ಸುದ್ದಿ

ಹೊಟ್ಟೆಯ ಬೊಜ್ಜು ಕರಗಿಸುವಂತಹ ಸುಲಭ ಉಪಾಯಗಳು,.ಇದನ್ನೊಮ್ಮೆ ಅನುಸರಿಸಿ ನೋಡಿ,.!

97

ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್​ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ.

ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ ಅಂಗಗಳು, ಲಿವರ್, ಜೀರ್ಣಾಂಗವ್ಯೂಹ, ಕರುಳು ಹಾಗೂ ಅದರ ಸುತ್ತ ಹಾಗೂ ಒಳಭಾಗದಲ್ಲೂ ಸಂಗ್ರಹವಾಗಿರುವ ಕೊಬ್ಬು. ಇದನ್ನು ತಿಳಿದುಕೊಳ್ಳಲು ಸರಳ ಪರೀಕ್ಷೆ ಎಂದರೆ ಸೊಂಟದ ಸುತ್ತಳತೆಯ ಪರೀಕ್ಷೆ. ಗಂಡಸರಲ್ಲಿ ಸಾಮಾನ್ಯವಾಗಿ 40 ಇಂಚಿಗಿಂತ ಜಾಸ್ತಿ ಹೊಟ್ಟೆಯ ಸುತ್ತಳತೆ ಇದ್ದಲ್ಲಿ ಇವರಿಗೆ ವಿಸರಲ್ ಫ್ಯಾಟ್ ಇದೆ ಎನ್ನಬಹುದು. ಇನ್ನು ಹೆಂಗಸರಲ್ಲಿ ಹೊಟ್ಟೆಯ ಸುತ್ತಳತೆ 30 ಇಂಚಿಗಿಂತ ಹೆಚ್ಚಿದ್ದರೆ ಹೊಟ್ಟೆಯ ಒಳ ಅಂಗಗಳಲ್ಲಿರುವ ಕೊಬ್ಬಿನ ಮಟ್ಟ ಹೆಚ್ಚಿದೆ ಎನ್ನಬಹುದು. ಇದನ್ನು ಕಡಿಮೆ ಮಾಡುವ ಪರಿಹಾರಗಳನ್ನು ತಿಳಿಯೋಣ.

  • ಒಂದು ಲೋಟ ನೀರಿಗೆ ಒಂದು ಚಮಚ ಆಪಲ್​ಸಿಡರ್ ವಿನೆಗರ್ ಹಾಕಿ ಬೆಳಗ್ಗೆ ತಿಂಡಿ, ಮಧ್ಯಾಹ್ನ ಊಟ, ರಾತ್ರಿ ಊಟದ ಮೊದಲು ಮೂರು ತಿಂಗಳ ಕಾಲ ಕುಡಿಯಬೇಕು.
  • ಒಂದು ಕಪ್ ಮೊಸರಿಗೆ ಕಾಮಕಸ್ತೂರಿ ಬೀಜ ಹಾಕಿ ಪ್ರತಿನಿತ್ಯ ಸೇವಿಸಬೇಕು.
  • 250 ಮಿ.ಲೀ. ನೀರನ್ನು ಕುದಿಸಬೇಕು. ನಂತರ ಸ್ಟವ್​ನ್ನು ಆಪ್ ಮಾಡಿ ಪಾತ್ರೆಯನ್ನು ಕೆಳಗಡೆ ಇಳಿಸಿ ಗ್ರೀನ್ ಟೀ ಎಲೆ ಹಾಕಬೇಕು. 3 ನಿಮಿಷದ ನಂತರ ಅದಕ್ಕೆ ಲಿಂಬು ರಸ ಮತ್ತು ಜೇನುತುಪ್ಪ ಸೇರಿಸಿ ಕುಡಿಯಬಹುದು. ಇದನ್ನು ದಿನಕ್ಕೆ ಎರಡು ಬಾರಿ ಬೆಳಗ್ಗೆ, ಮಧ್ಯಾಹ್ನ ಆಹಾರದ ಮೊದಲು ಸೇವಿಸಬೇಕು.
  • ಪ್ರತಿನಿತ್ಯ ಆಹಾರದ ಮೊದಲು 3 ಬಾರಿ 2 ಚಮಚ ವರ್ಜಿನ್ ಕೊಕೊನಟ್ ಆಯಿಲ್ ಸೇವಿಸಬೇಕು.
  • ಆಹಾರದಲ್ಲಿ ಪ್ರೋಟೀನ್ ಅಂಶ, ಬೇಯಿಸಿದ ಮೊಳಕೆಕಾಳಿನ ಸೇವನೆ ಹೆಚ್ಚಿಸಬೇಕು. ಪನ್ನೀರ್ ಪ್ರೋಟೀನ್​ನ ಆಗರ. ಪ್ರೋಟೀನ್ ಪುಡಿ, ಬಾಳೆಹಣ್ಣು, ಹಾಲಿನ ಕೆನೆ, ಬಾದಾಮಿ ಇವನ್ನು ಹಾಕಿ ಮಾಡಿದ ಮಿಲ್ಕ್ ಶೇಕ್ ಆಹಾರದ ಮೊದಲು ಕುಡಿಯುವುದು ಅನುಕೂಲ.ಒಂದು ಲೋಟ ಬೆಚ್ಚಗಿನ ನೀರಿಗೆ ಲಿಂಬೆರಸ, ಜೇನುತುಪ್ಪ ಬೆರೆಸಿ ಒಂದು ಚಮಚ ಕಾಳುಮೆಣಸಿನ ಪುಡಿ, ಒಣ ಶುಂಠಿ, ಕಾಮಕಸ್ತೂರಿ ಬೀಜ, ಪುದಿನ ಎಲೆ ಹಾಕಿ ಸೇವಿಸಬೇಕು.
  • ಬಾಳೆದಿಂಡಿನ ರಸದ ಜೊತೆ ಜ್ಯೇಷ್ಠಮಧುವಿನ ಪುಡಿ ಹಾಕಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು. ್ಝ ಆಹಾರದಲ್ಲಿ ಸೊಪ್ಪು, ನಟ್ಸ್, ಬೆಣ್ಣೆಹಣ್ಣು, ತೆಂಗಿನ ತುರಿ, ನಾರಿನಂಶವಿರುವ ಪದಾರ್ಥ, ಮಾಂಸಹಾರಿಗಳಾಗಿದ್ದಲ್ಲಿ ಬೇಯಿಸಿದ ಮೊಟ್ಟೆ ಮುಂತಾದ ಪದಾರ್ಥ ಹೆಚ್ಚು ಸೇವಿಸಬಹುದು.
  • ಪ್ರತಿನಿತ್ಯ ಕಾರ್ಡಿಯೋ ವ್ಯಾಯಾಮ ಮಾಡುವುದು ಒಳ್ಳೆಯದು. ಆಹಾರದಲ್ಲಿ ಕಾಬೋಹೈಡ್ರೇಟ್ ಅಂಶ ಕಡಿಮೆ ಮಾಡಿ ಒಳ್ಳೆಯ ಕೊಬ್ಬಿನ ಅಂಶ ಹೆಚ್ಚಿಸುವುದು ಮುಖ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪೆಟ್ರೋಲ್ ಬೇಕು ಅಂದ್ರೆ ಈ ನಿಯಮವನ್ನು ಪಾಲಿಸಲೇಬೇಕು …!

    ಬೆಂಗಳೂರು:  ಜನರಿಗೆ ಅನುಕೂಲ ಆಗಲಿ ಅಂತ ಸರ್ಕಾರ ಮತ್ತು ಪೊಲೀಸರು ಅನೇಕ ಕಾನೂನುಗಳನ್ನು ಜಾರಿಗೆ ತರ್ತಾರೆ.. ಆದರೆ ಅದನ್ನ ಪಾಲಿಸೋದು ಮಾತ್ರ ಕಡಿಮೆ. ಇದೀಗ ಸಂಚಾರಿ ಪೊಲೀಸರು ಮತ್ತೊಂದು ಕಾನೂನು ಜಾರಿಗೆ ಕೈ ಹಾಕ್ತಿದ್ದಾರೆ. ಬೈಕ್ ಸವಾರರ ಸೇಫ್ಟಿಗಾಗಿ ಪೊಲೀಸರ ಹೊಸ ಪ್ರಯೋಗ..! ದಿನದಿಂದ ದಿನಕ್ಕೆ ಬೆಳೀತಿರೋ ಸಿಲಿಕಾನ್ ಸಿಟಿ ಬೆಂಗಳೂರು ವಿಶ್ವದಲ್ಲೇ ಅತೀ ಹೆಚ್ಚು ಬೈಕ್‌ಗಳನ್ನು ಹೊಂದಿರೋ ನಗರ. ಹೀಗಾಗಿ ಬೆಂಗಳೂರಿನಲ್ಲಿ ಆ್ಯಕ್ಸಿಡೆಂಟ್ ಕೂಡ ಹೆಚ್ಚಾಗ್ತಿದೆ. ಅಪಘಾತ ತಪ್ಪಿಸಲು ಎಷ್ಟೇ ಕಾನೂನು ಜಾರಿಗೆ ತಂದರು ಅನುಷ್ಠಾನ…

  • ಸಿನಿಮಾ, ಸುದ್ದಿ

    ಮೆಗಾ ಸ್ಟಾರ್ ಚಿರಂಜೀವಿ ಮನೆಯಲ್ಲಿ ಸಂಭ್ರಮ, 80ರ ದಶಕದ ತಾರೆಯರ ಸಮಾಗಮ!

    ಚಿತ್ರ  ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ  ಮತ್ತು  ಚಿತ್ರರಂಗ ವಲಯದಿಂದ ಸಹ  ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ      ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…

  • ಸುದ್ದಿ

    ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

    ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ!

  • ರಾಜಕೀಯ, ಸುದ್ದಿ

    ಪಕ್ಷೇತರ ಅಭ್ಯರ್ಥಿ,ಏಪ್ರಿಲ್ 16ರಂದು ತಮ್ಮ ಕಡೆಯವರಿಂದಲೇ ಕಲ್ಲು ಹೊಡೆಸಿಕೊಂಡು ಮತದಾರರ ಅನುಕಂಪ ಗಿಟ್ಟಿಸಿಕೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿಯಿಂದ ಗಂಭೀರ ಆರೋಪ..!

    ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಹಾಗೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಇಡೀ ದೇಶದ  ಗಮನ ಸೆಳೆಯುತ್ತಿದೆ. ಉಭಯ ಪಕ್ಷಗಳ ಅಭ್ಯರ್ಥಿಗಳು ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದು, ಈ ಮೊದಲು ಸುಮಲತಾ ಅಂಬರೀಶ್, ಜೆಡಿಎಸ್ ನಾಯಕರು ಫೋಟೋ ಹಾಗೂ ವಿಡಿಯೋ ಮಾರ್ಫ್ ಮಾಡುವ ಮೂಲಕ ತಮ್ಮ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೀಳುಮಟ್ಟದ ಪ್ರಚಾರ ನಡೆಸಲು ಸಿದ್ಧತೆ ನಡೆಸಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಮೈತ್ರಿ ಪಕ್ಷದ ಅಭ್ಯರ್ಥಿ ಹಾಗೂ…

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…