ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ.

ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ ನಂಬಿಕೆ ಇದೆ. ಅಮಾವಾಸ್ಯೆಯ ದಿನ ದುಷ್ಟ ಶಕ್ತಿಗಳು ಶಕ್ತಿ ಪಡೆಯುತ್ತದೆ ಹಾಗೂ ಸ್ವತಂತ್ರವಾಗಿ ಓಡಾಡುತ್ತದೆ ಎನ್ನುತ್ತಾರೆ. ಮಾಟ ಮಂತ್ರಗಳನ್ನು ಮಾಡುವವರಿಗೆ ಅಮಾವಾಸ್ಯೆ ಸೂಕ್ತ ದಿನ ಎನ್ನಲಾಗುತ್ತದೆ. ದೀಪಾವಳಿಯಂದು ಬರುವ ಅಮಾವಾಸ್ಯೆಯನ್ನೂ ಅತ್ಯಂತ ದೋಷ ಪೂರಿತ ಅಮವಾಸ್ಯೆ ಎಂದು ಕರೆಯುತ್ತಾರೆ. ಹಾಗಾಗಿ ದೀಪಾವಳಿಯಂದು ದೇವರನ್ನು ಪೂಜಿಸಿ, ದುಷ್ಟಶಕ್ತಿಗಳು ಬರದಂತೆ ದೀಪಗಳನ್ನು ಹಚ್ಚುತ್ತಾರೆ. ದೇಶದ ಕೆಲವೊಂದು ಭಾಗಗಳಲ್ಲಿ ಮಹಾಕಾಳಿಯು ದುಷ್ಟಶಕ್ತಿಗಳನ್ನು ನಾಶ ಮಾಡುವುದರಿಂದ ಅಮಾವಾಸ್ಯೆಯಂದು ಮಹಾಕಾಳಿಯನ್ನು ಆರಾಧಿಸುತ್ತಾರೆ.

ಹುಣ್ಣಿಮೆ : ಹುಣ್ಣಿಮೆ ಅಥವಾ ಪೌರ್ಣಮಿಯು ಸಮೃದ್ಧಿ ಹಾಗೂ ದೈವತ್ವಕ್ಕೆ ಸಂಬಂಧಿಸಿದೆ. ಅಮವಾಸ್ಯೆಯಂದು ಯಾವುದೇ ಶುಭಕಾರ್ಯಗಳನ್ನು ಮಾಡದಿದ್ದರೂ, ಹುಣ್ಣಿಮೆಯಂದು ಮಾಡುವ ಶುಭಕಾರ್ಯಗಳು ಅಥವಾ ಕೆಲಸಗಳು ಯಶಸ್ವಿಯಾಗುತ್ತದೆ ಎನ್ನುವ ನಂಬಿಕೆ ಇದೆ. ಅಮವಾಸ್ಯೆಯು ಶುಭವಲ್ಲವೆಂದೂ, ಬುಧವಾರ ಅಮಾವಾಸ್ಯೆ ಬಿದ್ದರೆ ಕಾಲಸರ್ಪದೋಷ ಪೂಜೆಯನ್ನು ಮಾಡಲಾಗುತ್ತದೆ. ಈ ಪೂಜೆಯನ್ನು ಯಾರಾದರೂ ಕಾಳಸರ್ಪದೋಷದಿಂದ ಬಳಲುತ್ತಿದ್ದರೆ ಈ ದೋಷವನ್ನು ಪರಿಹರಿಸಲು ಅಮವಾಸ್ಯೆಯಂದು ಪೂಜೆ ಮಾಡುತ್ತಾರೆ. ಈ ಪೂಜೆಯು ರಾಹುವನ್ನು ನಿಯಂತ್ರಿಸುತ್ತದೆ ಹಾಗೂ ಕಾಲಸರ್ಪದ ದೋಷವನ್ನು ಶೇಕಡಾ ಎಪ್ಪತ್ತರಷ್ಟು ಕಡಿಮೆಗೊಳಿಸುತ್ತದೆ
ಹುಣ್ಣಿಮೆಯಂದು ಉಪವಾಸ : ಹುಣ್ಣಿಮೆ ಅಂದರೆ ಪೂರ್ಣ ಚಂದಿರನ ದಿನವನ್ನು ಹಿಂದೂಗಳು ಮಹತ್ತರವಾದ ದಿನವೆಂದು ನಂಬುತ್ತಾರೆ. ಹಾಗಾಗಿ ಹುಣ್ಣಿಮೆಯಂದು ಉಪವಾಸ ಮಾಡಿ ಶ್ರೀ ವಿಷ್ಣುವನ್ನು ಆರಾಧಿಸುತ್ತಾರೆ. ಇಡೀ ದಿನ ಉಪವಾಸವಿದ್ದು ಪ್ರಾರ್ಥನೆ ಮಾಡಿ ನಂತರ ನದಿಯಲ್ಲಿ ಮಿಂದ ನಂತರವೇ ಮುಸ್ಸಂಜೆಯ ವೇಳೆ ಲಘು ಆಹಾರವನ್ನು ಸೇವಿಸುತ್ತಾರೆ. ಹುಣ್ಣಿಮೆ ಹಾಗೂ ಅಮಾವಾಸ್ಯೆಯಂದು ಉಪವಾಸ ಅಥವಾ ಲಘು ಆಹಾರ ಸೇವನೆ ಒಳ್ಳೆಯದು ಎನ್ನುತ್ತಾರೆ ಯಾಕೆಂದರೆ ಇದು ನಮ್ಮ ಜೀರ್ಣಾಂಗ ವ್ಯವಸ್ಥೆಯಲ್ಲಿನ ಆಮ್ಲೀಯತೆಯನ್ನು ಕಡಿಮೆ ಮಾಡುತ್ತದೆ. ಹಾಗೂ ಚಯಾಪಚಯ ಕ್ರಿಯೆಯನ್ನು ನಿಧಾನಗೊಳಿಸುತ್ತದೆ. ಸಹಿಷ್ಣುತೆಯನ್ನು ಹೆಚ್ಚಿಸುತ್ತದೆ. ಇದು ದೇಹ ಮತ್ತು ಮನಸ್ಸಿನ ಸಮತೋಲನವನ್ನು ಪುನಃಸ್ಥಾಪಿಸುತ್ತದೆ..

ಅಮಾವಾಸ್ಯೆಯಂದು ಹೀಗೆ ಮಾಡಿ, : ಅಮಾವಾಸ್ಯೆಯಂದು ಉಪವಾಸ ಮಾಡುವುದರಿಂದ ಎಲ್ಲಾ ಋಣಾತ್ಮಕ ಶಕ್ತಿಗಳನ್ನು ದೂರವಿರಿಸಬಹುದು. ಇದು ದುಷ್ಟ ಶಕ್ತಿಗಳ ದೃಷ್ಟಿ ನಿಮ್ಮ ಮೇಲೆ ಬೀಳದಂತೆ ಹಾಗೂ ಋಣಾತ್ಮಕ ಶಕ್ತಿ ಹತ್ತಿರ ಸುಳಿಯದಂತೆ ಮಾಡುತ್ತದೆ. ಅಮಾವಾಸ್ಯೆಯಂದು ಮಾಡುವ ವೃತದಿಂದ ದುಷ್ಟಶಕ್ತಿಗಳನ್ನು ನಿಗ್ರಹಿಸುವ ದೇವತಾ ಶಕ್ತಿಗಳ ಆಶೀರ್ವಾದವು ದುಷ್ಟಶಕ್ತಿಗಳ ನೆರಳೂ ನಿಮ್ಮ ಮೇಲೆ ಬೀಳದಂತೆ ತಡೆಯುತ್ತದೆ ಹಾಗೂ ನಿಮಗೆ ಅದೃಷ್ಟವನ್ನು ದಯಪಾಲಿಸುತ್ತದೆ. ನಂಬಿಕೆಯ ಪ್ರಕಾರ ಅಮಾವಾಸ್ಯೆಯಂದು ಉಪವಾಸ ಮಾಡಿದರೆ ನಿಮ್ಮ ಆಸೆ, ಆಕಾಂಕ್ಷೆಗಳೆಲ್ಲವೂ ಈಡೇರುತ್ತದೆ ಎನ್ನಲಾಗುತ್ತದೆ. ಪೂರ್ವಜರಿಗಾಗಿ ಉಪವಾಸ ಮಾಡಿದರೆ ನೀವು ಯಾವ ಅದೃಷ್ಟವನ್ನು ಬಯಸುತ್ತೀರೋ ಅದು ನಿಮ್ಮೆಡೆಗೆ ಬರುತ್ತದೆ.
ಅಮಾವಾಸ್ಯೆಯಂದು, ನಿಂಬೆ ಹಣ್ಣನ್ನು ನಾಲ್ಕು ಭಾಗಗಳಾಗ ಕತ್ತರಿಸಿ, ನಿಮ್ಮ ನಾಲ್ಕು ದಿಕ್ಕು ಅಂದರೆ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದಿಕ್ಕುಗಳಿಗೆ ಎಸೆಯಿರಿ, ನಿಮಗೆ ನಿರುದ್ಯೋಗ ಸಮಸ್ಯೆಯಿದ್ದರೆ ಈ ಪರಿಹಾರವನ್ನು ಅನುಸರಿಸಿ. ಈ ವಿಧಾನವನ್ನು ಅನುಸರಿಸುವಾಗ ನಾಲ್ಕು ದಿಕ್ಕುಗಳಿಗೂ ಅಡ್ಡವಾಗಿ ನಿಂತಿರುವುದನ್ನು ಹಾಗೂ ನಿಮ್ಮನ್ನು ಯಾರೂ ನೋಡುತ್ತಿಲ್ಲವೆಂದೂ ಖಚಿತಪಡಿಸಿಕೊಳ್ಳಿ. ಈ ವಿಧಾನವನ್ನು ಯಾರಿಗೂ ಗೊತ್ತಾಗದಂತೆ ಮಾಡಿ. ಅಮಾವಾಸ್ಯೆಯಂದು ವೃತವನ್ನು ಮಾಡುವುದರಿಂದ ಆರೋಗ್ಯ ಸಂಬಂಧಿತ ಎಲ್ಲಾ ಸಮಸ್ಯೆಗಳೂ ನಿವಾರಣೆಯಾಗುವುದು. ಹಾಗೂ ದೈಹಿಕವಾಗಿ, ಮಾನಸಿಕವಾಗಿ ಸಾಮರ್ಥ್ಯವನ್ನು ವೃದ್ಧಿಸಬಹುದು. ಜೊತೆಗೆ ಅನಾರೋಗ್ಯ ಹಾಗೂ ಆರ್ಥಿಕ ಸಮಸ್ಯೆಗಳು ಎಂದಿಗೂ ಎದುರಾಗದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋಲಿ ಆಟ : ಅಂಗಳದಲ್ಲಿ ಒಂದು ಕುಳಿ ತೆಗೆಯುತ್ತಾರೆ. ಕುಳಿಯಿಂದ ಸುಮಾರು ಇಪ್ಪತ್ತು ಇಪ್ಪತ್ತೈದು ಫೂಟುಗಳ ಅಂತರದ ಮೇಲೆ ಅಡ್ಡ ಗೆರೆಯೊಂದನ್ನು ಎಳೆದು, ಅಲ್ಲಿಂದ ಆಟಗಾರರು ಗೋಡಾ-ಎಂದು ತಮ್ಮ ಗೋಲಿಗಳನ್ನು ಕುಳಿಯತ್ತ ಬಿಡುವರು. ಯಾರ ಗೋಲಿ ಕುಳಿಯ ಹತ್ತರ ಬೀಳುವದೋ ಅವರು ಮೊದಲು ಕುಳಿ ತುಂಬುವರು. ಕುಳಿ ತುಂಬಿದವರು ಕುಳಿಯ ಹತ್ತಿರ ಕುಳಿತಯ ಇನ್ನೊಬ್ಬರ ಗೋಲಿಗೆ ಹೊಡೆಯುವರು. ಆಗ ಇನ್ನೊಬ್ಬ ಅವನ ಗೋಲಿ ಹೊಡೆತದಿಂದ ಎಷ್ಟು ದೂರ ಬೀಳುವದೋ ಅಲ್ಲಿಂದ ತನ್ನ ಮುಷ್ಟಿ ಕಟ್ಟಿ ಮುಷ್ಟಿಯ ತುದಿಯಿಂದ ಗೋಲಿಯನ್ನು ತೊರಿ ಕುಳಿಯನ್ನು ತುಂಬಬೇಕು. ಕೈಮುಷ್ಟಿಯಿಂದ ಗೋಲಿ ತೂರುವುದಕ್ಕೆ “ಡೀಗು” ಎನ್ನುತ್ತಾರೆ. ಒಮ್ಮ ಗೋಲಿಗೆ ಹೊಡೆದ ಹೊಡೆತದ ಗುರು ತಪ್ಪಿದರೆ, ಗೋಲಿ ಇದ್ದಲ್ಲಿಂದ ಮೇಲೆ ಹೇಳಿದ ರೀತಿಯಲ್ಲಿ ಗೋಲಿ ತೂರಿ ಕುಳಿ ತುಂಬಬೇಕು. ಒಮ್ಮೊಮ್ಮೆ ಗೋಲಿ ಕುಳಿಯಿಂದ ಹೊಡೆದ ಪರಿಣಾಮವಾಗಿ ಬಹಳ ದೂರ ಬಿದ್ದರೆ, ಮೂರು ಸಲ ಮುಷ್ಟಿಯಿಂದ ಡೀಗಲು ಅವಕಾಶ ಕೊಡುತ್ತಾರೆ. ಆಗ ಗೋಲಿ ಕುಳಿ ತುಂಬದೆ ಕುಳಿಯಿಂದ ಅಂತರದಲ್ಲಿಯೇ ಉಳಿದರೆ, ಮತ್ತೆ ಆಟಗಾರ ಇನ್ನೊಮ್ಮೆ ಕುಳಿಯ ಹತ್ತಿರ ಕುಳಿತು ಗೋಲಿಗೆ ಹೊಡೆದು ಓಡುಸುತ್ತಾನೆ. ಹೀಗೆ ಗೋಲಿಯನ್ನು ಮುಷ್ಟಿಯಿಂದ ಡೀಗುವವ ಕುಳಿ ತುಂಬುವವರೆಗೆ ಆಟ ಮುಂದುವರೆಯುತ್ತದೆ.
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ. ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40…
ಗ್ಯಾಸ್ ಬುಕ್ ಮಾಡಿ 20 ದಿನವಾದರೂ ಗ್ಯಾಸ್ ಸಿಲಿಂಡರ್ಗಳು ಜನರಿಗೆ ಸಿಗುತ್ತಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಬೆಂಗಳೂರು: ಮಂಗಳೂರಿನ ಭಾರತ್ ಗ್ಯಾಸ್ ಪ್ಲಾಂಟ್ನಲ್ಲಿ ತಾಂತ್ರಿಕ ದೋಷ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿ ಗ್ಯಾಸ್ ಸಿಲಿಂಡರ್ ಸರಬರಾಜು ಸ್ಥಗಿತಗೊಂಡಿದೆ. ಇದರಿಂದಾಗಿ ಜನ ಸಾಮಾನ್ಯರು ಅಡುಗೆ ಮಾಡಲು ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಮಂಗಳೂರು ಭಾರತ್ ಗ್ಯಾಸ್ ಪ್ಲಾಂಟ್ನಿಂದ ನೆಲಮಂಗಲ ಸಮೀಪದ ಸೋಲೂರು ಪ್ಲಾಂಟ್ಗೆ ಲಿಕ್ವಿಡ್ ಗ್ಯಾಸ್ ಸರಬರಾಜಾಗುತ್ತದೆ. ಆದರೆ, ಪ್ಲಾಂಟ್ನಲ್ಲಿ ತಾಂತ್ರಿಕ ಸಮಸ್ಯೆ…
ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವೈಖರಿಯನ್ನು ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೊಗಳಿದ್ದಾರೆ. ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೈ ಶಾಸಕಿ ಮೋದಿ ಅವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಮಾತನಾಡುತ್ತ ಬಹಳ ಜನ ರಾಜಕಾರಣಿಗಳನ್ನ ಕಳ್ಳರು, ಸುಳ್ಳರು, ಮೋಸಗಾರರು ಎಂದು ಕರೆಯುತ್ತಾರೆ. ಆದ್ರೆ ಎಲ್ಲಾ ರಾಜಕಾರಣಿಗಳು ಆ ಪಟ್ಟಿಗೆ ಸೇರುವುದಿಲ್ಲ. ಕೆಲವು ರಾಜಕಾರಣಿಗಳ ನಡೆಯನ್ನು, ಕೆಲಸವನ್ನು ಸುಳ್ಳು ಎಂದು ಹೇಳಲು ಸಾಧ್ಯವಿಲ್ಲ. ಯಾಕೆಂದರೆ ಪ್ರಧಾನಿ ನರೇಂದ್ರ…
ಕೇಂದ್ರ ಸಚಿವ ಬಿಜೆಪಿಯ ಹಿರಿಯ ಮುಖಂಡ ಅನಂತಕುಮಾರ್ ರವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಫಲಕಾರಿಯಾಗದ ಕಾರಣ ಬೆಳಗಿನ ಜಾವ ಮೂರು ಗಂಟೆಗೆ ವಿಧಿವಶವರಾಗಿದ್ದಾರೆ. ಅಗಲಿದ ರಾಜಕೀಯ ನಾಯಕನಿಗೆ ಎಲ್ಲಾ ಪಕ್ಷದ ನಾಯಕರು ಸಂತಾಪ ಸೂಚಿಸಿದ್ದಾರೆ.ಹಾಗೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರಾಗಿದ್ದ ಎಚ್.ಎನ್. ಅನಂತಕುಮಾರ್ ರವರಿಗೆ ಸಂತಾಪ ಸೂಚಿಸಿದ್ದಾರೆ. ಎಚ್.ಎನ್. ಅನಂತಕುಮಾರ್ ರವರು ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೆಲವು ದಿನಗಳಿಂದ ಚಿಕಿತ್ಸೆ ಪೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ, ೫೯ ವರ್ಷದ ಅನಂತಕುಮಾರ್…
ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…