News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕಿಚ್ಚನ ನಳಪಾಕ ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಸುದೀಪ್…!

30

‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ.

ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಶೂಟಿಂಗ್ ಸೆಟ್ಟಿನಲ್ಲಿ ತಾವೇ ಕೈಯಾರೇ ತಮ್ಮ ಸಹ ಕಲಾವಿದರಿಗೆ ಹಾಗೂ ಚಿತ್ರ ತಂಡದ ಸದಸ್ಯರಿಗೆ ಮೊಟ್ಟೆ ದೋಸೆ ಮಾಡಿ ಕೊಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿ ಖುಷಿ ಪಟ್ಟಿದ್ದಾರೆ.

ಇನ್‍ಸ್ಟಾ ಪೋಸ್ಟ್‍ನಲ್ಲಿ, ಎಸ್‍ಎನ್‍ಆರ್(ಸೈರಾ ನರಸಿಂಹ ರೆಡ್ಡಿ) ಸಿನಿಮಾ ಶೂಟಿಂಗ್ ಸೆಟ್ಟಿನಲ್ಲಿ ಕಳೆದ ಮೋಜಿನ ಸಮಯ, ಸ್ಪೇಷಲ್ ಆಮ್ಲೆಟ್ ದೋಸೆ ಎಂದು ಬರೆದು ಎಸ್‍ಎನ್‍ಆರ್ ಎಂದು ಹ್ಯಾಷ್‍ಟ್ಯಾಗ್ ಹಾಕಿ, ದೋಸೆ ಮಾಡುತ್ತಿರುವ ವಿಡಿಯೋವನ್ನು ಅಪ್ಲೋಡ್ ಮಾಡಿದ್ದಾರೆ. ವಿಡಿಯೋದಲ್ಲಿ ಸುದೀಪ್ ದೋಸೆ ಮಾಡಿ ಕೊಡುತ್ತಿದ್ದರೆ, ಸಾಲಾಗಿ ಸಿನಿಮಾ ತಂಡದ ಸದಸ್ಯರು, ಕಲಾವಿದರು ಪ್ಲೇಟ್‍ನಲ್ಲಿ ದೋಸೆ ಹಾಕಿಸಿಕೊಂಡು ಸವಿಯುತ್ತಿರುವ ದೃಶ್ಯ ಸೆರೆಯಾಗಿದೆ.

ಈ ವಿಶೇಷ ಪೋಸ್ಟ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದು, ಶೂಟಿಂಗ್ ಸೆಟ್ಟಿನಲ್ಲಿ ಸೌಟು ಹಿಡಿದ ಕಿಚ್ಚನ ಸರಳತನಕ್ಕೆ ಮನಸೋತಿದ್ದಾರೆ. ಈವರೆಗೂ ಈ ವಿಡಿಯೋ ಸುಮಾರು 1 ಲಕ್ಷಕ್ಕೂ ಅಧಿಕ ಬಾರಿ ವಿಕ್ಷಣೆಯಾಗಿದ್ದು, ಸಾಕಷ್ಟು ಮಂದಿ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ