News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

40

ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ.

ಇತರೆ ಜಿಯೋ ಫೋನ್‌ಗಳು ಮತ್ತು ಲ್ಯಾಂಡ್‌ಲೈನ್‌ಗಳಲ್ಲಿ ಜಿಯೋ ಬಳಕೆದಾರರು ಮಾಡುವ ಕರೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಅಂತೆಯೇ, ವಾಟ್ಸ್​ಆ್ಯಪ್, ಫೇಸ್ ಟೈಮ್ ಮತ್ತು ಇತರ ಪ್ಲ್ಯಾಟ್‌ಫಾರ್ಮ್‌ಗಳ ಮೂಲಕ ಮಾಡಿದ ಕರೆಗಳಿಗೆ ಈ ಶುಲ್ಕ ವಿಧಿಸಲಾಗುವುದಿಲ್ಲ. ಹಾಗೆಯೇ ಇತರೆ ನೆಟ್‌ವರ್ಕ್‌ಗಳಿಂದ ಒಳಬರುವ ಕರೆಗಳು ಮೊದಲಿನಂತೆ ಉಚಿತವಾಗಿರಲಿದೆ ಎಂದು ತಿಳಿಸಿದೆ.

ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (TRAI) 2017 ರ ಇಂಟರ್​ಕನೆಕ್ಟ್​ ಬಳಕೆ ಶುಲ್ಕವನ್ನು (ಐಯುಸಿ) ನಿಮಿಷಕ್ಕೆ 14 ಪೈಸೆಗಳಿಂದ 6 ಪೈಸೆಗಳಿಗೆ ಇಳಿಸಿತ್ತು. ಹಾಗೆಯೇ ಈ ಶುಲ್ಕವನ್ನು 2020 ರ ಜನವರಿಯ ವೇಳೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗುವುದು ಎಂದು ಹೇಳಿತ್ತು. ಆದರೆ ಈಗ TRAI ಈ ಗಡುವನ್ನು ವಿಸ್ತರಿಸಲು ಮುಂದಾಗಿದೆ ಎಂದು ಹೇಳಲಾಗಿದೆ.

2015 ರಿಂದ ಜಿಯೋ ಉಚಿತ ಕರೆ ಸೌಲಭ್ಯವನ್ನು ಒದಗಿಸುತ್ತಿದೆ. ಇದರಿಂದ  ಕಳೆದ ಮೂರು ವರ್ಷಗಳಲ್ಲಿ ಇತರ ಮೊಬೈಲ್ ಆಪರೇಟರ್‌ಗಳಾದ ಏರ್‌ಟೆಲ್ ಮತ್ತು ವೊಡಾಫೋನ್-ಐಡಿಯಾಗಳಿಗೆ ಐಯುಸಿ ಶುಲ್ಕವಾಗಿ ಜಿಯೋ ಟೆಲಿಕಾಂ ಸಂಸ್ಥೆ ಸುಮಾರು 13,500 ಕೋಟಿ ರೂಪಾಯಿಗಳನ್ನು ಪಾವತಿಸಿದೆ.ಈ ನಷ್ಟದ ಮೊತ್ತವನ್ನು ಸರಿದೂಗಿಸಲು ಅನ್ಯ ನೆಟ್​ವರ್ಕ್​ಗಳಿಗೆ ಮಾಡುವ ವಾಯ್ಸ್ ಕರೆಗಳಿಗೆ ದರ ವಿಧಿಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ. ಹೀಗೆ ವಿಧಿಸಲಾಗುವ ದರಕ್ಕೆ ಸಮನಾಗಿ ಡೇಟಾವನ್ನು ಜಿಯೋ ಉಚಿತವಾಗಿ ನೀಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊನೆಗೂ ಐಟಿ ಉದ್ಯೋಗಿಗಳಿಗೆ ಎದುರಾದ ಸಂಕಷ್ಟ..! ಯಾಕೆ ಗೊತ್ತಾ?

    ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್​ಆರ್​ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್​ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…

  • ದೇವರು, ವಿಸ್ಮಯ ಜಗತ್ತು

    ಬ್ರಹ್ಮ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಗೊತ್ತಾ, ಹೆಣ್ಣನ್ನ ಸೃಷ್ಟಿಸಲು ಬ್ರಹ್ಮ ತಗೆದುಕೊಂಡ ಸಮಯ ಎಷ್ಟು ಗೊತ್ತಾ. ನೋಡಿ ಹೆಣ್ಣಿನ ಸೃಷ್ಟಿ.

    ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…

  • ಸುದ್ದಿ

    ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆ: ತಿಂಗಳಿಗೆ 55 ಹೂಡಿಕೆ ಮಾಡಿ ಮಾಸಿಕ ಪಿಂಚಣಿ 3000 ಪಡೆಯುವುದು ಹೇಗೆ…?

    ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಬಿಜೆಪಿ ಸರ್ಕಾರದ ಕೊನೆಯ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಪ್ರಧಾನ ಮಂತ್ರಿ ಶ್ರಮ ಮಾನ್ ಧನ್ ಯೋಜನೆ ಘೋಷಿಸಿದ್ದಾರೆ. ಇದು ಅಸಂಘಟಿತ ವಲಯದ ಜನರಿಗೆ ಆರ್ಥಿಕ ಭದ್ರತೆಯನ್ನು ಒದಗಿಸುವ ಗುರಿ ಹೊಂದಿದ್ದು, ನಿರ್ದಿಷ್ಟ ವಯಸ್ಸು ತಲುಪಿದ ನಂತರ ಅಸಂಘಟಿತ ವಲಯದ ಕಾರ್ಮಿಕರಿಗೆ ಕೇಂದ್ರ ಸರಕಾರ ಪಿಂಚಣಿ ನೀಡುತ್ತದೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್‌ ಧನ್ ಯೋಜನೆಯನ್ನು ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಲ್ಐಸಿ) ಮೂಲಕ ಜಾರಿಗೆ ತರಲಾಗುತ್ತಿದೆ. ಐಆರ್ಡಿಎಐ…

  • ಸಿನಿಮಾ

    ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಚಿತ್ರದ ಆಫರ್ ತಿರಸ್ಕರಿಸಿದ ರಿಯಲ್ ಸ್ಟಾರ್?ಈ ಸುದ್ದಿ ನೋಡಿ

    ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…

  • ಸುದ್ದಿ

    16ರ ಬಾಲಕಿಗೆ ಬಾಲ್ಯ ವಿವಾಹ ಸಂಬ್ರಮ – ಮದುಮಗ ಸೇರಿದಂತೆ 6 ಮಂದಿ ಅರೆಸ್ಟ್……!

    ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…

  • ಉಪಯುಕ್ತ ಮಾಹಿತಿ

    ಬಯಲುಸೀಮೆ ಕೋಲಾರದ ಈಗಿನ ಬರಗಾಲದ ಪರಿಸ್ಥಿತಿಗೆ ಇದು ಮುಖ್ಯ ಕಾರಣ ಇರಬಹುದಾ? ನೀವೇನಂತೀರಾ?

    ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.