News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

70

ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ. 

ಸುದ್ದಿ ವಾಹಿನಿಯೊಂದಕ್ಕೆ ಈ ಕುರಿತಾಗಿ ಪ್ರತಿಕ್ರಿಯಿಸಿರುವ ಅಪರ್ಣಾ ಲವಕುಮಾರ್ ನಾನು ಈ ಕುರಿತು ಯಾರಿಗೂ ಮಾಹಿತಿ ನೀಡಿರಲಿಲ್ಲ. ಮಾಹಿತಿ ನೀಡಿದ್ದರೆ ಇದನ್ನು ತಡೆಯುವ ಯತ್ನ ನಡೆಯುತ್ತಿತ್ತು ಕೂದಲು ಬೋಳಿಸುವುದು ದೊಡ್ಡ ವಿಷಯವೆಂದು ನನಗೆ ಹೀಗಾಗಿ ಸಲೂನ್ ಒಂದಕ್ಕೆ ತೆರಳಿ ಕೂದಲು ಕತ್ತರಿಸಿಕೊಂಡೆ. ಅನೇಕರು ಇದಕ್ಕೂ ಉತ್ತಮ ಕೆಲಸ ಮಾಡುತ್ತಾರೆ ಇತರರಿಗೆ ಆರ್ಥಿಕವಾಗಿ ಸಹಾಯ ಮಾಡುವಷ್ಟು ಸಬಲಳು ನಾನಲ್ಲ, ನನ್ನಿಂದಾಗುವ ಸಹಾಯವನ್ನು ನಾನು ಮಾಡಿದೆ’ ಎಂದಿದ್ದಾರೆ.

ಇನ್ನು ಕೂದಲು ಬೋಳಿಸಿದ್ದೇನೆ, ತನಗೆ ಕೂದಲಿಲ್ಲ ಎಂಬ ಬಗ್ಗೆ ಈ ಪೊಲೀಸ್ ಅಧಿಕಾರಿಗೆ ಬೇಸರವಿಲ್ಲ ಇಷ್ಟೇ ಅಲ್ಲದೇ, ಅಪರ್ಣಾ ಈ ಮೊದಲು ಕೂಡಾ ಕ್ಯಾನ್ಸರ್ ಪೀಡಿತರಿಗಾಗಿ ತಮ್ಮ ಕೂದಲನ್ನು ದಾನ ಮಾಡಿದ್ದಾರೆ ಆದರೆ ಈ ಬಾರಿ ಅವರು ಸಂಪೂರ್ಣವಾಗಿ ತಲೆ ಬೋಳಿಸಿಕೊಂಡಿದ್ದಾರೆ. 

10 ವರ್ಷಗಳ ಹಿಂದೆಯೂ ಅಪರ್ಣಾ ಲವಕುಮಾರ್ ಕುಟುಂಬವೊಂದಕ್ಕೆ ಸಹಾಯ ಮಾಡುವ. ಸಲುವಾಗಿ ತನ್ನ ಮೂರು ಚಿನ್ನದ ಬಳೆಗಳನ್ನು ಮಾರಿ ಸದ್ದು ಮಾಡಿದ್ದರು. ಅಂದು ಆ ಕುಟುಂಬ ಆಸ್ಪತ್ರೆಯಲ್ಲಿ  60 ಸಾವಿರ ರೂಪಾಯಿ ಬಿಲ್ ಪಾವತಿಸಲಾಗದೆ ಪರದಾಡುತ್ತಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ