ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಂದೆ-ತಾಯಿ ಮಕ್ಕಳಿಗೋಸ್ಕರ ತಮ್ಮ ಇಡೀ ಬದುಕನ್ನೇ ಮುಡಿಪಾಗಿ ಇಡುತ್ತಾರೆ. ಕಷ್ಟಪಟ್ಟು ಮಕ್ಕಳನ್ನು ಸಾಕಿದರೂ ಕೊನೆಗೆ ತಂದೆ ತಾಯಿಗೆ ದ್ರೋಹ ಬಗೆಯುವ ಮಟ್ಟಕ್ಕೆ ಕೆಲವರು ಹೋಗುತ್ತಾರೆ. ಆದರೆ ಇಲ್ಲಿ ನೋಡಿ ಹೆಣ್ಣುಮಕ್ಕಳು ಕುಟುಂಭದ ಕಣ್ಣು ಎನ್ನುವಂತೆ ಸಾಕಿ ಸಲಹಿದರು ಅದೇ ಮಕ್ಕಳು ಆಸ್ತಿಯ ಆಸೆಗೆ ಹೆತ್ತವರಿಗೆ ದ್ರೋಹ ಬಗೆದಿದ್ದಾರೆ.

ಮಕ್ಕಳಿಗೋಸ್ಕರ, ಅವರ ಸುಖ ಸಂತೋಷಕ್ಕೋಸ್ಕರ ತಂದೆ ತಾಯಿ ತಮ್ಮ ಜೀವನವನ್ನೆ ಮುಡಿಪಾಗಿಡುತ್ತಾರೆ. ಆದರೆ ಇಲ್ಲಿ ವೆಲ್ಲಿಯನ್, ಕಮಲಮ್ಮ ಎಂಬ ದಂಪತಿಗೆ ತಮ್ಮ ಮಕ್ಕಳೇ ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವೆಲ್ಲಿಯನ್ ದಂಪತಿಗೆ ಒಟ್ಟು ನಾಲ್ಕು ಜನ ಹೆಣ್ಣುಮಕ್ಕಳಿದ್ದು. ಈ ಹೆಣ್ಣು ಮಕ್ಕಳನ್ನು ಚೆನ್ನಾಗಿ ಓದಿಸಿ, ಅವರಿಗೊಂದು ಬದುಕು ಕಟ್ಟಿಕೊಟ್ಟಿದ್ದಾರೆ. ನಾಲ್ಕು ಜನರಿಗೂ ಸಹ ಚಾಮರಾಜಪೇಟೆಯಲ್ಲಿ ಸ್ವಂತ ಮನೆಯನ್ನು ಸಹ ಕಟ್ಟಿಕೊಟ್ಟಿದ್ದಾರೆ. ಇಷ್ಟೆಲ್ಲ ಸೌಕರ್ಯಗಳನ್ನು ಮಾಡಿದರೂ ಕೂಡ ಹೆತ್ತವರಿಗೆ ಈ ಮಕ್ಕಳು ಭಾರವಾಗಿದ್ದಾರೆ. ನಾಲ್ವರಲ್ಲಿ ಮೂವರು ಮಕ್ಕಳು ಆಸ್ತಿಯ ಅತಿ ಆಸೆಗೆ ಆಸ್ತಿಯ ಪತ್ರಕ್ಕೆ ಫೋರ್ಜರಿ ಸಹಿ ಮಾಡುವ ಮೂಲಕ ತಮ್ಮ ಹೆಸರಿಗೆ ಮಾಡಿಕೊಂಡು. ತಂದೆ- ತಾಯಿಯನ್ನು ಮನೆಗೆ ಸೇರಿಸಿಕೊಳ್ಳುತ್ತಿಲ್ಲ.

ಆದರೆ ಒಬ್ಬಳು ಪುತ್ರಿ ಮಾತ್ರ ಹೆತ್ತವರನ್ನು ಮನೆಗೆ ಕರೆದುಕೊಂಡು ಬಂದು ಸಾಕಲು ಮುಂದಾದಾಗ ಆಕೆಯ ಮನೆ ಮತ್ತು ಆಸ್ತಿಯನ್ನು ಕೂಡ ಲಪಟಾಯಿಸಲು ಉಳಿದ ಮೂವರು ಸ್ಕೆಚ್ ಹಾಕಿದ್ದಾರಂತೆ. ಹೆಣ್ಣು ಮಕ್ಕಳ ಈ ವರ್ತನೆಗೆ ವೃದ್ದ ದಂಪತಿ ಕಣ್ಣೀರಿಟ್ಟಿದ್ದಾರೆ. ಮಕ್ಕಳಿಗೋಸ್ಕರ ಈ ದಂಪತಿಳು ವಿಲ್ ಸಹ ಮಾಡಿದ್ದರು.
ಅದನ್ನ ನಂಬದೇ ಮಕ್ಕಳು ಫೋರ್ಜರಿ ಮಾಡಿ ಆಸ್ತಿಯನ್ನ ಮಕ್ಕಳು ಕಬಳಿಸಿದ್ದಾರೆ. ಹೆಣ್ಣು ಮಕ್ಕಳಿಗೆ ಇರಲು ಸ್ವಂತ ಮನೆ ಮಾಡಬೇಕೆಂದು ದೊಡ್ಡ ಸೈಟುಗಳಲ್ಲಿ ನಾಲ್ಕು ಮನೆಗಳನ್ನ ನಿರ್ಮಿಸಿ, ಎಲ್ಲರ ಹೆಸರಲ್ಲೂ ಕೂಡ ಒಂದೊಂದು ಮನೆಯನ್ನ ಬರೆದು ವಿಲ್ ಮಾಡಿದ್ದರು. ಆದರೆ ಆ ವಿಲ್ ಅನ್ನು ಹೆಣ್ಣು ಮಕ್ಕಳಿಗೆ ತೋರಿಸಿರಲಿಲ್ಲ. ಈ ಕಾರಣಕ್ಕೆ ತಂದೆ ತಾಯಿ ಮೇಲೆ ಮಕ್ಕಳು ಮುನಿಸಿಕೊಂಡು ಈ ನಿರ್ಧಾರಕ್ಕೆ ಕೈ ಹಾಕಿದ್ದಾರೆ.

ನಂತರ ಜನವರಿಯಲ್ಲಿ ಜಿಗಣಿಯಲ್ಲಿ ರಿಜಿಸ್ಟ್ರಾರ್ ಆಫೀಸಿನಲ್ಲಿ ಸಬ್ ರಿಜಿಸ್ಟ್ರಾರ್ ಆಗಿದ್ದ ಮಂಜುನಾಥ್ ಅನ್ನೋರು ಚಿನ್ನಪ್ಪ ಎಂಬವರಿಗೆ ಜನರಲ್ ಪವರ್ ಆಫ್ ಅಟಾರ್ನಿಯ(ಜಿಪಿಎ) ಕೊಟ್ಟು ನಂತರ ಅದನ್ನ ದಾನದ ರೂಪದಲ್ಲಿ ಈ ಹೆಣ್ಣು ಮಕ್ಕಳು ಫೋರ್ಜರಿ ಮಾಡಿ ಬರೆಸಿಕೊಂಡಿದ್ದಾರೆ. ಈಗ ತಾವೇ ನಿರ್ಮಿಸಿದ ಮನೆಯಲ್ಲಿ ಇರಲೂ ಆಗದೇ ಕಣ್ಣೀರಿಡುತ್ತಿದ್ದಾರೆ. ಹೆಣ್ಣುಮಕ್ಕಳ ಬಗ್ಗೆ ತಂದೆಗೆ ಹೆಚ್ಚು ಪ್ರೀತಿ ಅಂತಾರೆ ಆದರೆ ಈ ಹೆಣ್ಣುಮಕ್ಕಳಿಂದಲೇ ತಂದೆ ಇಷ್ಟೊಂದು ನೋವು ಅನುಭವಿಸುತ್ತಿದ್ದಾರೆ.
ತಂದೆ ತಾಯಿ ಕಣ್ಣಿಗೆ ಕಾಣೋ ದೇವರು ಅಂತಾರೆ ಆದರೆ ಕೇವಲ ತಂದೆ ತಾಯಿಯೇ ಕಷ್ಟ ಪಟ್ಟು ಸಂಪಾದಿಸಿದ ಆಸ್ತಿಗಾಗಿ ಅವರನ್ನೇ ಬೀದಿ ಪಾಲು ಮಾಡಲು ಹೊರಟಿರುವ ಇಂತಹ ಮಕ್ಕಳಿಗೆ ಕಾನೂನು ತಕ್ಕ ಶಾಸ್ತಿ ಮಾಡಬೇಕು ಅನ್ನೊದು ನೊಂದವರ ಒತ್ತಾಯವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಕಿರುತೆರೆ ನಟಿ ಮಲೆಯಾಳಂ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ನಟ ನಟಿಯರು ಎಂದರೆ ತಮ್ಮ ಜೀವನದ ಶೈಲಿಯೇ ಬೇರೆ ತರಹ ರೂಪಿಸಿ ಕೊಂಡಿರುತ್ತಾರೆ. ಎಲ್ಲದರಲ್ಲೂ ವೈಭವದ ಜೀವನ ನಡೆಸುತ್ತಾರೆ… ಅಂತದ್ರಲ್ಲಿ ಈ ನಟಿ ದೋಸೆ ಕ್ಯಾಂಟಿನಲ್ಲಿ ಕೆಲಸಮಾಡುವಂತದ್ದು ಯಾಕೆ ಗೊತ್ತಾ .? ಮುಂದೆ ಹೇಳ್ತಿವಿ ನೋಡಿ… ಈ ಕಿರುತೆರೆ ನಟಿಯು ಮಗನ ಶಿಕ್ಷಣಕ್ಕಾಗಿ ಕ್ಯಾಂಟೀನ್ ಓಪನ್ ಮಾಡಿ ಅದರಲ್ಲಿ ದೋಸೆ ಹಾಕುವಂತ ಕೆಲಸವನ್ನು ಮಾಡುತ್ತಿದ್ದಾರೆ. ಜೀವನದಲ್ಲಿ ಈಗ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಮೆಟ್ಟಿನಿಲ್ಲಲು ಹೈವೇ ಪಕ್ಕದಲ್ಲಿ ಕ್ಯಾಂಟಿನ್…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಗಾಯಕ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ಗೌಡ ನಿಶ್ಚಿತಾರ್ಥ ಇಂದು (ಸೋಮವಾರ) ನಡೆಯಲಿದೆ. ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಕುಟುಂಬ ಸದಸ್ಯರು ಹಾಗೂ ಸ್ನೇಹಿತರು ಮಾತ್ರ ಭಾಗಿಯಾಗಲಿದ್ದಾರೆ. ಖಾಸಗಿ ವಾಹಿನಿಯ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ನಿವೇದಿತಾ ಮತ್ತು ಚಂದನ್ ಪ್ರೇಮ ಜೋಡಿಗಳ ರೀತಿಯಲ್ಲಿಯೇ ಬಿಂಬಿತವಾಗಿದ್ದರು. ರಿಯಾಲಿಟಿ ಶೋ ಬಳಿಕ ನಾವಿಬ್ಬರು ಜಸ್ಟ್ ಫ್ರೆಂಡ್ಸ್ ಅಂತಾ ಹೇಳಿದ್ದರು. ಕಳೆದ ಎರಡು ವರ್ಷಗಳಿಂದ ಚಂದನ್ ಮತ್ತು ನಿವೇದಿತಾ ನಡುವೆ ಪ್ರೇಮಾಂಕುರವಾಗಿದೆ…
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಕೆಜಿಎಫ್ ಟೌನ್, ರಾಬರ್ಟ್ಸನ್ ಪೇಟೆಯ ವಾಸಿ ಉಮೇಶ್ ಬಿನ್ ಪಿ.ರಾಜಾ ಎಂಬುವರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿರುವ ಅರೋಪದ ಮೇಲೆ ಬಂಗಾರಪೇಟೆ ಪೋಲಿಸರು ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ವೃತ್ತ ನಿರೀಕ್ಷಕರಾದ ಸುನೀಲ್ ಕುಮಾರ್ ರವರು ತನಿಖೆ ನೆಡೆಸಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿರುತ್ತಾರೆ. ಸದರಿ ಪ್ರಕರಣದ ಸಂಖ್ಯೆ : ಎಸ್.ಸಿ.11/2021ರ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನಿ ರವರು ಆರೋಪ ರುಜುವಾತಾದ ಹಿನ್ನಲೆ ಪೋಕ್ಸೊ…
ಡೀನ್ ಎಲ್ಗರ್ ಅವರು ಅಜೇಯ 96 ರನ್ ಗಳಿಸಿದರು, ದಕ್ಷಿಣ ಆಫ್ರಿಕಾವು 240 ರನ್ ಬೆನ್ನಟ್ಟಿದ್ದು ಏಳು ವಿಕೆಟ್ಗಳೊಂದಿಗೆ ಜೋಹಾನ್ಸ್ಬರ್ಗ್ನಲ್ಲಿ ಭಾರತವನ್ನು ತನ್ನ ಮೊದಲ ಸೋಲಿಗೆ ಒಪ್ಪಿಸಿತು. ಈ ವಿಜಯವು ಕೇಪ್ ಟೌನ್ನಲ್ಲಿ ಅಂತಿಮ ಟೆಸ್ಟ್ಗೆ ಹೋಗುವ ಮೂಲಕ ಮೂರು ಪಂದ್ಯಗಳ ಸರಣಿಯನ್ನು ದಕ್ಷಿಣ ಆಫ್ರಿಕಾ ಜೀವಂತವಾಗಿರಿಸಿತ್ತು. ಬುಧವಾರ, ಎಲ್ಗರ್ ತಮ್ಮ ದೇಹವನ್ನು ಲೈನ್ನಲ್ಲಿ ಹಾಕಿದರು, ಅವರು ತಮ್ಮ ವಿಕೆಟ್ ಅನ್ನು ಉಳಿಸಲು ಪ್ರಯತ್ನಿಸುತ್ತಿರುವಾಗ ಕೈಗವಸುಗಳು ಮತ್ತು ಭುಜದ ಮೇಲೆ ಹೊಡೆತಗಳನ್ನು ಪಡೆದರು. ಅವರು ಇಂದು ಹೆಚ್ಚು…
![]()