ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು ಎಸಗುವ ಬದಲು ಈಗ ರಚನಾತ್ಮಕ ಸುಧಾರಣೆಯ ಮುಂದಿನ ಪೀಳಿಗೆಯನ್ನು ನಡೆಸಬೇಕಾದ ಹೊಣೆ ಸರ್ಕಾರದ ಮೇಲಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.

ನಾನು ಹಣಕಾಸು ಸಚಿವನಾಗಿದ್ದಾಗ ಮತ್ತು ಪ್ರಧಾನಿಯಾಗಿದ್ದಾಗ ನಮಗೆ ಸಂಪೂರ್ಣ ಬಹುಮತ ಸಿಕ್ಕಿರಲಿಲ್ಲ. ಈಗ ಮೋದಿ ಸರ್ಕಾರ ಸತತ ಎರಡು ಬಾರಿ ಬೃಹತ್ ಬಹುಮತದೊಂದಿಗೆ ಆಯ್ಕೆಯಾಗಿದೆ. ಹೀಗಿದ್ದರೂ ನಾವು 1991 ಮತ್ತು 2008ರಲ್ಲಿ ಜಾಗತಿಕ ಹಣಕಾಸು ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಿದ್ದೆವು’ ಎಂದು ಅವರು ತಿಳಿಸಿದ್ದಾರೆ. ‘ದಿ ಬಿಜಿನೆಸ್ ಲೈನ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮನಮೋಹನ್ ಸಿಂಗ್ ಅವರು ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ಟೀಕಿಸಿದ್ದಾರೆ.

ಕಳವಳಕಾರಿಆರ್ಥಿಕ ಕುಸಿತ : ಭಾರತವು ಅತ್ಯಂತಕಳವಳಕಾರಿಯಾಗಿ ಆರ್ಥಿಕ ಕುಸಿತ ಅನುಭವಿಸುತ್ತಿದೆ.ಈ ಕುಸಿತ ಆರ್ಥಿಕತೆಯಪ್ರಮುಖ ವಲಯಗಳಿಗೆ ಭಾರಿ ಹೊಡೆತ ನೀಡಿದೆ.ಈ ಸಮಸ್ಯೆಗಳಿಗೆ ಸರ್ಕಾರವುಪಾರದರ್ಶಕ ರೀತಿಯಲ್ಲಿ ಪರಿಹಾರ ಹುಡುಕಲು ಮುಂದಾಗಬೇಕು.ಪರಿಣತರ ಸಲಹೆ ಪಡೆದುಕೊಳ್ಳಬೇಕು. ಮುಖ್ಯವಾಗಿಸರ್ಕಾರವು ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು.ಜತೆಗೆ ಜಗತ್ತಿಗೆ ಸ್ಪಷ್ಟ ಸಂದೇಶ ರವಾನಿಸಬೇಕು.ದುರದೃಷ್ಟವಶಾತ್ ಮೋದಿ ಸರ್ಕಾರದಿಂದ ಅಂತಹಯಾವುದೇ ಪ್ರಯತ್ನ ಇದುವರೆಗೂ ನಡೆದಿರುವುದುಕಂಡಿಲ್ಲ ಎಂದು ಸಿಂಗ್ ಟೀಕಿಸಿದರು.

ಕೃಷಿಗೆ ಹೊಡೆತ ನೀಡಿದ ನೋಟ್ ರದ್ದತಿ : ಆರ್ಥಿಕತೆಯ ಪ್ರಮುಖ ಭಾಗಗಳು ಆರ್ಥಿಕಸಮಸ್ಯೆಗೆ ಸಿಲುಕಿವೆ. ಉದಾಹರಣೆಗೆ ಕೃಷಿ ವಲಯವು ಜಿಡಿಪಿಯ ಶೇ 15ರಷ್ಟು ಕೊಡುಗೆ ನೀಡುತ್ತದೆ. ಅದುಮುಖ್ಯವಾಗಿ ನಡೆಯುವುದು ನಗದು ರೂಪದಲ್ಲಿ. ಮುಖ್ಯವಾಗಿ ಅದು ತೆರಿಗೆ ರಹಿತವಾದದ್ದು. ಆದರೆ ಅಪಗನಗದೀಕರಣದಸಮಯದಲ್ಲಿ ನಗದು ಹಣವನ್ನು ಹಠಾತ್ತಾಗಿ ಹಿಂದಕ್ಕೆ ಪಡೆದುಕೊಂಡ ಪರಿಣಾಮ ಕೃಷಿ ಆರ್ಥಿಕತೆಗೆ ಹೊಡೆತಬಿದ್ದಿತು ಎಂದು ಸಿಂಗ್ ಅರೋಪಿಸಿದ್ದಾರೆ.
ಅಪನಗದೀಕರಣದ ಆತಂಕ ನಿಜವಾಗಿದೆ : ಅಪನಗದೀಕರಣದನಂತರದ ವರ್ಷದಲ್ಲಿ ಜಿಡಿಪಿಯಲ್ಲಿ ಕಾರ್ಪೊರೇಟ್ ಹೂಡಿಕೆಯ ಪ್ರಮಾಣ ಶೇ7.5ರಿಂದ ಶೇ 2.7ಕ್ಕೆ ಕುಸಿದಿದೆ.ಇದು 2010-11ರಲ್ಲಿ ಜಿಡಿಪಿಯ ಶೇ15ರಷ್ಟಿತ್ತು. ಇದರ ಅರ್ಥ, ಕೃಷಿಯಂತಹಅಸಂಘಟಿತ ವಲಯ ಮಾತ್ರವಲ್ಲ, ಸಂಘಟಿತವಲಯ ಕೂಡ ಅಪನಗದೀಕರಣದಿಂದ ಸಂಕಷ್ಟಕ್ಕೆಸಿಲುಕಿದೆ. ಸಣ್ಣ ಮತ್ತು ಮಧ್ಯಮಉದ್ದಿಮೆಗಳು ಅತ್ಯಂತ ಕೆಟ್ಟ ಹೊಡೆತತಿಂದಿವೆ. ಅಪನಗದೀಕರಣದ ನಿರ್ಧಾರದಿಂದ ಉಂಟಾಗುವ ಪರಿಣಾಮವು ದೀರ್ಘಾವಧಿಮತ್ತು ತೀವ್ರವಾಗಿರಲಿದೆ ಎಂಬ ನಮ್ಮ ಕಳವಳಸತ್ಯವಾಗಿದೆ.
ಜಿಎಸ್ಟಿಯ ಕಳಪೆ ಅನುಷ್ಠಾನ : ಅಪನಗದೀಕರಣದ ಆಘಾತದ ಬಳಿಕವೂ ಸರ್ಕಾರತರಾತುರಿಯಲ್ಲಿ ಜಿಎಸ್ಟಿ ಜಾರಿಮಾಡಿತ್ತು ಆರ್ಥಿಕತೆಗೆ ನೀಡಿದ ಮತ್ತೊಂದು ದೊಡ್ಡಪೆಟ್ಟು. ಜಿಎಸ್ಟಿ ಒಂದುರಚನಾತ್ಮಕ ಸುಧಾರಣೆ. ಯುಪಿಎ ಸರ್ಕಾರದ ಅವಧಿಯಲ್ಲಿಯೇಅದನ್ನು ಜಾರಿಗೆ ತರಲು ಪ್ರಯತ್ನಿಸಿದ್ದೆವು.ನಾವು ಸುಧಾರಣೆಯ ಬೆಂಬಲಿಗರು. ಆದರೆ, ಅದನ್ನು ತುಂಬಾಕೆಟ್ಟದಾಗಿ ಅಳವಡಿಸಲಾಯಿತು. ದೊಡ್ಡ ಕಂಪೆನಿಗಳು ಜಿಎಸ್ಟಿ ರಸೀದಿ ನೀಡಬಲ್ಲಪೂರೈಕೆದಾರರಿಂದ ಖರೀದಿ ಮಾಡಲು ಆದ್ಯತೆನೀಡಿದ್ದರಿಂದ ಸಣ್ಣ, ಅತಿ ಸಣ್ಣಮತ್ತು ಮಧ್ಯಮ ಉದ್ಯಮಗಳು ಸಂಕಷ್ಟಕ್ಕೆಸಿಲುಕಿದವು.

ಸಣ್ಣ ಮತ್ತು ಮಧ್ಯಮ ಉದ್ಯಮ ತತ್ತರ : ಜಿಎಸ್ಟಿ ಅಡಿಯಲ್ಲಿತೀರಾ ಕಡಿಮೆ ಪ್ರಮಾಣದಲ್ಲಿ ಅರ್ಹತೆಗಿಟ್ಟಿಸಿಕೊಳ್ಳುವ ಭಾರತದ ಸಣ್ಣ ಕಂಪೆನಿಗಳಿಗೆಹೂಡುವ ಬದಲು ಆಮದಿಗೆ ಆದ್ಯತೆನೀಡಲಾಯಿತು. ಇಡೀ ಪೂರೈಕೆಯ ಸರಪಳಿಯನ್ನೇತುಂಡರಿಸಲಾಯಿತು. ಈಗ ನಮ್ಮ ಮಾರುಕಟ್ಟೆಗಳಲ್ಲಿಚೀನಾದ ಆಮದು ವಸ್ತುಗಳೇ ತುಂಬಿವೆಎನ್ನುವುದು ನಮಗೆ ತಿಳಿದಿದೆ. ಇಷ್ಟಲ್ಲದೆತೆರಿಗೆ ಅಧಿಕಾರಿಗಳು ತೆರಿಗೆದಾರರಿಗೆ ಕಿರುಕುಳ ನೀಡುತ್ತಿರುವ ವರದಿಗಳೂಬಂದಿವೆ. ಜಿಎಸ್ಟಿಯ ಸಂಕೀರ್ಣ,ಬಹುಬಗೆಯ ತೆರಿಗೆಗಳು, ನಿರಂತರ ಬದಲಾಗುವ ಮತ್ತುಸೃಷ್ಟಿಯಾಗುವ ನಿಯಮಗಳು ಮುಂತಾದವು ಸಣ್ಣಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆಗಾಸಿಯುಂಟು ಮಾಡಿವೆ.
ಜಿಎಸ್ಟಿಯನ್ನು ಸರಳಗೊಳಿಸಿ: ಪ್ರಧಾನಿಮೋದಿ ಮತ್ತು ಅವರ ಸರ್ಕಾರವುತಮ್ಮ ‘ಶೀರ್ಷಿಕೆ ನಿರ್ವಹಣೆ’ಯ ಹವ್ಯಾಸದಿಂದ ಹೊರಬರಬೇಕು.ತನ್ನ ಆದ್ಯತೆಗಳಲ್ಲಿ ಮೊದಲನೆಯದಾಗಿ ಜಿಎಸ್ಟಿಯನ್ನು ಸರಳಮತ್ತು ಸುಧಾರಣೆ ಮಾಡಬೇಕಿದೆ. ಇದರಿಂದಆದಾಯ ಅಲ್ಪಾವಧಿಗೆ ನಷ್ಟವಾದರೂ ತೊಂದರೆಯಿಲ್ಲ. ಎರಡನೆಯದಾಗಿ ಗ್ರಾಮೀಣ ಬಳಕೆಯನ್ನು ವೃದ್ಧಿಸಲುಮತ್ತು ಕೃಷಿಯನ್ನು ಪುನರುಜ್ಜೀವನಗೊಳಿಸಲು ಸೂಕ್ತ ಮಾರ್ಗಗಳನ್ನು ಹುಡುಕಬೇಕು.ಮೂರನೆಯದಾಗಿ, ಬಂಡವಾಳ ಸೃಷ್ಟಿಗೆ ಎದುರಾಗಿರುವಸಾಲದ ಕೊರತೆಯನ್ನು ಬಗೆಹರಿಸಬೇಕು. ಇದು ಸಾರ್ವಜನಿಕವಲಯದ ಬ್ಯಾಂಕುಗಳುಮಾತ್ರವಲ್ಲ, ಎನ್ಬಿಎಫ್ಸಿಗಳನ್ನೂಉಳಿಸಬೇಕಿದೆ.
ರಫ್ತು ಮಾರುಕಟ್ಟೆ ಪ್ರಯೋಜನ ಬಳಸಿಕೊಳ್ಳಿ : ನಾಲ್ಕನೆಯದಾಗಿಜವಳಿ, ಆಟೋ, ಎಲೆಕ್ಟ್ರಾನಿಕ್ಸ್ ಮತ್ತುದುಬಾರಿಯಲ್ಲದ ಮನೆ ನಿರ್ಮಾಣದಂತಹ ಮುಖ್ಯಉದ್ಯೋಗ ಸೃಷ್ಟಿಯ ವಲಯಗಳನ್ನು ಸುಧಾರಣೆಮಾಡಬೇಕು. ಮುಖ್ಯವಾಗಿ ಎಂಎಸ್ಎಂಇಗಳಿಗೆ ಆದ್ಯತೆನೀಡಬೇಕು. ಐದನೆಯದಾಗಿ, ಅಮೆರಿಕ ಮತ್ತು ಚೀನಾನಡುವಿನ ವ್ಯಾಪಾರ ಸಮರದಿಂದಾಗಿ ತೆರೆದುಕೊಂಡಿರುವರಫ್ತು ಮಾರುಕಟ್ಟೆಯನ್ನು ಬಳಸಿಕೊಳ್ಳಲು ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು.ಕೊನೆಯದಾಗಿ, ಬೃಹತ್ ಮಟ್ಟದ ಸಾರ್ವಜನಿಕಮೂಲಸೌಕರ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಮಾರ್ಗಸೂಚಿಯನ್ನು ರೂಪಿಸಬೇಕು. ಇದರಲ್ಲಿ ಖಾಸಗಿ ಹೂಡಿಕೆಗೂಗಮನ ಹರಿಸಬೇಕು. ಇವುಗಳು ರಚನಾತ್ಮಕವಾಗಿ ಸುಧಾರಣೆಯಾಗಬೇಕು.ಇವೆಲ್ಲವನ್ನೂ ಸರಿಯಾದ ರೀತಿಯಲ್ಲಿ ನಿಭಾಯಿಸಿದರೆಮುಂದಿನ ಮೂರು ನಾಲ್ಕು ವರ್ಷಗಳಲ್ಲಿಯೇನಾವು ಅತ್ಯುತ್ತಮ ಬೆಳವಣಿಗೆಗೆ ಮರಳಬಹುದು ಎಂದು ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…
ಸಕ್ಕರೆಯ ಬದಲು ಸಿಹಿಯಾದ ಬೆಲ್ಲವನ್ನು ಬಳಸುವುದರಿಂದ ಅದೆಷ್ಟು ಆರೋಗ್ಯಕರ ಪ್ರಯೋಜನವನ್ನು ನಾವು ಪಡೆದುಕೊಳ್ಳಬಹುದು ತಿಳಿದುಕೊಳ್ಳೋಣ. ನಮ್ಮ ಪೂರ್ವಿಕರು ಹಿಂದಿನ ಕಾಲದಲ್ಲಿ ಯಾವುದೇ ರೀತಿಯ ಸಕ್ಕರೆಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರಲಿಲ್ಲ ಅವರುಗಳು ಕಾಫಿ ಯನ್ನಾಗಲಿ ಯಾವುದೇ ಸಿಹಿ ಪದಾರ್ಥಗಳನ್ನು ತಯಾರಿಸುವುದಕ್ಕೆ ಬೆಲ್ಲವನ್ನು ಬಳಸುತ್ತಿದ್ದರು ಯಾಕೆ ಎಂದರೆ ಬೆಲ್ಲದಲ್ಲಿ ಇರುವಂತಹ ಅಂಶಗಳು ಒಳ್ಳೆಯ ಪೋಷಕಾಂಶ ಕೊಡುವುದರ ಜೊತೆಗೆ ಆರೋಗ್ಯಕರವಾಗಿಯೂ ಕೂಡ ಇರುತ್ತದೆ ಆದ್ದರಿಂದ ಬೆಲ್ಲವನ್ನು ಉಪಯೋಗಿಸುವುದು ತುಂಬಾನೇ ಉತ್ತಮಕಾರಿ . ಊಟವಾದ ಬಳಿಕ ಒಂದು ತುಂಡು ಬೆಲ್ಲವನ್ನು…
ಕೋಲಾರ: ಶ್ರೀನಿವಾಸಪುರ ಪೊಲೀಸ್ ಠಾಣೆ ವ್ಯಾಪ್ತಿಯ, ರಾಯಲ್ಪಾಡು ಹೋಬಳಿ, ಎ.ಕೊತ್ತೂರು ಗ್ರಾಮದ ನವೀನ್ ಕುಮಾರ್ ಬಿನ್ ರವಣಪ್ಪ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಶ್ರೀನಿವಾಸಪುರ ಪೊಲೀಸ್ ಠಾಣೆ ನಿರೀಕ್ಷಕರಾದ ಸಿ.ರವಿಕುಮಾರ್ 6 ಮತ್ತು 16 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನೆಡೆಸಿ ಆರೋಪಿತನ ವಿರುದ್ದ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದು, ವಿಚಾರಣೆ ನಡೆಸಿದ…
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಹಿಂದೂ ಧರ್ಮದ ಜ್ಯೋತಿಷ್ಯದ ಪ್ರಕಾರ ರತ್ನಗಳ ಧಾರಣೆಯಿಂದ ಕ್ಷೇಮ ಪ್ರಾಪ್ತವಾಗುತ್ತದೆ ಹಾಗೂ ಉದ್ಯೋಗ, ವ್ಯಾಪಾರ, ವಿವಾಹ, ಸಂತಾನ ಹೀಗೆ ನಾನಾ ಬಯಕೆಗಳ ಈಡೇರಿಕೆ ಹಾಗೂ ಜೀವನದಲ್ಲಿ ಉಂಟಾಗುವ ತೊಂದರೆಗಳಿಗೂ ರತ್ನಗಲಿಂದ ಪರಿಹಾರ ಸಿಗುತ್ತೆ ಎಂದು ಹಿಂದೂಗಳಲ್ಲಿ ನಂಬಿಕೆ ಇದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದಕ್ಕೂ ತನ್ನದೇ ಆದ ನಿಯಮವನ್ನು ಹೊಂದಿರುತ್ತದೆ ಅಂತೆಯೇ ನೀವು ರತ್ನಗಳನ್ನು ಧರಿಸುವಾಗ ಕೆಲವೊಂದು ನಿಯಮಗಳನ್ನು ಅನುಸರಿಸುವುದು ಒಳಿತು. ನೀವು ಧರಿಸುವ ರತ್ನಗಳು ನಿಮಗೆ ಒಳಿತು ಮಾಡಬಬೇಕು ಅಂದ್ರೆ ನೀವು ಇಂತಹ ನಿಯಮಗಳನ್ನು ಪಾಲಿಸಲೇಬೇಕು…