ಹಣ ಕಾಸು

ಜಿಎಸ್‍ಟಿ ತೆರಿಗೆ(ನಾಳೆ ಜುಲೈ1)ರಿಂದ ಈ ಸೇವೆಗಳು ದುಬಾರಿಯಾಗಲಿವೆ!

1837

ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ  ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್‍ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ ಎಂಬ ಮಾಹಿತಿಯನ್ನು ಮುಂದೆ ಓದಿ….

*ದುಬಾರಿಯಾಗಲಿರುವ ಸೇವೆಗಳು:-

ನೋಟ್ ಬ್ಯಾನ್ ಆದ ನಂತರ  ಬ್ಯಾಂಕ್ ವ್ಯವಹಾರಗಳ ಮತ್ತು , ಎಟಿಎಂ ನಿಂದ ಹಣ ತೆಗೆಯುವವರ  ಮೇಲೆ ಲಿಮಿಟ್ ಹೇರಿದ್ದ ಬ್ಯಾಂಕ್‍ಗಳು ಈಗ ಜಿಎಸ್‍ಟಿ ತೆರಿಗೆ ಹೆಸರಲ್ಲಿ ಹೆಚ್ಚುವರಿ ಸೇವಾ ತೆರಿಗೆ ವಿಧಿಸಲು ಮುಂದಾಗಿವೆ.

ಬ್ಯಾಂಕ್ ನ ಯಾವ ಯಾವ ಸೇವೆಗಳು ದುಬಾರಿ?

 

ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನಿರ್ವಹಣೆಗೆ ಸೇವಾ ತೆರಿಗೆ ಹೆಚ್ಚಳವಾಗಲಿದೆ. ಜೊತೆಗೆ  4 ಬಾರಿ ಎಟಿಎಂ ವಿತ್‍ಡ್ರಾ ಲಿಮಿಟ್ ಮುಗಿದ್ಮೇಲೆ,ಮಾಡುವೆ ಪ್ರತಿ ವಿತ್‍ಡ್ರಾಗೂ  ಶುಲ್ಕ ಕಟ್ಟಬೇಕು. ಪೆಟ್ರೋಲ್ ಹಾಕಿಸಿದ್ರೆ, ಶಾಪಿಂಗ್, ಹೋಟೆಲ್‍ನಲ್ಲಿ ಕಾರ್ಡ್ ಉಜ್ಜಿದ್ರೂ ಸರ್ವಿಸ್ ಟ್ಯಾಕ್ಸ್ ಕಟ್ಟಬೇಕಾಗುತ್ತದೆ.

ನಿಮ್ಮ ವಿಮೆ(ಇನ್ಸುರೆನ್ಸೆ)ಮೇಲೆ ಜಿಎಸ್ಟಿ ಪ್ರಭಾವ

ನೀವು ವಿಮೆ(ಇನ್ಸುರೆನ್ಸೆ) ಮಾಡಿಸಿದ್ರೆ  ಪ್ರತಿ ಕಂತಿನ ಮೇಲೆ ಸೇವಾ ತೆರಿಗೆ ಹಾಗೂ  ಇನ್ಶುರೆನ್ಸ್ ಚೆಕ್ ರೂಪದಲ್ಲಿ, ನಗದು ರೂಪದಲ್ಲಿ ಹಣ ಕಟ್ಟಿದ್ರೂ ಸೇವಾ ತೆರಿಗೆ  ಹೆಚ್ಚಳವಾಗಲಿದೆ.

 ರೈತರನ್ನು ಬಿಡದ ಜಿಎಸ್ಟಿ:-

ಅನ್ನದಾತ ರೈತರು ವ್ಯವಸಾಯಕ್ಕಾಗಿ ಬಳಸುವ ರಾಸಾಯನಿಕ ಗೊಬ್ಬರ, ಯಂತ್ರಗಳ ಮೇಲೂ ಜಿಎಸ್‍ಟಿ ತೆರಿಗೆ ಬೀಳಲಿದೆ. ಹೊಸ ಟ್ರ್ಯಾಕ್ಟರ್ ಮತ್ತು ಬಿಡಿಭಾಗಗಳು ಖರೀದಿಗೂ ತೆರಿಗೆ ಹೊರೆ ಬೀಳಲಿದೆ. ಬೆಳೆಗಳಿಗೆ ಬಳಸುವ ಕ್ರಿಮಿನಾಶಕಗಳ ಹಾಗೂ ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ತೆರಿಗೆ ಹೊರೆ ಬೀಳಲಿದೆ.

ಆಭರಣ ಪ್ರಿಯರಿಗೆ ತೆರಿಗೆ :-

ಆಭರಣ ಪ್ರಿಯರು ಇನ್ಮುಂದೆ ಸ್ವಲ್ಪ ಯೋಚನೆ ಮಾಡಿ ಚಿನ್ನ ಕೊಳ್ಳಬೇಕಾಗಬಹುದು. ಏಕೆಂದರೆ  ಚಿನ್ನದ ಮೇಲೆ ಮತ್ತು ಮೇಕಿಂಗ್ ಮೇಲೆ ತೆರಿಗೆ ಬೀಳಲಿದೆ. ಬೆಳ್ಳಿ ಮೇಲೆಯೂ  ಜಿಎಸ್‍ಟಿ ತೆರಿಗೆ ಬೀಳಲಿದೆ.

ಮಹಿಳೆಯರ ಇನ್ಮುಂದೆ ಮೇಕಪ್ ಮಾಡಕ್ಕೂ ಮುಂಚೆ ಯೋಚನೆ ಮಾಡಿ:-

ಮಹಿಳೆಯರ ಮೇಕಪ್ ಐಟಮ್ಸ್, ಬ್ಯೂಟಿ ಪಾರ್ಲರ್ ಸೇವೆಗಳು ದುಬಾರಿಯಾಗಲಿವೆ. ಮೆನಿಕ್ಯೂರ್, ಪೆಡಿಕ್ಯೂರ್, ಸುಗಂಧ ದ್ರವ್ಯಗಳ, ಮೇಕಪ್ ಸಾಧನಗಳ, ಸ್ಕಿನ್ ಕೇರ್ ಸನ್‍ಸ್ಕ್ರೀನ್ ಮೇಲೆ  ಜಿಎಸ್‍ಟಿ ಬೀಳಲಿದೆ. ಇನ್ನು ಲೆದರ್ ಬ್ಯಾಗ್ ಹಾಗೂ ಸ್ಯಾನಿಟರಿ ನ್ಯಾಪ್‍ಕಿನ್ಸ್ ಮೇಲೆ ಕೂಡ ಜಿಎಸ್‍ಟಿ ತೆರಿಗೆ ಹೆಚ್ಚಲಿದೆ.

ಜಿಎಸ್‍ಟಿಯಿಂದ ವಿನಾಯಿತಿ ಪಡೆಯಲಿರುವ ವಸ್ತುಗಳು ಯಾವುವು ಗೊತ್ತಾ…

ಮಹಿಳೆಯರ ಬಳೆ, ಕುಂಕುಮ ಹಾಗೂ ಬಿಂದಿಗೆ ಜಿಎಸ್‍ಟಿ ತೆರಿಗೆಯಿಂದ ವಿನಾಯಿತಿ ಸಿಕ್ಕಿದೆ.

ಕುಡುಕರ ನಶೆ ಇಳಿಸಲಿರುವ ಜಿಎಸ್ಟಿ..

ತುರಾಡೋ ಕುಡುಕರಿಗೆ ಶಾಕ್ ಕೊಡಲಿರುವ  ಜಿಎಸ್‍ಟಿ ಜಾರಿಯಾದ್ಮೇಲೆ ಮದ್ಯ ತಯಾರಿಸೋ ಕಂಪನಿಗಳಿಗೆ ಉತ್ಪಾದನಾ ವೆಚ್ಚ ಹೆಚ್ಚಾಗಲಿದೆ. ಇದನ್ನ ಸರ್ವೀಸ್ ಟ್ಯಾಕ್ಸ್ ಹೆಸರಲ್ಲಿ ವಸೂಲಿ ಮಾಡಲು ಕಂಪನಿಗಳು ನಿರ್ಧರಿಸಿವೆ. ಮದ್ಯ ತಯಾರಿಕಾ ಕಂಪನಿಗಳ ಪ್ರಕಾರ ಉತ್ಪಾದನಾ ತೆರಿಗೆ ಹೆಚ್ಚಾಗಲಿದ್ದು, ಈ ಹೊರೆಯನ್ನ ತಪ್ಪಿಸಲು ರಮ್, ಜಿನ್ನು, ವೈನ್, ಬಿಯರ್, ವಿಸ್ಕಿ ದರ ಹೆಚ್ಚಿಸಿ ಅದನ್ನ ಸೇವಾದರ ಹೆಸರಲ್ಲಿ ಗ್ರಾಹಕರಿಂದಲೇ ವಸೂಲಿ ಮಾಡಲು ಕಂಪನಿಗಳು ತೀರ್ಮಾನಿಸಿವೆ.

ನಟ ನಟಿಯರ ಮೇಲೆ ಜಿಎಸ್ಟಿ ತೆರಿಗೆ


ಜಿಎಸ್‍ಟಿ ಯಿಂದ 20 ಲಕ್ಷಕ್ಕೂ ಅಧಿಕ ಸಂಭಾವನೆ ಪಡೆಯುವ  ನಟ ನಟಿಯರಿಗೂ ಬಿಸಿ ತಟ್ಟಲಿದೆ. ನಟ ನಟಿಯರ ಸಂಭಾವನೆ ಮೇಲಿನ ತೆರಿಗೆ ಹೆಚ್ಚಳವಾಗಿದೆ.

ಆನ್‍ಲೈನ್ ಬುಕ್ಕಿಂಗ್ ಮತ್ತು  ವ್ಯವಹಾರದ ಮೇಲೆ ಜಿಎಸ್ಟಿ ಬರೆ

ಜುಲೈ 1 ರಾ ನಂತರ  ಆನ್‍ಲೈನ್ ವ್ಯವಹಾರದ ಮೇಲೆ 1% ತೆರಿಗೆ ನಿಗದಿಯಾಗಿದೆ. ನಷ್ಟ ಸರಿದೂಗಿಸಲು ಆನ್‍ಲೈನ್ ಬುಕಿಂಗ್ ಕಂಪನಿಗಳ ವಸ್ತುಗಳ ಮೇಲಿನ ಬೆಲೆ ಏರಿಕೆಯಾಗಲಿದೆ.

ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್:-

ಜುಲೈ 1ರಿಂದ ದೇಶಾದ್ಯಂತ ಗೂಡ್ಸ್ ಅಂಡ್ ಸರ್ವೀಸ್ ಟ್ಯಾಕ್ಸ್ ಜಾರಿಯಾಗ್ತಿದ್ದು, ಎಲ್ಲಾ ವಸ್ತುಗಳು ಒಂದೇ ತೆರಿಗೆ ವ್ಯಾಪ್ತಿಗೆ ಬರಲಿವೆ. ಇದ್ರಿಂದ ಮನೆ ಖರೀದಿ ಕಡಿಮೆಯಾಗಲಿದೆ ಎನ್ನಲಾಗಿದೆ.

ಕನಸಿನ ಮನೆ ನಿರ್ಮಾಣ ಕಷ್ಟ :-

 

ಕಟ್ಟಡಕ್ಕೆ ಬಳಸುವ ವಸ್ತುಗಳ ಬೆಲೆ ಹೆಚ್ಚಾಗಲಿದ್ದು, ಕಟ್ಟಡ ರಿಪೇರಿಗಾಗಿ ಪಡೆಯುವ ಸಾಲದ ಮೇಲೆ ಸಹ ಜಿಎಸ್ಟಿ ತೆರಿಗೆ ಬೀಳಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪುಟ್ಟ ಮಗುವಿಗೆ ತುತ್ತು ತಿನ್ನಿಸಿ ಮಗುವಿನೊಂದಿಗೆ ಮಗುವಾಗಿ ಎಂಜಾಯ್. ವಿಡಿಯೋ ವೈರಲ್!

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್​, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್,  ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್​​​​​ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್​​​ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…

  • ಮನರಂಜನೆ, ಸುದ್ದಿ

    ಸರಿಗಮಪ ಗ್ರಾಂಡ್ ಫಿನಲೆಯಲ್ಲಿ ರನ್ನರ್ ಅಪ್ ಆದ ಹನುಮಂತನಿಗೆ ಸಿಕ್ಕಿದ್ದು ಎಷ್ಟು ಲಕ್ಷ ಗೊತ್ತಾ?ಇದೇ ಮೊದಲ ಬಾರಿಗೆ ರನ್ನರ್ ಅಪ್ ಗೆ ಬಾರೀ ಮೊತ್ತದ ಬಹುಮಾನ!

    ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಗ್ರಾಂಡ್ ಫಿನಾಲೆಯಲ್ಲಿ ಮಂಗಳೂರಿನ ಕೀರ್ತನ್ ಹೊಳ್ಳ ವಿನ್ನರ್ ಆಗಿದ್ದಾರೆ. ಹಾವೇರಿಯ ಚೀಲೂರು ಬಡ್ನಿ ತಾಂಡಾದ ಹನುಮಂತ ಅವರು ರನ್ನರ್ ಆಗಿದ್ದಾರೆ.ಕೀರ್ತನ್ ಹೊಳ್ಳ ಆರಂಭದಿಂದಲೂ ಅದ್ಭುತವಾಗಿ ಹಾಡುವ ಮೂಲಕ ಜಡ್ಜಸ್ ಗಳು ಹಾಗೂ ಮಹಾಗುರುಗಳ ಮೆಚ್ಚುಗೆ ಗಳಿಸಿದ್ದರು. ಅದೇ ರೀತಿ ಹನುಮಂತ ತಮ್ಮ ಮುಗ್ಧತೆಯಿಂದಲೇ ಜನಪ್ರಿಯರಾಗಿದ್ದರು. ಶನಿವಾರ ನಡೆದ ಗ್ರಾಂಡ್ ಫಿನಾಲೆಯಲ್ಲಿ ನಿಹಾಲ್ ತಾವ್ರೊ, ಹನುಮಂತ, ಕೀರ್ತನ ಹೊಳ್ಳ, ವಿಜೇತ್, ಹೃತ್ವಿಕ್ ಹಾಗೂ ಸಾಧ್ವಿನಿ ಅವರು ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಅವರಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …