ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ.

ಪರಿಸರದ ಬಗ್ಗೆ ಅತಿಯಾದ ಕಾಳಜಿ ಇರುವ ಸದಾಶಿವ ಮರಿಕೆ ತಮ್ಮಿಂದ ಏನಾದರೂ ಈ ಪ್ರಕೃತಿಗೆ ಅಳಿಲು ಸೇವೆ ಮಾಡಬೇಕೆಂದು ಕಳೆದ 30 ವರ್ಷಗಳ ಹಿಂದೆ ಕಂಡಿದ್ದ ಕನಸನ್ನು ಇದೀಗ ನನಸಾಗಿಸಿದ್ದಾರೆ. ನಾಶವಾಗುತ್ತಿರುವ ಪರಿಸರವನ್ನು ಉಳಿಸಬೇಕು, ಜೊತೆಗೆ ಪ್ರಾಣಿ ಪಕ್ಷಿಗಳಿಗೆ ಅದರಿಂದ ಸಹಕಾರಿ ಆಗಬೇಕೆಂದುಕೊಂಡ ಸದಾಶಿವರವರು ಅದಕ್ಕಾಗಿ ದಟ್ಟ ಅರಣ್ಯವನ್ನು ಮಾಡಬೇಕೆಂದು ಪಣ ತೊಟ್ಟಿದ್ದರು. ಅದರಂತೆ ತಮ್ಮ ಪೂರ್ವಜರಿಂದ ಬಂದಿರುವ ಒಟ್ಟು 25 ಎಕರೆ ಜಮೀನಿನ ಪೈಕಿ ಕೃಷಿ ರಹಿತ ಹತ್ತು ಎಕರೆ ಬರಡು ಭೂಮಿಯಲ್ಲಿ ಕಾಡು ಬೆಳೆಸಬೇಕೆಂದು ನಿರ್ಧರಿಸಿದ್ದರು. ಅದಕ್ಕಾಗಿ ಕಾಡಿನಲ್ಲಿರುವ ವಿವಿಧ ತಳಿಯ ಮರಗಳ ಗಿಡಗಳನ್ನು ತಂದು ಗುಡ್ಡದ ಉದ್ದಕ್ಕೂ ನೆಟ್ಟಿದ್ದರು.

30 ವರ್ಷಗಳ ಸತತ ಪರಿಶ್ರಮದ ಬಳಿಕ ಗಿಡಗಳು ಮರವಾಗಿ ಬೆಳೆದಿದ್ದು ಇದೀಗ ದಟ್ಟ ಅರಣ್ಯವಾಗಿದೆ. ತಮ್ಮ ಸ್ವಂತ ಜಮೀನಿನಲ್ಲೇ ಅರಣ್ಯ ಇಲಾಖೆ ಹಾಗೂ ಸರ್ಕಾರವನ್ನು ನಾಚಿಸುವಂತಹ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇದರಿಂದಾಗಿ ಒಂದೆಡೆ ಸಮೃದ್ಧ ಕಾಡು, ಅದರಿಂದಾಗಿ ಜಮೀನಿನಲ್ಲಿ ನೀರಿನ ಉತ್ಪತ್ತಿಯೂ ಆಗಿದೆ. ಇದೀಗ ತಾವೇ ಬೆಳೆಸಿದ ದಟ್ಟ ಅರಣ್ಯದಲ್ಲಿ ಪ್ರತಿದಿನ ಒಂದು ಸುತ್ತು ಹೊಡೆಯುವ ಸದಾಶಿವರವರು ಅರಣ್ಯದಿಂದ ತೃಪ್ತಿ ಕಂಡಿದ್ದಾರೆ. ಕಾಡಿನಲ್ಲಿ ಹಕ್ಕಿಗಳ ಇಂಚರ, ಚಿಲಿಪಿಲಿಯ ನಾದ ಕೇಳುತ್ತಾರೆ. ಭೂಮಿಯಲ್ಲಿ ಕಾಡು, ಹಸಿರು ಇಲ್ಲದೇ ಇದ್ದರೆ ಮನುಷ್ಯನ ಉಳಿವು ಸಾಧ್ಯವಿಲ್ಲ ಎಂಬುವುದು ಸದಾಶಿವ ಅವರ ಮಾತು.

ಆರಂಭದಲ್ಲಿ ಜಮೀನಿನ ಮಧ್ಯೆ ಇದ್ದ ಕೆರೆಯಿಂದಲೇ ಗಿಡಗಳಿಗೆ ನೀರುಣಿಸುತ್ತಿದ್ದರು. ಬೇಸಿಗೆಯಲ್ಲಿ ನೀರು ಪೂರೈಸುವುದು ಕಷ್ಟವೂ ಆಗಿತ್ತು. ಆದರೆ ಕಾಡು ಬೆಳೆದಂತೆ ಜಮೀನಿನಲ್ಲಿ ನೀರಿನ ಸಮಸ್ಯೆಯೂ ಇಲ್ಲದಾಗಿದೆ. ಕಾಡಿನ ಮಧ್ಯೆ ಬಿದ್ದ ಮಳೆ ನೀರು ಅಲ್ಲಿಯೇ ಇಂಗುವಂತೆ ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ಈಗ ಒಂದೆಡೆ ಸಮೃದ್ಧ ಕಾಡು, ಇನ್ನೊಂದೆಡೆ ಯಾವ ಬರಗಾಲ ಬಂದರೂ ಕಡಿಮೆಯಾಗದಷ್ಟು ಯಥೇಚ್ಛ ನೀರು ಜಮೀನಿನಲ್ಲಿ ಸೃಷ್ಟಿಯಾಗಿದ್ದು ಕೃಷಿ ಬದುಕಿನಲ್ಲಿ ಸಂತೃಪ್ತಿ ಕಂಡಿದ್ದಾರೆ. ಇವರ ದಟ್ಟ ಕಾಡಿನಿಂದಾಗಿ ಅಕ್ಕಪಕ್ಕದ ಜಮೀನುಗಳಲ್ಲಿಯೂ ಅಂತರ್ಜಲ ಮಟ್ಟ ಹೆಚ್ಚಾಗಿದೆ.
ಕಾಡು ಕಡಿದು ನಾಶ ಮಾಡುವ ಸರ್ಕಾರ, ತಮ್ಮ ಜಮೀನುಗಳಲ್ಲಿ ಬೆಳೆದು ನಿಂತ ಮರಗಳನ್ನು ಕಡಿದು ಮಾರಾಟ ಮಾಡೋ ಜನಸಾಮಾನ್ಯರ ಮಧ್ಯೆ ಸದಾಶಿವ ಮರಿಕೆ ತಮ್ಮದೇ ಜಾಗದಲ್ಲಿ ದಟ್ಟಾರಣ್ಯವನ್ನೇ ಬೆಳೆಸಿ ಗಮನ ಸೆಳೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ…