ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ….
ಡಾ.ರಾಜ್ ಕುಮಾರ್.. ರಾಜ್ ಕುಮಾರ್ ರವರು ಓದಿರುವುದು 3ನೇ ತರಗತಿ ಆದರೆ ಅವರ ಸಾಧನೆ ಅಪಾರ. ಎಂಟನೇ ವಯಸ್ಸಿಗೆ ರಾಜ್ ಶಾಲೆಗೆ ಹೋಗುವುದನ್ನು ನಿಲ್ಲಿಸಿದರು.ಕೇವಲ 3ನೇ ತರಗತಿ ಓದಿ ಡಾಕ್ಟರೇಟ್ ಪಡೆದ ವಿದ್ವಾಂಸರು. ಅವರ ತಂದೆ ಮತ್ತು ತಾಯಿ ಇಬ್ಬರು ರಂಗಭೂಮಿ ಕಲಾವಿದರಾಗಿರುವ ಕಾರಣ ತಾವು ಕೂಡ ನಾಟಕಗಳಲ್ಲಿ ನಟಿಸಲು ಶುರು ಮಾಡಿದರು. ನಾಟಕದ ನಂತರ ಸಿನಿಮಾ ಪ್ರಯಾಣ ಪ್ರಾರಂಭ ಆಯಿತು.ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ ಅವರು ಡಾಕ್ಟರೇಟ್ ಪಡೆದರು.

ಸಾಹಸ ಸಿಂಹ ವಿಷ್ಣುವರ್ಧನ್ ವಿಷ್ಣುವರ್ಧನ್ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ. ಮೈಸೂರಿನ ಗೋಪಾಲಸ್ವಾಮಿ ಶಾಲೆಯಲ್ಲಿ ವಿದ್ಯಾಬ್ಯಾಸ ಮಾಡಿದರು. ನಂತರ ಬೆಂಗಳೂರಿಗೆ ಬಂದ ಮೇಲೆ ಪ್ರೌಢ ಶಿಕ್ಷಣ ಮುಗಿಸಿದರು. 22ನೇ ವಯಸ್ಸಿನಲ್ಲಿ ಮೊದಲ ಬಾರಿಗೆ ಸಿನಿಮಾದಲ್ಲಿ ನಟಿಸಿದರು. ‘ವಂಶವೃಕ್ಷ’ ಅವರ ಮೊದಲ ಸಿನಿಮಾ. ಆದಾದ ನಂತರ ‘ನಾಗರಹಾವು’ ಸಿನಿಮಾ ಬಂತು. ಆ ಚಿತ್ರದಿಂದ ವಿಷ್ಣು ಪ್ರಭಾವ ಶುರುವಾಯ್ತು.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸುದೀಪ್ ರವರು ಬೆಂಗಳೂರಿನ ದಯಾನಂದ ಸಾಗರ್ ಕಾಲೇಜ್ ನಲ್ಲಿ ಇಂಜಿನೀಯರಿಂಗ್ ಮಾಡಿದ್ದಾರೆ. ನಟನ ತರಬೇತಿಗಾಗಿ ಮುಂಬೈಗೆ ಹೋದ ಸುದೀಪ್, ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನಲ್ಲಿ ದರ್ಶನ್ ಪಿಯುಸಿ ವರೆಗಿನ ಶಿಕ್ಷಣವನ್ನು ಮುಗಿಸಿದರು. 1995-96 ರಲ್ಲಿ ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ್ದರು. ಅಪ್ಪ ದೊಡ್ಡ ಕಲಾವಿದ ಆಗಿದ್ದ ಕಾರಣವೋ ಏನೋ, ನಟ ದರ್ಶನ್ ಗೆ ಸಿನಿಮಾ ನಟನೆಯ ಮೇಲೆ ಆಸೆ ಇತ್ತು. ದರ್ಶನ್ ಪಾಲಿಟೆಕ್ನಿಕ್ ಕಾಲೇಜಿಗೆ ಅಡ್ಮಿಶನ್ ಗಾಗಿ ಅರ್ಜಿ ಸಲ್ಲಿಸಿದ ನಂತರ ನೀನಾಸಂ ಗೆ ಸೇರಿ ರಂಗ ಶಿಕ್ಷಣಪಡೆದರು.

ರಮೇಶ್ ಅರವಿಂದ್ ನಟ, ನಿರ್ದೇಶಕ ರಮೇಶ್ ಇಂಜಿನೀಯರಿಂಗ್ ಪದವಿ ಪಡೆದಿದ್ದಾರೆ.ಬೆಂಗಳೂರಿನ UVCE ಕಾಲೇಜ್ ನಲ್ಲಿ ರಮೇಶ್ ತಮ್ಮ ವಿದ್ಯಾಬ್ಯಾಸ ಪಡೆದರು. ಕಾಲೇಜು ದಿನದಲ್ಲಿ ಸಿನಿಮಾ ಕಾರ್ಯಕ್ರಮವೊಂದನ್ನು ನಿರೂಪಣೆ ಮಾಡಿದ್ದರು. ನಂತರ ಟಿವಿ ಕಾರ್ಯಕ್ರಮಗಳ ನಿರೂಪಣೆ, ಸಿನಿಮಾ ನಟನೆ ಪ್ರಾರಂಭಆಯ್ತು. ಅಲ್ಲಿಂದ ಇಂಜಿನಿಯರ್ ಆಕ್ಟರ್, ಡೈರೆಕ್ಟರ್ ಆಗಿ ಬದಲಾದರು.

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ನಟ ಶಿವರಾಜ್ ಕುಮಾರ್ ಹುಟ್ಟಿದ್ದು ಮದ್ರಾಸ್ ನಲ್ಲಿ. ಹೀಗಾಗಿ ಅಲ್ಲಿಯೇ ಅವರ ಓದು ಕೂಡ ಶುರುವಾಯ್ತು. ತಮಿಳಿನಾಡಿನ ನ್ಯೂ ಕಾಲೇಜ್ ನಲ್ಲಿ ಶಿಕ್ಷಣ ಪಡೆದರು. ಬ್ಯಾಚುಲರ್ ಆಫ್ ಸೈನ್ಸ್ ಮುಗಿಸಿದರು. ಕಮಲ್ ಹಾಸನ್ ಅಭಿಮಾನಿಯಾಗಿದ್ದ ಶಿವಣ್ಣ, ಕಾಲೇಜಿನಲ್ಲಿ ಹೆಚ್ಚು ಹೆಚ್ಚು ಸಿನಿಮಾ ನೋಡುತ್ತಿದ್ದರು. ಕಾಲೇಜು ಮುಗಿಯುತ್ತಿದ್ದ ಹಾಗೆ ಆಕಸ್ಮಿಕವಾಗಿಯೇ ಚಿತ್ರರಂಗಕ್ಕೆ ಬಂದರು.

ರಿಯಲ್ ಸ್ಟಾರ್ ಉಪೇಂದ್ರ ಬೆಂಗಳೂರಿನ ಎಪಿಎಸ್ ಕಾಲೇಜ್ ನಲ್ಲಿ ಉಪೇಂದ್ರ ಬಿ ಕಾಂ ಓದಿದರು. ಕಾಲೇಜಿನಲ್ಲಿ ಇದ್ದಾಗಲೇ ನಾಟಕ ಹಾಗೂ ಬರವಣಿಗೆ ಬಗ್ಗೆ ಹೆಚ್ಚು ಉಪ್ಪಿ ಆಸಕ್ತಿ ಇತ್ತು. ಕಾಲೇಜಿಗೆ ಹೊಗುವುದರ ಜೊತೆ ಜೊತೆಗೆ ಕೆಲ ಸಿನಿಮಾಗಳಿಗೆ ಸಂಭಾಷಣೆ ಬರೆದರು. ಅದೇ ವೇಳೆಗೆ ಕಾಶೀನಾಥ್ ಜೊತೆಗೆ ಕೆಲಸ ಮಾಡುವ ಅವಕಾಶ ಕೂಡ ಸಿಕ್ಕಿತು.

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೇ ಹೇಳುವ ಹಾಗೆ ಪುನೀತ್ ರಾಜ್ ಕುಮಾರ್ ಗೆ ಓದಿನಲ್ಲಿ ಆಸಕ್ತಿ ಕಡಿಮೆ. ಪುನೀತ್ ಶಾಲೆಗೆ ಅಂತ ಹೋಗಿದ್ದು ಕೇವಲ ಒಂದೆರಡು ವರ್ಷ ಮಾತ್ರ. ಆರು ತಿಂಗಳ ಮಗು ಇದ್ದಗಲೇ ತೆರೆ ಮೇಲೆ ಕಾಣಿಸಿಕೊಂಡ ಅಪ್ಪು ಸ್ಕೂಲ್ ಗಿಂತ ಶೂಟಿಂಗ್ ಸೆಟ್ ನಲ್ಲಿಯೇ ಇರುತ್ತಿದ್ದರು. ನಂತರ ಮನೆಯಲ್ಲಿಯೇ ಟ್ಯೂಷನ್ ಮೂಲಕ ಓದಿ ಡಿಪ್ಲೊಮ ಇನ್ ಕಂಪ್ಯೂಟರ್ ಸೈನ್ಸ್

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆ ಖರೀದಿದಾರರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಹೊಸ ಶುಭ ಸಮಾಚಾರವೊಂದನ್ನು ನೀಡಿದ್ದಾರೆ. ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾದ್ಯಮಗಳಿಗೆ ವಿವರಿಸಿದ ಸೀತಾರಾಮನ್ “ಪ್ರಸ್ತುತ 1600 ಕ್ಕೂ ಹೆಚ್ಚು ವಸತಿಯೋಜನೆಗಳು ಸ್ಥಗಿತಗೊಂಡಿವೆ. ಹಾಗಾಗಿ ಸರ್ಕಾರ , ಕೈಗೆಟುಕುವ ಮತ್ತು ಮಧ್ಯಮ ಪ್ರಮಾಣದ ಪ್ರಸ್ತುತ ಸ್ಥಗಿತಗೊಂಡ ವಸತಿಯೋಜನೆಗಳನ್ನು ಪೂರ್ಣಗೊಳಿಸಲು ಆದ್ಯತೆಯ ಸಾಲ, ಹಣಕಾಸು ನೆರವು ನೀಡಲು ‘ವಿಶೇಷ ವಿಭಾಗ’ ಸ್ಥಾಪನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದರು. ದೇಶದಲ್ಲಿಸ್ಥ ಗಿತವಾಗಿರುವ ವಸತಿ ಯೋಜನೆಗಳನ್ನು ಪುನಾರಂಭಿಸಿ…
ಟಿಕ್ ಟಾಕ್ ಹಾವಳಿ ಎಲ್ಲೇ ಮೀರುತ್ತಿದೆ. ಈ ಆ್ಯಪ್ ನಿಷೇಧವಾಗಬೇಕೆಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಟಿಕ್ಟಾಕ್ ಆ್ಯಪ್ನಿಂದ ಜೀವ ಕಳೆದುಕೊಳ್ಳುತ್ತಿರುವವ ಸಂಖ್ಯೆಯೂ ಹೆಚ್ಚುತ್ತಿದೆ. ತುಮಕೂರಿನಲ್ಲಿ ಯುವಕನೊರ್ವ ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಇದೀಗ ಕೋಲಾರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಟಿಕ್ಟಾಕ್ ಕ್ರೇಜ್ಗೆ ಬಲಿಯಾಗಿದ್ದಾಳೆ. ಮಾಲಾಗೆ ವಿಪರೀತ ಟಿಕ್ಟಾಕ್ ಗೀಳು ಅಂಟಿಕೊಂಡಿತ್ತು. ಹೀಗಾಗಿ ಕೂತಲ್ಲಿ ನಿಂತಲ್ಲಿ ಟಿಕ್ಟಾಕ್ ಚಿತ್ರೀಕರಿಸುತ್ತಿದ್ದಳು. ಇದೇ ರೀತಿ ಅಪಾಯಕಾರಿ ಕೃಷಿ ಹೊಂಡದ ಬಳಿ ಟಿಕ್ಟಾಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾಳೆ. ಕೋಲಾರದ ಸರಕಾರಿ ಮಹಿಳಾ ಕಾಲೇಜಿನಲ್ಲಿ ಮಾಲಾ…
ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ರಸ್ತೆ ಅಪಘಾತದ ಬಗ್ಗೆ ನಟ ದರ್ಶನ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಸ್ತೆಯಲ್ಲಿ ಸಂಚಾರ ಮಾಡುವಾಗ ಸುರಕ್ಷಿತವಾಗಿ ಇರಲು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಕಳೆದ ವರ್ಷ ದರ್ಶನ್ ಪುತ್ರ ವಿನೀಶ್ ಹುಟ್ಟುಹಬ್ಬಕ್ಕೆ ದೂರದ ಊರಿನಿಂದ ಅಭಿಮಾನಿಗಳು ಆಗಮಿಸಿದ್ದರು. ಈ ವೇಳೆ ರಸ್ತೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅಭಿಮಾನಿಯೊಬ್ಬರು ನಿಧನ ಹೊಂದಿದರು. ಈ ದುರ್ಘಟನೆಯನ್ನು ದರ್ಶನ್ ಇನ್ನು ಮರೆತಿಲ್ಲ. ಈ ವರ್ಷ ವಿನೀಶ್ ಹುಟ್ಟುಹಬ್ಬ ಹತ್ತಿರದಲ್ಲಿ ಇದ್ದು, ಕಾರ್ಯಕ್ರಮಕ್ಕೆ ಆಗಮಿಸುವ ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದಾರೆ. ”ಅಭಿಮಾನಿಗಳಲ್ಲಿ ಕಳಕಳಿಯ ಮನವಿ….
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…