ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎವಾನ್ ಮೋಟಾರ್ಸ್ ಎರಡು ಕಾನ್ಸೆಪ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಪುಣೆ ಮೋಟಾರ್ ಶೋದಲ್ಲಿ ಪ್ರದರ್ಶಿಸಿದೆ. ಪ್ರದರ್ಶಿಸಲಾದ ಈ ಎರಡು ಸ್ಕೂಟರ್ಗಳ ಪೈಕಿ, ಟಾಪ್ ಎಂಡ್ ಸ್ಕೂಟರ್, ಸಿಂಗಲ್ ಜಾರ್ಜ್ನಿಂದ 200 ಕಿ.ಮೀ ದೂರ ಚಲಿಸಲಿದೆ. ಫ್ಲಾಗ್ಶಿಪ್ ಸ್ಕೂಟರ್ 72 ವಿ 22ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಮತ್ತು 1200ಡಬ್ಲ್ಯು ಮೋಟರ್ ಹೊಂದಿದೆ. ಈ ಸ್ಕೂಟರಿನ ಟಾಪ್ ಸ್ಪೀಡ್ ಪ್ರತಿ ಗಂಟೆಗೆ 60 ಕಿ.ಮೀಗಳಾಗಿದೆ. ಲೊವರ್-ಸ್ಪೆಕ್ ಮಾದರಿಯನ್ನು ಪೂರ್ತಿಯಾಗಿ ಜಾರ್ಚ್ ಮಾಡಿದರೆ 80 ಕಿ.ಮೀ ಚಲಿಸುತ್ತದೆ.

ಎಂಟ್ರಿ-ಲೆವೆಲ್ ಸ್ಕೂಟರ್ 60 ವಿ 35 ಎಎಚ್ ಲಿಥಿಯಂ-ಅಯಾನ್ ಬ್ಯಾಟರಿ ಪ್ಯಾಕ್ ಮತ್ತು 800 ಡಬ್ಲ್ಯು ಮೋಟರ್ ಅನ್ನು ಹೊಂದಿದೆ. ಈ ಸ್ಕೂಟರ್ ಗರಿಷ್ಟ ಟಾಪ್ ಸ್ಪೀಡ್ 45 ಕಿ.ಮೀ ವೇಗದಲ್ಲಿ ಚಲಿಸುವ ಸಾಮಥ್ಯ ಹೊಂದಿದೆ. ಬೈಕಿನ ಬ್ರೇಕ್ ಸಿಸ್ಟಂ ಬಗ್ಗೆ ಹೇಳುವುದಾದರೆ, ಎರಡು ಸ್ಕೂಟರ್ಗಳಲ್ಲಿಯೂ ಮುಂಭಾಗದಲ್ಲಿ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ಗಳಿವೆ. ಎವಾನ್ ಮೋಟಾರ್ಸ್ ಮುಖ್ಯಸ್ಥ ಪಂಕಜ್ ತಿವಾರಿರವರು ಮಾತನಾಡಿ, ಪುಣೆಯ ಮೋಟಾರ್ ಶೋ ಎಂಬ ಪ್ರತಿಷ್ಠಿತ ವೇದಿಕೆಯಲ್ಲಿ ನಮ್ಮ ಇ- ವಾಹನಗಳ ಹೊಸ ಪರಿಕಲ್ಪನೆಯನ್ನು ಬಹಿರಂಗಪಡಿಸಲು ನಾವು ರೋಮಾಂಚನಗೋಂಡಿದ್ದೇವೆ. ಎವಾನ್ ಮೋಟಾರ್ಸ್ ತಂಡವು ಚಿಕ್ಕ ಅಂಶಗಳ ಬಗ್ಗೆಯು ವಿಶೇಷ ಪ್ರತಿನಿಧ್ಯವಹಿಸಿ ಅತುತ್ತಮ ವೈಶಿಷ್ಟ್ಯ ಮತ್ತು ಬೆರಗುಗೊಳಿಸುವಂತಹ ಆಕರ್ಷಕ ವಿನ್ಯಾಸವನ್ನು ಮೂಡಿಸಿದೆ. ಎರಡು ಪರಿಕಲ್ಪನೆಯನ್ನು ಪ್ರದರ್ಶಿಸಿದ ಬಳಿಕ ನಾವು ಉತ್ತಮ ಪ್ರತಿಕ್ರಿಯೆಯನ್ನು ಬಯಸುತ್ತೇವೆ ಮತ್ತು ತದನಂತರ ಉತ್ಪಾದನೆಯನ್ನು ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ಕಂಪನಿಯು ಮೋಟಾರ್ ಶೋನಲ್ಲಿ ಪ್ರದರ್ಶಿಸಿದ ಪ್ರಮುಖ ಉದ್ದೇಶವೆಂದರೆ ಸ್ಕೂಟರ್ಗಳಿಗೆ ಸಾರ್ವಜನಿಕರಿಂದ ಪ್ರತಿಕ್ರಿಯೆಯನ್ನು ಪಡೆದು ಅದರ ಕುರಿತು ಅಧ್ಯಯನ ನಡೆಸಲು ಯೋಜಿಸಿದೆ ಮತ್ತು ಉತ್ಪಾದನಾ ಹಂತದ ಕುರಿತು ಹೆಚ್ಚಿನ ಸಂಶೋಧನೆಯನ್ನು ಕಂಪನಿ ಮುಂದುವರಿಸಲಿದೆ. ಎವಾನ್ ಮೋಟಾರ್ಸ್ ಇಂಡಿಯಾ ಎಲೆಕ್ಟ್ರಿಕ್ ವಾಹನಗಳ ಕಂಪನಿಯಾಗಿದ್ದು, ಇದರ ಉದ್ದೇಶವು ಭಾರತದಲ್ಲಿ ಕೈಗೆಟುಕುವ ದರದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ದಿಪಡಿಸಿ ಮಾರಾಟ ಮಾಡುವುದು. ಈ ಉದ್ದೇಶದಿಂದ ಈ ಕಂಪನಿಯನ್ನು 2015ರಲ್ಲಿ ಸ್ಥಾಪಿಸಲಾಯಿತು.

ಕಂಪನಿಯ ಸದ್ಯಕ್ಕೆ ಕ್ಸೆರೊ ಮತ್ತು ಕ್ಸೆರೊ ಪ್ಲಸ್ ಮತ್ತು ಟ್ರೆಂಡ್ಇ ಎಂಬ 3 ಎಲೆಕ್ಟ್ರಿಕ್ ಸ್ಕೂಟರ್ಗಳನ್ನು ಮಾರಾಟ ಮಾಡುತ್ತಿದೆ. ಈ ಮೂರು ಸ್ಕೂಟರ್ಗಳಲ್ಲಿ ಲಿಥಿಯಾ ಅಯಾನ್ ಭ್ಯಾಟರಿ ಪ್ಯಾಕ್ ಅಳವಡಿಸಲಾಗಿದೆ. ಈ ಎಲ್ಲಾ ಮೂರು ಸ್ಕೂಟರ್ಗಳು, ಮುಂಭಾಗದಲ್ಲಿ ಟಿಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗದಲ್ಲಿ ಕಾಯಿಲ್ ಸ್ಟ್ರಿಂಗ್ ಹೊಂದಿವೆ. ಮೂರೂ ಸ್ಕೂಟರ್ಗಳಲ್ಲಿ ಮುಂಭಾಗದಲ್ಲಿ ಡೀಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ ಡ್ರಮ್ ಬ್ರೇಕ್ ಅನ್ನು ಅಳವಡಿಸಲಾಗಿದೆ. ಎವಾನ್ ಮೋಟಾರ್ಸ್ ಅವರ ಈ ಮೂರು ಸ್ಕೂಟರ್ಗಳು ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದ್ದು, ಗ್ರಾಹಕರ ಗಮನಸೆಳೆದಿವೆ. ಎವಾನ್ ಮೋಟಾರ್ಸ್ ಫೇಮ್ ಯೋಜನೆಗೆ ಅರ್ಹತೆಯನ್ನು ಪಡೆದುಕೊಂಡಿದೆ. ಈ ಯೋಜನೆಯ ಪ್ರಯೋಜನ ಪಡೆಯಲು ಇ-ಸ್ಕೂಟರ್ಗಳು ಸಿಂಗಲ್ ಜಾರ್ಚ್ನಲ್ಲಿ 80 ಕಿ.ಮೀ ಚಲಿಸುವಂತೆ ಇರಬೇಕು ಮತ್ತು 40 ಕಿ.ಮೀ ಸ್ಪೀಡ್ ಹೊಂದಿರಬೇಕು.
ಒಂದು ಸಿಂಗಲ್ ಜಾರ್ಜ್ 200 ಕಿ.ಮೀ ಚಲಿಸುತ್ತದೆ. ಎಲೆಕ್ಟ್ರಿಕ್ ಸ್ಕೂಟರ್ ಪರಿಕಲ್ಪನೆಯು ಆಕರ್ಷಕ ವಿನ್ಯಾಸದಿಂದ ಕೊಡಿದೆ. ಪ್ರಸ್ತುತವಾಗಿ ಪೆಟ್ರೊಲ್ ಮತ್ತು ಡೀಸೆಲ್ ಬೆಲೆ ಅಧಿಕ ಮತ್ತು ವಾಯುಮಾಲಿನ್ಯ ಈ ಎಲ್ಲಾ ಕಾರಣದಿಂದ ಜನರು ಕೂಡ ಎಲೆಕ್ಟ್ರಿಕ್ ವಾಹನಗಳ ಮೊರೆ ಹೋಗುತ್ತಿದ್ದಾರೆ. ಅವನ್ ಮೋಟಾರ್ಸ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಒಕಿನಾವಾ ಶ್ರೇಣಿಯ ಸ್ಕೂಟರ್ಗಳಿಗೆ ಪೈಪೋಟಿ ನೀಡಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ. ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ…
ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ. ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…
ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…