ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಟ್ರೋದಲ್ಲಿ ಪ್ರಯಾಣಿಸುವ ಜನರ ಸಂಖ್ಯೆ ಹೆಚ್ಚಾದಷ್ಟು ಬಾಗಿಲಲ್ಲಿ ಸಿಲುಕಿ ಪರದಾಡುವವರ ಸಂಖ್ಯೆಯೂ ಸಹ ಹೆಚ್ಚಾಗುತ್ತಿದೆ . ಹಸಿರು ಮಾರ್ಗದ ರೈಲಿನಲ್ಲಿ ಬಾಗಿಲ ಬಳಿ ಕಾಲು ಸಿಕ್ಕಿಕೊಂಡು ಒದ್ದಾಡುತ್ತಿರುವ
ಎರಡು ದೃಶ್ಯ ಇತ್ತೀಚೆಗೆ ನಡೆದಿವೆ. ಅ.14ರಂದು ಸಂಜೆ 6.20 ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಹೆಣ್ಣು ಮಗುವಿನ ಕಾಲು ಬಾಗಿಲಿನಲ್ಲಿ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ನಿಲ್ದಾಣದಲ್ಲಿ ದಂಪತಿ ಮಗುವಿನೊಂದಿಗೆ ರೈಲಿನ ಒಳಗೆ ಪ್ರವೇಶಿಸುತ್ತಿದ್ದರು, ದಟ್ಟಣೆ ಹೆಚ್ಚಿದ್ದರಿಂದ ದಂಪತಿ ಹಾಗೂ ಮಗು ಬಾಗಿಲಿನ ಬಳಿಯಲ್ಲೇ ನಿಲ್ಲಬೇಕಾಯಿತು.

ಈ ವೇಳೆ ಸ್ವಯಂಚಾಲಿತವಾಗಿ ಬಾಗಿಲು ಮುಚ್ಚಿಕೊಂಡಾಗ ಮಗುವಿನ ಕಾಲು ಬಾಗಿಲಿನ ನಡುವೆ ಸಿಕ್ಕಿಹಾಕಿಕೊಂಡಿತು. ರೈಲು ಹೊರಟಿದ್ದರಿಂದ ದಂಪತಿ ಹಾಗೂ ಸುತ್ತಮುತ್ತಲಿದ್ದ ಪ್ರಯಾಣಿಕರು ಆತಂಕಕ್ಕೊಳಗಾಗಿ ಸಹಾಯ ಮಾಡಲು ಎಲ್ಲರು ಆಕೆಗೆ ನೆರೆವು ನೀಡಿದರು . ಅಷ್ಟರಲ್ಲೇ ದಂಪತಿ ಮಗುವಿನ ಕಾಲನ್ನು ಒಳಕ್ಕೆ ಎಳೆದುಕೊಂಡರು.ಆದರೆ, ಲೋಕೊ ಪೈಲಟ್ಗೆ ಮಾಹಿತಿ ತಿಳಿದು ರೈಲು ಸಂಚಾರ ಸ್ಥಗಿತಗೊಳಿಸಿದ್ದರಿಂದ ಸೇವೆಯಲ್ಲಿ ವ್ಯತ್ಯಾಸವಾಯಿತು.5-7 ನಿಮಿಷಗಳ ಕಾಲ ಸಂಚಾರದಲ್ಲಿ ವ್ಯತ್ಯಯವಾಗಿದೆ. ಎರಡು ಟ್ರಿಪ್ಗಳು ಕಡಿತವಾಗಿವೆ ಎಂದು ಮೂಲಗಳು ತಿಳಿಸಿವೆ.

‘‘ಮೆಜೆಸ್ಟಿಕ್ ನಿಲ್ದಾಣದಲ್ಲಿ ದಟ್ಟಣೆ ಅಧಿಕವಾಗಿತ್ತು. ರೈಲು ಬಂದು ನಿಂತಾಗ ಒಳಗೆ ಹೋಗುವಂತೆ ಸಿಬ್ಬಂದಿ ಸೂಚನೆ ನೀಡಿದರು. ಮೂರು ವರ್ಷದ ಮಗು ಅಪ್ಪ, ಅಮ್ಮನೊಂದಿಗೆ ಒಳಗೆ ಪ್ರವೇಶಿಸಿದಳು. ಸ್ವಯಂಚಾಲಿತವಾಗಿ ಮುಚ್ಚಿಕೊಂಡ ಬಾಗಿಲಲ್ಲಿ ಬಾಲಕಿಯ ಕಾಲು ಸಿಲುಕಿತು. ಅದನ್ನು ಎಳೆದುಕೊಳ್ಳುವಲ್ಲಿ ದಂಪತಿ ಯಶಸ್ವಿಯಾದರು,’’ಎಂದು ಪ್ರತ್ಯಕ್ಷದರ್ಶಿ ಮುಕ್ತಿಯಾರ್ ವಿವರಿಸಿದರು.

ಅ.19 ರಂದು ರಾತ್ರಿ 8.32 ಕ್ಕೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಪ್ಲಾಟ್ಫಾರಂ ಹಾಗೂ ರೈಲಿನ ನಡುವೆ ಸಿಕ್ಕಿ ಹಾಕಿಕೊಂಡಿದ್ದ ಘಟನೆ ನಡೆದಿದೆ. ರೈಲು ಹಾಗೂ ಪ್ಲಾಟ್ಫಾರಂ ನಡುವೆ ಅಂತರವಿದ್ದು, ಇದರಲ್ಲಿ ಮಹಿಳೆಯು ಸಿಕ್ಕಿಹಾಕಿಕೊಂಡಿದ್ದು . ಲೋಕೊ ಪೈಲಟ್ ಕೂಡಲೇ ಇದನ್ನು ಗಮನಿಸಿದ್ದರಿಂದ ಮೆಟ್ರೋನ ಬಾಗಿಲು ಮುಚ್ಚಲಿಲ್ಲ. ನಂತರ ಸಹಾಯಕ್ಕೆ ಬಂದ ಸಿಬ್ಬಂದಿ ಹಾಗೂ ಪ್ರಯಾಣಿಕರು ಆಕೆಗೆ ಸಹಾಯ ಮಾಡಿದರು . ಈ ವೇಳೆ ಸುರಕ್ಷತಾ ಕ್ರಮವಾಗಿ ಥರ್ಡ್ ರೇಲ್ನಲ್ಲಿ ಹರಿಯುವ ವಿದ್ಯುತ್ ಬಂದ್ ಮಾಡಲಾಗಿತ್ತು.8.36ಕ್ಕೆ ವಿದ್ಯುತ್ ಪೂರೈಕೆಯನ್ನು ಸರಿಪಡಿಸಿ ರೈಲು ಕಾರ್ಯಾಚರಣೆ ಗೊಳಿಸಲಾಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
ಬಿಪಿಎಲ್ ಪಡಿತರ ಚೀಟಿದಾರರು ಇನ್ನು ಮುಂದೆ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಾದರೂ ತಮ್ಮ ಪಾಲಿನ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ಹುಚ್ಚ ವೆಂಕಟ್…..ತಮ್ಮ ಯಡವಟ್ಟುಗಳಿಂದಲೇ ಫೇಮಸ್ ಆದವರು. ಜೊತೆಗೆ ಬಿಗ್ ಬಾಸ್ಗೆ ಹೋಗಿ ಮತ್ತಷ್ಟು ಹೆಸರು ಮಾಡಿದ್ರು. ಕಾವೇರಿ ನೀರು, ಕನ್ನಡ ಭಾಷೆ ಬಗ್ಗೆ ಹೇಳುತ್ತಾ, ಒಂದೆರಡು ಚಿತ್ರಗಳನ್ನೂ ಮಾಡಿ, ಮಾತ್ ಮಾತಿಗೂ ನನ್ನ ಎಕ್ಕಡ ಎಂದು ಡೈಲಾಗ್ ಡೆಲವರಿ ಮಾಡುತ್ತಿದ್ದವರು ಹುಚ್ಚಾ ವೆಂಕಟ್. ಒಂದಿಲ್ಲೊಂದು ಗಲಾಟೆ ಮಾಡಿಕೊಳ್ತಾ, ಸುದ್ದಿಯಲ್ಲಿದ್ದ ಹುಚ್ಚ ವೆಂಕಟ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಹೌದು, ಚೆನ್ನೈನ ಬೀದಿಗಳಲ್ಲಿ ಹುಚ್ಚ ವೆಂಕಟ್ ಬರಿಗಾಲಲ್ಲಿ ಓಡಾಡ್ತಿರೋ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅವರ ಕಾಲಲ್ಲಿ…