ಸುದ್ದಿ

ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

69

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್‌ ಪೋರ್ಟಲ್‌ ಮೂಲಕ ಇಪಿಎಫ್‌ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್‌ ಮೂಲಕವೂ ಸಹ  ಬ್ಯಾಲನ್ಸ್‌ ಚೆಕ್‌ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ  ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ  :  ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್‌ಓ ಪೋರ್ಟಲ್ ಮೂಲಕ
2. ಎಸ್‌ಎಂಎಸ್ ಮುಖಾಂತರವು ತಿಳಿಯಬಹುದು 
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್‌ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.

ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್  ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್‌ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್‌ಓ ಪೋರ್ಟಲ್ ಮೂಲಕ : ಇಪಿಎಫ್‌ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್‌ ಮಾಡಲು ಮೊದಲು ನಿಮ್ಮ ಯುನಿವರ್ಸಲ್‌ ಅಕೌಂಟ್‌ ನಂಬರ್‌ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್‌ವರ್ಡ್ ದೊರೆಯುತ್ತದೆ. ಈ ಪಾಸ್‌ವರ್ಡ್‌ ಬಳಸಿ ಇಪಿಎಫ್ ಪೋರ್ಟಲ್‌ನಲ್ಲಿ ಲಾಗಿನ್‌ ಆಗಿ ಬ್ಯಾಲೆನ್ಸ್‌ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್‌ಬುಕ್ ಅನ್ನು ಕೂಡ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್‌ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್‌ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್‌ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್‌ಓM-Sewa ಹೆಸರಿನ ಸ್ಮಾರ್ಟ್‌ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಜೀವನದಲ್ಲಿ ಸಮಾಜಕ್ಕೆ ಏನನ್ನಾದರೂ ಕೊಡುಗೆ ನೀಡಬೇಕೆಂಬುದು ಸತ್ಯ..ಅದಕ್ಕೆ ಸುನಿತಾ ಮಂಜುನಾಥ್ ರವರೇ ನೈಜ್ಯ ಉದಾಹರಣೆ…

    ಸಾಕಷ್ಟು ಸಮಾಜಸೇವೆಗಳನ್ನು ಮಾಡಿ ಹೆಸರಾಗಿರುವ ಸುನಿತಾ ಮಂಜುನಾಥ್ ರವರ ಬಹು ದೊಡ್ಡ ಕನಸಿನ ಆಂದೋಲನವೇ “ಕಸದಿಂದ ರಸ” ತಮ್ಮದೇ ಶಾಲೆಯ ಮಕ್ಕಳಿಗೆ ಹುರಿದುಂಬಿಸಿ..‌ ದೇಶದ ಬಗ್ಗೆ ಅಭಿಮಾನವನ್ನು ಹೆಚ್ಚು ಮಾಡುತ್ತಿರುವ ಇವರು ನಿಜಕ್ಕೂ ಗ್ರೇಟ್..

  • ಸುದ್ದಿ

    ಪ್ರತಿದಿನ ಎದೆಗೆ ಗುದ್ದುತ್ತಿದ್ದ ಸಾಕುನಾಯಿಗಳು, ನೋವಿನಿಂದ ವೈದ್ಯರ ಬಳಿ ಹೋದ ಮಹಿಳೆಗೆ ಕಾದಿತ್ತು ಭಾರಿ ಶಾಕ್.​

    ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್​ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್​ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್​ನ ಬಾರ್ಗೋಡ್​ ನಿವಾಸಿಯಾಗಿರುವ​ ಲಿಂಡಾ ಮುಂಕ್ಲೆ(65) ವೇಲ್ಸ್​ ಆನ್​ಲೈನ್​ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್​ ಶೆಫರ್ಡ್​ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…

  • ಸುದ್ದಿ

    ಹೆಬ್ಬಾವು ಕಚ್ಚಿ ಸತ್ತ ಮಹಿಳೆ ; ಸಾವಿನ ಬಳಿಕ ಮಹಿಳೆ ಮನೆಯಲ್ಲಿ 140 ಹಾವು ಪತ್ತೆ..!ಯಾಕೆ ಗೊತ್ತ?

    ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…

  • ಶ್ರದ್ಧಾಂಜಲಿ

    ಖ್ಯಾತ ನಟ ನಂದಮೂರಿ ತಾರಕರತ್ನ ನಿಧನ

    ಬೆಂಗಳೂರು: ಟಾಲಿವುಡ್​ ಖ್ಯಾತ ನಟ ನಂದಮೂರಿ ತಾರಕರತ್ನ (Nandamuri Taraka Ratna) ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಇಂದು(ಫೆ.18) ಬೆಂಗಳೂರಿನ ನಾರಾಯಣ ಹೃದಯಾಲದಲ್ಲಿ ತಾರಕರತ್ನ(39) ಕೊನೆಯುಸಿರೆಳೆದಿದ್ದಾರೆ.  ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಆ ವೇಳೆ ತಾರಕರತ್ನಗೆ ಹೃದಯಸ್ತಂಭನವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಕ್ಕೆ ಶಿಫ್ಟ್​ ಮಾಡಲಾಗಿತ್ತು.  23 ದಿನಗಳಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಾರಕರತ್ನ ಅವರಿಗೆ, ಬೆಂಗಳೂರಿನ ನಾರಾಯಣ ಆಸ್ಪತ್ರೆಯಲ್ಲಿ ನುರಿತ…

  • ರೆಸಿಪಿ

    ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

    ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.

  • ಸುದ್ದಿ, ಸ್ಪೂರ್ತಿ

    ಅಡುಗೆ ಎಣ್ಣೆಯನ್ನು ಬಳಸಿ ಲಾಭದಾಯಕ ಕೃಷಿ ಮಾಡಿದ ರೈತರು. ಈ ಸುದ್ದಿ ನೋಡಿ.!

    ಕೆಲ  ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ  ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ  ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…