News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಟೀ ಪ್ರಿಯರಿಗೋಂದು ಸಿಹಿ ಸುದ್ದಿ, ಬೆಂಗಳೂರಿಗೆ ಬಂತು ಬಬಲ್ ಟೀ..!

56

ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್‌ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ . ಈ ಟೀ ಮೂಲತಃ ಥೈವಾನ್‌ ಟೀಯಿಂದ ಹುಟ್ಟಿಕೊಂಡಿದ್ದು, ಇದೊಂದು ಆಲ್ಕೋಹಾಲ್ ರಹಿತವಾದ, ಕಾರ್ಬೋನೇಟೆಡ್ ಅಲ್ಲದ ತಣ್ಣನೆಯ ಹಾಲಿನಿಂದ ತಯಾರಿಸಿದ ಟೀ ಇದಾಗಿದೆ. ಟಾಪಿಯೋಕ ಪರ್ಲ್ ಡ್ರಿಂಕ್, ಬಿಗ್ ಪರ್ಲ್, ಬೊಬಾ ನೈ ಚಾಯ್ ಮುಂತಾದ ಹೆಸರುಗಳು ಬಬಲ್ ಟೀಗಿದೆ.

ಇನ್ನೂ ಈ ಟೀನಲ್ಲಿ ವಿಶೆಷವಾಗಿ ಜೆಲ್ಲಿಗಳಂತಿರುವ ‘ಟ್ಯಾಪಿಕೊ ಪರ್ಲ್‌’ ಹಾಕಿರುವುದರಿಂದ ಈ ಜ್ಯೂಸ್‌ಗೆ ‘ಬಬಲ್‌ ಟೀ’ ಎಂಬ ವಿಶೇಷ ಹೆಸರು ಬಂದಿದೆ. ಪೇಯದ ಬುಡದಲ್ಲಿ ಕಾಮಕಸ್ತೂರಿ ಬೀಜದಂತೆ ಕಾಣುತ್ತಿರುತ್ತದೆ. ಅಲ್ಲದೆ ಬಬಲ್ ಟೀ ಫೇಮಸ್ ಆಗುತ್ತಿದ್ದಂತೆಯೇ ಇದರಲ್ಲಿ ಹತ್ತು ಹಲವು ರೀತಿಯ ಫ್ಲೇವರ್‌ಗಳು, ವಿಧಗಳು ಹುಟ್ಟಿಕೊಂಡಿದೆ. 1980ರಲ್ಲಿ ತೈವಾನ್‌ನ ಟೀ ಅಂಗಡಿ ಮಾಲೀಕ ಲಿಯು ಹನ್‌-ಚೀ ಎಂಬಾತ ತನ್ನ ಅಂಗಡಿಯತ್ತಾ ಜನರನ್ನು ಸೆಳೆಯಲು ಏನಾದರೂ ಹೊಸತನ್ನು ಕಂಡು ಹಿಡಿಯಬೇಕೆಂದು ಕೋಲ್ಡ್‌ ಮಿಲ್ಕ್‌ ಟೀಗೆ ಯಮ್‌, ಹಣ್ಣುಗಳು, ಸಿರಪ್‌ಗಳು ಹಾಗೂ ಟ್ಯಾಪಿಕೊ ಬಾಲ್‌ಗಳನ್ನು ಹಾಕಿ ಮೊದಲು ಈ ಪಾನೀಯವನ್ನು ತಯಾರಿಸಿದ.

ತದನಂತರ ಹತ್ತು ವರ್ಷದಲ್ಲಿ ಇದು ಪೂರ್ವ ಮತ್ತು ಆಗ್ನೇಯ ಏಷ್ಯಾಗಳಲ್ಲಿ ಜನಪ್ರಿಯಗೊಂಡಿತು. ಸದ್ಯ ಥೈವಾನ್‌ನ ಪ್ರತೀ ಟೀ ಅಂಗಡಿಗಳೂ ಇದು ತಮ್ಮ ಹೆಗ್ಗುರುತು ಎಂಬಂತೆ ಬಬಲ್ ಟೀ ತಯಾರಿಸುತ್ತವೆ. ಇದರ ಬೇಡಿಕೆ ಹೆಚ್ಚಾಗುತ್ತಿದಂತೆಯೇ ಮತ್ತಷ್ಟು ಹೊಸ ಹೊಸ ರುಚಿಗಳನ್ನು ಕಂಡು ಹಿಡಿದು ಮಾರಲು ಆರಂಭಿಸಿದರು. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಯೂರೋಪ್, ದಕ್ಷಿಣ ಆಫ್ರಿಕಾ ಅಷ್ಟೇ ಏಕೆ, ಬೆಂಗಳೂರಿನ ಮಾಲ್‌ಗಳಲ್ಲಿ ಕೂಡಾ ಈ ಬಬಲ್ ಟೀ ಎಲ್ಲರನ್ನು ಆಕರ್ಷಿಸುತ್ತಾ. ಜನಪ್ರೀತಿ ಗಳಿಸಿದೆ.

ಇನ್ನೂ ಈ ತಂಪಾದ ಪಾನೀಯದ ರುಚಿ ಹಣ್ಣು, ಅದಕ್ಕೆ ಸೇರಿಸುವ ಬೇಸ್‌ ಮತ್ತು ಸಿರಪ್‌ಗಳ ಮೇಲೆ ಆಧರಿಸಿದ್ದು, ಬಳಸುವ ಸಾಮಗ್ರಿಗಳಿಗೆ ಅನುಗುಣವಾಗಿ ಈ ಪೇಯ ಕೆಲವೊಮ್ಮೆ ಸಿಹಿ ಅಥವಾ ಕಹಿಯಾಗಿರಬಹುದು. ಅಧ್ಯಯನಗಳ ಪ್ರಕಾರ, ಒಂದು ಬಾರಿಯ ಸರ್ವಿಂಗ್‌ನ ಈ ಪೇಯದಲ್ಲಿ 38 ಗ್ರಾಂನಷ್ಟು ಸಕ್ಕರೆ ಇದ್ದು, 300ರಿಂದ 400 ಕ್ಯಾಲೊರಿ ಇರುತ್ತದೆ. ನಿಮ್ಮ ದೇಹಾರೋಗ್ಯಕ್ಕೆ ಬಬಲ್‌ ಟೀಯಲ್ಲಿ ನೀವು ಯಾವ ಹಣ್ಣು ಬಳಸುತ್ತೀರಾ? ಮತ್ತು ಎಷ್ಟು ಸಕ್ಕರೆ ಹಾಕುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಬೇಕಾದರೆ ನೀವು ಇದಕ್ಕೆ ಆಯಾ ಸೀಸನ್‌ಗೆ ತಕ್ಕಂತೆ ಮಾವು, ಬಾಳೆಹಣ್ಣು, ಕಲ್ಲಂಗಡಿ ಮುಂತಾದ ಹಣ್ಣುಗಳನ್ನು ಇದಕ್ಕಾಗಿ ಬಳಸಬಹುದು. ಟ್ಯಾಪಿಕೋ ಪರ್ಲ್‌ಗಳಲ್ಲಿ ಪ್ರೋಟೀನ್, ವಿಟಮಿನ್ ಕೆ, ಕ್ಯಾಲ್ಶಿಯಂ ಹಾಗೂ ಪೊಟ್ಯಾಶಿಯಂ ಅಧಿಕವಾಗಿದ್ದು, ಹಾಗಾಗಿ ಈ ಬಬಲ್‌ಗಳು ಟೀಗೆ ಹೆಚ್ಚಿನ ಪೋಷಕಾಂಶ ಒದಗಿಸುತ್ತವೆ

ಅಲ್ಲದೆ ಬಬಲ್‌ ಟೀ ತಯಾರಿಸುವಾಗ ಅತಿಯಾಗಿ ಸಕ್ಕರೆ ಹಾಗೂ ಫ್ಲೇವರ್ ಬಳಸಿದರೆ ಖಂಡಿತಾ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳನ್ನು ಅವಾಯ್ಡ್ ಮಾಡಿ ಹಣ್ಣುಗಳನ್ನು ಬಳಸಿ ತಯಾರಿಸಿದರೆ ಪೇಯವು ಸಹಜವಾಗಿಯೇ ಸಿಹಿಯಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಸದ್ಯ ಭಾರತದಲ್ಲಿ ಫೇಮಸ್ಆಗಿರುವ ಈ ಟೀನಲ್ಲಿ ಹಲವು ವೆರೈಟಿಗಳಿದ್ದು, ಕಾಫಿ ಬಬಲ್ ಟೀ, ಕೋಕೋನಟ್ ಬಬಲ್ ಟೀ, ಮ್ಯಾಂಗೋ ಬಬಲ್ ಟೀ, ಕ್ಲಾಸಿಕ್ ಬಬಲ್ ಟೀ ಹಾಗೂ ಸ್ಟ್ರಾಬೆರಿ ಆಲ್ಮಂಡ್ ಮಿಲ್ಕ್ ಬಬಲ್ ಟೀ ಎಂಬುವುದು ಎಲ್ಲೆಡೆ ದೊರೆಯುತ್ತಿದೆ. ಹಾಗದರೆ ಇನ್ನೂ ಯಾಕ್ ಯೋಚನೆ ಮಾಡುತ್ತಿದ್ದೀರಾ? ನೀವು ಟೆಸ್ಟ್ ಮಾಡಿಲ್ಲವಾದಲ್ಲಿ ಒಮ್ಮೆ ಹೋಗಿ ಬಬಲ್ ಟೀಯನ್ನು ಟ್ರೈ ಮಾಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…

  • ದೇಶ-ವಿದೇಶ

    ಮೋದಿ ಸರಕಾರದ ಮೂರು ವರುಷದ ಸಂಭ್ರಮಾಚರಣೆಗೆ, ರಾಷ್ಟ್ರಕ್ಕೆ ಸಮರ್ಪಿತವಾದ ದೇಶದ ಅತಿ ದೊಡ್ಡದಾದ ಸೇತುವೆ

    ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.

  • ವಿಜ್ಞಾನ

    ಕೊನೆಗೂ ಚಂದ್ರನ ಮೇಲೆ ಇಳಿದ ವಿಕ್ರಮ್ ಲ್ಯಾಂಡರ್, ರೋಚಕ ಮಾಹಿತಿ ಬಹಿರಂಗ,.!

    ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್‌’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್‌ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ…

  • Village

    ನಿಮ್ಮ ಹಳ್ಳಿಯಲ್ಲಿ ಕರೊನಾ ಜಾಸ್ತಿ ಆಗಲು ಈ ಕಾರಣ ಇರಬಹುದು.

    ಕೊರೊನಾ ಈ ದೇಶಕ್ಕೆ ಕಾಲಿಟ್ಟಾಗ ಹಳ್ಳಿಗಳು ಕೊರೊನಾ ವೈರಸ್ ನಿಂದ ಬಹುದೂರದಲ್ಲಿದ್ದವು. ಪೇಟೆಗಳಲ್ಲಿ ಮಾತ್ರ ಜನ ಕೊರೊನಾಕ್ಕೆ ಬಲಿ ಆಗ್ತಾ ಇದ್ರು. ಆದ್ರೆ ಕೊರೊನಾ ಎರಡನೇ ಅಲೆ ಹಳ್ಳಿಗರನ್ನು ತೀವ್ರವಾಗಿ ಬಾಧಿಸುತ್ತಿದೆ. ಇದಕ್ಕೆ ಹಳ್ಳಿಗರ ಸ್ವಯಂಕೃತ ಅಪರಾಧವೇ ಕಾರಣವಾಗಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…