ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದ ಮಹಾತ್ವಾಕಾಂಕ್ಷೆ ಯೋಜನೆಯಾಗಿರುವ ಚಂದ್ರಯಾನ-2 ಅನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ISRO ವಿಜ್ಞಾನಿಗಳು ಆಹೋರಾತ್ರಿ ಪ್ರಯತ್ನಪಡುತ್ತಿದ್ದಾರೆ. ಕಳೆದ ಸೆ.7ರಂದುಸಂಪರ್ಕ ಕಡಿದುಕೊಂಡಿರುವ ವಿಕ್ರಮ್ ಲ್ಯಾಂಡರ್ ಈಗಚಂದ್ರನ ಮೇಲೆ ಲ್ಯಾಂಡ್ ಆಗಿದೆ.ವಿಕ್ರಮ್ ಲ್ಯಾಂಡರ್ ವಾಲಿದ ಸ್ಥಿತಿಯಲ್ಲಿದೆ ಎಂದುತಿಳಿದುಬಂದಿದೆ. ಆದರೆ ಸಂಪರ್ಕ ಇನ್ನೂಸಾಧ್ಯವಾಗಿಲ್ಲ. ನಾವಿನ್ನೂ ಭರವಸೆ ಕಳೆದುಕೊಂಡಿಲ್ಲ ಎಂದುವಿಜ್ಞಾನಿಗಳು ಹೇಳಿದ್ದಾರೆ.

ಭೂಮಿಯ ಜತೆ ಸಂಪರ್ಕ ಕಳೆದುಕೊಂಡು ಚಂದ್ರನ ಮೇಲೆ ಅಪ್ಪಳಿಸಿರುವ ಚಂದ್ರಯಾನ-2 ನೌಕೆಯ ‘ಲ್ಯಾಂಡರ್’ ಛಿದ್ರವಾಗಿಲ್ಲ. ಆದರೆ ವಾಲಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಲ್ಯಾಂಡರ್ ಜತೆ ಸಂಪರ್ಕವನ್ನು ಮರುಸ್ಥಾಪಿಸಲು ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಅವಿರತ ಪ್ರಯತ್ನವನ್ನು ಮುಂದುವರಿಸಿದ್ದಾರೆ.

ಸೆ.7ರಂದು ನಸುಕಿನ ಜಾವ ಚಂದ್ರನಿಂದ 2.1 ಕಿ.ಮೀ. ಎತ್ತರದಲ್ಲಿರುವಾಗ ನಿಗೂಢ ರೀತಿಯಲ್ಲಿ ಸಂಪರ್ಕ ಕಳೆದುಕೊಂಡಿದ್ದ ಲ್ಯಾಂಡರ್ ಇರುವ ಜಾಗವನ್ನು ಚಂದ್ರನ ಕಕ್ಷೆಯಲ್ಲಿ ಸುತ್ತುತ್ತಿರುವ ಆರ್ಬಿಟರ್ ಭಾನುವಾರ ಪತ್ತೆ ಹಚ್ಚಿತ್ತು. ವಿಶೇಷ ಎಂದರೆ, ಇಸ್ರೋ ವಿಜ್ಞಾನಿಗಳು ಯಾವ ಜಾಗದಲ್ಲಿ ಲ್ಯಾಂಡರ್ ಅನ್ನು ಇಳಿಸಲು ಉದ್ದೇಶಿಸಿದ್ದರೋ ಅದಕ್ಕೆ ಸಮೀಪದಲ್ಲೇ ಲ್ಯಾಂಡರ್ ಬಿದ್ದಿರುವುದು ಆರ್ಬಿಟರ್ ಸೆರೆ ಹಿಡಿದಿರುವ ಚಿತ್ರದಲ್ಲಿ ಗೋಚರವಾಗಿದೆ ಎಂದು ವಿಜ್ಞಾನಿಯೊಬ್ಬರು ತಿಳಿಸಿದ್ದಾರೆ.
ಲ್ಯಾಂಡರ್ ಜತೆಗಿನ ಸಂಪರ್ಕವನ್ನು ಮರುಸ್ಥಾಪಿಸಲು ಸಾಧ್ಯವೇ ಎಂಬ ನಿಟ್ಟಿನಲ್ಲಿ ಸರ್ವ ಪ್ರಯತ್ನಗಳನ್ನೂ ವಿಜ್ಞಾನಿಗಳು ಆರಂಭಿಸಿದ್ದಾರೆ. ಬೆಂಗಳೂರಿನ ಪೀಣ್ಯದ ಇಸ್ರೋ ಟೆಲಿಮೆಟ್ರಿ, ಟ್ರ್ಯಾಕಿಂಗ್ ಹಾಗೂ ಕಮಾಂಡ್ ನೆಟ್ವರ್ಕ್ (ಇಸ್ಟ್ರಾಕ್) ಕೇಂದ್ರದಲ್ಲಿನ ವಿಜ್ಞಾನಿಗಳು ಈ ಸಂಬಂಧ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ.ಲ್ಯಾಂಡರ್ನಲ್ಲಿನ ವ್ಯವಸ್ಥೆ ಚೆನ್ನಾಗಿಯೇ ಕೆಲಸ ಮಾಡುತ್ತಿದ್ದರೆ ಮಾತ್ರ ಸಂಪರ್ಕ ಮರುಸಾಧಿಸಬಹುದು. ಆದರೆ ಆ ಸಂಭವ ಇಲ್ಲದ ಕಾರಣ ಮರುಸಂಪರ್ಕ ಸಾಧ್ಯತೆ ಕ್ಷೀಣವಾಗಿದೆ ಎಂದೂ ಹೇಳಿದ್ದಾರೆ.

ಇಸ್ರೋ ಲ್ಯಾಂಡರ್ ಅನ್ನು ಪತ್ತೆ ಹಚ್ಚಿದ್ದು ಹೇಗೆ?:ಲ್ಯಾಂಡರ್ನಿಂದ ಸಂಪರ್ಕ ಕಡಿತಗೊಂಡ ಹಿನ್ನೆಲೆಯಲ್ಲಿ ಲ್ಯಾಂಡರ್ ಇಳಿಯಲು ನಿಗದಿಯಾಗಿದ್ದ ಸ್ಥಳವನ್ನೇ ಗುರಿಯಾಗಿಸಿ, ಚಂದ್ರನ ಸುತ್ತಲೂ ಸುತ್ತುತ್ತಿರುವ ಆರ್ಬಿಟರ್ ಶನಿವಾರ ಫೋಟೋವೊಂದನ್ನು ಕ್ಲಿಕ್ಕಿಸಿತ್ತು. ಈ ಫೋಟೋದಲ್ಲಿ ಅಸ್ಪಷ್ಟವಸ್ತುವೊಂದು ಗೋಚರವಾಗಿತ್ತು. ಆದರೆ ಈ ವೇಳೆ ಫೋಟೋದಲ್ಲಿ ಸೆರೆಯಾಗಿದ್ದು ಲ್ಯಾಂಡರ್ ಹೌದೋ ಅಲ್ಲವೋ ಎಂಬುದು ಇಸ್ರೋಗೆ ಖಚಿತವಿರಲಿಲ್ಲ. ಅದಕ್ಕಾಗಿ ಅದೇ ಅಕ್ಷಾಂಶ ಮತ್ತು ರೇಖಾಂಶದಲ್ಲಿ ಹಿಂದಿನ ದಿನ ಆರ್ಬಿಟರ್ ತೆಗೆದಿದ್ದ ಫೋಟೋಗಳನ್ನೇ ತಾಳೆ ಹಾಕಲಾಯಿತು.
ಈ ವೇಳೆ ಹಿಂದಿನ ದಿನದ ಫೋಟೋದಲ್ಲಿ ಲ್ಯಾಂಡರ್ ಬಿದ್ದ ಸ್ಥಳದಲ್ಲಿ ಯಾವುದೇ ವಸ್ತುಗಳ ಕುರುಹು ಸಿಕ್ಕಿರಲಿಲ್ಲ. ಹೀಗಾಗಿ ತಾವು ಸೆರೆಹಿಡಿದಿದ್ದು ವಿಕ್ರಂ ಲ್ಯಾಂಡರ್ನದ್ದೇ ಎಂದು ಇಸ್ರೋ ವಿಜ್ಞಾನಿಗಳಿಗೆ ಖಚಿತವಾಯ್ತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ವೈದ್ಯರನ್ನು ದೂರವಿಡಲು ಈ ಹಣ್ಣುಗಳನ್ನು ಸೇವಿಸಿ, ಎಷ್ಟೋಂದು ಹಣ್ಣುಗಳು ಅಬ್ಬ! ತಿನ್ನಬೇಕು ಎಲ್ಲಾ ಫ್ರೂಟ್: ಆರೋಗ್ಯಕ್ಕಾಗಿ ಹಣ್ಣು ತಿನ್ನಿ ಆನಂದಕ್ಕಾಗಿ ಹಣ್ಣು ತಿನ್ನಿ ಪೌಷ್ಟಿಕ ಭದ್ರತೆಗೂ ಹಣ್ಣು ತಿನ್ನಿ…
ದೇಶಾದ್ಯಂತ ಮೊಬೈಲ್ಗಳಲ್ಲಿ ಮೊಳಗಿದ ಸೈರನ್ ಅಲರ್ಟ್..! 🔴 ಏನಿದು ಮೊಬೈಲ್ ಅಲರ್ಟ್? ಇತ್ತೀಚೆಗೆ ದೇಶದಾದ್ಯಂತ ಹಲವು ಜನರ ಮೊಬೈಲ್ಗಳಲ್ಲಿ ಏಕಾಏಕಿ ಜೋರಾಗಿ ಸೈರನ್ ಶಬ್ದದೊಂದಿಗೆ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಕಾಣಿಸಿಕೊಂಡಿತು.ಇದು ಯಾವುದೇ ಅಪಾಯದ ಸೂಚನೆ ಅಲ್ಲ — ಇದು ಸರ್ಕಾರದ ಪರೀಕ್ಷಾ ಅಲರ್ಟ್ (Test Alert) ಆಗಿತ್ತು. ಯಾರು ಕಳುಹಿಸಿದರು? ಈ ಅಲರ್ಟ್ ಅನ್ನು National Disaster Management Authority (NDMA) ಹಾಗೂ ಟೆಲಿಕಾಂ ಇಲಾಖೆ (DoT) ಒಟ್ಟಾಗಿ ಪರೀಕ್ಷೆಯ ಭಾಗವಾಗಿ ಕಳುಹಿಸಿದರು. ಹೇಗೆ ಕೆಲಸ ಮಾಡುತ್ತದೆ?…
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಸರ್ಕಾರಿ ಒಡೆತನದ ಬಿಎಸ್ಎನ್ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.