ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ. ಸಮಾಜದಲ್ಲಿ ತನಗೆ ಬೆಂಬಲ ಸಿಗದ ಹಿನ್ನೆಲೆಯಲ್ಲಿ ಬೇಸರಗೊಂಡ ರಾಣಿ, ಪುರಿ ಪವಿತ್ರ ರಥ ಯಾತ್ರೆಯ ಸಂದರ್ಭದಲ್ಲಿ ಅಂಬುಲೆನ್ಸ್ ಡ್ರೈವರ್ ಆಗುವ ಮೂಲಕ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.
2016ರಲ್ಲಿ ನಾನು ಆಟೋ ಮೂಲಕ ಚಾಲಕ ವೃತ್ತಿಯನ್ನು ಆರಂಭಿಸಿದೆ. ಆದರೆ ಆ ಕೆಲಸ ನನ್ನ ಕೈ ಹಿಡಿಯಲಿಲ್ಲ. ಯಾಕೆಂದರೆ ಜನರು ನನ್ನ ಆಟೋವನ್ನು ಬಳಸಿಕೊಂಡಿಲ್ಲ. ನಂತರ 2017ರಲ್ಲಿ ಪುರಿ ರಥಯಾತ್ರೆಯ ಸಂದರ್ಭದಲ್ಲಿ ಅಂಬ್ಯುಲೆನ್ಸ್ ನಲ್ಲಿ ಕೆಲಸ ಮಾಡಿದೆ ಎಂದು ರಾಣಿ ತಿಳಿಸಿದ್ದಾರೆ. ಮಾಜಿ ಕ್ಯಾಬ್ ಚಾಲಕರೊಬ್ಬರು ಉಬರ್ ಕಂಪನಿಗೆ ರಾಣಿಯನ್ನು ಪರಿಚಯ ಮಾಡಿಸಿಕೊಟ್ಟರು. ಅಲ್ಲದೆ ಈ ಮೂಲಕ ತಮ್ಮ ಪಾಟ್ರ್ನರ್ ಆಗಿ ಕೆಲಸ ಮಾಡುವಂತೆ ಪ್ರೋತ್ಸಾಹಿಸಿದರು. ಅಂತೆಯೇ ಕಂಪನಿ ನಡೆಸಿದ ಸಂದರ್ಶನದಲ್ಲಿ ಪಾಸಾದ ರಾಣಿ, ನಂತರ ತಾನೇ ಕಾರೊಂದನ್ನು ಖರೀದಿಸಿದರು.
ಸದ್ಯ ರಾಣಿ ಅವರು ಇತರ ತೃತೀಯ ಲಿಂಗಿಗಳಿಗೆ ಮಾದರಿಯಾಗಿ ನಿಂತಿದ್ದಾರೆ. ಕೇವಲ ಬೀದಿಯಲ್ಲಿ ಭಿಕ್ಷೆ ಬೇಡದೇ ಧೈರ್ಯವಾಗಿ ಮುನ್ನುಗ್ಗಿ, ಸಮಾಜದಲ್ಲಿ ತಮಗೆ ಎದುರಾಗುವ ಸವಾಲುಗಳನ್ನು ಮೆಟ್ಟಿ ನಿಂತರೆ ನಾವು ಕೂಡ ಇತರರಂತೆ ಜೀವನ ನಡೆಸಬಹುದೆಂಬುದನ್ನು ತೋರಿಸಿಕೊಟ್ಟಿದ್ದಾರೆ.
ರಾಣಿ ಮೇಡಂ ಅವರನ್ನು ನೋಡಿ, ಆಕೆಯ ಅಭಿಮಾನಿಯಾಗಿದ್ದೇನೆ. ಅಲ್ಲದೆ ನಾನು ಕೂಡ ಓರ್ವ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದೇನೆ. ಈ ಮೂಲಕ ನನಗೆ ಅವರು ಸ್ಫೂರ್ತಿಯಾಗಿದ್ದಾರೆ. ಪುರುಷ ಚಾಲಕರಿಗೆ ಹೋಲಿಸಿದರೆ ವಿಶೇಷವಾಗಿ ರಾತ್ರಿ ಹೊತ್ತು ಪ್ರಯಾಣ ಮಾಡುವ ಹುಡುಗಿಯರು ಸುರಕ್ಷತೆಯ ದೃಷ್ಟಿಯಿಂದ ನನ್ನ ಕ್ಯಾಬನ್ನೇ ಆಯ್ಕೆ ಮಾಡುತ್ತಾರೆ ಎಂದು ಒಡಿಶಾದ ಮತ್ತೊಬ್ಬ ತೃತೀಯ ಲಿಂಗಿ ಸ್ನೇಹಶ್ರೀ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ…
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…