ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.

ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.
ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.

ವೈರಸ್ : ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು

ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು
ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.
ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…
ಯುಗಾದಿ, ಗಣೇಶ ಚತುರ್ಥಿ, ದೀಪಾವಳಿಗೆ ಉಚಿತ ಗ್ಯಾಸ್, ಅರ್ಧ ಲೀ. ಉಚಿತ ನಂದಿನಿ ಹಾಲು: ಬಿಜೆಪಿಯಿಂದ ಪ್ರಣಾಳಿಕೆ ರಿಲೀಸ್ !!! ಬಿಪಿಎಲ್ (BPL) ಕುಟುಂಬಗಳಿಗೆ ಪ್ರತಿವರ್ಷ ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಗೆ ತಲಾ ಒಂದರಂತೆ 3 ಅಡುಗೆ ಅನಿಲದ ಸಿಲಿಂಡರ್ಗಳನ್ನು ಉಚಿತವಾಗಿ ವಿತರಿಸುತ್ತೇವೆ ಎಂದು ಬಿಜೆಪಿ (BJP) ತನ್ನ ಚುನಾವಣಾ (Election) ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ರಾಜ್ಯದ ವಿಧಾನ ಸಭೆಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ…
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮಲಯಾಳಂ ಚಲನಚಿತ್ರ ನಟಿ ಸಂಗೀತ ಕ್ರಿಶ್ ತಮ್ಮ ತಾಯಿಯ ಆರೋಪಕ್ಕೆ ಟ್ವಿಟರ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಿಶ್ ತಾಯಿ ಇತ್ತೀಚೆಗೆ ಮಗಳು ತನ್ನನ್ನ ವೃದ್ಧಾಪ್ಯದಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ. ಆಸ್ತಿಗಾಗಿ ಕ್ರಿಶ್ ನನ್ನನ್ನ ಮನೆಯಿಂದ ಹೊರ ಹಾಕಲು ಮುಂದಾಗಿದ್ದಾಳೆ ಎಂದು ಆರೋಪಿಸಿದ್ದರು. ಈ ಹೇಳಿಕೆ ಕ್ರಿಶ್ ಳನ್ನ ಹೆಚ್ಚು ಸುದ್ದಿಯಲ್ಲಿರುವ ಹಾಗೆ ಮಾಡಿತ್ತು. ಈ ಆರೋಪಗಳಿಗೆ ಕ್ರಿಶ್ ಟ್ವಟರ್ ಮೂಲಕ ಸರಿಯಾಗೇ ಉತ್ತರ ನೀಡಿದ್ದಾರೆ. ತಾನು 13 ವರ್ಷದ ಬಾಲಕಿಯಾಗಿದ್ದಾಗ ಹೇಗೆ ತನ್ನನ್ನ ಶೋಷಿಸಲಾಯಿತು ಎಂದು ವಿವರಿಸಿದ್ದಾಳೆ. ಕುಡುಕ…
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್. ಚಂದ್ರು ಕಾಂಬಿನೇಷನ್ ನಲ್ಲಿ ಮೂಡಿಬಂದಿದ್ದ ‘ಐ ಲವ್ ಯು’ ಭರ್ಜರಿ ಯಶಸ್ಸು ಕಂಡಿದೆ. ಈ ಕಾಂಬಿನೇಷನ್ ನಲ್ಲಿ ಮತ್ತೊಂದು ಚಿತ್ರ ಮೂಡಿಬರಲಿದೆ. ಈ ಹಿಂದೆ ಉಪೇಂದ್ರ ಅಭಿನಯದ ಆರ್. ಚಂದ್ರು ನಿರ್ದೇಶನದ ಬ್ರಹ್ಮ, ನಂತರ ‘ಐ ಲವ್ ಯು’ ಯಶಸ್ಸು ಕಂಡಿದ್ದು, ಮುಂದಿನ ಚಿತ್ರ ಭಾರಿ ನಿರೀಕ್ಷೆ ಮೂಡಿಸಿದೆ. ಅಂದ ಹಾಗೆ, ಈ ಹೊಸ ಚಿತ್ರ ಭೂಗತ ಜಗತ್ತಿನ ಕಥಾಹಂದರವನ್ನು ಹೊಂದಿದ್ದು, ಘಟಾನುಘಟಿ ಕಲಾವಿದರು ಅಭಿನಯಿಸಲಿದ್ದಾರೆ. ಹೈಬಜೆಟ್ ನಲ್ಲಿ…