News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಜ್ಞಾನ

ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

42

ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.

ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್‌ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.

ಮೋದಿ ವೀಕ್ಷಣೆ:  ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್‌ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.

ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್‌ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.

ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್‌ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು

ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್‌ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 29 ಜನವರಿ, 2019 ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆ ನೀವು ನಿಮ್ಮ ಭಾವನೆಗಳನ್ನು ಪರಿಣಾಮಕಾರಿಯಾಗಿ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

    ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…

  • ವಿಚಿತ್ರ ಆದರೂ ಸತ್ಯ

    ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

    ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.