುತ್ತಿದ್ದಾರೆ,..ಇದಕ್ಕೆ ಕಾರಣವೇನೆಂದು ತಿಳಿಯಿರಿ..?

    ಚೆನ್ನೈನ  65 ವರ್ಷದ ವೃದ್ಧೆಯೊಬ್ಬರು ಕಳೆದ 19 ವರ್ಷಗಳಿಂದ ಸಾರ್ವಜನಿಕ ಶೌಚಾಲಯದಲ್ಲೇ ಜೀವನ ನಡೆಸುತ್ತಿರುವ ಮನಕಲಕುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ವಾಸಿಸಲು ಮನೆ ಇಲ್ಲದ ಕಾರಣದಿಂದಾಗಿ ಕರುಪ್ಪಾಯಿ ಅವರು ಶೌಚಾಲಯದ ಕೋಣೆಯಲ್ಲೇ ವಾಸವಾಗಿದ್ದಾರೆ. ವೃದ್ಧೆ ಕರುಪ್ಪಾಯಿ ಸಾರ್ವಜನಿಕ ಶೌಚಾಲಯ ಸ್ವಚ್ಛಗೊಳಿಸಿ ಅದರಿಂದ ಬರುವ ಹಣದಿಂದಲೇ ಜೀವನ ನಡೆಸುತ್ತಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ವೃದ್ಧೆ, ಹಿರಿಯ ನಾಗರಿಕ ಪಿಂಚಣಿಗಾಗಿ ನಾನು ಅನೇಕ ಬಾರಿ ಅರ್ಜಿ ಸಲ್ಲಿಸಿದ್ದೇನೆ. ಅದು ಆಗದಿದ್ದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯನ್ನು ಭೇಟಿಯಾಗಿದ್ದೇನೆ….

  • ಸಿನಿಮಾ, ಸುದ್ದಿ

    ಡಾ।ರಾಜಕುಮಾರ್ ಜೊತೆ ನಟಿಸಿದ ಸರಿತಾ ದುಬೈಗೆ ಹೋಗಲು ಕಾರಣವೇನು? ಅವರ ಜೀವನದಲ್ಲಿ ಅಂಥಾದ್ದು ಏನಾಗಿತ್ತು?

    ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(12 ಫೆಬ್ರವರಿ, 2019) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ನಿಮ್ಮ ಹಠಮಾರಿ ಪ್ರಕೃತಿ ನಿಮ್ಮ ಪೋಷಕರ…

  • ಸುದ್ದಿ

    ನಿಶ್ಚಿತಾರ್ಥದಲ್ಲಿ ನಿಖಿಲ್​ ಮೊದಲ ಬಾರಿಗೆ ರೇವತಿಯ ಬಗ್ಗೆ ಹೇಳಿದ್ದೇನು?

    ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್​ಬುಕ್ ಪೇಜ್​ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…