ಸುದ್ದಿ

ರಸ್ತೆ ರಿಪೇರಿ ಬಳಿಕ ಹೊಸ ರೂಲ್ಸ್ ಜಾರಿಗೆ ನಿಟ್ಟುಸಿರು ಬಿಟ್ಟ ವಾಹನ ಸವಾರರು,.!

39

ಹೊಸ ಟ್ರಾಫಿಕ್ ನಿಯಮ ಜಾರಿಯಾಗುತ್ತಿದ್ದಂತೆ ಪರ ವಿರೋಧ ಕೇಳಿ ಬಂದಿದೆ. ಇದರಲ್ಲಿ ರಸ್ತೆ ರಿಪೇರಿ ಮಾಡಿ ಹೊಸ ನಿಯಮ ಜಾರಿ ಮಾಡಿ ಅನ್ನೋ ಒತ್ತಾಯ  ಕೇಳಿ ಬಂದಿತ್ತು. ಇದೀಗ ಈ ಮಾತನ್ನು ಗಂಭೀರವಾಗಿ ಪರಿಗಣಿಸಿರುವ ನೆರೆ ರಾಜ್ಯ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿ ಮಾಡಲು ಮುಂದಾಗಿದೆ.

ಹೊಸ ಟ್ರಾಫಿಕ್ ರೂಲ್ಸ್ ಜಾರಿಯಾಗಿ 10 ದಿನಗಳಾಗಿವೆ. ಆಗಲೇ ಕೋಟಿ ಕೋಟಿ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರು ದುಬಾರಿ ದಂಡ ಕಟ್ಟಿ ಸುಸ್ತಾಗಿದ್ದಾರೆ. ದುಬಾರಿ ಮೊತ್ತದ ದಂಡ ಜಾರಿಯಾಗುತ್ತಿದ್ದಂತೆ ವಿರೋಧಗಳು ಕೇಳಿ ಬಂದಿತ್ತು. ಇದರಲ್ಲಿ ಪ್ರಮುಖವಾಗಿ ಹಾಳಾದ, ಗುಂಡಿ ಬಿದ್ದ ರಸ್ತೆ ಸರಿಮಾಡಿ ನಿಯಮ ಜಾರಿ ಮಾಡಿ ಅನ್ನೋ ಕೂಗು ಕೂಡ ಕೇಳಿ ಬಂದಿತ್ತು. ಇದೀಗ ಗೋವಾದಲ್ಲಿ ಈ ಮಾತನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ.

ಹೊಸ ಟ್ರಾಫಿಕ್ ನಿಯಮ ಜಾರಿ ಬೆನ್ನಲ್ಲೇ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶ ನೀಡಿದ್ದಾರೆ. ಗೋವಾದಲ್ಲಿ ರಸ್ತೆಗಳು ಸಂಪೂರ್ಣ ರಿಪೇರಿ ಮಾಡಿದ ಬಳಿಕಷ್ಟೇ ನೂತನ ಟ್ರಾಫಿಕ್ ನಿಯಮ ಜಾರಿಯಾಗಲಿದೆ ಎಂದಿದ್ದಾರೆ. ಹಾಳಾದ, ಗುಂಡಿ ಬಿದ್ದ ರಸ್ತೆಗಳಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ರಸ್ತೆ ಸರಿಯಿಲ್ಲದಿದ್ದರೆ, ಸವಾರರಿಂದ ದುಬಾರಿ ಮೊತ್ತ ಪಡೆಯುವುದು ಸಮಂಜಸವಲ್ಲ. ಹೀಗಾಗಿ ರಸ್ತೆ ರಿಪೇರಿ ಬಳಿಕ ಹೊಸ ನಿಯಮ ಜಾರಿಯಾಗಲಿದೆ ಎಂದು ಗೋವಾ ಖಾಸಗಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಪ್ರತಿಪಕ್ಷಗಳು ನೂತನ ಟ್ರಾಫಿಕ್ ನಿಯಮ ಜಾರಿಗೆ ವಿರೋಧ ವ್ಯಕ್ತಪಡಿಸಿತ್ತು. ಇಷ್ಟೇ ಅಲ್ಲ ರಸ್ತೆ ರಿಪೇರಿಗೆ ಆಗ್ರಹಿಸಿತ್ತು. ಇದೀಗ ಪ್ರತಿಪಕ್ಷಗಳ ಸಲಹೆ ಪಡೆದಿರುವ ಗೋವಾ ಸಿಎಂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.  

15 ರಿಂದ 20 ದಿನಗಳ ಒಳಗೆ ರಸ್ತೆ ರಿಪೇರಿ ಮಾಡುವಂತೆ PWD ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ. ಎಂಜೀನಿಯರ್‌ಗಳು ಖುದ್ದು ನಿಂತು ರಿಪೇರಿ ಮಾಡಿಸಲು ಸೂಚಿಸಿದ್ದಾರೆ. ಇನ್ನು ಡಿಸೆಂಬರ್‌ನಲ್ಲಿ ರಸ್ತೆ ರಿಪೇರಿ ಪರಾಮರ್ಶಿಸಿ ಹೊಸ ನಿಯಮ ಜಾರಿಗೊಳಿಸಲಾಗುವುದು ಎಂದು ಪ್ರಮೋದ್ ಸಾವಂತ್ ಹೇಳಿದ್ದಾರೆ. ಗೋವಾ ಮುಖ್ಯಮಂತ್ರಿ ಆದೇಶದಿಂದ ಗೋವಾ ಸವಾರರು ನಿಟ್ಟುಸಿರು ಬಿಟ್ಟಿದ್ದಾರೆ. ಕನಿಷ್ಠ 3 ತಿಂಗಳ ಕಾಲ ಗೋವಾದಲ್ಲಿ ಹೊಸ ಟ್ರಾಫಿಕ್ ನಿಯಮ ಅನ್ವಯವಾಗೋದಿಲ್ಲ.  

ಗೋವಾ ಮುಖ್ಯಮಂತ್ರಿ ಆದೇಶದ ಬೆನ್ನಲ್ಲೇ ಕರ್ನಾಟಕದಲ್ಲೂ ಇದೇ ರೀತಿ ಅನುಸರಿಸಲು ಒತ್ತಾಯ ಕೇಳಿಬರುತ್ತಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ರಸ್ತೆಗಳು ಸರಿಪಡಿಸಿದ ಬಳಿಕವಷ್ಟೇ ಹೊಸ ನಿಯಮ ಜಾರಿ ಮಾಡಿ. ಸದ್ಯ ಜಾರಿಯಾಗಿರುವ ನೂತನ ನಿಯಮ ಹಿಂಪಡೆಯಿರಿ ಅನ್ನೋ ಕೂಗು ಕೇಳಿಬರುತ್ತಿದೆ.ಸಾಮಾಜಿಕ ಜಾಲತಾಣದಲ್ಲಿ ಅಭಿಯಾನಗಳು ಆರಂಭವಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ನಿಮ್ಮ ಉತ್ತಮ ನಿದ್ರೆಗಾಗಿ ಸೇವಿಸಬಹುದಾದ ಆಹಾರಗಳು ಯಾವುವು ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.

  • ಸಿನಿಮಾ, ಸುದ್ದಿ

    ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

    ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ಜ್ಯೋತಿಷ್ಯ

    ಶ್ರೀ ಆಂಜಿನೇಯ ಸ್ವಾಮಿಯನ್ನು ಸ್ಮರಿಸುತ್ತ ಈ ದಿನದ ನಿಮ್ಮ ರಾಶಿಯ ಶುಭ ಫಲವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp ಮೇಷ ಕುಟುಂಬದ ಸದಸ್ಯರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…

  • ಶ್ರದ್ಧಾಂಜಲಿ

    ಹಿರಿಯ ನಟಿ ಜಮುನಾ ನಿಧನ

    ಕನ್ನಡ, ತೆಲುಗು ಮೊದಲಾದ ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಮುನಾ ಅವರು ಇಂದು (ಜನವರಿ 27) ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಹೈದರಾಬಾದ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಜಮುನಾ ಅವರು 1936 ಆಗಸ್ಟ್ 30 ರಂದು ಹಂಪಿಯಲ್ಲಿ ಜನಿಸಿದರು. 1953ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಅವರು ಹಲವು ದಶಕಗಳ ಕಾಲ ಚಿತ್ರರಂಗಕ್ಕಾಗಿ ಶ್ರಮಿಸಿದರು. ಅವರ ಅಗಲಿಕೆಗೆ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಜಮುನಾ ಪಾರ್ಥಿವ ಶರೀರವನ್ನು ಬೆಳಗ್ಗೆ 11ಗಂಟೆಗೆ ಹೈದರಾಬಾದ್​ನಲ್ಲಿರುವ ಫಿಲಂ ಚೇಂಬರ್‌ಗೆ ತರಲಾಗುತ್ತದೆ….