ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟ್ಯಾಟೂ ಇತ್ತೀಚಿನ ದಿನಗಳಲ್ಲಿ ಹಾಕಿಸಿಕೊಳ್ಳುವುದು ಸಾಮಾನ್ಯಾವಾಗಿದೆ. ಅದರಲ್ಲೂ ಕೆಲ ವರ್ಷಗಳ ಹಿಂದೆ ಫ್ಯಾಷನ್ ಲೋಕದಲ್ಲಿ ಟ್ಯಾಟೂ ಹೊಸ ಟ್ರೆಂಡ್ ನ್ನೆ ಹುಟ್ಟುಹಾಕಿತ್ತು. ಟ್ಯಾಟೂವಿನ ಚಿತ್ರಗಳಿಗೆ ಜನ ಮಾರುಹೋಗಿದ್ದರು. ಇನ್ನೂ ಯುವ ಪೀಳೀಗೆಯಂತೂ ಟ್ಯಾಟೂಗಳ ವಿನ್ಯಾಸಕ್ಕೆ ಫುಲ್ ಫಿದಾ ಆಗಿದ್ದರು. ಅಲ್ಲದೆ ಯಾರ ಕೈ ನೋಡಿದರೂ ಕೂಡ ಟ್ಯಾಟೂ ಇರುತ್ತಿತ್ತು. ಇಂತಹ ಟ್ಯಾಟೂ ಪ್ರಿಯರಿಗೆ ಇದೀಗ ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಅದೇನಪ್ಪಾ ಅಂತೀರಾ ?

ಮೊದಲು ಸೆಲೆಬ್ರೆಟಿಗಳಿಂದ ಶುರುವಾದ ಟ್ಯಾಟೂ ಕ್ರೇಜ್ ಬಳಿಕ ಜನ ಸಾಮಾನ್ಯರಿಗೂ ತಲುಪಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಜನರು ಎಚ್ಚರ ವಹಿಸುವುದು ಬಹಳ ಮುಖ್ಯವಾಗಿದೆ. ಹೌದು ನಾವೆಲ್ಲರೂ ಹಾಕಿಸಿಕೊಳ್ಳುತ್ತಿರುವ ಟ್ಯಾಟೂವಿನಿಂದ ಎಚ್ಐವಿ, ಮಲೇರಿಯಾ ಮತ್ತು ಡೆಂಘಿನಂತಹ ಭಯಾನಕ ಮತ್ತು ಮಾರಕ ಕಾಯಿಲೆಗಳಿಗೆ ಕಾರಣವಾಗುತ್ತಿದೆ. ಎಂಬ ಸತ್ಯವನ್ನು ಆ್ಯಕ್ಷನ್ ವೆಲ್ನೆಸ್ ಆರ್ಗನೈಸೇಷನ್ ಸಾಬೀತುಪಡಿಸಿದೆ. ಇನ್ನೂ ಈ ಕಾಯಿಲೆಗಳಿಗೆ ಮುಖ್ಯ ಕಾರಣವೆಂದರೆ ನಿರ್ಲಕ್ಷ್ಯ.

ಟ್ಯಾಟೂ ಬಗೆಗೆ ಏನೂ ತಿಳಿಯದೇ ಎಷ್ಟೋ ಮಂದಿ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದರೆ ಹಚ್ಚೆ ಹಾಕಿಸಿಕೊಳ್ಳುವ ವೇಳೆ ಕೊಂಚವು ಸಹ ಕಾಳಜಿ ವಹಿಸುವುದಿಲ್ಲ. ಎಂಬುವುದೇ ಈ ಎಲ್ಲಾ ಕಾಯಿಲೆಗಳಿಗೆ ಮುಖ್ಯ ಕಾರಣವಾಗಿದೆ.ಟ್ಯಾಟೂ ಹಾಕಲು ಇಂಕು ಮತ್ತು ಸೂಜಿ ಮುಂತಾದ ಕಾರಣಗಳಿಂದ ರೋಗಗಳು ಹರಡುತ್ತವೆ. ಇನ್ನೂ ಆರಂಭದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವಾಗ ಮಾಡುವ ನಿರ್ಲಕ್ಷ್ಯ ಭವಿಷ್ಯದಲ್ಲಿ ನಿಮಗೆ ಕೇಡುಕಾಗಬಹುದು.

ಸಾಮನ್ಯವಾಗಿ ಟ್ಯಾಟೂ ಹಾಕುವಾಗ ಚರ್ಮದೊಳಗೆ ಬಣ್ಣವನ್ನು ಹಾಕುತ್ತಾರೆ. ಇದರಿಂದಾಗಿ ಸೂಜಿ ಚುಚ್ಚಿ ರಕ್ತದ ಸಂಪರ್ಕದಲ್ಲಿರುತ್ತದೆ. ನಿಮಗಿಂತ ಮೊದಲು ಬಂದಿದ್ದ ವ್ಯಕ್ತಿ ಎಚ್ಐವಿ, ಮಲೇರಿಯಾ ಮತ್ತು ಡೆಂಘಿ ರೋಗಗಳಿದ್ದರೆ , ಅವರಿಗೆ ಇದೇ ಸೂಜಿಯನ್ನು ಬಳಸಿದ್ದರೆ ಅವರಿಗಿದ್ದ ರೋಗಗಳು ನಿಮಗೆ ಹರಡುವುದರಲ್ಲಿ ಯಾವುದೇ ರೀತಿಯ ಸಂದೇಹವಿಲ್ಲ.ಹಾಗಾಗಿ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಟ್ಯಾಟೂ ಸೂಜಿಯನ್ನು ಸರಿಯಾಗಿ ಸ್ವಚ್ಛಗೊಳಿಸಿದ್ದಾನೆಯೇ ಎಂದು ಗಮನಿಸಬೇಕು. ಇಲ್ಲ ಹೊಸ ಸೂಜಿಯನ್ನು ಬಳಸಿದರೆ ಇನ್ನೂ ಉತ್ತಮ.

ಆದರೆ ಸ್ವಚ್ಛಗೊಳಿಸದ ಹಳೆಯ ಸೂಜಿಯನ್ನು ಯಾವುದೇ ಕಾರಣಕ್ಕೂ ಬಳಸಬೇಡಿ.ಟ್ಯಾಟೂ ಹಾಕುವ ವೇಳೆ ಸೂಜಿ ಬಳಕೆ ಬಗ್ಗೆ ಅತೀ ಎಚ್ಚರವಹಿಸಬೇಕು. ಜೊತೆಗೆ ಹಚ್ಚೆ ಹಾಕುವ ಮೊದಲು, ಟ್ಯಾಟೂ ಮಿಶನ್ನ್ನು ಸ್ವಚ್ಛತಾ ಕ್ರಿಮಿನಾಶಕ ಬಳಸಿ ಶುದ್ಧಗೊಳಿಸಿದ್ದಾನೆಯೇ ಎಂದು ಪರೀಕ್ಷಿಸಿ,ಹಾಗೆಯೇ ಹಚ್ಚೆ ಹಾಕಿಸಿಕೊಳ್ಳಬೇಕಾದ ನಿಮ್ಮ ದೇಹದ ಭಾಗವನ್ನು ಸಹ ಸಂಪೂರ್ಣ ಸ್ವಚ್ಛಗೊಳಿಸಲು ಮರೆಯಬೇಡಿ.

ಅಲ್ಲದೆ ಲೈಸೆನ್ಸ್ ಪಡೆದಿರುವ ಟ್ಯಾಟೂ ಆರ್ಟಿಸ್ಟ್ಗಳಿಂದ ಮಾತ್ರ ಹಚ್ಚೆ ಹಾಕಿಸಿಕೊಳ್ಳಿ. ಯಾವುದೇ ಕಾರಣಕ್ಕೂ ರಸ್ತೆಬದಿಯಲ್ಲಿ ಹಚ್ಚೆ ಹಾಕಿಸಿಕೊಳ್ಳುವವರ ಹತ್ತಿರ ಹಚ್ಚೆ ಹಾಕಿಸಿಕೊಳ್ಳಬೇಡಿ. ಕಾರಣ ಇಂತಹ ಸ್ಥಳಗಳಲ್ಲಿ ಕಳಪೆ ಇಂಕ್ ಗುಣಮಟ್ಟ ಕಡಿಮೆ ಇರುತ್ತದೆ ಜೊತೆಗೆ ಒಂದೇ ಸೂಜಿಯಲ್ಲಿ ಎಷ್ಟೊ ಜನರಿಗೆ ಹಚ್ಚೆ ಹಾಕಿರುತ್ತಾರೆ.ಹಾಗೆಯೇ ಟ್ಯಾಟೂ ಹಾಕಿಸಿಕೊಳ್ಳುವ ಮೊದಲು ಮದ್ಯಪಾನ ಅಥವಾ ಕೆಫೇನ್ ಅಂಶವಿರುವ ವಸ್ತುಗಳನ್ನು ಸೇವಿಸಬಾರದು. ಆದರೆ ಟ್ಯಾಟೂ ಹಾಕಿಸಿಕೊಳ್ಳುವ ಮುನ್ನ ಸಾಕಷ್ಟು ನೀರು ಕುಡಿಯಬೇಕಿರುವುದು ಅತ್ಯವಶ್ಯಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ನಟರಾದ ದರ್ಶನ್ ಮತ್ತು ಯಶ್ ಸಾಥ್ ನೀಡಿದ್ದಾರೆ. ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಕೆಯ ವೇಳೆ ಜನಸಾಗರವೇ ಹರಿದು ಬಂದಿದ್ದು, ಶಕ್ತಿ ಪ್ರದರ್ಶನದ ಮೂಲಕ ಸುಮಲತಾ ಚುನಾವಣಾ ರಣಕಹಳೆ ಮೊಳಗಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ನಡೆದ ಸಮಾವೇಶದಲ್ಲಿ ಮಾತನಾಡಿದ ದರ್ಶನ್, ನಾನು ಇಲ್ಲಿ ನಿಂತಿದ್ದಕ್ಕೆ ಹಳೆ ಮ್ಯಾಟರ್ ಓಪನ್ ಆಗುತ್ತಿದೆ. ಅದಕ್ಕೆಲ್ಲ ತಲೆಕೆಡಿಸಿಕೊಳ್ಳಲ್ಲ, ಅದೂ ಆಗಲಿ, ಅದರಿಂದ ಖುಷಿ,…
ಇಂದು ಡಿಸೆಂಬರ್ 29 ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರ 113 ನೇ ಜನ್ಮದಿನ. ವಿಶೇಷ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ ಮಹಾನ್ ಕವಿಗೆ ಗೂಗಲ್ ವಿಶೇಷ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…
ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…
![]()
ಜಿಲ್ಲೆಯಲ್ಲಿ ಮತ್ತೆ ಜೋಡೆತ್ತು ಸದ್ದು ಮಾಡಿದ್ದು, ರಾಜಕೀಯವಾಗಿ ಅಲ್ಲದೆ ಜೋಡೆತ್ತುಗಳು ಮಾನವೀಯತೆ ಮೆರೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ರಾಕಿಂಗ್ ಸ್ಟಾರ್ ಗೋಮಾತೆ ಸೇವೆಗೆ ಸಿದ್ಧರಾಗಿದ್ದಾರೆ. ನಟ ದರ್ಶನ್ ಕಳೆದ ದಿನ ಚೈತ್ರ ಗೋಶಾಲೆಗೆ ಸುಮಾರು 15 ಟ್ರ್ಯಾಕ್ಟರ್ ಭತ್ತದ ಹುಲ್ಲನ್ನು ಅನುದಾನ ಮಾಡಿದ್ದರು. ಇದೀಗ ನಟ ಯಶ್ ಕೂಡ ಚೈತ್ರ ಗೋಶಾಲೆಗೆ ಸಹಾಯ ಮಾಡುತ್ತಿದ್ದಾರೆ. ಈ ಮೂಲಕ ಮಂಡ್ಯದ ಚೈತ್ರ ಗೋಶಾಲೆಗೆ ದರ್ಶನ್ ಮತ್ತು ಯಶ್ ಬೆಳಕಾಗಿದ್ದಾರೆ. ಯಶ್ ಪಾಂಡವಪುರದ ತಾಲೂಕಿನ ದೊಡ್ಡಬ್ಯಾಡರಹಳ್ಳಿಯಲ್ಲಿರುವ ಚೈತ್ರ ಗೋಶಾಲೆಯ…
ನಮ್ಮ ಹಿರಿಯರು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಬಾರದು ಎಂದು ನಮಗೆ ತಿಳಿಸುತ್ತಾರೆ. ಸಾಮಾನ್ಯವಾಗಿ ಪೂರ್ವ ದಿಕ್ಕಿಗೆ ಅಥವಾ ದಕ್ಷಿಣ ದಿಕ್ಕಿಗೆ ತಲೆ ಹಾಕಿ ಮಲಗಿಕೊಳ್ಳುವುದು ನಮ್ಮ ಹಿಂದೂ ಧರ್ಮದಲ್ಲಿ ವಾಡಿಕೆಯಾಗಿದೆ. ನಾವು ಉತ್ತರ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಭೂತ ಪ್ರೇತಗಳು ನಮ್ಮನ್ನು ಆವರಿಸುತ್ತವೆ ಎಂಬ ಮೂಢನಂಬಿಕೆಗಳಿವೆ. ಅಲ್ಲದೆ ಪುರಾಣದಲ್ಲಿ ಗಣೇಶನಿಗೆ ತೊಡಿಸಿದ ಆನೆಯ ತಲೆಯನ್ನು ಕಡಿದಿದ್ದು ಸಹ ಅದು ಉತ್ತರಕ್ಕೆ ತಲೆ ಹಾಕಿ ಮಲಗಿದ್ದರಿಂದ. ಈ ಕಾರಣಕ್ಕೆ ನಾವು ಉತ್ತರಕ್ಕೆ ತಲೆ ಹಾಕಿ ಮಲಗಿದರೆ…