ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಡ್ಯದ ಹುಡುಗಿ ವರಲಕ್ಷ್ಮಿ ಆಟ-ಪಾಠ ಎಲ್ಲದರಲ್ಲೂ ಸದಾ ಮುಂದು. ಆಶುಭಾಷಣ ಮಾಡುವುದರಲ್ಲಿ ಈಕೆ ಎತ್ತಿದ ಕೈ. ಕಬಡ್ಡಿ ಕೂಡ ಆಡುವ ವರಲಕ್ಷ್ಮಿಗೆ ಮುಂದೆ ಟೀಚರ್ ಆಗಿ ಬಡ ಮಕ್ಕಳಿಗೆ ಪಾಠ ಹೇಳಿಕೊಡುವ ಆಸೆ ಇದೆ. ಜೊತೆಗೆ ಸಿ.ಎ (ಚಾರ್ಟರ್ಡ್ ಅಕೌಂಟೆಂಟ್) ಆಗುವ ಕನಸಿದೆ. ಬೆಟ್ಟದಷ್ಟು ಆಸೆ ಹೊತ್ತು ‘ಕನ್ನಡದ ಕೋಟ್ಯಧಿಪತಿ’ ವೇದಿಕೆಗೆ ಬಂದಿದ್ದ ಈ ಪುಟ್ಟ ಹುಡುಗಿಯ ಕನಸು ಒಂದೇ ಕ್ಷಣದಲ್ಲಿ ನುಚ್ಚು ನೂರಾಗಿದ್ದು ಮಾತ್ರ ದುರಾದೃಷ್ಟಕರ.

‘ಕನ್ನಡದ ಕೋಟ್ಯಧಿಪತಿ’ಯಲ್ಲಿ ಕೋಟಿ ರೂಪಾಯಿ ಗೆಲ್ಲಲೇಬೇಕು ಎಂಬ ಛಲ ವರಲಕ್ಷ್ಮಿಗಿತ್ತು. ಕೋಟಿ ಗೆಲ್ಲದೇ ಹೋದರೂ, 25 ಲಕ್ಷವಾದರೂ ಗೆಲ್ಲಬೇಕು ಎಂಬ ಹಠ ಆಕೆಯಲ್ಲಿತ್ತು. ಗೆಲ್ಲುವ ಹಣದಲ್ಲಿ ತನ್ನ ವಿದ್ಯಾಭ್ಯಾಸಕ್ಕೆ ಮತ್ತು ರಾಗಿ ಬೆಳೆಯುವ ತನ್ನ ತಂದೆಯ ವ್ಯವಸಾಯಕ್ಕೆ ಸಹಾಯ ಮಾಡುವ ಆಲೋಚನೆ ಹೊಂದಿದ್ದಳು. ಜೊತೆಗೆ ತಾನು ಓದುವ ಶಾಲೆಯಲ್ಲಿ ಕ್ಲಾಸ್ ರೂಮ್ ಕಟ್ಟಿಸುವ ಇಚ್ಛೆ ಕೂಡ ಆಕೆಯಲ್ಲಿತ್ತು.

‘ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಒಂಬತ್ತು ಪ್ರಶ್ನೆಗಳಿಗೆ ಸತತವಾಗಿ ಸರಿಯಾದ ಉತ್ತರ ನೀಡುತ್ತ 160,000 ರೂಪಾಯಿಗಳನ್ನು ವರಲಕ್ಷ್ಮಿ ಗಳಿಸಿದ್ದರು. ಅಚ್ಚರಿ ಅಂದ್ರೆ, ಈ ಒಂಬತ್ತು ಪ್ರಶ್ನೆಗಳಿಗೆ ಯಾವುದೇ ಲೈಫ್ ಲೈನ್ಬಳಸದೆ, ಎಲ್ಲಾ ಪ್ರಶ್ನೆಗಳಿಗೂ ಪಟಪಟ ಅಂತ ವರಲಕ್ಷ್ಮಿ ಉತ್ತರಕೊಟ್ಟಿದ್ದಳು.
ನಾನ್ ಸ್ಟಾಪ್ ಆಗಿ ಆಡಿಕೊಂಡು ಬಂದ ವರಲಕ್ಷ್ಮಿಗೆ ಸ್ಪೀಡ್ ಬ್ರೇಕರ್ ಆಗಿದ್ದು ಹತ್ತನೇ ಪ್ರಶ್ನೆ. 320,000 ರೂಪಾಯಿಗೆ ಕೇಳಲಾದ ಪ್ರಶ್ನೆ ಹೀಗಿತ್ತು
* ಈ ಕೆಳಗಿನವುಗಳಲ್ಲಿ ಯಾವ ಸ್ಥಳವು ಬಂಗಾಳ ಕೊಲ್ಲಿಯ ಕರಾವಳಿ ಪ್ರದೇಶದಲ್ಲಿದೆ?
ಅಜಂತಾ, ತಂಜಾವೂರು, ಕೊನಾರ್ಕ್, ಉಜ್ಜಯನಿ –

ಈ ಪ್ರಶ್ನೆಗೆ ಉತ್ತರ ಗೊತ್ತಿಲ್ಲದ ವರಲಕ್ಷ್ಮಿ ಮೊಟ್ಟ ಮೊದಲ ಬಾರಿಗೆ ಲೈಫ್ ಲೈನ್ ಬಳಸಿದಳು. ಹಾಗ್ನೋಡಿದ್ರೆ, ವರಲಕ್ಷ್ಮಿ ‘ಆಡಿಯನ್ಸ್ ಪೋಲ್’ ಬಳಸಬಹುದಿತ್ತು. ಆದ್ರೆ, ಆಕೆ ‘ಫೋನ್ ಎ ಫ್ರೆಂಡ್’ ಆಯ್ಕೆ ಮಾಡಿಕೊಂಡಳು. ತನಗೆ ಸೋಷಿಯಲ್ ಮತ್ತು ಸೈನ್ಸ್ ಹೇಳಿಕೊಡುವ ಗೌರಮ್ಮ ಟೀಚರ್ ಗೆ ವರಲಕ್ಷ್ಮಿ ಫೋನ್ ಮಾಡಿದಳು. ಆ ಕಡೆಯಿಂದ ಶಿಕ್ಷಕಿ ಗೌರಮ್ಮ ‘ತಂಜಾವೂರು’ ಎಂದು ಉತ್ತರಿಸಿದರು. ಇನ್ನೊಂದು ಬಾರಿ ವರಲಕ್ಷ್ಮಿ ಪ್ರಶ್ನೆ ಕೇಳುವಷ್ಟರಲ್ಲಿ ಮೂವತ್ತು ಸೆಕೆಂಡ್ ಮುಗಿದಿತ್ತು, ಫೋನ್ ಕಟ್ ಆಯ್ತು.

ಪುನೀತ್ಕೊಟ್ಟ ಸೂಚನೆ ಅರ್ಥ ಆಗಲಿಲ್ಲ.!”ಡೌಟ್ ಇದ್ದರೆ, ಇನ್ನೊಂದು ಲೈಫ್ಲೈನ್ ಬಳಸಬಹುದು.. ಟೈಮ್ ಇದೆ.. ಇನ್ನೂಎರಡು ಲೈಫ್ ಲೈನ್ ಇದೆ”ಅಂತ ಪದೇ ಪದೇ ಪುನೀತ್ರಾಜ್ ಕುಮಾರ್ ಹೇಳುತ್ತಿದ್ದರು. ಈಸೂಚನೆಯನ್ನು ಅರ್ಥ ಮಾಡಿಕೊಳ್ಳದ ವರಲಕ್ಷ್ಮಿ,ಶಿಕ್ಷಕಿ ಗೌರಮ್ಮ ಮೇಲೆ ನಂಬಿಕೆಇಟ್ಟು ‘ತಂಜಾವೂರು’ ಲಾಕ್ ಮಾಡಿಬಿಟ್ಟಳು. ದುರಾದೃಷ್ಟಅಂದ್ರೆ, ಅದು ತಪ್ಪು ಉತ್ತರ.

ಸರಿಯಾದ ಉತ್ತರ ‘ಕೊನಾರ್ಕ್’. 320,000 ವರೆಗೂಯಾವುದೇ ಲೈಫ್ ಲೈನ್ ಬಳಸದೇಬಂದಿದ್ದ ವರಲಕ್ಷ್ಮಿ ಏಕ್ದಂ ಹತ್ತು ಸಾವಿರಕ್ಕೆಕುಸಿದು ಬಿಟ್ಟಳು. ಅಲ್ಲಿಗೆ, ತಂದೆಗೆ ಸಹಾಯ ಮಾಡುವಆಸೆ, ಕ್ಲಾಸ್ ರೂಮ್ ಕಟ್ಟಿಸುವಕನಸು.. ಎರಡೂ ಕನಸಾಗಿಯೇ ಉಳಿಯಬೇಕಾಯಿತು.ಟೀಚರ್ ಮಾಡಿದ ಒಂದೇ ಒಂದುಎಡವಟ್ಟಿನಿಂದ ವರಲಕ್ಷ್ಮಿ ಆಸೆ ಈಡೇರದೇ ಹೋಯಿತು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಷಿಯಲ್ ಮೀಡಿಯಾಗಳಿಗೆ ಲಗಾಮು ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಚೋದನೆ, ಸುಳ್ಳು ಸುದ್ದಿ, ಮಾನಹಾನಿ ಮತ್ತು ದೇಶದ್ರೋಹಿಗಳಂಥ ಪೋಸ್ಟ್ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವುದಕ್ಕಾಗಿ ಜನವರಿ 15ರಿಂದ ಹೊಸ ನಿಯಮ ಜಾರಿಗೆ ತರುತ್ತಿದೆ ನಮ್ಮ ಭಾರತ. ಈ ಬಗ್ಗೆ ಸುಪ್ರೀಕೋರ್ಟ್ಗೆ ಇಂದು ವರದಿ ಕೂಡ ಸಲ್ಲಿಸಿದೆ. ಸೋಷಿಯಲ್ ಮೀಡಿಯಾ ಪ್ರೊಫೈಲ್ಗಳ ಡೀಕ್ರಿಪ್ಟ್ ಮಾಡಿದ ಡೇಟಾ ಹಂಚಿಕೊಳ್ಳುವ ಬೇಡಿಕೆಗೆ ಸಂಬಂಧಿಸಿದಂತೆ ಮದ್ರಾಸ್, ಬಾಂಬೆ ಮತ್ತು ಮಧ್ಯಪ್ರದೇಶದ ಹೈಕೋರ್ಟ್ಗಳಲ್ಲಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ವರ್ಗಾಯಿಸಿಕೊಂಡಿದೆ. ರಾಷ್ಟ್ರೀಯ ಭದ್ರತೆ…
ಆಕಾಶದಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಒಂದು ವಿಮಾನದ ಮೇಲೆ ಹದ್ದುಗಳು ಒಮ್ಮೆಲೇ ದಾಳಿಮಾಡಿದವು. ಅದೂ ಸಹ ಒಂದಲ್ಲ ಎರಡಲ್ಲ ಹತ್ತಾರು ಸಂಖ್ಯೆಯಲ್ಲಿ ದಾಳಿ ಮಾಡಿ ಪೈಲೆಟ್ ಅನ್ನು ತಬ್ಬಿಬ್ಬುಗೊಳಿಸಿದವು. ಆತಂಕ ಗೊಂಡ ಪೈಲೆಟ್ ವಿಮಾನವನ್ನು ಆಕಡೆ, ಈಕಡೆ ಓಡಿಸತೊಡಗಿದ.
ಮೊಟ್ಟೆ ಪೌಸ್ಟಿಕವಾದ ಆಹಾರ.ನಾವು ಸಾಮಾನ್ಯವಾಗಿ ಮೊಟ್ಟೆ ಬೇಯಿಸಿದಾಗ ಅಥವಾ ಆಮ್ಲೆಟ್ ಮಾಡಲು ಹೋದಾಗ ಮೊಟ್ಟೆ ಹೊಡೆದು ಮೊಟ್ಟೆ ಚಿಪ್ಪನ್ನು ಬಿಸಾಡುತ್ತೇವೆ.
ನಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ನಾವು ಚಹಾ ಮತ್ತು ಕಾಫಿಗೆ ಒಂದು ವಿಶೇಷವಾದ ಸ್ಥಾನವನ್ನ ಕೊಟ್ಟಿದ್ದೇವೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಕಾಫಿ ಮತ್ತು ಚಹಾ ಕುಡಿಯುವುದನ್ನ ನಾವು ಎಷ್ಟರ ಮಟ್ಟಿಗೆ ಹಚ್ಚಿಕೊಂಡಿದ್ದೇವೆ ಅಂದರೆ ಅದನ್ನ ಸೇವಿಸದೇ ಇದ್ದರೆ ನಮಗೆ ವಿಪರೀತ ತಲೆ ಬರುತ್ತದೆ ಅನ್ನುವಷ್ಟು. ಇನ್ನು ಬೆಳಿಗ್ಗೆ ಮತ್ತು ಸಂಜೆ ಒಮ್ಮೆ ಚಹಾ ಅಥವಾ ಕಾಫಿಯನ್ನ ಸೇವನೆ ಮಾಡಿದರೆ ದೇಹದಲ್ಲಿ ಏನೋ ಶಕ್ತಿ ಬಂದಷ್ಟು ಖುಷಿಯಾಗುತ್ತದೆ, ಇನ್ನು ಕೆಲಸದ ಒತ್ತಡದ ಸಮಯದಲ್ಲಿ ನಮ್ಮ ದೇಹಕ್ಕೆ ಮತ್ತು…
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.
ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…