News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸುದ್ದಿ

ಮೊದಲ ಬಾರಿ ಸರ್ಕಾರಿ ಶಾಲೆಯಲ್ಲಿ ಎಸ್‍ಪಿ ರವಿ ಚನ್ನಣ್ಣನವರ್ ಗ್ರಾಮ ವಾಸ್ತವ್ಯ. ಇದರ ಹಿನ್ನೆಲೆಯೇನು.

34

ರಾಜಕಾರಣಿಗಳಾಯಿತು ಇದೀಗ ಐಪಿಎಸ್ ಅಧಿಕಾರಿಯ ಸರದಿ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್‍ಪಿ ರವಿ ಡಿ ಚನ್ನಣ್ಣನವರ್ ಇದೇ ಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಮಾಡಿದ್ದಾರೆ.

ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಅರೇ ಬೊಮ್ಮನಹಳ್ಳಿ ಗ್ರಾಮದಲ್ಲಿ
ಈದ್ ಮಿಲಾದ್ ಹಬ್ಬವಿರುವ ಹಿನ್ನೆಲೆಯಲ್ಲಿ ರವಿ ಚನ್ನಣ್ಣನವರ್ ಅವರು ಗ್ರಾಮ ವಾಸ್ತವ್ಯ ಮಾಡಿದ್ದಾರೆ. ಕೋಮು ಗಲಭೆ ತಡೆಯಲು ಈ ಪ್ರಯತ್ನ ಮಾಡಲಾಗಿದ್ದು, ಅವರಿಗಾಗಿ ಶಾಲೆಯಲ್ಲಿ ಬೆಡ್, ಬೆಡ್ ಶೀಟ್, ಇನ್ನಿತರ ವಸ್ತುಗಳ ಸಿದ್ಧತೆ ಮಾಡಲಾಗಿತ್ತು. ಇದೇ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ಇಂತಹ ಜನಸ್ನೇಹಿ ಪ್ರಯತ್ನ ಮಾಡಿದೆ.

ಪೂರ್ವ ನಿಗದಿಯಂತೆ ಪೊಲೀಸರ ತಂಡ ಸಂಜೆಯ ವೇಳೆಗೆ ಅರೆ ಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿತು. ಗ್ರಾಮ ಪಂಚಾಯಿತಿಯ ಸದಸ್ಯ ಸೇರಿ ದಂತೆ ಮುಖಂಡರೊಂದಿಗೆ ಪೊಲೀಸರು ಮಾತುಕತೆ ನಡೆಸಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ರಾತ್ರಿ 8.00 ಕ್ಕೆ ಆರಂಭವಾದ ಸಭೆ ಸುಮಾರು  12 ಗಂಟೆವರೆಗೂ ನಡೆಯಿತು. 09 ಗಂಟೆಗೆ ಎಸ್‌ಪಿ ರವಿ ಕೂಡ ಗ್ರಾಮಕ್ಕೆ ಧಾವಿಸಿ ಸಭೆಯಲ್ಲಿ  ಪಾಲ್ಗೊಂಡಿದ್ದರು.

ಪೊಲೀಸ್ ಸೇವೆಗಳು ಜನರಿಗೆ ಹತ್ತಿರವಾಗಲೂ ಹೊಸ ಪ್ರಯೋಗ ಹಾಗೂ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದ ಮೂಡಿಸುವ ಜೊತೆಗೆ ಜನರಿಗೆ ಪೊಲೀಸರ ವ್ಯವಸ್ಥೆ ಹತ್ತಿರವಾಗುವ ನಿಟ್ಟಿನಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ಪೊಲೀಸರೊಂದಿಗೆ ಗ್ರಾಮಸ್ಥರು, ನೆಲಮಂಗಲ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ಭಾಗಿಯಾಗಿದ್ದಾರೆ. ಮಕ್ಕಳು, ಮಹಿಳೆಯರು ಸೇರಿದಂತೆ ಸುಮಾರು 200 ಮಂದಿ ಸಭೆಯಲ್ಲಿ ಪಾಲ್ಗೊಂಡಿದ್ದರು. ಬಸ್ ನಿಲ್ದಾಣ, ಸಾರಿಗೆ ಬಸ್‌ಗಳಲ್ಲಿ ವಿದ್ಯಾರ್ಥಿನಿಯರಿಗೆ ಆಗುತ್ತಿರುವ ಕಿರುಕುಳ ತಪ್ಪಿಸುವಂತೆ ನಾಗರಿಕರು ಪೊಲೀಸರನ್ನು ಕೋರಿದರು ಶಾಲೆಯ ಆವರಣದಲ್ಲಿಯೇ ಪೊಲೀಸರು ರಾತ್ರಿ ಮಲಗುವ ಮುನ್ನ ಗ್ರಾಮದ ಎಲ್ಲ ಬೀದಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಪೊಲೀಸ್ ಸೇವೆಗಳು ಜನರಿಗೆ ಹತ್ತಿರವಾಗಲೂ ಹೊಸ ಪ್ರಯೋಗ ಹಾಗೂ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದ ಮೂಡಿಸುವ ಜೊತೆಗೆ ಜನರಿಗೆ ಪೊಲೀಸರ ವ್ಯವಸ್ಥೆ ಹತ್ತಿರವಾಗುವ ನಿಟ್ಟಿನಲ್ಲಿ ಹೊಸ ಪ್ರಯೋಗ ಮಾಡಲಾಗಿದೆ. ಪೊಲೀಸರೊಂದಿಗೆ ಗ್ರಾಮಸ್ಥರು, ನೆಲಮಂಗಲ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಸಿಬ್ಬಂದಿ ಭಾಗಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ