ಸುದ್ದಿ

‘ಮೇಕಪ್ ಮಾಡದ ದೃಶ್ಯಗಳನ್ನೆ ಹೆಚ್ಚು ತೋರಿಸಿದ್ದಾರೆ’ ಎಂದ ಚೈತ್ರಾ ಹೇಳಿಕೆಗೆ ಸುದೀಪ್ ಗರಂ..!

28

ಬಿಗ್ ಬಾಸ್ ಕನ್ನಡ ಏಳನೇ ಆವೃತ್ತಿಯ ಎರಡನೇ ವಾರ ಚೈತ್ರಾ ವಾಸುದೇವನ್ ಎಲಿಮಿನೇಟ್ ಆದರು. ದೊಡ್ಮನೆಯಿಂದ ಚೈತ್ರಾ ಅವರನ್ನ ಹೊರಗೆ ಕರೆದ ಸುದೀಪ್ ವೇದಿಕೆ ಮೇಲೆ ಮಾತುಕತೆ ಮುಂದುವರಿಸಿದರು. ಈ ವೇಳೆ ಚೈತ್ರಾ ವಾಸುದೇವನ್ ಅವರಿಗೆ ತಮ್ಮ ಎರಡು ವಾರದ ಜರ್ನಿ ಕುರಿತು VT (ವಿಡಿಯೋ ದೃಶ್ಯ) ತೋರಿಸಲಾಯಿತು. ಈ ವಿಡಿಯೋ ನೋಡಿದ ಚೈತ್ರಾ ವಾಸುದೇವನ್’ ಮೇಕಪ್ ಇಲ್ಲದ ದೃಶ್ಯ ಹೆಚ್ಚು ತೋರಿಸಿದ್ದಾರೆ’ ಒಂದು ವಿಚಾರಕ್ಕೆ ಕಾಮೆಂಟ್ ಮಾಡಿದರು.

ಈ ಮಾತಿನಿಂದ ಬೇಸರಗೊಂಡ ಸುದೀಪ್ ಅವರು, ವೇದಿಕೆಯಲ್ಲೇ ಚೈತ್ರಾ ಅವರಿಗೆ ಕ್ಲಾಸ್ ತೆಗೆದುಕೊಂಡರು. ಅಷ್ಟಕ್ಕೂ, ಚೈತ್ರಾ ಹೇಳಿಕೆಯ ಬಗ್ಗೆ ಸುದೀಪ್ ಏನಂದ್ರು?ಈ ಹಿಂದಿನ ಆರು ಮತ್ತು ಈಗ ಏಳನೇ ಸಂಚಿಕೆ ಸೇರಿ, ಇದೇ ಮೊದಲ ಬಾರಿಗೆ ಮನೆಯಿಂದ ಹೊರಗೆ ಬಂದ ಸ್ಪರ್ಧಿಯೊಬ್ಬರು ಮೇಕಪ್ ಬಗ್ಗೆ ಮಾತನಾಡಿದ್ದಾರೆ. ಇದುವರೆಗೂ ವಿಡಿಯೋ ನೋಡಿದ ಬಹುತೇಕ ಎಲ್ಲರೂ ಕಣ್ಣೀರು ಹಾಕಿದ್ದರು. ತಮ್ಮ ಭಾವನೆ ತೋಡಿಕೊಂಡಿದ್ದರು. ಬಿಗ್ ಬಾಸ್ ಮನೆಯನ್ನ ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದರು. ಆದರೆ, ಚೈತ್ರಾ ಅವರು ‘ಮೇಕಪ್ ಇಲ್ಲದ ದೃಶ್ಯಗಳನ್ನ ಹೆಚ್ಚು ತೋರಿಸಿದ್ದಾರೆ’ ಎಂದು ಹೇಳಿದ್ದು, ಸುದೀಪ್ ಅವರ ಕೆರಳಿಸಿತು.

”ಚೈತ್ರಾ ಅವರೇ ಇದು ಸೀರಿಯಸ್ ನೋಟ್, This is not fair. ಇದುವರೆಗೂ ಮನೆಗೆ ಬಂದಿರುವ ಎಲ್ಲ ಸ್ಪರ್ಧಿಗಳಿಗೂ ಮೇಕಪ್ ಇಲ್ಲದೇ ತೋರಿಸಿದ್ದೀವಿ. ಅದನ್ನ ನೋಡಿ ಖುಷಿ ಪಡಬೇಕು. ಅದರಲ್ಲಿ ತಪ್ಪು ಕಂಡುಹಿಡಿಯುವುದನ್ನ ಏನು ಹೇಳಬೇಕು. ನಿಜವಾಗಲು ಅದು ತಪ್ಪಿಲ್ಲ. ಅದು ಬೆಳಿಗ್ಗೆ ಎದ್ದ ತಕ್ಷಣ ಬರುವ ಮುಗ್ದ ದೃಶ್ಯ” ಎಂದು ಮನವರಿಕೆ ಮಾಡಿಕೊಟ್ಟರು.ಸುದೀಪ್ ಅವರು ಈ ಮಾತು ಹೇಳುತ್ತಿದ್ದಂತೆ ಚೈತ್ರಾ ಕ್ಷಮೆ ಕೇಳಿದ್ರು.

ಬಳಿಕಯೂ ಕೂಲ್ ಆಗದ ಸುದೀಪ್ ”ಜೀವನದಲ್ಲಿ ಕೆಲವು ಸಲ ಮುಂದೆ ಹೋಗುವುದರಲ್ಲಿ ಸ್ವಲ್ಪ ತಡೆ ಸಿಕ್ಕಿದೆ ಅಂದ್ರೆ, ಎಲ್ಲಿ ಏನೋ ಒಂಚೂರು ಸಮಸ್ಯೆಯಾಗಿರುತ್ತೆ. ನೀವಾಗಿರಬಹುದು ಅಥವಾ ನಾನಾಗಿರಬಹುದು. ಇಲ್ಲಿಂದ ಮುಂದೆ ಬೆಳಿಯಬೇಕು ಅಂದುಕೊಂಡರೆ ಅದನ್ನ ನಾವು ತಿದ್ದಿಕೊಳ್ಳಬೇಕು. ಆಗ ಇನ್ನು ಮುಂದೆ ಹೋಗ್ತೀನಿ” ಎಂದು ಬುದ್ದಿ ಹೇಳಿದರು.ಈ ಮಧ್ಯೆ ವಿಟಿ ನೋಡಿ ಚೆನ್ನಾಗಿದೆ ಎಂದು ಹೇಳಿದೆ ಸರ್ ಎಂದಿದ್ದಕ್ಕೆ ಮತ್ತೆ ಪ್ರತಿಕ್ರಿಯಿಸಿದ ಸುದೀಪ್ ”ಚೈತ್ರಾ ಅವರೇ ಸುಮ್ಮನೆ ಹೇಳಬೇಡಿ. ನಾನೇನು ಸುಮ್ಮನೆ 24 ವರ್ಷ ಇಂಡಸ್ಟ್ರಿಯಲ್ಲಿದ್ದು, ಇಲ್ಲಿ ಬಂದು ನಿಂತಿಲ್ಲ. ಇದನ್ನ ನಾನು ಬಹಳ ನೊಂದುಕೊಂಡು ಹೇಳುತ್ತಿದ್ದೇನೆ” ಎಂದು ಕಿಚ್ಚನ ಮಾತಿನಲ್ಲೆ ಪೆಟ್ಟು ಕೊಟ್ಟರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆತ್ತಲೆಯಾಗಿಯೇ ಇಡೀ ಏರ್ ಪೋರ್ಟ್’ನಲ್ಲಿ ಸುತ್ತಾಡಿದ ಯುವತಿ.!ಈ ವಿಡಿಯೋ ನೋಡಿ.ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..

    ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ  ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…

  • ಆರೋಗ್ಯ

    ಇಲ್ಲಿವೆ ಮೊಡವೆಯ ಸಮಸ್ಯೆಯನ್ನು ಮಾಯ ಮಾಡೋ ಮನೆಮದ್ದುಗಳು..!ತಿಳಿಯಲು ಈ ಲೇಖನ ಓದಿ…

    ಸಾಮಾನ್ಯವಾಗಿ ಎಲ್ಲರ ಸೌಂದರ್ಯ ಹಾಳಾಗುವುದು ಮೊಡವೆಗಳಿಂದಲೇ. ಹದಿಹರೆಯದಲ್ಲಿ ಸಾಮಾನ್ಯವಾದ ಮೊಡವೆ ಅಳಿದರೂ ಕಲೆಗಳನ್ನು ಉಳಿಸುತ್ತದೆ. ಕೆಲವರಿಗಂತೂ ಎಷ್ಟೇ ವಯಸ್ಸಾದರೂ ಇವು ಬಿಟ್ಟು ಹೋಗುವ ಮಾತನ್ನೇ ಆಡುವುದಿಲ್ಲ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…

  • ಸುದ್ದಿ

    ಖ್ಯಾತ ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮಾಡಿದ್ದೇನು ಗೊತ್ತಾ..?

    ಕಿರುತೆರೆ ನಟಿಯ ಮನೆಗೆ ನುಗ್ಗಿದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮದುವೆಯಾಗುವಂತೆ ಒತ್ತಾಯಿಸಿದ ಘಟನೆ ಚೆನ್ನೈನಲ್ಲಿ ನಡೆದಿದೆ. ನಟಿ ರಿತಿಕಾ ತಮ್ಮ ತಂದೆ ಜೊತೆ ಚೆನ್ನೈನ ವಡಪಳನಿಯಲ್ಲಿರುವ ಅಪಾರ್ಟ್‍ಮೆಂಟ್‍ನಲ್ಲಿ ವಾಸವಾಗಿದ್ದರು. ಈ ವೇಳೆ ಅವರಿದ್ದ ಅಪಾರ್ಟ್‍ಮೆಂಟ್‍ಗೆ ಬಂದು ಎಂಜಿನಿಯರಿಂಗ್ ವಿದ್ಯಾರ್ಥಿ ಭರತ್‍ ಬಾಗಿಲು ತಟ್ಟಿದ್ದಾನೆ. ರಿತಿಕಾ ಅವರ ತಂದೆ ಬಾಗಿಲು ತೆರೆದ ತಕ್ಷಣ ಮನೆಯೊಳಗೆ ನುಗ್ಗಿ, ರಿತಿಕಾರನ್ನು ತನಗೆ ಕೊಟ್ಟು ಮದುವೆ ಮಾಡುವಂತೆ ಮನವಿ ಮಾಡಿಕೊಂಡಿದ್ದಾನೆ. ಯುವಕನ ಮಾತು ಕೇಳಿ ರಿತಿಕಾ ತಂದೆಗೆ ಶಾಕ್ ಆಗಿದೆ. ಬಳಿಕ ಇಬ್ಬರ ನಡುವೆ…

  • ಉಪಯುಕ್ತ ಮಾಹಿತಿ, ದೇವರು

    ದೇವರ ಪೂಜೆ ಮಾಡುವಾಗ ನಿಮ್ಮ ಮನಸ್ಸು ಚಂಚಲವಾಗುವುದಾ ಹೀಗೆ ಮಾಡಿ.

    ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…

  • ಆರೋಗ್ಯ

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾದ ಪೋಷಕಾಂಶಗಳಿವೇ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.