News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಿಮ್ಮ ಇಪಿಎಫ್‌ ಬಡ್ಡಿ, ಬ್ಯಾಲೆನ್ಸ್ ಚೆಕ್ ಮಾಡುವ ಸುಲಭ ಉಪಾಯಗಳು,.!!

76

ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ  ಕಾರ್ಮಿಕ ಭವಿಷ್ಯ ನಿಧಿ ಇಲಾಖೆ  ಇಪಿಎಫ್‌ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್‌ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ  ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್‌ ನಿಧಿಗಾಗಿ ಸ್ವಲ್ಪ  ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್‌ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್‌ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು  ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು  ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್‌ ಪೋರ್ಟಲ್‌ ಮೂಲಕ ಇಪಿಎಫ್‌ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್‌ ಮೂಲಕವೂ ಸಹ  ಬ್ಯಾಲನ್ಸ್‌ ಚೆಕ್‌ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ  ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ  :  ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್‌ಓ ಪೋರ್ಟಲ್ ಮೂಲಕ
2. ಎಸ್‌ಎಂಎಸ್ ಮುಖಾಂತರವು ತಿಳಿಯಬಹುದು 
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್‌ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.

ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್  ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್‌ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್‌ಓ ಪೋರ್ಟಲ್ ಮೂಲಕ : ಇಪಿಎಫ್‌ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್‌ ಮಾಡಲು ಮೊದಲು ನಿಮ್ಮ ಯುನಿವರ್ಸಲ್‌ ಅಕೌಂಟ್‌ ನಂಬರ್‌ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್‌ವರ್ಡ್ ದೊರೆಯುತ್ತದೆ. ಈ ಪಾಸ್‌ವರ್ಡ್‌ ಬಳಸಿ ಇಪಿಎಫ್ ಪೋರ್ಟಲ್‌ನಲ್ಲಿ ಲಾಗಿನ್‌ ಆಗಿ ಬ್ಯಾಲೆನ್ಸ್‌ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್‌ಬುಕ್ ಅನ್ನು ಕೂಡ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಎಸ್‌ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್‌ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್‌ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್‌ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್‌ಓM-Sewa ಹೆಸರಿನ ಸ್ಮಾರ್ಟ್‌ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್‌ನಿಂದ ಆಪ್ ಡೌನ್‌ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್‌ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಜ್ಯೋತಿಷ್ಯ

    ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

    ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….