ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.
ಹರ್ಷವರ್ಧನ್ 14 ವರ್ಷದ ಬಾಲಕ, ಗುಜರಾತ್’ನಲ್ಲಿ ನಡೆಯುತ್ತಿರುವ ವೈಬ್ರಂಟ್ ಜಾಗತಿಕ ಶೃಂಗಸಭೆಯಲ್ಲಿ ತಾನು ಡಿಸೈನ್ ಮಾಡಿದ ಡ್ರೋನ್ ಅನ್ನು ಪ್ರದರ್ಶನಕ್ಕೆ ತಂದಿದ್ದನು. ಈ ಡ್ರೋನ್ ಕಾರ್ಯವನ್ನು ಗಮನಿಸಿದ ಗುಜರಾತ್ ಸರ್ಕಾರ ತಮಗೆ ಅಂತಹ ಡ್ರೋನ್ ಬೇಕೆಂದು ಆತನ ಜೊತೆ ಬರೊಬ್ಬರಿ 5 ಕೋಟಿ ರೂಪಾಯಿಗಳ ಒಪ್ಪಂದ ಮಾಡಿಕೊಂಡಿದೆ.
ಈ ಡ್ರೋನ್ ಮಾಡುವ ಕೆಲಸ :- ಯುದ್ಧ ಪ್ರದೇಶಗಳಲ್ಲಿ, ಗಡಿ ಪ್ರದೇಶಗಳಲ್ಲಿ ಅಡಗಿಸಿ ಇಟ್ಟಿರುವ ಮದ್ದುಗುಂಡುಗಳನ್ನು ಗುರ್ತಿಸಿ, ಅವುಗಳನ್ನು ನಿಷ್ಕ್ರಿಯಗೊಳಿಸಲು ಉಪಯೋಗಿಸುವ ಮೂರು ವಿಧದ ಡ್ರೋನ್’ಗಳನ್ನು ಈ ಪುಟ್ಟ ಪೋರ ತಯಾರಿಸಿದ್ದಾನೆ.
ಈ ಆಲೋಚನೆ ಬಂದಿದ್ದು ಹೇಗೆ?
ಕಳೆದ ಒಂದು ವರ್ಷದಿಂದ ತಾನು ಇಂತಹ ಡ್ತೋನ್’ಗಳನ್ನು ನಿರ್ಮಿಸುತ್ತಿದ್ದು, ಟಿವಿ ನೋಡುವಾಗ ತುಂಬಾ ಜನ ಸೈನಿಕರು ಸ್ಪೋಟಕಗಳಿಂದ ಸಾವನ್ನಪ್ಪುವುದು, ತೀವ್ರವಾಗಿ ಗಾಯಗೊಳ್ಳುವುದನ್ನು ನೋಡಿ ಈ ಆಲೋಚನೆ ಬಂದಿರುವುದಾಗಿ ತಿಳಿಸಿದ್ದಾನೆ. ಈ ಮೂರು ವಿಧದ ಡ್ರೋನ್’ಗಳನ್ನು ತಯಾರಿಸಲು 5 ಲಕ್ಷ ರೂಪಾಯಿ ಖರ್ಚು ಮಾಡಿರುವುದಾಗಿ ತಿಳಿಸಿದ್ದಾನೆ.
ಡ್ರೋನ್’ನಲ್ಲಿ ಏನೇನಿದೆ :-
ಈ ಡ್ರೋನ್’ನಲ್ಲಿ ಇನ್ಫ್ರಾರೆಡ್, ಆರ್’ಜಿಬಿ ಸೆನ್ಸರ್ ಇರುತ್ತದೆ ಎಂದೂ, ಜೊತೆಗೆ ಥರ್ಮಲ್ ಮೀಟರ್, 21 ಮೇಗಾಪಿಕ್ಸಲ್ ಕ್ಯಾಮರ, ಮೆಕಾನಿಕಲ್ ಷಟ್ಟರ್ ಇರುತ್ತದೆ ಎಂದು ಹರ್ಷವರ್ಧನ್ ತಿಳಿಸಿದ್ದಾನೆ.
ಡ್ರೋನ್ ಕಾರ್ಯ ಹೇಗಿರುತ್ತೆ :-
ಇವುಗಳ ಸಹಾಯದಿಂದ ಹೈ ರಿಜಲ್ಯೂಷನ್ ಫೋಟೋಗಳನ್ನು ತೆಗೆದು ಕಳುಹಿಸುತ್ತದೆ ಎಂದು ವಿವರಿಸಿದ. ಭೂಮಿಯಿಂದ 2 ಅಡಿ ಗುರುತನ್ನು, 8 ಚದರ ಮೀಟರ್ ಪರಿಧಿಯಲ್ಲಿರುವ ಎಲ್ಲಾ ಜಾಗವನ್ನು ಈ ಡ್ರೋನ್ ಕವರ್ ಮಾಡುತ್ತದೆ. ಆ ಜಾಗದಲ್ಲಿ ಎಲ್ಲಿಯಾದರೂ ಸ್ಪೋಟಕಗಳು ಕಂಡು ಬಂದರೆ ತಕ್ಷಣ ಬೇಸ್ ಸ್ಟೇಷನ್’ಗೆ ಕಳುಹಿಸುತ್ತದೆ. ಇದರಲ್ಲಿ 50 ಗ್ರಾಂಗಳು ತೂಕದ ಬಾಂಬ್ ಒಂದು ಇದ್ದು, ಅದು ಸ್ಫೋಟಕಗಳನ್ನು ಧ್ವಂಸ ಮಾಡುತ್ತದೆ. ತನ್ನ ಕಂಪನಿ ಏರೋಬಾಟಿಕ್ಸ್ ಹೆಸರಿನಲ್ಲಿ ಈ ಡ್ರೋನ್ ಅನ್ನು ಈಗಾಗಲೇ ಪೇಟೆಂಟ್ ಸಹ ರಿಜಿಸ್ಟ್ರಾರ್ ಮಾಡಿಸಿದ್ದಾನೆ ಈ ಬಾಲಕ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸೋಮವಾರ, 16 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:55 ಸೂರ್ಯಾಸ್ತ18:46:52 ಹಗಲಿನ ಅವಧಿ12:39:56 ರಾತ್ರಿಯ ಅವಧಿ11:19:11 ಚಂದ್ರೋದಯ06:33:51 ಚಂದ್ರಾಸ್ತ19:10:54 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….
ಹಿಂದೊಂದು ದಿನ ಊಟ ಇಲ್ಲದೆ, ಮಲಗೋಕೆ ಜಾಗ ಇಲ್ಲದೆ ಚೆನ್ನೈನ ಫುಟ್ಪಾತ್ ಮೇಲೆ ಇದ್ದ ಈ ಹುಡುಗನ ಇವತ್ತಿನ ಸಾಧನೆ ಕೇಳಿದ್ರೆ ನೀವೆಲ್ಲ ಹುಬ್ಬೇರುಸ್ತೀರಾ. ಜೀವನ ಒಂದೇ ರೀತಿಯಲ್ಲಿ ಯಾವತ್ತೂ ಇರೋದಿಲ್ಲ ಅನ್ನೋದಕ್ಕೆ ಈ ಹುಡುಗನೇ ಸ್ಪಷ್ಟ ಉದಾಹರಣ..
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಆಸ್ತಿಗಾಗಿ 21ವರ್ಷದ ಯುವತಿಗೆ 10 ವರ್ಷದ ಬಾಲಕನೊಂದಿಗೆ ಬಲವಂತವಾಗಿ ಮದುವೆ ಮಾಡಿಸಲಾಗಿದೆ. ಇಲ್ಲಿನ ಪಿಂದಿ ಭಟಿಯಾನ್ ನಗರದ ಭಾಂಗ್ಸಿಕ್ ಗ್ರಾಮದಲ್ಲಿ ಇಂತಹದ್ದೊಂದು ಮದುವೆ ನಡೆದಿದೆ.
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…