ಸುದ್ದಿ

ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

90

ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ ರಚಿಸಿದ ಮರಾಠಿ ಚಿತ್ರ ’ 22 ಜೂನ್ 1897 ’ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿತ್ತು.

ಅಣ್ಣನಂತೆ ತಮ್ಮನೂ ಬ್ಯಾಂಕ್ ನೌಕರನಾದರೂ ಬ್ಯಾಂಕ್ ವೃತ್ತಿಯ ಜೊತೆಯಲ್ಲಿ ಸಂಗೀತ ಅಭಿರುಚಿ ಇದ್ದ ಕಾರಣ ತಬಲ , ಕೊಳಲು , ಹಾರ್ಮೋನಿಯಂ ಹೀಗೆ ಹಲವಾರು ವಾದ್ಯಗಳನ್ನು ನುಡಿಸಲು ಕಲಿತರು. ಮರಾಠಿ ನಾಟಕಗಳ ಮೂಲಕ ತಮ್ಮ ವೃತ್ತಿ ಜೀವನವನ್ನು ಪ್ರಾರಂಭ ಮಾಡಿದರು. ಗಿರೀಶ್ ಕಾರ್ನಾಡ್ ರ  “ಒಂದಾನೊಂದು ಕಾಲದಲ್ಲಿ”  ಎನ್ನುವ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಒಂದಾನೊಂದು ಕಾಲದಲ್ಲಿ ಚಿತ್ರದ ಅಭಿನಯಕ್ಕೆ ಸ್ಪರ್ಧಾರ್ಥಕ ಅಂತರರಾಷ್ಟೀಯ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ದೊರೆಯಿತು. ನಂತರದ 12 ವರ್ಷಗಳಲ್ಲಿ ಕನ್ನಡದ ಸುಮಾರು 90ಕ್ಕೊ ಹೆಚ್ಚು ಚಿತ್ರಗಳಲ್ಲಿ ನಟಿಸಿದರು.ಶಂಕರ‍ನಾಗ್ ಪ್ರಥಮ ಬಾರಿಗೆ ತ್ರಿಪಾತ್ರದಲ್ಲಿ ಅಭಿನಯಿಸಿದ ಚಿತ್ರ “ಗೆದ್ದ ಮಗ”. ತಮ್ಮ ಸಹೋದರ ಅನಂತ್ ನಾಗ್ ಅವರೊಡನೆ “ಮಿಂಚಿನ ಓಟ”, “ಜನ್ಮ ಜನುಮದ ಅನುಭಂದ” ಮತ್ತು “ಗೀತಾ” ಚಿತ್ರಗಳನ್ನು ನಿರ್ಮಿಸಿದರು.

ಇದರಲ್ಲಿ”ಜನ್ಮ ಜನ್ಮದ ಅನುಬಂಧ” ಮತ್ತು “ಗೀತಾ” ಚಿತ್ರಗಳು ಇಳಯರಾಜ ಅವರ ಮಧುರ ಸಂಗೀತವನ್ನು ಹೊಂದಿ ಜನಮನ್ನಣೆ ಗಳಿಸಿವೆ. ನಾಟಕಗಳನ್ನು ಮತ್ತು ರಂಗಭೂಮಿಯನ್ನು ಗೌರವಿಸಿ ಶ್ರೀಮಂತಗೊಳಿಸಿದ ಶಂಕರ್ ಅವರು ಗಿರೀಶ್ ಕಾರ್ನಾಡ ರ “ಅಂಜು ಮಲ್ಲಿಗೆ”, “ನೋಡಿ ಸ್ವಾಮಿ ನಾವಿರೋದು ಹೀಗೆ” ಮತ್ತು ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಭಾರತೀಯ ದೂರದರ್ಶನದಲ್ಲೇ ದಾಖಲೆ ನಿರ್ಮಿಸಿದ ಅತ್ಯಂತ ಜನಪ್ರಿಯವಾದ ಆರ್ ಕೆ ನಾರಾಯಣ್  ಅವರ “ಮಾಲ್ಗುಡಿ ಡೇಸ್ ಅಥವಾ ಮಾಲ್ಗುಡಿಯ ದಿನಗಳು” ಮತ್ತು ಸ್ವಾಮಿ ಧಾರವಾಹಿಯನ್ನು ನಿರ್ದೇಶಿಸಿದ್ದಾರೆ.ಇಂದೂ ಸಹ ಇದುವರೆಗೆ ಎಲ್ಲ ತರದ ದೂರದರ್ಶನ ಕಾರ್ಯಕ್ರಮಗಳಲ್ಲಿ ಅತಿ ಹೆಚ್ಚು ಜನ ಪ್ರಿಯತೆ ಗಳಿಸಿ ಪಂಡಿತರು, ಬುದ್ಧಿ ಜೀವಿಗಳಿಂದಲೂ ಮೆಚ್ಚುಗೆ ಗಳಿಸಿದ ಮಹೋನ್ನತ ಧಾರವಾಹಿ ‘ಮಾಲ್ಗುಡಿ ಡೇಸ್’.

ಶಂಕರ್ ನಾಗ್ ಅವರ ಪತ್ನಿ ಅರುಂಧತಿ ನಾಗ್  ಕಲಾವಿದೆಯಾಗಿದ್ದ ಅರುಂಧತಿ ಅವರನ್ನು ಇಷ್ಟ ಪಟ್ಟ ನಂತರ ಮದುವೆಯಾದರು. ಮಗಳು ಕಾವ್ಯ. ಈ ದಂಪತಿಗಳು ‘ಸಂಕೇತ್’ ಎಂಬ ಹವ್ಯಾಸಿ ರಂಗ ತಂಡವನ್ನು ಕಟ್ಟಿ ‘ಅಂಜುಮಲ್ಲಿಗೆ’, ‘ಬ್ಯಾರಿಸ್ಟರ್’, ‘ಸಂಧ್ಯಾ ಛಾಯ’, ‘ನೋಡಿ ಸ್ವಾಮಿ ನಾವಿರೋದು ಹೀಗೆ’, ‘ಆಟ ಬೊಂಬಾಟ’, ‘ನಾಗಮಂಡಲ’ ಮುಂತಾದ ಸುಂದರ ನಾಟಕಗಳ ನಿರ್ಮಾಣ, ನಿರ್ವಹಣೆಗಳಲ್ಲಿ ಸಕ್ರಿಯ ಪಾತ್ರವಹಿಸಿದರು. ನಾಟಕರಂಗದಲ್ಲಿಯೇ ಪ್ರಾರಂಭದಿಂದ ಒಡನಾಟ ಬೆಳೆಸಿಕೊಂಡಿದ್ದ ಶಂಕರನಾಗ್ ದಂಪತಿಗಳು ರಂಗಭೂಮಿಯ ಕಲಾವಿದರಿಗೆ ನೆರವಾಗುವಂತೆ, ನಾಟಕಗಳ ಪ್ರದರ್ಶನ ಸುಗಮವಾಗಿರುವಂತೆ ನಾಟಕಮಂದಿರವೊಂದನ್ನು ನಿರ್ಮಿಸಬೇಕೆಂದಿದ್ದರು. ಆ ಯೋಜನೆಯು ಕಾರ್ಯರೂಪಕ್ಕೆ ಬರುವ ಮುಂಚೆಯೇ ಶಂಕರನಾಗ್ ದುರ್ಮರಣಕ್ಕೀಡಾದರು. ಅವರ ಪತ್ನಿ ಅರುಂಧತಿನಾಗ್ ಆ ಯೋಜನೆಯನ್ನು ಮುಂದುವರೆಸಿ, ಕಾರ್ಯರೂಪಕ್ಕೆ ತಂದಿದ್ದಾರೆ.ಆ ರಂಗಮಂದಿರಕ್ಕೆ “ರಂಗಶಂಕರ” ಎಂದು ಹೆಸರಿಟ್ಟರು.”ರಂಗಶಂಕರ” ಬೆಂಗಳೂರಿನ ಪ್ರಮುಖ ಸ್ಥಳವೊಂದರಲ್ಲಿ ಕಾರ್ಯನಿರ್ವಹಿಸುತ್ತಿದೆ.

ಕನ್ನಡ ಕಣ್ಮಣಿ ಡಾ.ರಾಜ್ ಕುಮಾರ್  ಅಭಿನಯಿಸಿರುವ “ಒಂದು ಮುತ್ತಿನ ಕಥೆ”  ಚಿತ್ರವನ್ನು ಶಂಕರನಾಗ್ ನಿರ್ದೇಶಿಸಿದ್ದರು. ನಂದಿ ಬೆಟ್ಟಕ್ಕೆ ರೋಪ್ ವೇ, ಬೆಂಗಳೂರಿಗೆ ಮೆಟ್ರೋ ರೈಲು, ರಂಗಮಂದಿರ ಇವೆಲ್ಲಕ್ಕೂ ನಕ್ಷೆ ತಯಾರಿಸಿ ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆಸರ್ಕಾರದ ಮುಂದೆ ಇಟ್ಟಿದ್ದು ನಮ್ಮ ಶಂಕರ್ ನಾಗ್.ಅಂದಿನ ಜನಪ್ರಿಯ ಮತ್ತು ಅಷ್ಟೇ ಕ್ರಿಯಾಶೀಲ ವ್ಯಕ್ತಿ ಮುಖ್ಯಮಂತ್ರಿ ರಾಮಕೃಷ್ಣ ಹೆಗ್ಗಡೆ ಅವರಿಗೆ ಶಂಕರ್ ಆತ್ಮೀಯ ಗೆಳೆಯ, ಜೊತೆಗೆ ಅಚ್ಚುಮೆಚ್ಚಿನ ವ್ಯಕ್ತಿ ಸೆಪ್ಟೆಂಬರ್ 30. 1990 ರಂದು ದಾವಣಗೆರೆಯ ಹಳ್ಳಿಯೊಂದಾದ ಅನಗೋಡು ಹಳ್ಳಿಯಲ್ಲಿ ಜೋಕುರಸ್ವಾಮಿ ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸಂದರ್ಭವದು ಧಾರವಾಡದಿಂದ ತೆರಳುತ್ತಿದ್ದ ಶಂಕರ್ ನಾಗ್ ಅವರು ಕಾರು ಅಪಘಾತದಿಂದ ತಮ್ಮ ಕೊನೆಯುಸಿರೆಳೆದರು . ಶಂಕರ್ ನಾಗ್ ಪತ್ನಿ ಹಾಗೂ ಓರ್ವ ಮಗಳಾದ ಕಾವ್ಯ ಅವರನ್ನು ಅಗಲಿದರು ಶಂಕರ್ ನಾಗ್, ತಮ್ಮ ಪರಿವಾರವನ್ನಷ್ಟೇ ಅಲ್ಲ ಇಡೀ ಚಿತ್ರೋಧ್ಯಮವನ್ನು ಅತೀ ಕಡಿಮೆ ಸಮಯದಲ್ಲಿ ತನ್ನತ್ತಾ ವಾಲುವಂತೆ ಮಾಡಿದ್ದ ಏಕೈಕ ವ್ಯಕ್ತಿಯನ್ನು ಕಳೆದುಕೊಂಡ ಕನ್ನಡ ಚಿತ್ರೋಧ್ಯಮ ಅನಾಥವಾಯಿತು. 

ಇವರು ಹಲವಾರು ರಾಜ್ಯಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು ಉದಾಹರಣೆಗೆ ಮಿಂಚಿನ ಓಟ ಮತ್ತು ನೋಡಿ ಸ್ವಾಮಿ ನಾವಿರೋದೆ ಹೀಗೆ ಚಿತ್ರಗಳಿಗೆ ಕ್ರಮವಾಗಿ ದ್ವಿತೀಯ ಅತ್ಯುತ್ತಮ ಚಿತ್ರ 1979-80 ರಲ್ಲಿ ಹಾಗೂ ತೃತೀಯ ಅತ್ಯುತ್ತಮ ಚಿತ್ರ 1983-84 ರಲ್ಲಿ, ಪ್ರಶಸ್ತಿಗಳನ್ನು ರಾಜ್ಯಸರ್ಕಾರದ ವತಿಯಿಂದ ತಮ್ಮದಾಗಿಸಿಕೊಂಡರು. ಆಕ್ಸಿಡೆಂಟ್ 1984-85 ರ ಸಾಲಿನ ಪ್ರಥಮ ಅತ್ಯುತ್ತಮ ಚಿತ್ರ ಎಂದು ರಾಜ್ಯ ಸರ್ಕಾರವಷ್ಟೇ ಅಲ್ಲದೆ ಪಾನನಿಷೇಧದ ಬಗೆಗಿನ ಉತ್ತಮ ಚಿತ್ರವೆಂದು ಪರಿಗಣಿತವಾಗಿ ರಜತ ಕಮಲ ಮತ್ತು ನಗದು ಬಹುಮಾನವನ್ನು ರಾಷ್ಟ್ರ ಪ್ರಶಸ್ತಿಯಾಗಿ ಪಡೆದರು. ಕನ್ನಡ ಚಿತ್ರೋಧ್ಯಮಕ್ಕೆ ಕಂಪೂಟರ್ ಚಾಲಿತ ಶಬ್ದಗ್ರಹಣ ತಂತ್ರಜ್ಜಾನವನ್ನು ಕೊಡುಗೆಯಾಗಿತ್ತ ಸಂಕೇತ್ ಸ್ಟುಡಿಯೋ ಶಂಕರ್ ನಾಗ್ ಅವರ ಮತ್ತೊಂದು ಕಲಾ ಕೊಡುಗೆಯಾಗಿತ್ತು. ಸುಮಾರು 90 ಚಿತ್ರಗಳಲ್ಲಿ ಅಭಿನಯಿಸಿದ ಶಂಕರ್ ನಾಗ್, ನಟನೆ ಮತ್ತು ನಿರ್ದೇಶನ ಎರಡರಲ್ಲೂ ಸೈ ಎನ್ನಿಸಿಕೊಂಡವರು. ಅವರ ಚಿತ್ರಗಳನ್ನು ಪ್ರೇಕ್ಷಕರು ಮತ್ತು ವಿಮರ್ಶಕರು ಇಬ್ಬರೂ ಮೆಚ್ಚಿಕೊಂಡದ್ದು ಶಂಕರರ ಹೆಗ್ಗಳಿಕೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

  • ದೇಗುಲ ದರ್ಶನ

    ಮಾಯವಾಗುವ ಶಿವಾಲಯ, ಈ ವಿಸ್ಮಯ ದೇವಾಲಯ ಬಗ್ಗೆ ತಿಳಿಯಿರಿ.

    ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…

  • ಸುದ್ದಿ

    ಸುಮಲತಾ ಅಂಬರೀಶ್ ವಿರುದ್ದ ಶಾಕಿಂಗ್ ಹೇಳಿಕೆ ಕೊಟ್ಟ ಮುಖ್ಯಮಂತ್ರಿ ಕುಮಾರಸ್ವಾಮಿ.!

    ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…

  • ವಿಸ್ಮಯ ಜಗತ್ತು

    ಈ ಮಹಿಳೆ ಭೂತವನ್ನೇ ಕಾಮಕ್ಕೆ ಪ್ರಚೋದಿಸುತ್ತಾಳಂತೆ..!ತಿಳಿಯಲು ಈ ಲೇಖನ ಓದಿ..

    ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.

  • ಸೌಂದರ್ಯ

    ಹಣ್ಣಿನ ಹಾಗು ತರಕಾರಿ ಸಿಪ್ಪೆಗಳನ್ನು ಬಿಸಾಡ್ತಿದ್ದೀರಾ!ನಿಲ್ಲಿ, ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ…..

    ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..

  • ಆಧ್ಯಾತ್ಮ, ಜ್ಯೋತಿಷ್ಯ

    ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ಆಶೀರ್ವಾದದಿಂದ ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…