ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ . ಈ ಟೀ ಮೂಲತಃ ಥೈವಾನ್ ಟೀಯಿಂದ ಹುಟ್ಟಿಕೊಂಡಿದ್ದು, ಇದೊಂದು ಆಲ್ಕೋಹಾಲ್ ರಹಿತವಾದ, ಕಾರ್ಬೋನೇಟೆಡ್ ಅಲ್ಲದ ತಣ್ಣನೆಯ ಹಾಲಿನಿಂದ ತಯಾರಿಸಿದ ಟೀ ಇದಾಗಿದೆ. ಟಾಪಿಯೋಕ ಪರ್ಲ್ ಡ್ರಿಂಕ್, ಬಿಗ್ ಪರ್ಲ್, ಬೊಬಾ ನೈ ಚಾಯ್ ಮುಂತಾದ ಹೆಸರುಗಳು ಬಬಲ್ ಟೀಗಿದೆ.

ಇನ್ನೂ ಈ ಟೀನಲ್ಲಿ ವಿಶೆಷವಾಗಿ ಜೆಲ್ಲಿಗಳಂತಿರುವ ‘ಟ್ಯಾಪಿಕೊ ಪರ್ಲ್’ ಹಾಕಿರುವುದರಿಂದ ಈ ಜ್ಯೂಸ್ಗೆ ‘ಬಬಲ್ ಟೀ’ ಎಂಬ ವಿಶೇಷ ಹೆಸರು ಬಂದಿದೆ. ಪೇಯದ ಬುಡದಲ್ಲಿ ಕಾಮಕಸ್ತೂರಿ ಬೀಜದಂತೆ ಕಾಣುತ್ತಿರುತ್ತದೆ. ಅಲ್ಲದೆ ಬಬಲ್ ಟೀ ಫೇಮಸ್ ಆಗುತ್ತಿದ್ದಂತೆಯೇ ಇದರಲ್ಲಿ ಹತ್ತು ಹಲವು ರೀತಿಯ ಫ್ಲೇವರ್ಗಳು, ವಿಧಗಳು ಹುಟ್ಟಿಕೊಂಡಿದೆ. 1980ರಲ್ಲಿ ತೈವಾನ್ನ ಟೀ ಅಂಗಡಿ ಮಾಲೀಕ ಲಿಯು ಹನ್-ಚೀ ಎಂಬಾತ ತನ್ನ ಅಂಗಡಿಯತ್ತಾ ಜನರನ್ನು ಸೆಳೆಯಲು ಏನಾದರೂ ಹೊಸತನ್ನು ಕಂಡು ಹಿಡಿಯಬೇಕೆಂದು ಕೋಲ್ಡ್ ಮಿಲ್ಕ್ ಟೀಗೆ ಯಮ್, ಹಣ್ಣುಗಳು, ಸಿರಪ್ಗಳು ಹಾಗೂ ಟ್ಯಾಪಿಕೊ ಬಾಲ್ಗಳನ್ನು ಹಾಕಿ ಮೊದಲು ಈ ಪಾನೀಯವನ್ನು ತಯಾರಿಸಿದ.

ತದನಂತರ ಹತ್ತು ವರ್ಷದಲ್ಲಿ ಇದು ಪೂರ್ವ ಮತ್ತು ಆಗ್ನೇಯ ಏಷ್ಯಾಗಳಲ್ಲಿ ಜನಪ್ರಿಯಗೊಂಡಿತು. ಸದ್ಯ ಥೈವಾನ್ನ ಪ್ರತೀ ಟೀ ಅಂಗಡಿಗಳೂ ಇದು ತಮ್ಮ ಹೆಗ್ಗುರುತು ಎಂಬಂತೆ ಬಬಲ್ ಟೀ ತಯಾರಿಸುತ್ತವೆ. ಇದರ ಬೇಡಿಕೆ ಹೆಚ್ಚಾಗುತ್ತಿದಂತೆಯೇ ಮತ್ತಷ್ಟು ಹೊಸ ಹೊಸ ರುಚಿಗಳನ್ನು ಕಂಡು ಹಿಡಿದು ಮಾರಲು ಆರಂಭಿಸಿದರು. ಈಗಾಗಲೇ ಅಮೆರಿಕ, ಆಸ್ಟ್ರೇಲಿಯಾ, ಯೂರೋಪ್, ದಕ್ಷಿಣ ಆಫ್ರಿಕಾ ಅಷ್ಟೇ ಏಕೆ, ಬೆಂಗಳೂರಿನ ಮಾಲ್ಗಳಲ್ಲಿ ಕೂಡಾ ಈ ಬಬಲ್ ಟೀ ಎಲ್ಲರನ್ನು ಆಕರ್ಷಿಸುತ್ತಾ. ಜನಪ್ರೀತಿ ಗಳಿಸಿದೆ.

ಇನ್ನೂ ಈ ತಂಪಾದ ಪಾನೀಯದ ರುಚಿ ಹಣ್ಣು, ಅದಕ್ಕೆ ಸೇರಿಸುವ ಬೇಸ್ ಮತ್ತು ಸಿರಪ್ಗಳ ಮೇಲೆ ಆಧರಿಸಿದ್ದು, ಬಳಸುವ ಸಾಮಗ್ರಿಗಳಿಗೆ ಅನುಗುಣವಾಗಿ ಈ ಪೇಯ ಕೆಲವೊಮ್ಮೆ ಸಿಹಿ ಅಥವಾ ಕಹಿಯಾಗಿರಬಹುದು. ಅಧ್ಯಯನಗಳ ಪ್ರಕಾರ, ಒಂದು ಬಾರಿಯ ಸರ್ವಿಂಗ್ನ ಈ ಪೇಯದಲ್ಲಿ 38 ಗ್ರಾಂನಷ್ಟು ಸಕ್ಕರೆ ಇದ್ದು, 300ರಿಂದ 400 ಕ್ಯಾಲೊರಿ ಇರುತ್ತದೆ. ನಿಮ್ಮ ದೇಹಾರೋಗ್ಯಕ್ಕೆ ಬಬಲ್ ಟೀಯಲ್ಲಿ ನೀವು ಯಾವ ಹಣ್ಣು ಬಳಸುತ್ತೀರಾ? ಮತ್ತು ಎಷ್ಟು ಸಕ್ಕರೆ ಹಾಕುತ್ತೀರಿ ಎಂಬುದರ ಮೇಲೆ ನಿರ್ಧಾರವಾಗುತ್ತದೆ. ಬೇಕಾದರೆ ನೀವು ಇದಕ್ಕೆ ಆಯಾ ಸೀಸನ್ಗೆ ತಕ್ಕಂತೆ ಮಾವು, ಬಾಳೆಹಣ್ಣು, ಕಲ್ಲಂಗಡಿ ಮುಂತಾದ ಹಣ್ಣುಗಳನ್ನು ಇದಕ್ಕಾಗಿ ಬಳಸಬಹುದು. ಟ್ಯಾಪಿಕೋ ಪರ್ಲ್ಗಳಲ್ಲಿ ಪ್ರೋಟೀನ್, ವಿಟಮಿನ್ ಕೆ, ಕ್ಯಾಲ್ಶಿಯಂ ಹಾಗೂ ಪೊಟ್ಯಾಶಿಯಂ ಅಧಿಕವಾಗಿದ್ದು, ಹಾಗಾಗಿ ಈ ಬಬಲ್ಗಳು ಟೀಗೆ ಹೆಚ್ಚಿನ ಪೋಷಕಾಂಶ ಒದಗಿಸುತ್ತವೆ
ಅಲ್ಲದೆ ಬಬಲ್ ಟೀ ತಯಾರಿಸುವಾಗ ಅತಿಯಾಗಿ ಸಕ್ಕರೆ ಹಾಗೂ ಫ್ಲೇವರ್ ಬಳಸಿದರೆ ಖಂಡಿತಾ ಇದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇವುಗಳನ್ನು ಅವಾಯ್ಡ್ ಮಾಡಿ ಹಣ್ಣುಗಳನ್ನು ಬಳಸಿ ತಯಾರಿಸಿದರೆ ಪೇಯವು ಸಹಜವಾಗಿಯೇ ಸಿಹಿಯಾಗುತ್ತದೆ. ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು. ಸದ್ಯ ಭಾರತದಲ್ಲಿ ಫೇಮಸ್ಆಗಿರುವ ಈ ಟೀನಲ್ಲಿ ಹಲವು ವೆರೈಟಿಗಳಿದ್ದು, ಕಾಫಿ ಬಬಲ್ ಟೀ, ಕೋಕೋನಟ್ ಬಬಲ್ ಟೀ, ಮ್ಯಾಂಗೋ ಬಬಲ್ ಟೀ, ಕ್ಲಾಸಿಕ್ ಬಬಲ್ ಟೀ ಹಾಗೂ ಸ್ಟ್ರಾಬೆರಿ ಆಲ್ಮಂಡ್ ಮಿಲ್ಕ್ ಬಬಲ್ ಟೀ ಎಂಬುವುದು ಎಲ್ಲೆಡೆ ದೊರೆಯುತ್ತಿದೆ. ಹಾಗದರೆ ಇನ್ನೂ ಯಾಕ್ ಯೋಚನೆ ಮಾಡುತ್ತಿದ್ದೀರಾ? ನೀವು ಟೆಸ್ಟ್ ಮಾಡಿಲ್ಲವಾದಲ್ಲಿ ಒಮ್ಮೆ ಹೋಗಿ ಬಬಲ್ ಟೀಯನ್ನು ಟ್ರೈ ಮಾಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…
ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…