ಸುದ್ದಿ

ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ರಾನು: ವಿಡಿಯೋ..!

30

ಇಂಟರ್‌ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್‌ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ.

ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ ಹಿಡಿದು ಎಳೆದಿದ್ದೀರಿ. ಈ ರೀತಿ ಕೈ ಹಾಕುವುದು ಸರಿನಾ? ಏನಿದೆಲ್ಲಾ? ಎಂದು ಮಹಿಳೆ ಮೇಲೆ ರೇಗಾಡುತ್ತಾರೆ. ರಾನು ಅವರ ವರ್ತನೆನೋಡಿ ಮಹಿಳೆ ನಗುವ ಮೂಲಕ ಸುಮ್ಮನಾಗುತ್ತಾರೆ.

ಈ ವಿಡಿಯೋ ಈಗ ವೈರಲ್  ಆಗುತ್ತಿದ್ದು, ಕಮೆಂಟ್ ಮಾಡುವ ಮೂಲಕ ನೆಟ್ಟಿಗರು ತಮ್ಮ ಆಕ್ರೋಶವನ್ನು ಹೊರ ಹಾಕುತ್ತಿದ್ದಾರೆ. ಕೆಲವರು, ‘ರಾನುಗೆ ಈಗ ಅಹಂಕಾರ ಬಂದಿದೆ’ಎಂದು ಕಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ‘ರಾನು ಮೊಂಡಲ್ ಅವರ ಆ್ಯಟಿಟ್ಯೂಡ್ ನೋಡಿ’ಎಂದು ಕಮಂಟ್ ಮಾಡಿದ್ದಾರೆ.

ಪಶ್ಚಿಮ ಬಂಗಾಳದ ರಣಘಾಟ್ ನಿಲ್ದಾಣದಲ್ಲಿ ರಾನು 1972ರಲ್ಲಿ ಬಿಡುಗಡೆಯಾದ `ಶೋರ್’ ಚಿತ್ರದ ಖ್ಯಾತ ಗಾಯಕಿ ಲತಾಮಂಗೇಶ್ಕರ್ ಅವರು ಹಾಡಿದ “ಏಕ್ಪ್ಯಾರ್ ಕಾ ನಗ್ಮಾ ಹೇ” ಚಿತ್ರದ ಹಾಡನ್ನು ಹಾಡುತ್ತಿದ್ದ ವಿಡಿಯೋವೈರಲ್ ಆಗಿತ್ತು. ಈ ವಿಡಿಯೋವನ್ನು ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವೈರಲ್ ಆದ ಬೆನ್ನಲೇ ರಾನು ಅವರಿಗೆ ರಿಯಾಲಿಟಿ ಶೋನಲ್ಲಿ ಹಾಡುವ ಅವಕಾಶ ಸಿಕ್ಕಿತ್ತು. ಬಳಿಕ ಗಾಯಕ ಹಿಮೇಶ್ ರೇಶ್ಮಿಯಾ ಅವರು ತಮ್ಮ ಚಿತ್ರದಲ್ಲಿ ಹಾಡಲು ರಾನು ಅವರಿಗೆ ಅವಕಾಶ ಕೊಟ್ಟಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸದನದಲ್ಲಿ ಪತ್ನಿಯನ್ನು ಹೊಗಳಿ, ಸಾಮಾಜಿಕ ತಾಣಕ್ಕೆ ಛೀ ತೂ ಅಂದ ಎಚ್‌ಡಿ ಕುಮಾರಸ್ವಾಮಿ…!

    ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು.  ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ.  ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…

  • ಸುದ್ದಿ

    ಪರೀಕ್ಷೆ ನಡಸೆ ಬೇಕಂದ್ರೆ ವಿದ್ಯಾರ್ಥಿ ಹೆಸರಿನಲ್ಲಿ 50 ಲಕ್ಷ, ಶಿಕ್ಷಕರಿಗೆ 25 ಲಕ್ಷ, ಡೆಪಾಸಿಟ್ ಮಾಡಿ . ವಾಟಾಳ್ ನಾಗರಾಜ್ ಆಕ್ರೋಶ.

    ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್‍ಎಸ್‍ಎಲ್‍ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…

  • ತಂತ್ರಜ್ಞಾನ

    ನೆಲದ ಮೇಲೆ ಹಾಗೊ ಆಕಾಶದಲ್ಲಿ ಹಾರುವ ಕಾರು..!ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಒಂದೆಡೆ ಹಲವಾರು ರೋಗಗಳಿಗೆ ಹೊಸ ಹೊಸ ಮದ್ದುಗಳನ್ನು ಕಂಡುಹಿಡಿಯಲಾಗುತ್ತಿದ್ದರೆ ಮತ್ತೊಂದೆಡೆ ನೆಲದಲ್ಲಿ ಎದುರಾಗಲಿರುವ ಜಾಗದ ಕೊರತೆಯನ್ನು ನೀಗಿಸಲು ಬಾನಂಚಿನಲ್ಲಿ ಬೇರೆ ನೆಲೆಗಳನ್ನು ಹುಡುಕುವಂತ ಕೆಲಸಗಳು ನಡೆಯುತ್ತಿವೆ.

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…

  • ಉಪಯುಕ್ತ ಮಾಹಿತಿ

    ಅಪ್ಪಳಿಸಲಿದೆ ಗಜ ಚಂದ ಮಾರುತ..!ಎಲ್ಲೆಲ್ಲಿ ಮಳೆಯಾಗುತ್ತೆ ಗೊತ್ತಾ..?

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…

  • ಉಪಯುಕ್ತ ಮಾಹಿತಿ

    ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

    ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ. 1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ. 2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ. 3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು. 4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು…