ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.

ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.

ಮೋದಿ ವೀಕ್ಷಣೆ: ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.

ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.
ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು
ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…
ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.
ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..