ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ, ಆರ್ಥಿಕತೆಯು ಸಹಜ ಸ್ಥಿತಿಗೆ ಬರಲು ಸರ್ಕಾರವು ಮೊದಲು ಜಿಎಸ್ಟಿಯನ್ನು ಸರಳ ಹಾಗೂ ಸುಧಾರಣೆ ಮಾಡಬೇಕು. ಗ್ರಾಮೀಣ ಬಳಕೆಯನ್ನು ಹೆಚ್ಚಿಸಬೇಕು ಮತ್ತು ಬಂಡವಾಳ ಸೃಷ್ಟಿಯ ಸಾಲದ ಕೊರತೆಯ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಲಹೆ ನೀಡಿದ್ದಾರೆ. ಭಾರತವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ ಎಂಬ ಸತ್ಯವನ್ನು ನಿರಾಕರಿಸಲು ಸಾಧ್ಯವಿಲ್ಲ. ಈಗಾಗಲೇ ಸಾಕಷ್ಟು ಸಮಯ ಕಳೆದುಹೋಗಿದೆ. ವಲಯವಾರು ಚೂರು ಚೂರು ಗಮನ ನೀಡುವಂತಹ ರಾಜಕೀಯ ಬಂಡವಾಳವನ್ನು ವ್ಯರ್ಥ ಮಾಡುವ ಬದಲು ಅಥವಾ ಅಪನಗದೀಕರಣದಂತಹ ಶಾಶ್ವತ ಬ್ಲಂಡರ್ಗಳನ್ನು ಎಸಗುವ ಬದಲು ಈಗ ರಚನಾತ್ಮಕ ಸುಧಾರಣೆಯ ಮುಂದಿನ ಪೀಳಿಗೆಯನ್ನು ನಡೆಸಬೇಕಾದ ಹೊಣೆ ಸರ್ಕಾರದ ಮೇಲಿದೆ ಎಂದು ಮನಮೋಹನ್ ಸಿಂಗ್ ಹೇಳಿದ್ದಾರೆ.

ನಾನು ಹಣಕಾಸು ಸಚಿವನಾಗಿದ್ದಾಗ ಮತ್ತು ಪ್ರಧಾನಿಯಾಗಿದ್ದಾಗ ನಮಗೆ ಸಂಪೂರ್ಣ ಬಹುಮತ ಸಿಕ್ಕಿರಲಿಲ್ಲ. ಈಗ ಮೋದಿ ಸರ್ಕಾರ ಸತತ ಎರಡು ಬಾರಿ ಬೃಹತ್ ಬಹುಮತದೊಂದಿಗೆ ಆಯ್ಕೆಯಾಗಿದೆ. ಹೀಗಿದ್ದರೂ ನಾವು 1991 ಮತ್ತು 2008ರಲ್ಲಿ ಜಾಗತಿಕ ಹಣಕಾಸು ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸಿದ್ದೆವು’ ಎಂದು ಅವರು ತಿಳಿಸಿದ್ದಾರೆ. ‘ದಿ ಬಿಜಿನೆಸ್ ಲೈನ್’ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮನಮೋಹನ್ ಸಿಂಗ್ ಅವರು ಮೋದಿ ಸರ್ಕಾರದ ಆರ್ಥಿಕ ನೀತಿಗಳನ್ನು ಟೀಕಿಸಿದ್ದಾರೆ.

ಕಳವಳಕಾರಿಆರ್ಥಿಕ ಕುಸಿತ : ಭಾರತವು ಅತ್ಯಂತಕಳವಳಕಾರಿಯಾಗಿ ಆರ್ಥಿಕ ಕುಸಿತ ಅನುಭವಿಸುತ್ತಿದೆ.ಈ ಕುಸಿತ ಆರ್ಥಿಕತೆಯಪ್ರಮುಖ ವಲಯಗಳಿಗೆ ಭಾರಿ ಹೊಡೆತ ನೀಡಿದೆ.ಈ ಸಮಸ್ಯೆಗಳಿಗೆ ಸರ್ಕಾರವುಪಾರದರ್ಶಕ ರೀತಿಯಲ್ಲಿ ಪರಿಹಾರ ಹುಡುಕಲು ಮುಂದಾಗಬೇಕು.ಪರಿಣತರ ಸಲಹೆ ಪಡೆದುಕೊಳ್ಳಬೇಕು. ಮುಖ್ಯವಾಗಿಸರ್ಕಾರವು ಜನರಲ್ಲಿ ಆತ್ಮವಿಶ್ವಾಸ ಮೂಡಿಸಬೇಕು.ಜತೆಗೆ ಜಗತ್ತಿಗೆ ಸ್ಪಷ್ಟ ಸಂದೇಶ ರವಾನಿಸಬೇಕು.ದುರದೃಷ್ಟವಶಾತ್ ಮೋದಿ ಸರ್ಕಾರದಿಂದ ಅಂತಹಯಾವುದೇ ಪ್ರಯತ್ನ ಇದುವರೆಗೂ ನಡೆದಿರುವುದುಕಂಡಿಲ್ಲ ಎಂದು ಸಿಂಗ್ ಟೀಕಿಸಿದರು.

ಕೃಷಿಗೆ ಹೊಡೆತ ನೀಡಿದ ನೋಟ್ ರದ್ದತಿ : ಆರ್ಥಿಕತೆಯ ಪ್ರಮುಖ ಭಾಗಗಳು ಆರ್ಥಿಕಸಮಸ್ಯೆಗೆ ಸಿಲುಕಿವೆ. ಉದಾಹರಣೆಗೆ ಕೃಷಿ ವಲಯವು ಜಿಡಿಪಿಯ ಶೇ 15ರಷ್ಟು ಕೊಡುಗೆ ನೀಡುತ್ತದೆ. ಅದುಮುಖ್ಯವಾಗಿ ನಡೆಯುವುದು ನಗದು ರೂಪದಲ್ಲಿ. ಮುಖ್ಯವಾಗಿ ಅದು ತೆರಿಗೆ ರಹಿತವಾದದ್ದು. ಆದರೆ ಅಪಗನಗದೀಕರಣದಸಮಯದಲ್ಲಿ ನಗದು ಹಣವನ್ನು ಹಠಾತ್ತಾಗಿ ಹಿಂದಕ್ಕೆ ಪಡೆದುಕೊಂಡ ಪರಿಣಾಮ ಕೃಷಿ ಆರ್ಥಿಕತೆಗೆ ಹೊಡೆತಬಿದ್ದಿತು ಎಂದು ಸಿಂಗ್ ಅರೋಪಿಸಿದ್ದಾರೆ.
ಅಪನಗದೀಕರಣದ ಆತಂಕ ನಿಜವಾಗಿದೆ : ಅಪನಗದೀಕರಣದನಂತರದ ವರ್ಷದಲ್ಲಿ ಜಿಡಿಪಿಯಲ್ಲಿ ಕಾರ್ಪೊರೇಟ್ ಹೂಡಿಕೆಯ ಪ್ರಮಾಣ ಶೇ7.5ರಿಂದ ಶೇ 2.7ಕ್ಕೆ ಕುಸಿದಿದೆ.ಇದು 2010-11ರಲ್ಲಿ ಜಿಡಿಪಿಯ ಶೇ15ರಷ್ಟಿತ್ತು. ಇದರ ಅರ್ಥ, ಕೃಷಿಯಂತಹಅಸಂಘಟಿತ ವಲಯ ಮಾತ್ರವಲ್ಲ, ಸಂಘಟಿತವಲಯ ಕೂಡ ಅಪನಗದೀಕರಣದಿಂದ ಸಂಕಷ್ಟಕ್ಕೆಸಿಲುಕಿದೆ. ಸಣ್ಣ ಮತ್ತು ಮಧ್ಯಮಉದ್ದಿಮೆಗಳು ಅತ್ಯಂತ ಕೆಟ್ಟ ಹೊಡೆತತಿಂದಿವೆ. ಅಪನಗದೀಕರಣದ ನಿರ್ಧಾರದಿಂದ ಉಂಟಾಗುವ ಪರಿಣಾಮವು ದೀರ್ಘಾವಧಿಮತ್ತು ತೀವ್ರವಾಗಿರಲಿದೆ ಎಂಬ ನಮ್ಮ ಕಳವಳಸತ್ಯವಾಗಿದೆ.
ಜಿಎಸ್ಟಿಯ ಕಳಪೆ ಅನುಷ್ಠಾನ : ಅಪನಗದೀಕರಣದ ಆಘಾತದ ಬಳಿಕವೂ ಸರ್ಕಾರತರಾತುರಿಯಲ್ಲಿ ಜಿಎಸ್ಟಿ ಜಾರಿಮಾಡಿತ್ತು ಆರ್ಥಿಕತೆಗೆ ನೀಡಿದ ಮತ್ತೊಂದು ದೊಡ್ಡಪೆಟ್ಟು. ಜಿಎಸ್ಟಿ ಒಂದುರಚನಾತ್ಮಕ ಸುಧಾರಣೆ. ಯುಪಿಎ ಸರ್ಕಾರದ ಅವಧಿಯಲ್ಲಿಯೇಅದನ್ನು ಜಾರಿಗೆ ತರಲು ಪ್ರಯತ್ನಿಸಿದ್ದೆವು.ನಾವು ಸುಧಾರಣೆಯ ಬೆಂಬಲಿಗರು. ಆದರೆ, ಅದನ್ನು ತುಂಬಾಕೆಟ್ಟದಾಗಿ ಅಳವಡಿಸಲಾಯಿತು. ದೊಡ್ಡ ಕಂಪೆನಿಗಳು ಜಿಎಸ್ಟಿ ರಸೀದಿ ನೀಡಬಲ್ಲಪೂರೈಕೆದಾರರಿಂದ ಖರೀದಿ ಮಾಡಲು ಆದ್ಯತೆನೀಡಿದ್ದರಿಂದ ಸಣ್ಣ, ಅತಿ ಸಣ್ಣಮತ್ತು ಮಧ್ಯಮ ಉದ್ಯಮಗಳು ಸಂಕಷ್ಟಕ್ಕೆಸಿಲುಕಿದವು.

ಸಣ್ಣ ಮತ್ತು ಮಧ್ಯಮ ಉದ್ಯಮ ತತ್ತರ : ಜಿಎಸ್ಟಿ ಅಡಿಯಲ್ಲಿತೀರಾ ಕಡಿಮೆ ಪ್ರಮಾಣದಲ್ಲಿ ಅರ್ಹತೆಗಿಟ್ಟಿಸಿಕೊಳ್ಳುವ ಭಾರತದ ಸಣ್ಣ ಕಂಪೆನಿಗಳಿಗೆಹೂಡುವ ಬದಲು ಆಮದಿಗೆ ಆದ್ಯತೆನೀಡಲಾಯಿತು. ಇಡೀ ಪೂರೈಕೆಯ ಸರಪಳಿಯನ್ನೇತುಂಡರಿಸಲಾಯಿತು. ಈಗ ನಮ್ಮ ಮಾರುಕಟ್ಟೆಗಳಲ್ಲಿಚೀನಾದ ಆಮದು ವಸ್ತುಗಳೇ ತುಂಬಿವೆಎನ್ನುವುದು ನಮಗೆ ತಿಳಿದಿದೆ. ಇಷ್ಟಲ್ಲದೆತೆರಿಗೆ ಅಧಿಕಾರಿಗಳು ತೆರಿಗೆದಾರರಿಗೆ ಕಿರುಕುಳ ನೀಡುತ್ತಿರುವ ವರದಿಗಳೂಬಂದಿವೆ. ಜಿಎಸ್ಟಿಯ ಸಂಕೀರ್ಣ,ಬಹುಬಗೆಯ ತೆರಿಗೆಗಳು, ನಿರಂತರ ಬದಲಾಗುವ ಮತ್ತುಸೃಷ್ಟಿಯಾಗುವ ನಿಯಮಗಳು ಮುಂತಾದವು ಸಣ್ಣಮತ್ತು ಮಧ್ಯಮ ಗಾತ್ರದ ಉದ್ಯಮಗಳಿಗೆಗಾಸಿಯುಂಟು ಮಾಡಿವೆ.
ಜಿಎಸ್ಟಿಯನ್ನು ಸರಳಗೊಳಿಸಿ: ಪ್ರಧಾನಿಮೋದಿ ಮತ್ತು ಅವರ ಸರ್ಕಾರವುತಮ್ಮ ‘ಶೀರ್ಷಿಕೆ ನಿರ್ವಹಣೆ’ಯ ಹವ್ಯಾಸದಿಂದ ಹೊರಬರಬೇಕು.ತನ್ನ ಆದ್ಯತೆಗಳಲ್ಲಿ ಮೊದಲನೆಯದಾಗಿ ಜಿಎಸ್ಟಿಯನ್ನು ಸರಳಮತ್ತು ಸುಧಾರಣೆ ಮಾಡಬೇಕಿದೆ. ಇದರಿಂದಆದಾಯ ಅಲ್ಪಾವಧಿಗೆ ನಷ್ಟವಾದರೂ ತೊಂದರೆಯಿಲ್ಲ. ಎರಡನೆಯದಾಗಿ ಗ್ರಾಮೀಣ ಬಳಕೆಯನ್ನು ವೃದ್ಧಿಸಲುಮತ್ತು ಕೃಷಿಯನ್ನು ಪುನರುಜ್ಜೀವನಗೊಳಿಸಲು ಸೂಕ್ತ ಮಾರ್ಗಗಳನ್ನು ಹುಡುಕಬೇಕು.ಮೂರನೆಯದಾಗಿ, ಬಂಡವಾಳ ಸೃಷ್ಟಿಗೆ ಎದುರಾಗಿರುವಸಾಲದ ಕೊರತೆಯನ್ನು ಬಗೆಹರಿಸಬೇಕು. ಇದು ಸಾರ್ವಜನಿಕವಲಯದ ಬ್ಯಾಂಕುಗಳುಮಾತ್ರವಲ್ಲ, ಎನ್ಬಿಎಫ್ಸಿಗಳನ್ನೂಉಳಿಸಬೇಕಿದೆ.
ರಫ್ತು ಮಾರುಕಟ್ಟೆ ಪ್ರಯೋಜನ ಬಳಸಿಕೊಳ್ಳಿ : ನಾಲ್ಕನೆಯದಾಗಿಜವಳಿ, ಆಟೋ, ಎಲೆಕ್ಟ್ರಾನಿಕ್ಸ್ ಮತ್ತುದುಬಾರಿಯಲ್ಲದ ಮನೆ ನಿರ್ಮಾಣದಂತಹ ಮುಖ್ಯಉದ್ಯೋಗ ಸೃಷ್ಟಿಯ ವಲಯಗಳನ್ನು ಸುಧಾರಣೆಮಾಡಬೇಕು. ಮುಖ್ಯವಾಗಿ ಎಂಎಸ್ಎಂಇಗಳಿಗೆ ಆದ್ಯತೆನೀಡಬೇಕು. ಐದನೆಯದಾಗಿ, ಅಮೆರಿಕ ಮತ್ತು ಚೀನಾನಡುವಿನ ವ್ಯಾಪಾರ ಸಮರದಿಂದಾಗಿ ತೆರೆದುಕೊಂಡಿರುವರಫ್ತು ಮಾರುಕಟ್ಟೆಯನ್ನು ಬಳಸಿಕೊಳ್ಳಲು ಸೂಕ್ತ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು.ಕೊನೆಯದಾಗಿ, ಬೃಹತ್ ಮಟ್ಟದ ಸಾರ್ವಜನಿಕಮೂಲಸೌಕರ್ಯದ ಅಭಿವೃದ್ಧಿಗೆ ವಿಶ್ವಾಸಾರ್ಹ ಮಾರ್ಗಸೂಚಿಯನ್ನು ರೂಪಿಸಬೇಕು. ಇದರಲ್ಲಿ ಖಾಸಗಿ ಹೂಡಿಕೆಗೂಗಮನ ಹರಿಸಬೇಕು. ಇವುಗಳು ರಚನಾತ್ಮಕವಾಗಿ ಸುಧಾರಣೆಯಾಗಬೇಕು.ಇವೆಲ್ಲವನ್ನೂ ಸರಿಯಾದ ರೀತಿಯಲ್ಲಿ ನಿಭಾಯಿಸಿದರೆಮುಂದಿನ ಮೂರು ನಾಲ್ಕು ವರ್ಷಗಳಲ್ಲಿಯೇನಾವು ಅತ್ಯುತ್ತಮ ಬೆಳವಣಿಗೆಗೆ ಮರಳಬಹುದು ಎಂದು ಸಿಂಗ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿವಂಗತ ಅಂಬರೀಶ್ ಅವರ ಜಯಂತಿಯಾದ ಇಂದು ಪತ್ನಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅವರು ಇಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಂಡ್ಯ ಸಂಸದರಾಗಿ ಆಯ್ಕೆ ಆಗಿರುವ ಸುಮಲತಾ ಅವರು ಇಂದು ಬೆಳಿಗ್ಗೆಯೇ ಕಂಠೀರವ ಸ್ಟುಡಿಯೋಕ್ಕೆ ತೆರಳಿ ಅಂಬರೀಶ್ ಸ್ಮಾರಕಕ್ಕೆ ಮಗ ಅಭಿಶೇಕ್ ಅವರೊಂದಿಗೆ ಸೇರಿ ಪೂಜೆ ಸಲ್ಲಿಸಿದರು. ನೆರೆದಿದ್ದ ಅಭಿಮಾನಿಗಳೊಂದಿಗೂ ಸುಮಲತಾ ಅವರು ಕೆಲ ಕಾಲ ಮಾತನಾಡಿದರು. ಅಭಿಶೇಕ್, ರಾಕ್ಲೈನ್ ವೆಂಕಟೇಶ್ ಇನ್ನೂ ಹಲವು ಅಭಿಮಾನಿಗಳು, ಚಿತ್ರರಂಗದ ಪ್ರಮುಖರು…
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…
ಕೋಲಾರ:- ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ, ಹನುಮಂತರಾಯನ ದಿನ್ನೆ ಗ್ರಾಮದ ವಾಸಿ ಹೆಚ್.ಎನ್.ವೆಂಕಟೇಶ್ ಬಿನ್ ನಾರಾಯಣಸ್ವಾಮಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಕೋಲಾರ ಮಹಿಳಾ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರಾದ ಎನ್.ಬೈರ ರವರು ಹಾಗೂ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯವರು ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷರಾಶಿ:- ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ನಿಮಗೆ ಹೇರಳವಾಗಿ ದೊರೆಯುವುವು. ಬರುವ ಅವಕಾಶಗಳನ್ನು ಪೂರ್ಣಪ್ರಮಾಣದಲ್ಲಿ ಬಳಸಿಕೊಳ್ಳಿ. ಒಳಿತಾಗುವುದು .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.