News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational, ಸುದ್ದಿ

ಇಲ್ಲಿದೆ ನೋಡಿ ರಾಜ್ಯದ ಎಲ್ಲಾ ರೈತರಿಗೆ ಸುಪ್ರೀಂಕೋರ್ಟ್ ಗುಡ್ ನ್ಯೂಸ್ ನೀಡಿದೆ. ಇದನ್ನೊಮ್ಮೆ ಓದಿ…!

83

ನವದೆಹಲಿ, ಕೊಡಗುಜಿಲ್ಲೆಯಲ್ಲಿ ವರ್ಗಭೂಮಿ ಹೊಂದಿರುವವರಿಗೆ ಲಭ್ಯವಾಗುವಬಾಣೆ ಜಮೀನು ಹಂಚಿಕೊಳ್ಳುವ ಅಧಿಕಾರವನ್ನುಸುಪ್ರೀಂ ಕೋರ್ಟ್‌ ನೀಡಿದೆ. ಈ ಮೂಲಕ ಬಾಣೆ ಜಮೀನು ಕೂಡ ಸೀಮಿತ ಆಸ್ತಿ ಹಕ್ಕಿನ ವ್ಯಾಪ್ತಿಯನ್ನು ಹೊಂದಿದೆಎಂಬ ವಾದಕ್ಕೆ ಸುಪ್ರೀಂನ ಮುದ್ರೆ ಬಿದ್ದಂತಾಗಿದೆ. 
ಕೊಡಗಿನ ಬಾಣೆ ಭೂಮಿಗೆ ಸಮಾನಂತರವಾಗಿ ವ್ಯಾಖ್ಯಾನಿಸಲಾಗುವ ಕುಮ್ಕಿ, ಕಾಣೆ, ಬೆಟ್ಟಭೂಮಿ, ಹಾದಿ ಭೂಮಿ, ಕಾನ್‌ ಮತ್ತು ಸೊಪ್ಪಿನ ಬೆಟ್ಟ, ಜಮ್ಮಾ ಮತ್ತು ಮೊಟಸ್ಥಳಗಳನ್ನು ಹೊಂದಿರುವ ರಾಜ್ಯದ ಉದ್ದಗಲದಲ್ಲಿನ ಲಕ್ಷಾಂತರ ರೈತರಿಗೆ ಸುಪ್ರೀಂಕೋರ್ಟ್‌ನ ಈ ಆದೇಶ ತುಸು ನೆಮ್ಮದಿಯನ್ನು ನೀಡಿದೆ.

ಕೊಡಗಿನ ಕೋಟಿಯಂಗದ ಬಿ. ಮೋಟಯ್ಯ ವರ್ಸಸ್‌ ಮಾಚಿಮಾಡ ಬೆಳ್ಳಿಯಪ್ಪ ಮತ್ತಿತರರು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿನ ಕದ ತಟ್ಟಿದ್ದರು. ನ್ಯಾಯಮೂರ್ತಿ ನವೀನ್‌ ಸಿನ್ಹಾ ಮತ್ತು ನ್ಯಾ. ಇಂದಿರಾ ಬ್ಯಾನರ್ಜಿ ಅವರಿದ್ದ ದ್ವಿಸದಸ್ಯ ನ್ಯಾಯಪೀಠವು ಬಾಣೆ ಜಮೀನಿನ ಹಕ್ಕನ್ನು ಗುರುತಿಸಿ ಅದನ್ನು ಹಂಚಿಕೊಳ್ಳುವ ಅಧಿಕಾರವನ್ನು ಕಲ್ಪಿಸಿ ಆ.28ರಂದು ಆದೇಶ ನೀಡಿದೆ. ಇದು ಕರ್ನಾಟಕ ಭೂ ಕಂದಾಯ ಕಾಯ್ದೆ- 1964ಕ್ಕೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ತೀರ್ಪು ಎಂದು ವಿಶ್ಲೇಷಿಸಲಾಗಿದೆ.

ಬಳ್ಳಿ ಮಂಡೂರು ಗ್ರಾಮದಲ್ಲಿ ವರ್ಗ ಜಮೀನಿಗೆ ತಾಕಿಕೊಂಡಿದ್ದ ಬಾಣೆ ಜಾಗಕ್ಕೆ ಸಂಬಂಧಿಸಿ ತಕರಾರಿನ ಬಗ್ಗೆ ವಿಚಾರಣೆ ನಡೆಸಿತು. ಸುಪ್ರೀಂ ಕೋರ್ಟ್‌, ವರ್ಗ ಭೂಮಿ ಹೊಂದಿರುವವರಿಗೆ ಮಾತ್ರ ಅಲ್ಲಿನ ಬಾಣೆ ಜಮೀನಿನ ಮೇಲೆ ಅಧಿಕಾರವಿದೆ ಎಂಬ ಹೈಕೋರ್ಟ್‌ ಮತ್ತು ಸ್ಥಳೀಯ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿಯುವುದರೊಂದಿಗೆ ಬಾಣೆ ಜಮೀನನ್ನು ಹಂಚುವ ಅಧಿಕಾರ ವರ್ಗ ಭೂಮಿಯ ಮಾಲೀಕನಿಗೆ ಸಿಕ್ಕಂತಾಗಿದೆ.

ಬಾಣೆ, ಕುಮ್ಕಿ, ಜಮ್ಮಾ ಮುಂತಾದವು ವರ್ಗ ಜಮೀನಿಗೆ ತಾಕಿಕೊಂಡಿದ್ದು ಈ ಜಮೀನಿನ ಮೇಲೆ ಸರ್ಕಾರಕ್ಕೆ ಅಧಿಕಾರವಿದೆ. ಕೃಷಿಕರಿಗೆ ತಮ್ಮ ಕೃಷಿ ಚಟುವಟಿಕೆಗೆ ಪೂರಕವಾದ ಮತ್ತು ಮನೆ ಬಳಕೆಗೆ ಬೇಕಾದ ಸೊಪ್ಪು ಸಂಗ್ರಹ, ಕಟ್ಟಿಗೆ, ಮರಮಟ್ಟುಗಳನ್ನು ಮಾತ್ರ ಈ ಜಮೀನಿನಿಂದ ಪಡೆಯಬಹುದೇ ಹೊರತು ಅಲ್ಲಿ ಕೃಷಿ ಮಾಡುವಂತಿಲ್ಲ ಎಂದು ಭೂ ಕಂದಾಯ ಕಾಯ್ದೆ ಹೇಳಿದೆ. ಆದರೆ ಕೃಷಿಕರು ಬಾಣೆ ಅಥವಾ ಕುಮ್ಕಿ ಜಮೀನಿನ ಮೇಲೆ ತಮಗೆ ಪೂರ್ಣ ಅಧಿಕಾರ ನೀಡಬೇಕು ಎಂದು ಅನೇಕ ದಶಕಗಳಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ ಈ ಪ್ರಕರಣದಲ್ಲಿ ಬಾಣೆ ಭೂಮಿಯನ್ನು ಹಂಚುವ ಅಧಿಕಾರ ನೀಡಿರುವುದು ಬಾಣೆ ಜಮೀನಿನ ಮೇಲೆ ರೈತರ ಸೀಮಿತ ಅಧಿಕಾರವನ್ನು ನ್ಯಾಯಾಲಯ ಮಾನ್ಯ ಮಾಡಿದಂತೆ ಆಗಿದೆ ಎಂದು ಹೇಳಲಾಗುತ್ತಿದೆ.

ಕಾನೂನಾತ್ಮಕವಾಗಿ ಸುಪ್ರೀಂ ಕೋರ್ಟ್‌ನ ಈ ನಡೆ ಬಾಣೆ ಭೂಮಿಯನ್ನು ಆಸ್ತಿ ಹಕ್ಕಿನ ವ್ಯಾಪ್ತಿಯಲ್ಲಿ ಗುರುತಿಸಿದಂತಾಗಿದೆ. ಭೂ ಸ್ವಾಧೀನ ಕಾಯ್ದೆ ವರ್ಗ ಜಮೀನಿಗೆ ಮಾತ್ರ ಅನ್ವಯವಾಗುತ್ತದೆ. ಒಂದು ವೇಳೆ ಬಾಣೆ ಅಥವಾ ಕುಮ್ಕಿ ಭೂಮಿಯು ಆಸ್ತಿ ಹಕ್ಕಿನ ಒಳಗೆ ಅಧಿಕೃತವಾಗಿ ಸೇರಿದರೆ ಭೂ ಸ್ವಾಧೀನ ಕಾಯ್ದೆ ಅನ್ವಯಿಸುವ ಸಂದರ್ಭದಲ್ಲಿ ಸರ್ಕಾರವು ಕಾಯ್ದೆಯನ್ವಯ ಪರಿಹಾರವನ್ನು ನೀಡಿಯೇ ಜಮೀನನ್ನು ವಶಕ್ಕೆ ಪಡೆದುಕೊಳ್ಳಬೇಕಾಗುತ್ತದೆ ಎಂಬ ವಾದಕ್ಕೆ ಪುಷ್ಠಿ ಸಿಕ್ಕಂತಾಗಿದೆ. ಇದೇ ವೇಳೆ, ಬಾಣೆ ಜಮೀನಿನ ವಿವಾದಗಳು ಸಿವಿಲ್ ನ್ಯಾಯಾಲಯದ ವಿಚಾರಣಾ ವ್ಯಾಪ್ತಿಗೆ ಬರುತ್ತದೆ ಎಂಬ ವಾದವನ್ನೂ ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ.

ಬಾಣೆ ಭೂಮಿಗೆ ರಾಜ್ಯದ ಎಲ್ಲೆಲ್ಲಿ ಏನು ಹೇಳ್ತಾರೆ? ಖಾಸಗಿ ಜಮೀನಿನ ಪಕ್ಕವಿರುವ ಜಮೀನಿಗೆ ಕರಾವಳಿ ಜಿಲ್ಲೆಗಳಲ್ಲಿ ಕುಮ್ಕಿ, ಬಾಣೆ, ಕಾನ್‌, ಉತ್ತರ ಕನ್ನಡದಲ್ಲಿ ಬೆಟ್ಟ, ಹಾದಿ, ಮೈಸೂರಿನಲ್ಲಿ ಸೊಪ್ಪಿನ ಬೆಟ್ಟ, ಕಾನ್‌ ಜಮೀನು, ಕೊಡಗಿನಲ್ಲಿ ಜಮ್ಮಾ ಮತ್ತು ಬಾಣೆ ಮತ್ತು ಕಲಬುರಗಿಯಲ್ಲಿ ಮೊಟಸ್ಥಳ ಎಂದು ಕರೆಯುತ್ತಾರೆ. ವರ್ಗ ಭೂಮಿಗೆ ಸಿಗುವ ಈ ಜಮೀನಿನ ಪ್ರಮಾಣದಲ್ಲಿ ವ್ಯತ್ಯಾಸವಿದ್ದರೂ ಇದೆಲ್ಲದರ ಸ್ವರೂಪ ಮತ್ತು ವ್ಯಾಖ್ಯಾನ ಒಂದೇ ಆಗಿದೆ. ಉದಾಹರಣೆಗೆ ಬಾಣೆ ಜಮೀನು ವರ್ಗ ಜಮೀನಿನ ಗರಿಷ್ಠ ಎರಡು ಪಟ್ಟು ಇದ್ದರೆ ಕುಮ್ಕಿಯು ವರ್ಗ ಜಮೀನಿನ ಸುತ್ತ 100 ಗಜದಷ್ಟುಇರುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ

    ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…

  • ಸಿನಿಮಾ

    ಬಾಲಿವುಡ್’ನ ಸೆಕ್ಸಿ ನಟಿಯರ ಸೆಕ್ಸಿ ಲುಕ್’ಗೆ ಈ ‘ಹಾಟ್ ಯೋಗಿನಿ’ ಕಾರಣ..!ತಿಳಿಯಲು ಈ ಲೇಖನ

    ಬಾಲಿವುಡ್‍ನ ಅನೇಕ ಸ್ಟಾರ್‍ಗಳ ಚಿರಯೌವ್ವನದ ಗುಟ್ಟೇ ದೀಪಿಕಾ ಮೆಹ್ತಾ. ಐಶ್ವರ್ಯ ರೈ, ಪ್ರಿಯಾಂಕ ಚೋಪ್ರ, ಬಿಪಾಷ ಬಸು, ದೀಪಿಕಾ ಪಡುಕೋಣೆ, ವಿದ್ಯಾಬಾಲನ್, ಪ್ರೀತಿ ಜಿಂಟಾ ಸೇರಿದಂತೆ ಅನೇಕ ತಾರೆಯರ ಯೋಗ ಗುರು ಈಕೆ. 1997ರಲ್ಲಿ ಈಕೆ ಪರ್ವತಾರೋಹಣ ಮಾಡುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಕೂದಲೆಳೆ ಅಂತರದಿಂದ ಸಾವಿನಿಂದ ಪಾರಾಗಿ ತನಗೆ ಎದುರಾದ ಸವಾಲನ್ನು ಎದುರಿಸಲು ಈಕೆ ಕಂಡುಕೊಂಡ ಮಾರ್ಗ ಯೋಗ.

  • ಉಪಯುಕ್ತ ಮಾಹಿತಿ, ವಿಧ್ಯಾಭ್ಯಾಸ

    ಮಕ್ಕಳು ಓದಿದ್ದ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಹೀಗೆ ಮಾಡಿದರೆ ಚೆನ್ನಾಗಿ ನೆನಪಿರುತ್ತದೆ..!ತಿಳಿಯಲು ಇದನ್ನು ಓದಿ ..

    ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್‌ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.

  • ಸುದ್ದಿ

    ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

    ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…

  • India, nation, ಆಧ್ಯಾತ್ಮ

    ಅದ್ಭುತ ವಾಸ್ತುಶಿಲ್ಪದ ಅಕ್ಷರ್ಧಮ್ ಮಂದಿರ

    ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು  ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….