ಸುದ್ದಿ

ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

54

ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌ ನಿರ್ಮಾಣಕ್ಕೆ ಮುಂದಾಗಿರುವುದು ಈ ತಾಣದ ಖ್ಯಾತಿ ಇಮ್ಮಡಿಯಾಗಲಿದೆ.

155 ಎಕರೆ ವಿಸ್ತೀರ್ಣದಲ್ಲಿ ತಲೆ ಎತ್ತಲಿರುವ ಈಬಯೋ ಪಾರ್ಕ್ ಗೆ ಸರ್ಕಾರ ನೂರು ಕೋಟಿ ರೂಪಾಯಿಗಳನ್ನು ವೆಚ್ಚಮಾಡಲಿದೆ. ವೀಕೆಂಡ್ ಗಳಲ್ಲಿ, ರಜಾದಿನಗಳಲ್ಲಿ ಭರಚುಕ್ಕಿಯತ್ತ ಮುಖ ಮಾಡುವ ಜನರಿಗೂ ಇನ್ನಷ್ಟು ಸೌಂದರ್ಯ ಕಣ್ತುಂಬಿಕೊಳ್ಳುವ ಅವಕಾಶ ಒದಗಿಬರಲಿದೆ. ಸಿದ್ಧಗೊಂಡಿರುವ ಕ್ರಿಯಾ ಯೋಜನೆ ಈಗಾಗಲೇ ಅರಣ್ಯ ಇಲಾಖೆಯ ವನ್ಯ ಜೀವಿವಿಭಾಗ ಇದರ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದು, ಸರ್ಕಾರದ ಅನುಮೋದನೆ ಇಂದು ಅಥವಾ ನಾಳೆ ಸಿಗುವ ನಿರೀಕ್ಷೆ ಇದೆ. ಈ ಉದ್ದೇಶಿತ ಪಾರ್ಕ್‌ ಭರಚುಕ್ಕಿ ಜಲಪಾತದ ಸಮೀಪವೇ ನಿರ್ಮಾಣಗೊಳ್ಳಲಿದ್ದು ಜಲಪಾತದ ಸೌಂದರ್ಯವನ್ನೂ ಹೆಚ್ಚಿಸಲಿದೆ. ಅಪರಿಚಿತವಾಗಿಯೇ ಉಳಿದಿದ್ದ ಜಲಪಾತವನ್ನು 2007ರಲ್ಲಿ ರಾಜ್ಯ ಸರ್ಕಾರ ಭರಚುಕ್ಕಿಯಲ್ಲಿ ಜಲಪಾತೋತ್ಸವ ಮಾಡುವ ಮೂಲಕ ಎಲ್ಲರಿಗೆ ಪರಿಚಯಿಸುವ ಕೆಲಸ ಮಾಡಲಾಗಿತ್ತು. ಈಗಈ ಪಾರ್ಕ್ ಮೂಲಕ ಪ್ರವಾಸಿಗರನ್ನು ಹೆಚ್ಚಿಸುವ ಉದ್ದೇಶವೂ ಇದೆ.

ಪಾರ್ಕ್ ನಲ್ಲಿ ಏನೇನಿದೆ? ಈ ಉದ್ಯಾನ ಸೋಲಾರ್ ಬೆಂಬಲಿತವಾಗಿದ್ದು, ಬೋನ್ಸಾಯ್ಗಾರ್ಡನ್, ಆರ್ಕಿಡ್ ಒಳಗೊಂಡ ವನ,ನಕ್ಷತ್ರ ಆಕಾರದ ಉದ್ಯಾನ, ಬಿದಿರುವನ, ಅಪರೂಪದ ಸಸ್ಯಗಳ ಟ್ರೀಪಾರ್ಕ್, ಸೋಲಿಗರ ಬದುಕು ತೋರುವಟ್ರೈಬಲ್ ಪಾರ್ಕ್, ಮ್ಯೂಸಿಯಂ, ಆಂಪಿಥಿಯೇಟರ್‌, ವನ್ಯ ಜೀವಿ ಪಾರ್ಕ್‌,ವೆಟ್ ಲ್ಯಾಂಡ್‌ ಪಾರ್ಕ್‌, ಚಿಟ್ಟೆ ಪಾರ್ಕ್‌ ಒಳಗೊಂಡಂತೆ 21 ಬಗೆಯ ವಿಶೇಷ ವಿನ್ಯಾಸದ ಕಲ್ಪನೆಯಲ್ಲಿಪ್ರದೇಶಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಜತೆಗೆ ಫುಡ್‌ ಕೋರ್ಟ್‌ಕೂಡ ನಿರ್ಮಾಣಗೊಳ್ಳಲಿದೆ. ಸುಮಾರು 1.5 ಕಿ.ಮೀ. ಅಂತರದಸ್ಕೈವಾಕ್ ಪಥವಿರಲಿದೆ. ಎಲ್ಲಾ ವ್ಯವಸ್ಥೆಗಳನ್ನೂ ಒಂದೆಡೆಗೆತಂದು ಜನರನ್ನು ಆಕರ್ಷಿಸಲು ಈಯೋಜನೆಯನ್ನು ರೂಪಿಸಲಾಗಿದೆ.

54 ವಿವಿಧ ಪಾರ್ಕ್ ಗಳ ನಿರ್ಮಾಣಮಲೆ ಮಹದೇಶ್ವರ ಬೆಟ್ಟ ಹುಲಿ ಸಂರಕ್ಷಣಾ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು ಅವರು ಈ ಕುರಿತು ಮಾಹಿತಿ ನೀಡಿದ್ದು, ವನ್ಯ ಜೀವಿಗಳ ಸಂರಕ್ಷಣೆ ಮತ್ತು ಅರಣ್ಯ ನಾಶ ತಡೆಗಟ್ಟುವ ಉದ್ದೇಶದಿಂದ ಈ ಪಾರ್ಕ್‌ ನಿರ್ಮಿಸಲಾಗುತ್ತಿದೆ,ಈ ಮೂಲಕ ಜನ ಜಾಗೃತಿ ಮೂಡಿಸಲಾಗುವುದು ಎಂದರು. ಈ ಸ್ಥಳದಲ್ಲಿ ಒಟ್ಟು 54 ವಿವಿಧ ಪಾರ್ಕ್‌ ಗಳ ನಿರ್ಮಾಣ ಮಾಡಲಿದ್ದು ಪ್ರತೀ ಪಾರ್ಕ್‌ ಗೂತಲಾ ಎರಡು ಕೋಟಿ ರೂಪಾಯಿವೆಚ್ಚ ತಗುಲಲಿದೆ ಎಂದರು. ಈ ಪಾರ್ಕ್‌ಗಳನ್ನು ಹಂತ ಹಂತವಾಗಿ ನಿರ್ಮಾಣ ಮಾಡುತ್ತಾ ಹೋಗಲಿದ್ದು, ಇದರಿಂದಾಗಿ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗಲಿದೆ ಎಂದರು.

ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಭೂಮಿಪೂಜೆ ಮೊದಲ ಹಂತದಲ್ಲಿ ಪ್ರವೇಶದ್ವಾರ, ಫುಡ್‌ ಕೋರ್ಟ್‌ ಹಾಗೂ ನೀರಿನ ಕಾರಂಜಿ ನಿರ್ಮಾಣಗೊಳ್ಳಲಿದ್ದು ಇದಕ್ಕೆಒಟ್ಟು 4.2 ಕೋಟಿ ರೂಪಾಯಿ ವೆಚ್ಚವಾಗಲಿದೆ.ಇದರಲ್ಲಿ ಅರಣ್ಯ ಇಲಾಖೆ 1 ಕೋಟಿಮತ್ತು ಪ್ರವಾಸೋದ್ಯಮ ಇಲಾಖೆ 3.2 ಕೋಟಿ ರೂಪಾಯಿ ವೆಚ್ಚಮಾಡಲಿದ್ದು ನವೆಂಬರ್‌ ಕೊನೆ ಅಥವಾ ಡಿಸೆಂಬರ್‌  ಮೊದಲ ವಾರದಲ್ಲಿ ಪ್ರವಾಸೋದ್ಯಮ ಸಚಿವರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರು ಭೂಮಿ ಪೂಜೆಮಾಡಲಿದ್ದಾರೆ ಎಂದು ತಿಳಿದುಬಂದಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕನ್ನಡದಲ್ಲಿ ಆರ್ಭಟಿಸುತ್ತಿರುವ ಕಾಲೇಜ್ ಕುಮಾರ್ ಟ್ರೈಲರ್..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಸಿನಿಮಾ ಯಾರಿಗೇನು ಕಡಿಮೆ ಇಲ್ಲದಂತೆ ಒಂದರ ಮೇಲೊಂದು ಹಿಟ್ ಆಗುತ್ತಲೇ ಇವೆ.. ಕಿರಿಕ್ ಪಾರ್ಟಿ, ರಾಜಕುಮಾರ, ಹೆಬ್ಬುಲಿ, ತಾರಕ್, ಈಗ ಇದೇ ಲಿಸ್ಟ್ ಗೆ ಸೇರ್ಪಡೆಯಾಗಲು ಯೂತ್ಸ್ ಸಿನಿಮಾ #ಕಾಲೇಜ್ ಕುಮಾರ್ ಬರುತ್ತಿದೆ.

  • ಕ್ರೀಡೆ

    ಮುಂಬೈ ಇಂಡಿಯನ್ಸ್‌ ಆಟಗಾರನ, ಬೆತ್ತಲೆ ಕುಣಿತ !!!

    ಐಪಿಎಲ್‌ ಫೈನಲ್‌ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್‌ ತಂಡದ ಜೋಸ್‌ ಬಟ್ಲರ್‌, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

  • ದೇಶ-ವಿದೇಶ

    ಇದು ಜಗತ್ತಿನ ಅತ್ಯಂತ ಸೋಮಾರಿ ರಾಷ್ಟ್ರ..! ಆ ರಾಷ್ಟ್ರ ಯಾವುದು ಗೊತ್ತಾ?

    ನಾವು ಮನೆಗಳಲ್ಲಿ ಕೆಲಸ ಮಾಡದ, ಉದ್ಯೋಗ ಮಾಡದೆ ತಿಂದು ಕೆಲಸವಿಲ್ಲದೇ ತಿರುಗುವವರನ್ನು, ಸೋಮಾರಿ ಎಂದು ಮನೆಗಳಲ್ಲಿ ಹಾಸ್ಯ ಮಾಡುವುದುಂಟು. ಹೀಗೆ ಸೋಮಾರಿತನದಿಂದ ಇರುವವರು ಎಲ್ಲಾ ಕಡೆ ಸಿಗುತ್ತಾರೆ. ಅದಕ್ಕಾಗಿಯೇ ವಿಶ್ವವಿದ್ಯಾನಿಲಯವೊಂದು ವಿಶ್ವದ ಸೋಮಾರಿಗಳ ಬಗ್ಗೆ ಅಧ್ಯಯನ ನಡೆಸಿದ್ದು ಅದರ ವಿವರಣೆಯನ್ನು ಕೊಟ್ಟಿದೆ.

  • ಸುದ್ದಿ

    ಎನ್​ಆರ್​ಸಿ ಪಟ್ಟಿಯಿಂದ 19.06 ಲಕ್ಷ ಜನ ಹೊರಕ್ಕೆ ಇವರೆಲ್ಲರ ಪರಿಸ್ಥಿತಿ ಏನು, ಇದನ್ನೊಮ್ಮೆ ಓದಿ..?

    ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್​ಆರ್​ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….

  • ವಿಸ್ಮಯ ಜಗತ್ತು

    ಇದು ಮತ್ಸ್ಯ ಕನ್ಯಯೋ, ಜಲಚರ ಪ್ರಾಣಿಯೋ ಗೊತ್ತಾಗ್ತಿಲ್ಲಾ..!ನಿಮಗೆನಾದ್ರೂ ಗೊತ್ತಾ ನೋಡಿ…???

    ನಾವು ಜಗತ್ತಿನಲ್ಲಿ ಎಂತೆಂತಹ ವಿಚಿತ್ರ ಪ್ರಾಣಿಗಳನ್ನು ನೋಡಿರುತ್ತೇವೆ. ಆದ್ರೆ ಕೆಲವೊಮ್ಮೆ ನಾವು ನೋಡಿದ ಪ್ರಾಣಿಗಳನ್ನು ನಮ್ಮ ಕಣ್ಣುಗಳೇ ನಂಬುವುದಿಲ್ಲ, ಅಷ್ಟೊಂದು ವಿಚಿತ್ರವಾಗಿರುತ್ತವೆ..! ಇಂತಹದೆ ಜಲಚರ ಪ್ರಾಣಿಯೊಂದು ಪತ್ತೆಯಾಗಿದೆ. ಅದು ನೋಡಲು ಮತ್ಸ್ಯ ಕನ್ಯೆ ಅಂತಯೇ ಇದೆ. ಕೆಳಗಿರುವ ಚಿತ್ರಗಳು ಮತ್ತು ವಿಡಿಯೋವನ್ನು ವೀಕ್ಷಿಸಿ ಗೊತ್ತಾಗುತ್ತೆ….

  • ಭವಿಷ್ಯ

    ಈ 4 ರಾಶಿಯಲ್ಲಿ ಜನಿಸಿದ ಯುವಕ ಮತ್ತು ಯುವತಿಯರು ಸುಂದವರಾಗಿ ಇರುತ್ತಾರೆ..! ನಿಮ್ಮ ರಾಶಿಯು ಇದೆಯಾ ನೋಡಿ?

    ಸಾಮಾನ್ಯವಾಗಿ ವ್ಯಕ್ತಿ ಹೊಂದಿರುವ ಸೌಂದರ್ಯ ತನ್ನ ತಂದೆ ತಾಯಿ ಅಥವಾ ಅಘೋಷಿತವಾಗಿ ಬಂದಿರುವ ಸಂಪತ್ತು ಎಂದು ಹೇಳಲಾಗುವುದು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವ್ಯಕ್ತಿ ಹೊಂದಿರುವ ಮಾನಸಿಕ ಮತ್ತು ದೈಹಿಕ ಗುಣಗಳು ಅವನ ಜಾತಕ ಕುಂಡಲಿ ಹಾಗೂ ಅವನ ರಾಶಿ ಚಕ್ರಗಳಿಗೆ ಅನುಗುಣವಾಗಿ ಇರುತ್ತವೆ ಎಂದು ಹೇಳಲಾಗುತ್ತದೆ. ವ್ಯಕ್ತಿ ಹುಟ್ಟುವ ಸಮಯದಲ್ಲಿ ಅವನ ಗ್ರಹಗತಿಗಳು ಯಾವ ಸ್ಥಾನದಲ್ಲಿ ಇದ್ದವು ಎನ್ನುವುದನ್ನು ಅನುಸರಿಸಿ ದೇಹ ಮತ್ತು ಮಾನಸಿಕ ಸ್ಥಿತಿಯ ರಚನೆಯಾಗುತ್ತದೆ ಎನ್ನಲಾಗಿದೆ. ಒಂದು ಅಂದಾಜಿನ ಪ್ರಕಾರ 12 ರಾಶಿ ಚಕ್ರಗಳಲ್ಲಿ…