ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.

ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.
ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.

ವೈರಸ್ : ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು

ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು
ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.
ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂತರ್ಜಾಲ ಬಳಕೆ ಹೆಚ್ಚಾದಂತೆ ಸಾಮಾಜಿಕ ಜಾಲತಾಣಗಳ ಬಳಕೆ ಕೂಡ ಜಾಸ್ತಿಯಾಗಿದೆ. ಜನಪ್ರಿಯ ಜಾಲತಾಣವಾಗಿರುವ ವಾಟ್ಸಾಪ್ ಡಿಸೆಂಬರ್ 31 ರಿಂದ ಕೆಲವು ಸ್ಮಾರ್ಟ್ ಫೋನ್ ಗಳಲ್ಲಿ ಕಾರ್ಯ ನಿರ್ವಹಿಸುವುದನ್ನು ಸ್ಥಗಿತಗೊಳಿಸಲಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…
ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್ ಅನೀಸ್ ಎಂಬುದಾಗಿ.
ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಸ್ಟೋರ್ಗಳ ಮೇಲೆ ಬೆಳ್ಳಂಬೆಳಗ್ಗೆ ಜಿಲ್ಲಾಧಿಕಾರಿ ಗಿರೀಶ್ ಅವರು ದಾಳಿಮಾಡಿ ನಕಲಿ ವೈದ್ಯರನ್ನು ತರಾಟೆಗೆತೆಗೆದುಕೊಂಡಿದ್ದಾರೆ ಅರಕಲಗೂಡುಪಟ್ಟಣದಲ್ಲಿ ನಕಲಿ ಕ್ಲಿನಿಕ್ ಮತ್ತು ಮೆಡಿಕಲ್ ಶಾಪ್ಗಳನ್ನು ತೆರೆಯಲಾಗಿದೆ ಎಂಬ ಮಾಹಿತಿ ಮೇರೆಗೆ ಇಂದು ಬೆಳ್ಳಂಬೆಳಗ್ಗೆ ಗಿರೀಶ್ ಅವರು ದಾಳಿಮಾಡಿದರು. ಆಯುರ್ವೇದ ಕ್ಲಿನಿಕ್ನಲ್ಲಿ ಇಂಗ್ಲೀಷ್ ಮೆಡಿಸೆನ್ಸ್ ಮಾರುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಇವುಗಳಮೇಲೆಯೂ ದಾಳಿ ಮಾಡಿದರು. ಕಳೆದ ಮೂರ್ನಾಲ್ಕು ವರ್ಷಗಳಲ್ಲಿ ಈ ಮೆಡಿಕಲ್ಗಳಲ್ಲಿ ಔಷಧಿ ಪಡೆದುಕೊಂಡ ಹಲವರ ಪೈಕಿ ಐದಾರುಮಂದಿ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಆರೋಪ ಸಹ ಕೇಳಿ…
ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…