ಆರೋಗ್ಯ

ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

185

ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ.

ಆಹಾರ ವಿಷವಾಗುವುದು ಎಂದರೇನು? ಆಹಾರಕ್ಕೆ ಸಂಬಂಧಿಸಿದ ಕೆಲವೊಂದು ಅನಾರೋಗ್ಯವನ್ನು ಆಹಾರ ವಿಷವಾಗುವುದು ಎಂದು ಕರೆಯಲಾಗುತ್ತದೆ. ಕಲುಷಿತ ಆಹಾರ, ಕೆಟ್ಟ ಆಹಾರ ಅಥವಾ ವಿಷವಾಗಿರುವಂತಹ ಆಹಾರ ಸೇವನೆಯೇ ಆಹಾರ ವಿಷವಾಗಲು ಕಾರಣವಾಗಿದೆ. ಆಹಾರ ವಿಷವಾಗುವ ಪ್ರಮುಖ ಲಕ್ಷಣಗಳೆಂದರೆ ವಾಕರಿಕೆ, ವಾಂತಿ ಮತ್ತು ಅತಿಸಾರ. ಆಹಾರ ವಿಷವಾಗುವುದು ಅಸಾಮಾನ್ಯವಲ್ಲದ ಕಾರಣದಿಂದಾಗಿ ಇದು ತುಂಬಾ ಅಹಿತರ ಭಾವನೆ ಉಂಟು ಮಾಡುವುದು. ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಆಂಡ್ ಪ್ರಿವೆಂಟೇಷನ್(ಸಿಡಿಸಿ) ಹೇಳುವ ಪ್ರಕಾರ ಅಮೆರಿಕಾದಲ್ಲಿ 6 ಮಂದಿಯಲ್ಲಿ ಒಬ್ಬರು ಪ್ರತೀ ವರ್ಷ ಆಹಾರ ವಿಷವಾಗುವ ಸಮಸ್ಯೆಗೆ ಒಳಗಾಗುವರು.

ಬ್ಯಾಕ್ಟೀರಿಯಾ ಆಹಾರ ವಿಷವಾಗಲು ಪ್ರಮುಖ ಕಾರಣ ಬ್ಯಾಕ್ಟೀರಿಯಾ ಎಂದು ಹೇಳಲಾಗುತ್ತದೆ. ತುಂಬಾ ಅಪಾಯಕಾರಿ ಬ್ಯಾಕ್ಟೀರಿಯಾಗಳಾಗಿರುವಂತಹ ಇ ಕೋಲಿ, ಲಿಸ್ಟೇರಿಯಾ, ಮತ್ತು ಸಾಲ್ಮೊನೆಲ್ಲಾಕಮ್ ಇದರಲ್ಲಿ ಪ್ರಮುಖವಾಗಿದೆ. ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದೆ. ಸಿಡಿಸಿಟಿ ಪ್ರಕಾರ ಸುಮಾರು ಒಂದು ಮಿಲಿಯನ್ ಆಹಾರ ವಿಷವಾಗುವ ಪ್ರಕರಣಗಳು ಪತ್ತೆಯಾಗಿದೆ ಮತ್ತು ಇದರಲ್ಲಿ 20 ಸಾವಿರ ಮಂದಿ ಆಸ್ಪತ್ರೆಗೆ ದಾಖಲಾಗಿರುವರು. ಈ ಎಲ್ಲಾ ಪ್ರಕರಣದಲ್ಲಿ ಸಾಲ್ಮೊನೆಲ್ಲಾಕಮ್ ಆಹಾರ ವಿಷವಾಗಲು ಪ್ರಮುಖ ಕಾರಣವಾಗಿದೆ. ಕ್ಯಾಂಪಿಲೋಬ್ಯಾಕ್ಟರ್ ಮತ್ತು ಸಿ. ಬೊಟುಲಿನಮ್ (ಬೊಟುಲಿಸಮ್) ಆಹಾರ ವಿಷವಾಗಲು ಕಾರಣವಾಗುವಂತಹ ಇತರ ಬ್ಯಾಕ್ಟೀರಿಯಾಗಳಾಗಿವೆ.

ವೈರಸ್ :  ವೈರಸ್ ನಿಂದಾಗಿಯೂ ಆಹಾರವು ವಿಷವಾಗಬಹುದು. ನೊರೊವೈರಸ್ ಅಥವಾ ನೊರವಾಕ್ ವೈರಸ್ ಪ್ರತೀ ವರ್ಷ ಸುಮಾರು 19 ಮಿಲಿಯನ್ ಪ್ರಕರಣಗಳಲ್ಲಿ ಆಹಾರವನ್ನು ವಿಷವಾಗಿಸುವುದು ಎಂದು ಮೂಲಗಳು ಹೇಳಿವೆ. ಅಪರೂಪದ ಸಂದರ್ಭದಲ್ಲಿ ಇದು ಪ್ರಾಣಹಾನಿಗೆ ಕಾರಣವಾಗಬಹುದು. ಸಪೋವೈರಸ್, ರೋಟವೈರಸ್ ಮತ್ತು ಆಸ್ಟ್ರೋವೈರಸ್ ಒಂದೇ ರೀತಿಯ ಲಕ್ಷಣಗಳನ್ನು ತೋರಿಸಬಹುದು. ಆದರೆ ಇದು ಸಾಮಾನ್ಯವಾಗಿ ಇರುವುದಿಲ್ಲ. ಹೆಪಟಿಟಿಸ್ ಎ ವೈರಸ್ ಆಹಾರದ ಮೂಲಕವೇ ದೇಹದೊಳಗೆ ಪ್ರವೇಶಿಸಿ, ಗಂಭೀರ ಪರಿಣಾಮ ಬೀರುವುದು

ಆಹಾರ ವಿಷವಾಗದಂತೆ ದೇಹವನ್ನು ರಕ್ಷಿಸಿಕೊಳ್ಳುವುದು ಹೇಗೆ? * ಆಹಾರವನ್ನು ತುಂಬಾ ಸುರಕ್ಷಿತವಾಗಿ ನೀವು ಇಟ್ಟುಕೊಳ್ಳಬೇಕು ಮತ್ತು ಅಸುರಕ್ಷಿತ ವಾತಾವರಣದಲ್ಲಿ ಆಹಾರವನ್ನು ತೆರೆದಿಡಬಾರದು. * ಕೆಲವೊಂದು ಆಹಾರಗಳು ಉತ್ಪನ್ನವಾಗುವ ಕ್ರಮದಿಂದಾಗಿ ಬೇಗನೆ ವಿಷವಾಗುವುದು. ಉದಾಹರಣೆಗೆ ಮಾಂಸ, ಕೋಳಿಮಾಂಸ, ಮೊಟ್ಟೆ ಮತ್ತು ಚಿಪ್ಪುಮೀನು ಬೇಗನೆ ಕೆಡುವುದು. ಆದರೆ ಇದೆಲ್ಲವನ್ನು ಬಿಸಿ ಮಾಡುವ ವೇಳೆ ಸೋಂಕು ನಿವಾರಣೆ ಆಗುವುದು. ಇಂತಹ ಆಹಾರಗಳನ್ನು ನೀವು ಹಸಿಯಾಗಿ ತಿಂದರೆ ಅಥವಾ ಸರಿಯಾಗಿ ಬೇಯಿಸದೆ ತಿಂದರೆ ಆಗ ಆಹಾರವು ಬೇಗನೆ ವಿಷವಾಗುವುದು

ಆಹಾರ ವಿಷವಾಗಿಸುವ ಕೆಲವೊಂದು ಖಾದ್ಯಗಳು ಕೆಲವೊಂದು ಮೀನಿನ ಖಾದ್ಯಗಳು ಹಸಿಯಾಗಿರುವುದು ಮತ್ತು ಅರೆ ಬೇಯಿಸಿದ ಮಾಂಸ ಬಳಸಿರುವಂತಹ ಖಾದ್ಯಗಳು ಹಾಗೂ ಹಾಟ್ ಡಾಗ್ ನ್ನು ಸರಿಯಾಗಿ ಬಿಸಿ ಮಾಡದೆ ಇರುವ ಪರಿಣಾಮವಾಗಿ ಇದು ವಿಷವಾಗುವುದು. ಪಾಶ್ಚರೀಕರಿಸದೆ ಇರುವ ಹಾಲು, ಚೀಸ್ ಮತ್ತು ಜ್ಯೂಸ್, ತೊಳೆಯದೆ ಇರುವ ಹಣ್ಣುಗಳು ಹಾಗೂ ತರಕಾರಿಗಳು ಆಹಾರ ವಿಷವಾಗಿಸಬಹುದು.

ಎಚ್ಚರಿಕೆಗಳು * ಅಡುಗೆ ಮಾಡುವ ಮೊದಲು ಅಥವಾ ಊಟ ಮಾಡುವ ಮೊದಲು ಸರಿಯಾಗಿ ಕೈಗಳನ್ನು ತೊಳೆಯಿರಿ. * ಆಹಾರವು ಸರಿಯಾಗಿ ಸೀಲ್ ಆಗಿದೆಯಾ ಅಥವಾ ಶೇಖರಣೆ ಮಾಡಲಾಗಿದೆಯಾ ಎಂದು ನೋಡಿ. * ಮಾಂಸ ಮತ್ತು ಮೊಟ್ಟೆಯನ್ನು ಸರಿಯಾಗಿ ಬೇಯಿಸಿ. * ಯಾವುದೇ ತಾಜಾ ಆಹಾರವನ್ನು ಬಳಸುವ ಮೊದಲು ಅದನ್ನು ಸರಿಯಾಗಿ ತೊಳೆಯಿರಿ. * ಹಣ್ಣುಗಳು ಹಾಗೂ ತರಕಾರಿಗಳನ್ನು ಸರಿಯಾಗಿ ತೊಳೆದ ಬಳಿಕ ಬಳಸಿಕೊಂಡರೆ ಆಹಾರ ವಿಷವಾಗುವುದನ್ನು ತಪ್ಪಿಸಬಹುದು.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಸುದ್ದಿ

    2 ಎಕರೆ ಜಾಗದಲ್ಲಿ 22 ಲಕ್ಷ ಗಳಿಸುತ್ತಿರುವ ರೈತ, ಈ ರೈತನ ಸಕತ್ ಉಪಾಯ ನೋಡಿ .

    ನಾನು ಒಬ್ಬ ರೈತ ಎಂದು ಹೇಳಿಕೊಳ್ಳಲು ತುಂಬಾ ಜನ ಹಿಂದೆ ಮುಂದೆ ನೋಡುತ್ತಾರೆ ಮತ್ತು ಇದಕ್ಕೆ ಕಾರಣ ನಮ್ಮ ಸಮಾಜ ಎಂದು ಹೇಳಬಹುದು, ರೈತ ಅಂದರೆ ಆತನ ಬಳಿ ಹಣ ಇರುವುದಿಲ್ಲ ಅನ್ನುವ ಭಾವನೆ ಎಲ್ಲರ ಮನದಲ್ಲಿ ಇದೆ ಮತ್ತು ಇಷ್ಟೇ ಅಲ್ಲದೆ ನಾನು ರೈತ ಅಂದರೆ ಹೆಣ್ಣು ಮಗಳನ್ನ ಕೊಟ್ಟು ಮದುವೆ ಮಾಡಿಕೊಡಲು ಕೂಡ ಹಿಂದೆ ಮುಂದೆ ನೋಡುತ್ತಾರೆ ಜನರು. ಇನ್ನು ನಮ್ಮ ಸಮಾಜಕ್ಕೆ ತಿಳಿಯದ ಇನ್ನೊಂದು ವಿಚಾರ ಏನು ಅಂದರೆ ಪ್ರತಿಯೊಬ್ಬ ರೈತ ಕೂಡ…

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • ಉಪಯುಕ್ತ ಮಾಹಿತಿ

    ರಾವಣ ಸಾಯೋಕೆ ಮುಂಚೆ ಲಕ್ಶ್ಮಣನಿಗೆ ಕಲಿಯುಗದ ಬಗ್ಗೆ ಹೇಳಿದ ಘೋರ ಸತ್ಯ. ಏನದು ಗೊತ್ತಾ?

    ಲಂಕೆಯಲ್ಲಿ ಮಹಾಯುದ್ಧ ನಡೆದು ರಾವಣ ರಾಮಬಾಣಕ್ಕೆ ತುತ್ತಾಗಿ ಧರೆಗುರುಳಿದ. ಅವನು ಇನ್ನೂ ಮರಣಶಯ್ಯೆಯಲ್ಲಿರುವಾಗ ರಾಮ, “ಲಕ್ಷ್ಮಣಾ, ರಾವಣ ಮಹಾ ಪಂಡಿತ. ಅಧ್ಯಯನ ಮತ್ತು ಅನುಭವದಿಂದ ಅಪಾರ ಜ್ಞಾನ ಗಳಿಸಿದ್ದಾನೆ. ಅವನ ಬಳಿ ಹೋಗಿ, ಅವನಿಂದ ಅಮೂಲ್ಯವಾದ ಪಾಠಗಳನ್ನು ಕಲಿತು ಕೊಂಡು ಬಾ ಎಂದು ಹೇಳಿದ. ಅದರಂತೆ ಲಕ್ಷ್ಮಣ ರಾವಣನ ಪಾದದ ಬಳಿ ನಿಂತು, ರಾವಣನ ಬೋಧನೆಗಳನ್ನು ಆಲಿಸಿ, ಹೃದ್ಗತ ಮಾಡಿಕೊಳ್ಳುತ್ತಾನೆ. ರಾವಣ ಸಾಯುವ ಮುನ್ನ ಲಕ್ಷ್ಮಣನಿಗೆ  ರಾವಣ ಯೋಧ ಮಾತ್ರವಲ್ಲ, ಸರ್ವೋಚ್ಚ ವಿದ್ವಾಂಸನು ಆಗಿದ್ದ ಬ್ರಾಹ್ಮಣ ಕುಲದಲ್ಲಿ ಜನಿಸಿದ…

  • ಸುದ್ದಿ

    ಹೈಕೋರ್ಟ್ ಮಹತ್ವದ ತೀರ್ಪು:LLR ಇದ್ದರೂ ಅಪಘಾತವಾದ ವೇಳೆ ಪರಿಹಾರ ನೀಡಬೇಕು…!

    ವಾಹನ ಕಲಿಕಾ ಪರವಾನಗಿ (ಎಲ್ಎಲ್ಆರ್) ಹೊಂದಿದ್ದು, ಅಂತಹ ಸಂದರ್ಭದಲ್ಲಿ ಅಪಘಾತವಾದರೆ ವಿಮಾ ಕಂಪನಿಗಳು ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹತ್ತು ವರ್ಷಗಳ ಹಿಂದಿನ ಪ್ರಕರಣವೊಂದರ ತೀರ್ಪು ಈಗ ಹೊರಬಿದ್ದಿದ್ದು, ಎಲ್ಎಲ್ಆರ್ ಇದ್ದ ವೇಳೆ ಅಂತವರು ವಾಹನ ಚಾಲನೆ ಮಾಡುವಾಗ ಡಿಎಲ್ ಹೊಂದಿದ ಪರಿಣಿತರು ಇರಬೇಕೆಂಬ ನಿಯಮವಿದೆ. ಆದರೆ ಇದು ದ್ವಿಚಕ್ರವಾಹನಕ್ಕೋ ಅಥವಾ ನಾಲ್ಕು ಚಕ್ರ ವಾಹನಕ್ಕೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ನಿಯಮ ನಾಲ್ಕು ಚಕ್ರ ವಾಹನಗಳಿಗೆ…

  • ಸುದ್ದಿ

    ಇನ್ನುಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯಬೇಕೆಂದರೆ ಇದನ್ನು ಪಾಲಿಸಲೇಬೇಕು..!ಏನದು?

    ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್‌ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್  ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…

  • ಸರ್ಕಾರಿ ಯೋಜನೆಗಳು

    ನಿಮ್ಮ ಮನೆಗೆ ಬರ್ತಾ ಇದೆ ಉಚಿತ ಅನಿಲ ಭಾಗ್ಯ..!ನಿಮ್ಗೆ ಉಚಿತ ಸಿಲಿಂಡರ್,ಸ್ಟವ್ ಬೇಕಂದ್ರೆ ಮುಂದೆ ಓದಿ…

    ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್‌ 1 ರಿಂದ ರಾಜ್ಯದಲ್ಲಿ ಜಾರಿಗೆ ಬರಲಿದೆ.