ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲೆಂಡ್ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್ನ ಮಿಡ್ಲ್ಯಾಂಡ್ಸ್ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ.

ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ ಕುರ್ಚಿ ಗಿಡಗಳನ್ನು ಸ್ವಾಭಾವಿಕವಾಗಿ ಬೆಳೆಸಲಾಗುತ್ತಿದೆ. ಗಿಡಗಳ ಮೂಲಕ ಇಲ್ಲಿ 250 ಚೇರ್ಗಳು, 100 ಲ್ಯಾಂಪ್ಗಳು ಮತ್ತು 50 ಟೇಬಲ್ಗಳನ್ನು ಅಭಿವೃದ್ದಿಗೊಳಿಸಲಾಗುತ್ತಿದೆ.ಕುರ್ಚಿ ಗಿಡ ಬೆಳೆಯಲು ಗೋವಿನ್ಗೆ ಬಾಲ್ಯವೇ ಪ್ರೇರಣೆ. ಬೋನ್ಸಾಯಿ ಗಿಡಗಳು ಬೆಳೆದು ಕುರ್ಚಿಯಂತೆ ಕಾಣುತ್ತಿತ್ತು. ಅಲ್ಲದೇ ಗೋವಿನ್ಗೆ ಬೆನ್ನುಲುಬು ಸಮಸ್ಯೆ ಇತ್ತು. ಬಾಲ್ಯದಲ್ಲಿ ಅವರ ಬೆನ್ನು ಮೂಳೆ ಸೊಟ್ಟವಾಗಿತ್ತು. ಅದನ್ನು ಸರಿಪಡಿಸಲು ಹಲವು ವರ್ಷಗಳ ಕಾಲ ಮೆಟಲ್ ಫ್ರೇಮ್ ಧರಿಸಿದ್ದರು. ಕುರ್ಚಿ ಗಿಡ ಬೆಳೆಯಲು ಗೋವಿನ್ 2006ರಲ್ಲಿ ಯತ್ನಿಸಿದರು. ಇಂಗ್ಲೆಂಡ್ನ ಪೀಕ್ ಜಿಲ್ಲೆಯಲ್ಲಿ ಎರಡು ತುಂಡು ನೆಲದಲ್ಲಿ ಅವರು ಮರದ ಕುರ್ಚಿಗಳನ್ನು ಸ್ವಾಭಾವಿಕವಾಗಿ ಬೆಳೆಸಲು ಮುಂದಾದರು.

2012ರಲ್ಲಿ ತಮ್ಮ ಯೋಜನೆಯನ್ನು ವಿಸ್ತರಿಸಿದರು. ಅದೇ ವರ್ಷ ಅಲೈಸ್ ಜೊತೆ ಗೋವಿನ್ ವಿವಾಹವಾಯಿತು. ದೊಡ್ಡ ಮಟ್ಟದಲ್ಲಿ ಮರದ ಕುರ್ಚಿಗಳನ್ನು ಬೆಳೆಯಬೇಕೆಂಬ ಅಭಿಲಾಷೆ ದುರಂತದಲ್ಲಿ ಅಂತ್ಯವಾಯಿತು. ಈ ಗಿಡಗಳನ್ನು ಹಸುಗಳು ಮತ್ತು ಮೊಲಗಳು ತಿಂದು ಹಾಕಿದವು. ಇದರಿಂದ ದೃತಿಗಡೆದ ದಂಪತಿ ಬೆಳವಣಿಗೆಯನ್ನು ಕುಂಠಿತ ಗೊಳಿಸದೆ ಮರವನ್ನು ಕುರ್ಚಿ ಆಕಾರದಲ್ಲಿ ಬೆಳೆಸಲು ಪರಿಣಾಮಕಾರಿ ಮಾರ್ಗ ಕಂಡುಕೊಂಡರು.

ಬೆಳೆಯುತ್ತಿರುವ ಕಾಂಡಗಳನ್ನು ಸರಿಯಾದ ದಿಕ್ಕಿನಲ್ಲಿ ಹಬ್ಬಿ ಕುರ್ಚಿಯ ಆಕಾರ ಪಡೆಯುವಂತೆ ಮಾಡಿದರು. ರೆಂಬೆಗಳು ಒಂದಕ್ಕೊಂದು ಬೆಸೆದುಕೊಳ್ಳಲು ಕಸಿ ವಿಧಾನ ಅನುಸರಿಸಿದರು. ಇವರ ಶ್ರಮ ಫಲ ನೀಡಿತು. ಕುರ್ಚಿಗಳು 12,480 ಡಾಲರ್, ಲ್ಯಾಂಪ್ಗಳು 2,870 ಡಾಲರ್ ಹಾಗೂ ಮೇಜುಗಳು 15,600 ಡಾಲರ್ ಮೌಲ್ಯ ಹೊಂದಿವೆ.ತೋಟದಲ್ಲೇ ಬೆಳೆಯುವ ಈ ಗಿಡ ಪೂರ್ಣಪ್ರಮಾಣದಲ್ಲಿ ಕುರ್ಚಿಯ ರೂಪ ಪಡೆಯಲು ಆರರಿಂದ ಒಂಭತ್ತು ವರ್ಷಗಳು ಬೇಕು. ಅಲ್ಲದೇ ಇದು ಸಂಪೂರ್ಣ ಒಣಗಲು ತೆಗೆದುಕೊಳ್ಳುವ ಅವಧಿ ಒಂದು ವರ್ಷ. 2030ರ ವೇಳೆಗೆ ಈ ಫರ್ನಿಚರ್ ಫಾರಂನನ್ನು ಮತ್ತಷ್ಟು ವಿಸ್ತರಿಸಲು ದಂಪತಿ ಬಯಸಿದ್ದಾರೆ. ಇದು ನಿವೃತ್ತರಾಗಿ ವಿಶ್ರಾಂತಿ ಪಡೆಯುವ ಮಂದಿಗೆ ಸೂಕ್ತವಾದ ಕುರ್ಚಿ ಎನಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಕಾಂಗ್ರೆಸ್ ಪಕ್ಷದ ಶಾಸಕರು ಸಾಲು ಸಾಲು ರಾಜೀನಾಮೆ ನೀಡಿ ಮೈತ್ರಿ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ಯುತ್ತಿರುವ ಸಂದರ್ಭದಲ್ಲೇ ದಿಢೀರ್ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಆಡಳಿತಾರೂಢ ಜೆಡಿಎಸ್ ಪಕ್ಷ ಬಿಜೆಪಿ ಜತೆ ಕೈ ಜೋಡಿಸಲು ಮುಂದಾಗಿದೆ.ನಿನ್ನೆ ತಡರಾತ್ರಿವರೆಗೂ ಜೆಡಿಎಸ್ ಹಾಗೂ ಬಿಜೆಪಿಯ ರಾಷ್ಟ್ರಮಟ್ಟದ ನಾಯಕರು ಸುದೀರ್ಘ ಸಮಾಲೋಚನೆ ನಡೆಸಿದ್ದು, ಉಭಯ ಪಕ್ಷಗಳು ತಮ್ಮೆಲ್ಲ ಹಿಂದಿನ ಮನಸ್ತಾಪಗಳನ್ನು ಬದಿಗೊತ್ತಿ ಹೊಸದಾಗಿ ಮೈತ್ರಿ ಸರ್ಕಾರ ರಚನೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್…
ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ ಘೋಷ ವಾಕ್ಯಗಳಿದ್ದ 250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ ಸುಲಲಿತ ಸಂಚಾರ ಮತ್ತು ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…
ಬಳ್ಳಾರಿ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ಭಾರೀ ಅಂತರದಲ್ಲಿ ಜಯ ಸಾಧಿಸಿದ್ದಾರೆ.ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ವಿ.ಎಸ್. ಉಗ್ರಪ್ಪ ಭಾರಿ ಅಂತರದ ಗೆಲುವು ಸಾಧಿಸಿದ್ದಾರೆ. ಉಗ್ರಪ್ಪ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಶಾಂತಾ ಅವರಿಗಿಂತ ಒಂದೂವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ಸಾಧಿಸಿದ್ದು, ಹೊಸ ದಾಖಲೆ ಬರೆದಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಬಹುತೇಕ ಪೂರ್ಣಗೊಂಡಿದ್ದು, ಚುನಾವಣಾ ಆಯೋಗ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಬೇಕಿದೆ.ಇದೇ…
ಸಿಂಧನೂರು : ಕ್ಷೇತ್ರದಿಂದ ಆಯ್ಕೆಯಾದ ಶಾಸಕರು ಇಚ್ಛೆ ಬಂದಂತೆ ನಡೆದುಕೊಳ್ಳುವುದು ಸರಿಯಲ್ಲ. ಕಾನೂನು ತಿದ್ದುಪಡಿ ಮಾಡಬೇಕು ಎಂದು ರೈತ ಯುವ ಮುಖಂಡ ರವಿಗೌಡ ಮಲ್ಲದಗುಡ್ಡ ಆಗ್ರಹಿಸಿದ್ದಾರೆ ರಾಜ್ಯದಲ್ಲೂ ಸಂವಿಧಾನಾತ್ಮಕವಾಗಿ ವಜಾಗೊಳಿಸುವ ಕೆಲಸ ಆಗಬೇಕು. ಕ್ಷೇತ್ರದ ಅಭಿವೃದ್ದಿ ಮರೆತು ಸೀಟಿಗಾಗಿ ಪ್ರತಿದಿನ ಕಚ್ಚಾಡುತ್ತಿರುವ ಶಾಸಕರಿಗೆ ತಕ್ಕ ಪಾಠ ಕಲಿಸಬೇಕಾದ ಕ್ಷೇತ್ರದಲ್ಲಿ ಅವರ ವಿರುದ್ದ ಎರಡನೇ ಸ್ತಾನದಲ್ಲಿ ಸೋತಿರುವ ಅಭ್ಯರ್ಥಿಯನ್ನು ಆ ಕ್ಷೇತ್ರದ ಮುಂದಿನ ಶಾಸಕರು ಎಂದು ಕಾನೂನು ಜಾರಿಗೆ ಬರಬೇಕು. ಆಗ ಮಾತ್ರ ಪಕ್ಷೆ ನಿಷ್ಠೆ ಹಾಗು ಕ್ಷೇತ್ರದ…