ಸುದ್ದಿ

ಇವತ್ತಿಗೆ ನನಸಾಯ್ತು ನನ್ನ 30 ವರ್ಷಗಳ ಅರಣ್ಯದ ಕನಸು – ಸದಾಶಿವ ಮರಿಕೆ,.!

36

ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ.

ಪರಿಸರದ ಬಗ್ಗೆ ಅತಿಯಾದ ಕಾಳಜಿ ಇರುವ ಸದಾಶಿವ ಮರಿಕೆ ತಮ್ಮಿಂದ ಏನಾದರೂ ಈ ಪ್ರಕೃತಿಗೆ ಅಳಿಲು ಸೇವೆ ಮಾಡಬೇಕೆಂದು ಕಳೆದ 30 ವರ್ಷಗಳ ಹಿಂದೆ ಕಂಡಿದ್ದ ಕನಸನ್ನು ಇದೀಗ ನನಸಾಗಿಸಿದ್ದಾರೆ. ನಾಶವಾಗುತ್ತಿರುವ ಪರಿಸರವನ್ನು ಉಳಿಸಬೇಕು, ಜೊತೆಗೆ ಪ್ರಾಣಿ ಪಕ್ಷಿಗಳಿಗೆ ಅದರಿಂದ ಸಹಕಾರಿ ಆಗಬೇಕೆಂದುಕೊಂಡ ಸದಾಶಿವರವರು ಅದಕ್ಕಾಗಿ ದಟ್ಟ ಅರಣ್ಯವನ್ನು ಮಾಡಬೇಕೆಂದು ಪಣ ತೊಟ್ಟಿದ್ದರು. ಅದರಂತೆ ತಮ್ಮ ಪೂರ್ವಜರಿಂದ ಬಂದಿರುವ ಒಟ್ಟು 25 ಎಕರೆ ಜಮೀನಿನ ಪೈಕಿ ಕೃಷಿ ರಹಿತ ಹತ್ತು ಎಕರೆ ಬರಡು ಭೂಮಿಯಲ್ಲಿ ಕಾಡು ಬೆಳೆಸಬೇಕೆಂದು ನಿರ್ಧರಿಸಿದ್ದರು. ಅದಕ್ಕಾಗಿ ಕಾಡಿನಲ್ಲಿರುವ ವಿವಿಧ ತಳಿಯ ಮರಗಳ ಗಿಡಗಳನ್ನು ತಂದು ಗುಡ್ಡದ ಉದ್ದಕ್ಕೂ ನೆಟ್ಟಿದ್ದರು.

30 ವರ್ಷಗಳ ಸತತ ಪರಿಶ್ರಮದ ಬಳಿಕ ಗಿಡಗಳು ಮರವಾಗಿ ಬೆಳೆದಿದ್ದು ಇದೀಗ ದಟ್ಟ ಅರಣ್ಯವಾಗಿದೆ. ತಮ್ಮ ಸ್ವಂತ ಜಮೀನಿನಲ್ಲೇ ಅರಣ್ಯ ಇಲಾಖೆ ಹಾಗೂ ಸರ್ಕಾರವನ್ನು ನಾಚಿಸುವಂತಹ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇದರಿಂದಾಗಿ ಒಂದೆಡೆ ಸಮೃದ್ಧ ಕಾಡು, ಅದರಿಂದಾಗಿ ಜಮೀನಿನಲ್ಲಿ ನೀರಿನ ಉತ್ಪತ್ತಿಯೂ ಆಗಿದೆ. ಇದೀಗ ತಾವೇ ಬೆಳೆಸಿದ ದಟ್ಟ ಅರಣ್ಯದಲ್ಲಿ ಪ್ರತಿದಿನ ಒಂದು ಸುತ್ತು ಹೊಡೆಯುವ ಸದಾಶಿವರವರು ಅರಣ್ಯದಿಂದ ತೃಪ್ತಿ ಕಂಡಿದ್ದಾರೆ. ಕಾಡಿನಲ್ಲಿ ಹಕ್ಕಿಗಳ ಇಂಚರ, ಚಿಲಿಪಿಲಿಯ ನಾದ ಕೇಳುತ್ತಾರೆ. ಭೂಮಿಯಲ್ಲಿ ಕಾಡು, ಹಸಿರು ಇಲ್ಲದೇ ಇದ್ದರೆ ಮನುಷ್ಯನ ಉಳಿವು ಸಾಧ್ಯವಿಲ್ಲ ಎಂಬುವುದು ಸದಾಶಿವ ಅವರ ಮಾತು.

ಆರಂಭದಲ್ಲಿ ಜಮೀನಿನ ಮಧ್ಯೆ ಇದ್ದ ಕೆರೆಯಿಂದಲೇ ಗಿಡಗಳಿಗೆ ನೀರುಣಿಸುತ್ತಿದ್ದರು. ಬೇಸಿಗೆಯಲ್ಲಿ ನೀರು ಪೂರೈಸುವುದು ಕಷ್ಟವೂ ಆಗಿತ್ತು. ಆದರೆ ಕಾಡು ಬೆಳೆದಂತೆ ಜಮೀನಿನಲ್ಲಿ ನೀರಿನ ಸಮಸ್ಯೆಯೂ ಇಲ್ಲದಾಗಿದೆ. ಕಾಡಿನ ಮಧ್ಯೆ ಬಿದ್ದ ಮಳೆ ನೀರು ಅಲ್ಲಿಯೇ ಇಂಗುವಂತೆ ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ಈಗ ಒಂದೆಡೆ ಸಮೃದ್ಧ ಕಾಡು, ಇನ್ನೊಂದೆಡೆ ಯಾವ ಬರಗಾಲ ಬಂದರೂ ಕಡಿಮೆಯಾಗದಷ್ಟು ಯಥೇಚ್ಛ ನೀರು ಜಮೀನಿನಲ್ಲಿ ಸೃಷ್ಟಿಯಾಗಿದ್ದು ಕೃಷಿ ಬದುಕಿನಲ್ಲಿ ಸಂತೃಪ್ತಿ ಕಂಡಿದ್ದಾರೆ. ಇವರ ದಟ್ಟ ಕಾಡಿನಿಂದಾಗಿ ಅಕ್ಕಪಕ್ಕದ ಜಮೀನುಗಳಲ್ಲಿಯೂ ಅಂತರ್ಜಲ ಮಟ್ಟ ಹೆಚ್ಚಾಗಿದೆ.

ಕಾಡು ಕಡಿದು ನಾಶ ಮಾಡುವ ಸರ್ಕಾರ, ತಮ್ಮ ಜಮೀನುಗಳಲ್ಲಿ ಬೆಳೆದು ನಿಂತ ಮರಗಳನ್ನು ಕಡಿದು ಮಾರಾಟ ಮಾಡೋ ಜನಸಾಮಾನ್ಯರ ಮಧ್ಯೆ ಸದಾಶಿವ ಮರಿಕೆ ತಮ್ಮದೇ ಜಾಗದಲ್ಲಿ ದಟ್ಟಾರಣ್ಯವನ್ನೇ ಬೆಳೆಸಿ ಗಮನ ಸೆಳೆದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ. ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ..!

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….

  • ಸಿನಿಮಾ

    ಸ್ಯಾಂಡಲ್ ವುಡ್ ನಟರ ಮನೆಯ ಮೇಲೆ ಐಟಿ ದಾಳಿ…ರೊಚ್ಚಿಗೆದ್ದ ಅಭಿಮಾನಿಗಳು ಮೋದಿಯವರಿಗೆ ಹೇಳಿದ್ದೇನು ಗೊತ್ತೆ?

    ಇಂದು ಮುಂಜಾನೆ ಸ್ಯಾಂಡಲ್ ವುಡ್ ಸ್ಟಾರ್ ನಟರು ಗಳಾದ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ , ಪವರ್ ಪುನೀತ್ ರಾಜಕುಮಾರ್, ರಾಕಿಂಗ್ ಸ್ಟಾರ್ ಯಶ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮನೆಯ ಮೇಲೆ ಐಟಿ ದಾಳಿ ನಡೆದಿದೆ. ಅಲ್ಲದೆ ನಿರ್ಮಾಪಕರುಗಳಾದ ಕೆಜಿಎಫ್ ಖ್ಯಾತಿಯ ಸ್ಟಾರ್ ನಿರ್ಮಾಪಕರಾದ ಕಿರಂಗದೂರ್ ವಿಜಯ್, ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯ ಮೇಲೂ ಸಹ ದಾಳಿ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಬ್ಲ್ಯಾಕ್ ಮನಿಯನ್ನು ವೈಟ್ ಮನಿ ಆಗಿ ಬದಲಾವಣೆ…

  • ಗ್ಯಾಜೆಟ್

    ಈ 6 ವಿಷಯ ನಿಮ್ಗೆ ಗೊತ್ತಿದ್ರೆ ನಿಮ್ಮ ಮೊಬೈಲ್ ನಲ್ಲಿ ಡಿಲೀಟ್ ಆದ ಫೋಟಗಳು ಮತ್ತೆ ಸಿಗುತ್ತೆ. ತಿಳಿಯಲು ಈ ಲೇಖನ ಓದಿ….

    ಎಲ್ಲರೂ ಎಲ್ಲೆಂದರಲ್ಲೇ ತಮಗಿಷ್ಟ ಬಂದಂತೆ ಫೋಟೋಗಳನ್ನು ತೆಗೆಯುತ್ತಾರೆ. ಆ ಫೋಟೋಗಳಲ್ಲಿ ತಮಗಿಷ್ಟವಾದ ಕೆಲುವು ಫೋಟೋಗಳನ್ನು ತಮ್ಮ ಮೊಬೈಲ್ ಗ್ಯಾಲರಿಯಲ್ಲಿ ಸೇವ್ ಮಾಡಿರುತ್ತಾರೆ. ತಮ್ಮ ಸವಿ ನೆನುಪು ಗಳಿಗೋಸ್ಕರ ಆ ಫೋಟೋಗಳನ್ನು ತುಂಬಾ ಜಾಗರೂಕತೆಯಿಂದ ಕಾಪಾಡಿಕೊಂಡು ಬಂದಿರುತ್ತಾರೆ.

  • ಸರ್ಕಾರದ ಯೋಜನೆಗಳು

    ಈ ವರ್ಷದ ಕೊನೆಯೊಳಗೆ 5 ಸಾವಿರ ಸೈಟ್ ಹಂಚಿಕೆ ..!ತಿಳಿಯಲು ಈ ಲೇಖನ ಓದಿ..

    ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್‌ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…