ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್ ಆವಿಷ್ಕರಿಸಿದ್ದಾರೆ. ಅಹಮದಾಬಾದ್, ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ ಸೂಜಿ ಚುಚ್ಚುವಾಗ ಕಣ್ಣೀರು ಹರಿದಿರಬಹುದಲ್ಲವೇ.

ಮನಃಶಾಸ್ತ್ರದಲ್ಲಿ ಸೂಜಿಗೆ ಹೆದರುವುದನ್ನು ಟ್ರೈಪನೋಫೋಬಿಯಾ (Trypanophobia)ಎಂದು ಹೇಳುತ್ತಾರೆ. ಅಂದರೆ, ಚರ್ಮಕ್ಕೆ ಸೂಜಿಯಿಂದ ಚುಚ್ಚುವ ಕುರಿತು ಹೆಚ್ಚು ಭಯ ಹೊಂದಿರುವುದು. ಇದೊಂದು ಸಾರ್ವತ್ರಿಕ ಸಮಸ್ಯೆ. ಅಂದರೆ ಪ್ರಪಂಚದ ಎಲ್ಲ ಜನರಲ್ಲೂ ಇಂತಹದೊಂದು ಸಣ್ಣ ಭಯ ಇದ್ದೇ ಇರುತ್ತದೆ. ಈ ಭಯಕ್ಕೀಗ ಭಾರತೀಯ ಸಂಶೋಧನಾ ಸಂಸ್ಥೆ ಪರಿಹಾರ ಹುಡುಕಿರುವುದು ಹೆಮ್ಮೆಯ ವಿಚಾರ.

ಗುಜರಾತಿನ ಬಿವಿ ಪಟೇಲ್ ಫಾರ್ಮಾಸುಟಿಕಲ್ ಎಜುಕೇಷನ್ ಆಂಡ್ ರಿಸರ್ಚ್ ಡೆವಲಪ್ಮೆಂಟ್ (PERD)ಸಂಸ್ಥೆಯ ವಿಜ್ಞಾನಿಗಳು ಪಾಲಿಮರ್ ಬಳಸಿ ಅತಿಸೂಕ್ಷ್ಮ ಸೂಜಿಗಳನ್ನು (ಮೈಕ್ರೋ ನೀಡಲ್ಸ್) ಆವಿಷ್ಕರಿಸಿದ್ದಾರೆ. ಈ ಸೂಜಿಗಳು ಚರ್ಮಕ್ಕೆ ಸ್ವಲ್ಪವೂ ನೋವು ಮಾಡುವುದಿಲ್ಲ. ಆದರೆ, ಸಾಂಪ್ರದಾಯಿಕ ಸೂಜಿಗಳಷ್ಟೇ ಸಮರ್ಥವಾಗಿ ಔಷಧವನ್ನು ದೇಹಕ್ಕೆ ಕಳಿಸಬಲ್ಲವು. ಇದಕ್ಕೆ ನೋ- ಪ್ರಿಕ್ಲಿ ಪ್ಯಾಚ್ ( ಚುಚ್ಚದಿರುವ ಪ್ಯಾಚ್) ಎಂದು ಹೆಸರಿಸಿದ್ದಾರೆ.

ನೋ ಪ್ರಿಕ್ಲಿ ಪ್ಯಾಚ್ ಪಾಲಿಮರ್ನಿಂದ ತಯಾರಿಸಿದ ಸೂಕ್ಷವಾದ ಹಲವಾರು ಸೂಜಿಗಳನ್ನು ಹೊಂದಿರುತ್ತದೆ. ಈ ಸೂಜಿಗಳು ಬರಿಗಣ್ಣಿಗೆ ಕಾಣದಷ್ಟು ಸೂಕ್ಷ್ಮವಾಗಿರುತ್ತವೆ. ಇವು ಔಷಧವನ್ನು ಚರ್ಮದಡಿಯ ಸೂಕ್ಷ್ಮ ರಕ್ತನಾಳಗಳಿಗೆ ಕಳುಹಿಸುತ್ತವೆ. ಔಷಧವನ್ನು ದೇಹದೊಳಗೆ ಕಳಿಸಿದ ಕೆಲವೇ ನಿಮಿಷಗಳಲ್ಲಿ ಸೂಕ್ಷ್ಮ ಪಾಲಿಮರ್ ಸೂಜಿಗಳು ಕರಗಿ ಹೋಗುತ್ತವೆ. ಇದು ಬಳಕೆದಾರ ಸ್ನೇಹಿಯಾಗಿದ್ದು, ಸಾಂಪ್ರದಾಯಿಕ ಸೂಜಿಗಿಂತಲೂ ಸುಲಭವಾಗಿ ಉಪಯೋಗಿಸಬಹುದು. ಜತೆಗೆ ಈ ಪ್ಯಾಚ್ ಬಳಕೆಯಿದ ಮಕ್ಕಳಲ್ಲಿ ಸೂಜಿ ಚುಚ್ಚಿಸಿಕೊಳ್ಳುವ ಭಯ ಹತ್ತಿರವೂ ಸುಳಿಯದು.
ಪ್ರಸ್ತುತ ಚುಚ್ಚುಮದ್ದು ನೀಡಲು ಲೋಹದ ಸೂಕ್ಷ್ಮ ಸೂಜಿಗಳನ್ನು ಬಳಸಲಾಗುತ್ತಿದೆ. ಆದರೆ ನಾವು ಪಾಲಿಮರ್ ಆಧಾರಿತ ಔಷಧ ಸಾಗಾಣಿಕಾ ಸಾಧನವನ್ನು ಅಭಿವೃದ್ಧಿಪಡಿಸಿದ್ದೇವೆ. ಇದು ಕ್ರಿಮಿಶುದ್ಧೀಕರಣ, ವಿಲೇವಾರಿ ಮತ್ತು ಮರುಬಳಕೆ ಮೊದಲಾದ ವೈದ್ಯಕೀಯ ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮಕ್ಕಳು ಮತ್ತು ನಿಯಮಿತವಾಗಿ ಚುಚ್ಚುಮದ್ದು ತೆಗೆದುಕೊಳ್ಳುವ ವಯಸ್ಕರಿಗೂ ಇದು ವರದಾನವಾಗಿದೆ ಎಂದು ಸಂಶೋಧನಾ ತಂಡದ ಮುಖ್ಯಸ್ಥ ಡಾ.ವಿರಳ್ ಷಾ ಹೇಳಿದ್ದಾರೆ. ನೋ ಪ್ರಿಕ್ಲಿ ಪ್ಯಾಚನ್ನು ಈಗಾಗಲೇ ಪ್ರಾಣಿಗಳ ಮೇಲೆ ಪ್ರಯೋಗಿಸಿದ್ದು, ಯಶಸ್ವಿಯಾಗಿದೆ. ಈ ಕುರಿತಂತೆ ಜರ್ನಲ್ ಆಫ್ ಅಮೆರಿಕನ್ ಅಸೋಸಿಯೇಷನ್ ಆಫ್ ಫಾರ್ಮಾಸುಟಿಕಲ್ ಸೈಂಟಿಸ್ಟ್ ನಿಯತಕಾಲಿಕೆಯಲ್ಲಿ ಸಂಶೋಧನಾ ಲೇಖನ ಪ್ರಕಟಗೊಂಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆತ ಸರ್ವಶಕ್ತ. ಅಂದರೆ ಆತನಿಗೆ ಇದೊಂದು ಕೆಲಸ ಮಾಡಲು ಸಾಧ್ಯವಿಲ್ಲ ಅಂತ ಯಾವುದೂ ಇಲ್ಲ. ಹಾಗೆ ಇದ್ದರೆ ಆತನ ಶಕ್ತಿಗೆ ಲಿಮಿಟ್ ಹಾಕಿದ ಹಾಗೆ ಆಗುತ್ತದೆ
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…
ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…