ಸುದ್ದಿ

ತಾಮ್ರ ಬಳಸುವುದರಿಂದ ಆಗುವ ಉಪಯೋಗಗಳೇನು ಗೊತ್ತಾ? ತಾಮ್ರದಲ್ಲಿದೆ ರೋಗಮುಕ್ತ ಗುಣಗಳು..!

187

ಇದು ಪ್ಲಾಸ್ಟಿಕ್ ಯುಗ ಮನುಷ್ಯ ಪ್ರತಿಯೊಂದಕ್ಕೂ ಪ್ಲಾಸ್ಟಿಕ್ ಮೇಲೆ ಅವಲಂಬಿತವಾಗಿದ್ದಾರೆ. ತಾನು ಬಳಸುವ ದಿನನಿತ್ಯದ ಹಲವು ವಸ್ತುಗಳು ಅಷ್ಟಲ್ಲದೆ ತಿನ್ನಲು, ಕುಡಿಯಲು ಬಳಸುವ ವಸ್ತು ಸಹ ಪ್ಲಾಸ್ಟಿಕ್ ನಿಂದಲೇ ಕೂಡಿರುತ್ತದೆ. ಆದರೆ ಈ ಪ್ಲಾಸ್ಟಿಕ್ ಮನುಷ್ಯನ ಜೀವಕ್ಕೆ ಮುಂದೊಂದು ದಿನ ಕುತ್ತು ತರುತ್ತದೆ ಎಂದು ತಿಳಿದು ಎಚ್ಚೆತ್ತುಕೊಳ್ಳುವುದು ಬಹಳ ಮುಖ್ಯ. ಮನುಷ್ಯನ ಆರೋಗ್ಯ ಹದಗೆಡದಂತೆ ಕಾಪಾಡಿಕೊಳ್ಳಬೇಕಾದ ಸಣ್ಣದೊಂದು ಈ ಸಲಹೆಯನ್ನು ಅನುಸರಿಸಿ. ಏನಾದು ಅಂತೀರಾ?

ಹೌದು ನಾವು ದಿನನಿತ್ಯ ಬಳಸುವ ಕೆಲವು ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ ಹೀಗೆ ಮುಂತಾದ ವಸ್ತುಗಳನ್ನು ಬಳಸುವ ಬದಲಾಗಿ ತಾಮ್ರ ಬಳಸಿದರೆ ಎಷ್ಟೋ ಉಪಯೋಗಗಳಿದೆ. ತಾಮ್ರವು ದೇಹಕ್ಕೆ ಅಲ್ಪಪ್ರಮಾಣದಲ್ಲಿ ಅಗತ್ಯವಾದ ಖನಿಜಗಳಲ್ಲಿ ಒಂದಾಗಿದ್ದು,ತಾಮ್ರದ ವಸ್ತುಗಳಿಂದ ಹೆಚ್ಚು ಆರೋಗ್ಯಕಾರಿಯಾಗಿರಬಹುದು ಎಂಬ ಸತ್ಯ ತಿಳಿದುಬಂದಿದೆ.ಕೆಂಪು ರಕ್ತ ಕಣಗಳು ಮತ್ತು ಕೊಲ್ಯಾಜೆನ್‌ಗಳನ್ನು ನಿರ್ಮಿಸಲು ತಾಮ್ರ ಅಗತ್ಯವಾಗಿದ್ದು, ಆಹಾರದಿಂದ ದೇಹಕ್ಕೆ ಅಗತ್ಯವಿರುವ ಶಕ್ತಿಯ ಉತ್ಪಾದನೆ ಯಲ್ಲಿಯೂ ಸಹ ತಾಮ್ರ ಪ್ರಮುಖ ಪಾತ್ರ ವಹಿಸುತ್ತದೆ.

ಇನ್ನೂ ಕೆಲವು ಅಧ್ಯಾಯನದ ವರದಿಯ ಪ್ರಕಾರ ತಾಮ್ರದ ಪಾತ್ರೆಗಳಲ್ಲಿ ಸುಮಾರು ಹದಿನಾರು ಗಂಟೆಗಳ ಕಾಲ ಶೇಖರಿಸಿಟ್ಟ ನೀರಿನಲ್ಲಿ ಸಾಲ್ಮೋನೆಲ್ಲಾ ಮತ್ತು ಈ ಕೊಲೈಗಳಂತಹ ಮಾರಕ ಬ್ಯಾಕ್ಟೀರಿಯಾಗಳು ಇಲ್ಲವಾದರಿಂದ ತಾಮ್ರದ ಪಾತ್ರೆಯಲ್ಲಿರುವ ನೀರು ಕುಡಿದರೆ ಆರೋಗ್ಯದ ಮೇಲೆ ಉತ್ತಮ ಪ್ರಯೋಜನ ಬೀರುತ್ತದೆ ಎಂದು ತಿಳಿಸಿದೆ.

ಹಿಂದಿನ ಕಾಲದಲ್ಲಿ ಪೂರ್ವಜರು ತಾಮ್ರದ ಪಾತ್ರೆಯಲ್ಲಿಯೇ ಅಡುಗೆ ಮಾಡುತ್ತಿದ್ದರು ಮತ್ತು ನೀರನ್ನು ಕುಡಿಯುತ್ತಿದ್ದರು. ಅಲ್ಲದೆ ತಾಮ್ರವೂ ಕೂಡ ನೀರನ್ನು ಶುದ್ಧಿ ಕರಿಸುವ ಗುಣವನ್ನು ಹೊಂದಿದ್ದು, ಕನಿಷ್ಠ ನಾಲ್ಕು ಗಂಟೆಗಳ ಕಾಲ ತಾಮ್ರದ ಪಾತ್ರೆಯಲ್ಲಿ ಸಂಗ್ರಹಿಸಿದ ನೀರನ್ನು ಕುಡಿಯುವುದರಿಂದ ದೇಹಕ್ಕೆ ಒಳ್ಳೆಯದು.ಜೊತೆಗೆ ತಾಮ್ರವು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು , ದೇಹದಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಬಳಸಿಕೊಂಡು ಬಳಿಕ ದೇಹದಿಂದ ಪರಿಣಾಮಕಾರಿಯಾಗಿ ಹೊರಹಾಕಲು, ಮತ್ತು ತೂಕ ಇಳಿಕೆಗೆ ಸಹಾಯಕವಾಗಿದೆ.

ತಾಮ್ರದಲ್ಲಿ ಬ್ಯಾಕ್ಟೀರಿಯಾ ನಿವಾರಕ ಗುಣಗಳಿದ್ದು, ತಾಮ್ರದ ಬಿಂದಿಗೆಯ ನೀರನ್ನು ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಹಲವಾರು ಬ್ಯಾಕ್ಟೀರಿಯಾಗಳನ್ನು ಕೊಂದು ಜೀರ್ಣವ್ಯವಸ್ಥೆಯನ್ನ ಉತ್ತಮ ಗೊಳಿಸುತ್ತದೆ.ಅಲ್ಲದೆ ದೇಹದಲ್ಲಿನ ರಕ್ತದೊತ್ತಡ ನಿಯಂತ್ರಿಸಲು ಹಾಗೂ ಹೃದಯದ ಬಡಿತವನ್ನು ಕ್ರಮಬದ್ದಗೊಳಿಸಲು , ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಅಧಿಕ ರಕ್ತದೊತ್ತಡವನ್ನು ಕಡಿಮೆಗೊಳಿಸಲು ನೆರವಾಗುತ್ತದೆ.

ಜೊತೆಗೆ ತಾಮ್ರವು ಅತಿಸೂಕ್ಷ್ಮಜೀವಿ ನಿರೋಧಕ ಗುಣವನ್ನು ಹೊಂದಿದ್ದು, ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲುತ್ತದೆ ಮತ್ತು ಸೋಂಕಿನ ವಿರುದ್ಧ ಪ್ರಬಲವಾಗಿ ಹೋರಾಡಲು ನೆರವಾಗುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಚಳಿಗಾಲದಲ್ಲಿ ಗೋಡಂಬಿ ಸೇವನೆ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ? ಇಲ್ಲಿದೆ ಉಪಯುಕ್ತ ಮಾಹಿತಿ!

    ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್​ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್​…

  • ಸೌಂದರ್ಯ

    ಈಕೆಯ ವಯಸ್ಸು ನೀವ್ ಅನ್ಕೊಂಡಿರ ಹಾಗೆ ಇಲ್ಲ!ಶಾಕ್ ಆಗ್ತೀರಾ..ಈ ಲೇಖನಿ ಓದಿ…

    ವಯಸ್ಸಿಗೆ ಸಭಂದಪಟ್ಟ ವಿಷಯ ಬಂದಾಗ ಯಾರನ್ನಾದರೂ ನೋಡಿದ್ರೆ, ಅಂದಾಜು ಅವರ ವಯಸ್ಸನ್ನು ಗುರುತಿಸುವುದು ಕಷ್ಟದ ಕೆಲಸವೇನಲ್ಲ. ಆದ್ರೆ ಕೆಲವೊಬ್ಬರನ್ನು ನೋಡಿದಾಗ ಅದು ಕಷ್ಟ ಸಾಧ್ಯವೆನಿಸಬಹುದು. ಅಂತವರೇ ಆದ ಒಬ್ಬರ ಬಗ್ಗೆ ನಾವು ಹೇಳುತ್ತಿದ್ದೇವೆ.

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…

  • ಸುದ್ದಿ

    ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತ ಸಮಿತಿಗಳ ರಚನೆ – ಡಿಸಿ ಸಸಿಕಾಂತ್ ಸೆಂಥೀಲ್…!

    ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…

  • ಸುದ್ದಿ

    ‘ಕುರಿ’ ಪ್ರತಾಪ್ ಲೈಫಲ್ಲಿ ಫಸ್ಟ್‌ ಟೈಮ್ ಏನೇನೋ ಆಗ್ತಿದೆ..! ಏನೇನ್ ಆಗ್ತಿದೆ ಗೊತ್ತಾ?

    ‘ಕುರಿ’ ಪ್ರತಾಪ್‌ ಈಗ ಸಖತ್ ಟ್ರೆಂಡಿಂಗ್‌ನಲ್ಲಿದ್ದಾರೆ. ಕಾರಣ, ಬಿಗ್ ಬಾಸ್‌. ಅಲ್ಲದೆ, ಕನ್ನಡ ಚಿತ್ರರಂಗದ ಬೇಡಿಕೆಯ ಈ ಹಾಸ್ಯನಟನ ಬದುಕಲ್ಲಿ ಈಗ ಫಸ್ಟ್ ಟೈಮ್ ಏನೇನೋ ಆಗ್ತಿದೆಯಂತೆ! ನಟ ಕುರಿ ಪ್ರತಾಪ್ ವೃತ್ತಿಜೀನವ ಆರಂಭಿಸಿದ್ದು ಕಿರುತೆರೆ ಮೂಲಕ. ಆನಂತರ ಅವರು ಬೆಳ್ಳಿತೆರೆಯಲ್ಲಿ ಬೇಡಿಕೆಯ ಹಾಸ್ಯನಟರಾಗಿ ಮಿಂಚಿದರು. ಬಳಿಕ ಮತ್ತೆ ‘ಮಜಾ ಟಾಕೀಸ್‌’ ಮೂಲಕ ವೀಕ್ಷಕರಿಗೆ ಕಾಮಿಡಿ ಕಚಗುಳಿ ನೀಡಿದರು. ಇದೀಗ ಅವರು ‘ಬಿಗ್ ಬಾಸ್‌’ ಮನೆ ಸೇರಿಕೊಂಡಿದ್ದಾರೆ. ಜತೆಗೆ ಅವರ ಲೈಫಲ್ಲಿ ಫಸ್ಟ್ ಟೈಮ್‌ ಏನೇನೋ ಆಗ್ತಿದೆ!…

  • ಸುದ್ದಿ

    ಅಗ್ನಿಸಾಕ್ಷಿ ಖ್ಯಾತಿಯ ನಟಿ ಪ್ರಿಯಾಂಕಾರಿಗೆ ಒಂದೇ ಒಂದು ಆಸೆ ಇದೆಯಂತೆ, ಏನದುಗೊತ್ತಾ?

    ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್‌ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…