ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ . ಈ ಟೀ ಮೂಲತಃ ಥೈವಾನ್ ಟೀಯಿಂದ ಹುಟ್ಟಿಕೊಂಡಿದ್ದು, ಇದೊಂದು ಆಲ್ಕೋಹಾಲ್ ರಹಿತವಾದ, ಕಾರ್ಬೋನೇಟೆಡ್ ಅಲ್ಲದ ತಣ್ಣನೆಯ ಹಾಲಿನಿಂದ ತಯಾರಿಸಿದ ಟೀ ಇದಾಗಿದೆ. ಟಾಪಿಯೋಕ ಪರ್ಲ್ ಡ್ರಿಂಕ್, ಬಿಗ್ ಪರ್ಲ್, ಬೊಬಾ ನೈ ಚಾಯ್ ಮುಂತಾದ ಹೆಸರುಗಳು ಬಬಲ್ ಟೀಗಿದೆ.
ಇನ್ನೂ ಈ ಟೀನಲ್ಲಿ ವಿಶೆಷವಾಗಿ ಜೆಲ್ಲಿಗಳಂತಿರುವ ‘ಟ್ಯಾಪಿಕೊ ಪರ್ಲ್’ ಹಾಕಿರುವುದರಿಂದ ಈ ಜ್ಯೂಸ್ಗೆ ‘ಬಬಲ್ ಟೀ’ ಎಂಬ ವಿಶೇಷ ಹೆಸರು ಬಂದಿದೆ. ಪೇಯದ ಬುಡದಲ್ಲಿ ಕಾಮಕಸ್ತೂರಿ ಬೀಜದಂತೆ ಕಾಣುತ್ತಿರುತ್ತದೆ. ಅಲ್ಲದೆ ಬಬಲ್ ಟೀ ಫೇಮಸ್ ಆಗುತ್ತಿದ್ದಂತೆಯೇ ಇದರಲ್ಲಿ ಹತ್ತು ಹಲವು ರೀತಿಯ ಫ್ಲೇವರ್ಗಳು, ವಿಧಗಳು ಹುಟ್ಟಿಕೊಂಡಿದೆ. 1980ರಲ್ಲಿ ತೈವಾನ್ನ ಟೀ ಅಂಗಡಿ ಮಾಲೀಕ ಲಿಯು ಹನ್-ಚೀ ಎಂಬಾತ ತನ್ನ ಅಂಗಡಿಯತ್ತಾ ಜನರನ್ನು ಸೆಳೆಯಲು ಏನಾದರೂ ಹೊಸತನ್ನು ಕಂಡು ಹಿಡಿಯಬೇಕೆಂದು ಕೋಲ್ಡ್ ಮಿಲ್ಕ್ ಟೀಗೆ ಯಮ್, ಹಣ್ಣುಗಳು, ಸಿರಪ್ಗಳು ಹಾಗೂ ಟ್ಯಾಪಿಕೊ ಬಾಲ್ಗಳನ್ನು ಹಾಕಿ ಮೊದಲು ಈ ಪಾನೀಯವನ್ನು ತಯಾರಿಸಿದ.
ತದನಂತರ ಹತ್ತು ವರ್ಷದಲ್ಲಿ ಇದು ಪೂರ್ವ ಮತ್ತು ಆಗ್ನೇಯ ಏಷ್ಯಾಗಳಲ್ಲಿ ಜನಪ್ರಿಯಗೊಂಡಿತು. ಸದ್ಯ ಥೈವಾನ್ನ ಪ್ರತೀ ಟೀ ಅಂಗಡಿಗಳೂ ಇದು ತಮ್ಮ ಹೆಗ್ಗುರುತು ಎಂಬಂತೆ ಬಬಲ್ ಟೀ ತಯಾರಿಸುತ್ತವೆ. ಇದರ ಬೇಡಿಕೆ ಹೆಚ್ಚಾಗುತ್ತಿದಂತೆಯೇ ಮತ್ತಷ್ಟು ಹೊಸ ಹೊಸ ರುಚಿಗಳನ್ನು ಕಂಡು ಹಿಡಿದು ಮಾರಲು ಆರಂಭಿಸಿದರು. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಯೂರೋಪ್, ದಕ್ಷಿಣ ಆಫ್ರಿಕಾ ಅಷ್ಟೇ ಏಕೆ, ಬೆಂಗಳೂರಿನ ಮಾಲ್ಗಳಲ್ಲಿ ಕೂಡಾ ಈ ಬಬಲ್ ಟೀ ಎಲ್ಲರನ್ನು ಆಕರ್ಷಿಸುತ್ತಾ. ಜನಪ್ರೀತಿ ಗಳಿಸಿದೆ.
ಇನ್ನೂ ಈ ತಂಪಾದ ಪಾನೀಯದ ರುಚಿ ಹಣ್ಣು, ಅದಕ್ಕೆ ಸೇರಿಸುವ ಬೇಸ್ ಮತ್ತು ಸಿರಪ್ಗಳ ಮೇಲೆ ಆಧರಿಸಿದ್ದು, ಬಳಸುವ ಸಾಮಗ್ರಿಗಳಿಗೆ ಅನುಗುಣವಾಗಿ ಈ ಪೇಯ ಕೆಲವೊಮ್ಮೆ ಸಿಹಿ ಅಥವಾ ಕಹಿಯಾಗಿರಬಹುದು. ಅಧ್ಯಯನಗಳ ಪ್ರಕಾರ, ಒಂದು ಬಾರಿಯ ಸರ್ವಿಂಗ್ನ ಈ ಪೇಯದಲ್ಲಿ 38 ಗ್ರಾಂನಷ್ಟು ಸಕ್ಕರೆ ಇದ್ದು, 300ರಿಂದ 400 ಕ್ಯಾಲೊರಿ ಇರುತ್ತದೆ. ನಿಮ್ಮ ದೇಹಾರೋಗ್ಯಕ್ಕೆ ಬಬಲ್ ಟೀಯಲ್ಲಿ ನೀವು ಯಾವ ಹಣ್ಣು ಬಳಸುತ್ತೀರಾ? ಮತ್ತು ಎಷ್ಟು ಸಕ್ಕರೆ ಹಾಕುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಬೇಕಾದರೆ ನೀವು ಇದಕ್ಕೆ ಆಯಾ ಸೀಸನ್ಗೆ ತಕ್ಕಂತೆ ಮಾವು, ಬಾಳೆಹಣ್ಣು, ಕಲ್ಲಂಗಡಿ ಮುಂತಾದ ಹಣ್ಣುಗಳನ್ನು ಇದಕ್ಕಾಗಿ ಬಳಸಬಹುದು. ಟ್ಯಾಪಿಕೋ ಪರ್ಲ್ಗಳಲ್ಲಿ ಪ್ರೋಟೀನ್, ವಿಟಮಿನ್ ಕೆ, ಕ್ಯಾಲ್ಶಿಯಂ ಹಾಗೂ ಪೊಟ್ಯಾಶಿಯಂ ಅಧಿಕವಾಗಿದ್ದು, ಹಾಗಾಗಿ ಈ ಬಬಲ್ಗಳು ಟೀಗೆ ಹೆಚ್ಚಿನ ಪೋಷಕಾಂಶ ಒದಗಿಸುತ್ತವೆ
ಅಲ್ಲದೆ ಬಬಲ್ ಟೀ ತಯಾರಿಸುವಾಗ ಅತಿಯಾಗಿ ಸಕ್ಕರೆ ಹಾಗೂ ಫ್ಲೇವರ್ ಬಳಸಿದರೆ ಖಂಡಿತಾ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳನ್ನು ಅವಾಯ್ಡ್ ಮಾಡಿ ಹಣ್ಣುಗಳನ್ನು ಬಳಸಿ ತಯಾರಿಸಿದರೆ ಪೇಯವು ಸಹಜವಾಗಿಯೇ ಸಿಹಿಯಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಸದ್ಯ ಭಾರತದಲ್ಲಿ ಫೇಮಸ್ಆಗಿರುವ ಈ ಟೀನಲ್ಲಿ ಹಲವು ವೆರೈಟಿಗಳಿದ್ದು, ಕಾಫಿ ಬಬಲ್ ಟೀ, ಕೋಕೋನಟ್ ಬಬಲ್ ಟೀ, ಮ್ಯಾಂಗೋ ಬಬಲ್ ಟೀ, ಕ್ಲಾಸಿಕ್ ಬಬಲ್ ಟೀ ಹಾಗೂ ಸ್ಟ್ರಾಬೆರಿ ಆಲ್ಮಂಡ್ ಮಿಲ್ಕ್ ಬಬಲ್ ಟೀ ಎಂಬುವುದು ಎಲ್ಲೆಡೆ ದೊರೆಯುತ್ತಿದೆ. ಹಾಗದರೆ ಇನ್ನೂ ಯಾಕ್ ಯೋಚನೆ ಮಾಡುತ್ತಿದ್ದೀರಾ? ನೀವು ಟೆಸ್ಟ್ ಮಾಡಿಲ್ಲವಾದಲ್ಲಿ ಒಮ್ಮೆ ಹೋಗಿ ಬಬಲ್ ಟೀಯನ್ನು ಟ್ರೈ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ ಕನಿಷ್ಠ 1 ಜಿ.ಬಿ. ಡೇಟಾವನ್ನು ಉಚಿತವಾಗಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿದೆ. ಎಲ್ಲಾ ಸರ್ಕಾರಿ ವಿಶ್ವವಿದ್ಯಾಲಯ, ಕಾಲೇಜುಗಳಲ್ಲಿ ಆಗಸ್ಟ್ 15 ರೊಳಗೆ ಸೌಲಭ್ಯ ನೀಡಲು ಸೂಚನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ವೈಫೈ ಸೌಲಭ್ಯ ಕಲ್ಪಿಸಲಾಗುತ್ತದೆ
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು.
ಯಾರೇ ನೀನು ಚೆಲುವೆ ಚಿತ್ರವು 1998ರಲ್ಲಿ ಸ್ಯಾಂಡಲ್ ವುಡ್ ಬಿಡುಗಡೆಯಾದ ಚಿತ್ರ. ಕ್ರೇಜಿ ಸ್ಟಾರ್ ರವಿಚಂದ್ರನ್ ಹಾಗು ನಟಿ ಸಂಗೀತ ನಟಿಸಿದ್ದರು. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ರಾಕ್ ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕ್ಷಿಣ ಭಾರತದ ನಾಲ್ಕು ಭಾಷೆಯಲ್ಲಿ ಅಭಿನಯ ಮಾಡಿ ಮಿಂಚಿದ್ದ ಈ ನಟಿ 2000 ರಲ್ಲಿ ಸರವನ್ ಎಂಬುವವರನ್ನು ಮದುವೆ ಆದರು, ಬಳಿಕ ಯಾವುದೇ ಸಿನಿಮಾ ಮಾಡುವುದಿಲ್ಲ ಎಂದು ತಿಳಿಸಿದರು. ಇವರು ಸಿನಿಮಾದಲ್ಲಿ ಸೌಮ್ಯ ಸ್ವಭಾವದ ಪಾತ್ರಗಳಲ್ಲೇ ಅಭಿನಯ ಮಾಡಿ ಹೆಸರುವಾಸಿಯಾದವರು. ನಿಜಜೀವನದಲ್ಲೂ…
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…