ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.
ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.
ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.
ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.
ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.
ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.
ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.
ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.
ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…
ಜಮ್ಮುಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ದಾಳಿ ಇತಿಹಾಸದಲ್ಲೇ ಅತ್ಯಂತ ಭೀಕರವಾದ ದಾಳಿ. ಇದ್ರಿಂದಾಗಿ ಪ್ರತಿಯೊಬ್ಬ ಭಾರತೀಯನ ಎದೆಯಲ್ಲೂ ಪಾಕ್ ಮೇಲೆ ಪ್ರತೀಕಾರದ ಕಿಚ್ಚು ಹೆಚ್ಚಿದೆ. ಈ ದಾಳಿಯ ನಂತರ ಪಾಕಿಸ್ತಾನವನ್ನು ಹೊಸಕಿ ಹಾಕಲು ಭಾರತ ಇನ್ನಿಲ್ಲದ ಕ್ರಮ ಕೈಗೊಳ್ಳುತ್ತಿದೆ. ಅದ್ರಲ್ಲಿ ಪ್ರಮುಖವಾಗಿ ಆಮದು ಸುಂಕ ಏರಿಕೆ, ಟೊಮೆಟೊ ರಫ್ತು ಸ್ಥಗಿತ, ಇವೆಲ್ಲದರ ಪರಿಣಾಮ ಪಾಕ್ ನಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ಕಿಡಿಕಾರಿವೆ. ಟೊಮೆಟೊ ರಫ್ತು ಬಂದ್ ಮಾಡಿದ್ದಕ್ಕೆ ಪ್ರತಿಯಾಗಿ ಅಣುಬಾಂಬ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ದಕ್ಷಿಣ ಭಾರತದ ಪ್ರಮುಖ ಬ್ರೇಕ್ಫಾಸ್ಟ್ಗಳಲ್ಲಿ ಇಡ್ಲಿ ಕೂಡಾ ಒಂದು. ಪ್ರತಿಯೊಬ್ಬರ ಫೇವರಿಟ್ ತಿಂಡಿಯಾಗಿರುವ ಬಿಸಿ ಬಿಸಿ ಇಡ್ಲಿಗಳು ಆರೋಗ್ಯಕ್ಕೂ ಉತ್ತಮ. ಇದರಲ್ಲಿ ಕೊಬ್ಬು, ಕೊಲೆಸ್ಟ್ರಾಲ್ ಇಲ್ಲ. ಕ್ಯಾಲೊರಿ ಅಂಶವೂ ಅತ್ಯಂತ ಕಡಿಮೆ ಇದೆ. ಹೊಟ್ಟೆಗೂ ಹಿತವಾಗಿರುವ ಈ ಆಹಾರದಲ್ಲಿ ಹಲವಾರು ವೆರೈಟಿಗಳಿವೆ.
ಹಿಂದೂಗಳ ಪವಿತ್ರ ಯಾತ್ರೆಗಳಲ್ಲಿ ಒಂದೆನಿಸಿರುವ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ನಿರಂತರ ದಾಳಿಯಿಂದ ನಲುಗಿರೋ ಕಣಿವೆ ರಾಜ್ಯ ಜಮ್ಮುಕಾಶ್ಮೀರದಲ್ಲಿ ರಾತ್ರಿ ಉಗ್ರರು ನಡೆಸಿದ ಬೀಭತ್ಸ ಕೃತ್ಯಕ್ಕೆ 7 ಮಂದಿ ಅಮರನಾಥ ಯಾತ್ರಿಗಳು ಬಲಿಯಾಗಿದ್ದಾರೆ.