ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.
ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.
ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.
ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.
ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.
ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.
ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.
ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.
ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…
ಕಾಂಗ್ರೆಸ್ಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಯಾವಾಗ ಮದುವೆಯಾಗ್ತಾರೆ ಅನ್ನೋ ಕುತೂಹಲ ಸಾಮಾನ್ಯವಾಗಿ ಎಲ್ಲರಲ್ಲೂ ಇದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೊನೆಗೂ ರಾಹುಲ್ ಗಾಂಧಿ ಉತ್ತರಿಸಿದ್ದಾರೆ.
ಯಮುನಾ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಬಸ್ ವೊಂದು ಜಾರಿ ಹದಿನೈದು ಅಡಿ ಆಳದ ದೊಡ್ಡ ಮೋರಿಯಲ್ಲಿ ಬಿದ್ದ ಪರಿಣಾಮ ಇಪ್ಪತ್ತೊಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ನೂರಾ ಅರವತ್ತೈದು ಕಿ.ಮೀ. ಉದ್ದ ಎಕ್ಸ್ ಪ್ರೆಸ್ ಹೈವೆ ಉತ್ತರಪ್ರದೇಶದಲ್ಲಿ ನೋಯ್ಡಾ ಹಾಗೂ ಆಗ್ರಾದ ಮಧ್ಯೆ ಸಂಪರ್ಕ ಕಲ್ಪಿಸುತ್ತದೆ.ರಾಜ್ಯ ರಸ್ತೆ ಸಾರಿಗೆ ಬಸ್ ಸ್ಕಿಡ್ ಆಗಿ 50 ಅಡಿ ಆಳದ ಚರಂಡಿಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ 29 ಮಂದಿ ಪ್ರಯಾಣಿಕರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ. ಚಾಲಕ ನಿದ್ದೆ…
ವಾಟ್ಸಾಪ್ ಅತ್ಯಂತ ಜನಪ್ರಿಯ ಮೆಸೇಜಿಂಗ್ ಆ್ಯಪ್. ಜಗತ್ತಿನಾದ್ಯಂದ ಸುಮಾರು 1.5 ಬಿಲಿಯನ್ ವಾಟ್ಸಾಪ್ ಬಳಕೆದಾರರಿದ್ದಾರೆ. ವಾಟ್ಸಾಪ್ ಬಳಕೆದಾರರಿಗೆ ಶಾಕಿಂಗ್ ಸುದ್ದಿಯೊಂದಿದೆ.ನಿಮಗೆ ಮುಜುಗರ ಹುಟ್ಟಿಸುವಂತಹ ಖಾಸಗಿ ಕ್ಷಣಗಳನ್ನು ಬಹಿರಂಗಪಡಿಸಬಲ್ಲ ದೋಷವೊಂದು ವಾಟ್ಸಾಪ್ ನಲ್ಲಿ ಕಂಡು ಬಂದಿದೆ. ಆಕಸ್ಮಿಕವಾಗಿ ಯಾವುದಾದ್ರೂ ಮೆಸೇಜ್ ಕಳಿಸಲ್ಪಟ್ಟಲ್ಲಿ ಅದನ್ನು ಅಳಿಸಿಹಾಕಲು ಡಿಲೀಟ್ ಫಾರ್ ಎವರಿವನ್ ಎಂಬ ಆಪ್ಷನ್ ಇದೆ.ಆದ್ರೆ ನೀವು ಡಿಲೀಟ್ ಮಾಡಿದ ಮೇಲೂ ಆ ಮೆಸೇಜ್ ನ ಅವಶೇಷಗಳು ಉಳಿದುಕೊಳ್ಳುತ್ತಿವೆಯಂತೆ. ಐಫೋನ್ ಹಾಗೂ ಆಂಡ್ರಾಯ್ಡ್ ಡಿವೈಸ್ ಗಳಲ್ಲಿ ಈ ಫೀಚರ್ ಕಾರ್ಯನಿರ್ವಹಿಸುವ ವಿಧಾನದಲ್ಲಿನ…
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…
ಪ್ರತಿನಿತ್ಯ ಎದುರಿಸುವ ಆಧುನಿಕ ಬದುಕಿನ ಗೋಜಲು ಗದ್ದಲಗಳಿಗೂ ಹುಟ್ಟಿದ ಜನ್ಮರಾಶಿಗಳಿಗೂ ಒಂದು ನಿಕಟ ಸಂಬಂಧ ಇದೆ ಎಂಬುದು ಲಕ್ಷಾಂತರ ಜನರ ನಂಬಿಕೆ. ಪ್ರಪಂಚದಾದ್ಯಂತ ನಿತ್ಯ ರಾಶಿಗಳ ಆಧಾರದ ಮೇಲೆ ದಿನವನ್ನು ಎದುರುಗೊಳ್ಳುವ ಸಂಪ್ರದಾಯವಿದೆ. ಬದುಕಿನ ಭವಿಷ್ಯವನ್ನು ಒಟ್ಟು 12 ರಾಶಿಗಳ ಆಧಾರದ ಮೇಲೆ ಹೇಳಿಕೊಂಡು ಬರಲಾಗುತ್ತಿದೆ…. ಈ ಹಿನ್ನೆಲೆಯಲ್ಲಿ ಇದು ನಿತ್ಯ ಭವಿಷ್ಯ. ನಿಮ್ಮ ನಿಮ್ಮ ರಾಶಿಯ ಫಲಾಫಲವನ್ನು ವಯೋಮಾನಕ್ಕೆ ಅನುಗುಣವಾಗಿಯೂ ಇಲ್ಲಿ ನೀಡಲಾಗಿದೆ. ದಿನ ಆರಂಭಕ್ಕೆ ಉತ್ತಮ ಮಾರ್ಗದರ್ಶಿ ಇದು. ಮೇಷ… ಯುವಜನರಿಗೆ: ಗೆಳತಿಯೊಬ್ಬಳ ಸಹವಾಸದಿಂದ…