ಸುದ್ದಿ

ಅಮ್ಮನಿಗೆ ವರ ಬೇಕಿದೆ, ಷರತ್ತುಗಳು ಅನ್ವಯ. ಫೇಸ್ಬುಕ್ ನಲ್ಲಿ ಮಗನ ಪೋಸ್ಟ್ ವೈರಲ್.

67

ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್‍ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ  ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್‍ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೌರವ್, ನನ್ನ ತಂದೆ ಕುಲ್ಟಿಯಲ್ಲಿ ನೌಕರಿ ಮಾಡುತ್ತಿದ್ದರು. 2014ರಲ್ಲಿ ತಂದೆಯ ನಿಧನದ ಬಳಿಕ ಅಮ್ಮ ಮನೆಯಲ್ಲಿ ಏಕಾಂಗಿಯಾಗಿದ್ದಾರೆ ಎಂಬುವುದು ನನ್ನ ಅಭಿಪ್ರಾಯ. ನಾನು ಬೆಳಗ್ಗೆ ಏಳು ಗಂಟೆಗೆ ಕೆಲಸಕ್ಕಾಗಿ ಮನೆಯಿಂದ ಹೋದರೆ ರಾತ್ರಿ ಹಿಂದಿರುಗುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಜೀವನದಲ್ಲಿ ಓರ್ವ ಗೆಳೆಯನ ಅವಶ್ಯಕತೆ ಇರುತ್ತದೆ. ಮದುವೆ ಬಗ್ಗೆ ಅಮ್ಮನ ಜೊತೆ ಮಾತನಾಡಿದ್ದೇನೆ. ಅಮ್ಮ ಸಹ ಈ ಕುರಿತು ಯೋಚನೆ ಮಾಡುತ್ತಿದ್ದಾರೆ. ಏಕಾಂಗಿಯಾಗಿರುವ ಅಮ್ಮನಿಗೆ ಸಂಗಾತಿ ಹುಡುಕುವುದು ನಮ್ಮ ಕರ್ತವ್ಯ. ಹಾಗಾಗಿ ಪೋಸ್ಟ್ ಮಾಡಿದ್ದೇನೆ ಎಂದು ಹೇಳುತ್ತಾರೆ. ಇದನ್ನೂ ಓದಿ

ಜನರು ಬೆನ್ನ ಹಿಂದೆ ನೂರು ಮಾತನಾಡಬಹುದು. ಯಾರಿಗೂ ನನ್ನ ಮುಂದೆ ಮಾತನಾಡಲ್ಲ. ಸಮಾಜದಲ್ಲಿ ಮಾಡುವ ಪ್ರತಿಯೊಂದು ಕೆಲಸಗಳಿಗೆ ಕೊಂಕು ಮಾತನಾಡುವ ಜನ ಇರುತ್ತಾರೆ. ಹಾಗಾಗಿ ಈ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲ್ಲ. ಕೆಲವರು ಪ್ರಚಾರ ಪಡೆದುಕೊಳ್ಳಲು ಈ ರೀತಿಯ ಪೋಸ್ಟ್ ಮಾಡಿದ್ದೇನೆ ಎಂದು ಮಾತನಾಡಿಕೊಂಡಿದ್ದಾರೆ. ಮುಂದೆ ಮಾತನಾಡದೇ ಇರುವ ಜನರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಕೆಲವರು ಸಮಾಜಕ್ಕೆ ಹೆದರಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೇಟು ಹಾಕುತ್ತಾರೆ ಎಂದು ಗೌರವ್ ಬೇಸರ ವ್ಯಕ್ತಪಡಿಸುತ್ತಾರೆ.

ಫೇಸ್‍ಬುಕ್ ನಲ್ಲಿ ನನ್ನ ಮನವಿ ಉತ್ತಮ ಪ್ರತಿಕ್ರಿಯೆಗಳು ಬಂದಿವೆ. ಎಂಜಿನಿಯರ್, ಡಾಕ್ಟರ್ ಮತ್ತು ಶಿಕ್ಷಕರು ಸೇರಿದಂತೆ ಹಲವರು ತಮ್ಮ ಬಯೋಡೇಟಾ ಕಳುಹಿಸಿದ್ದಾರೆ. ಇವುಗಳಲ್ಲಿ ಉತ್ತಮವಾದವರನ್ನು ಆಯ್ಕೆ ಮಾಡುವ ಜವಾಬ್ದಾರಿ ನನ್ನ ಮೇಲಿದೆ ಎಂದು ಗೌರವ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹೆಚ್ಚಾಗಿ ಲಟಿಕೆ ತೆಗೆಯುವ ಅಭ್ಯಾಸ ಇದೆಯಾ, ಹಾಗಾದರೆ ಅಪಾಯ ತಪ್ಪಿದಲ್ಲ.

    ಲಟಿಕೆ ತಗೆಯದ ವ್ಯಕ್ತಿ ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಲಟಿಕೆ ಎಲ್ಲರೂ ತೆಗೆಯುತ್ತಾರೆ, ಇನ್ನು ಕೆಲವರು ಕೈ ಕಾಲು ಬೆರಳುಗಳ ನೋವಿನಿಂದ ಲಟಿಕೆ ತೆಗೆದರೆ ಇನ್ನು ಕೆಲವರು ಲಟಿಕೆಯ ಶಬ್ದವನ್ನ ಕೇಳಲು ಲಟಿಕೆ ತೆಗೆಯುತ್ತಾರೆ. ಇನ್ನು ಕೆಲವರಿಗೆ ಈ ಲಟಿಕೆ ತೆಗೆಯುವುದು ಒಂದು ತರಾ ಚಟ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಕೆಲವು ಜನರು ಇಡೀ ಹೊತ್ತು ಕೈ ಮತ್ತು ಕಾಲುಗಳ ಲಟಿಕೆ ತೆಗೆಯುತ್ತಲೇ ಇರುತ್ತಾರೆ ಮತ್ತು…

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.

  • ಸುದ್ದಿ

    ತಾಯಿಯ ಮೇಲಿನ ಪ್ರೀತಿಗಾಗಿ ಸ್ವಂತ ಅಣ್ಣನನ್ನು ಕೊಂದ ತಮ್ಮ..ಕಾರಣ?

    ತುಮಕೂರು, ಜು. 27- ಬಾಣಂತನಕ್ಕೆ ಹೋಗಿದ್ದ ಪತ್ನಿಯನ್ನು ಮನೆಗೆ ಕರೆಸದ ತಾಯಿ ಜತೆ ಜಗಳವಾಡಿ ಪದೇ ಪದೇ ಅವರ ಮೇಲೆ ಹಲ್ಲೆ ನಡೆಸುತ್ತಿದ್ದ ಅಣ್ಣನ ವರ್ತನೆಯಿಂದ ಕುಪಿತಗೊಂಡ ತಮ್ಮ ರಾತ್ರಿ ಅಣ್ಣನ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಇರಿದು ಕೊಲೆ ಮಾಡಿರುವ ಧಾರುಣ ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರಾಮಗೊಂಡನಹಳ್ಳಿಯ ಮಹೇಶ್ (35) ಕೊಲೆಯಾದ ದುರ್ದೈವಿಯಾಗಿದ್ದು, ಆರೋಪಿ ತಮ್ಮ ಅಂಜನಮೂರ್ತಿ ಪೊಲೀಸರ ಅತಿಥಿಯಾಗಿದ್ದಾನೆ. ಚಿಕ್ಕಹನುಮಯ್ಯ-ಗಂಗಮ್ಮ ದಂಪತಿಯ ಮೊದಲ ಮಗನಾದ ಮಹೇಶ್ ನಿಗೆ ಮದುವೆಯಾಗಿದ್ದು ಬಾಣಂತನಕ್ಕೆಂದು ಪತ್ನಿ ತನ್ನ…

  • ಸುದ್ದಿ

    9ನೇ ತರಗತಿಗೆ ನೇರ ಪ್ರವೇಶ ಪಡೆದ 8 ವರ್ಷದ ಬಾಲಕ : ಕಾರಣವೇನು ಗೊತ್ತಾ ?

    ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…

  • ಸುದ್ದಿ

    ಸೌಂದರ್ಯರನ್ನು ಮದುವೆಯಾಗಲು ಮುಂದಾಗಿದ್ದ ಆ ಟಾಪ್ ನಟ ಯಾರು ಗೊತ್ತಾ? ಶಾಕಿಂಗ್.

    ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…

  • ಜ್ಯೋತಿಷ್ಯ

    ನಿಮಿಷ್ಟದ ದೇವರನ್ನು ನೆನಯುತ್ತಾ ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Sunday, December 5, 2021) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಇಂದು ನೀವು ನಿಮ್ಮ ಹಣವನ್ನು ಧಾರ್ಮಿಕ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಬಹುದು, ಇದರಿಂದ ನೀವು ಮಾನಸಿಕ ಶಾಂತಿಯನ್ನು ಪಡೆಯುವ ಸಂಪೂರ್ಣ ಸಾಧ್ಯತೆ ಇದೆ. ಇತರರ ಸಲಹೆಗಳನ್ನು ಕೇಳುವುದು ಮತ್ತು ಕಾರ್ಯಗತಗೊಳಿಸುವುದು ಪ್ರಮುಖವಾದ ಒಂದು ದಿನ. ನೀವು ಪ್ರಣಯದ ಆಲೋಚನೆಗಳು ಮತ್ತು ಹಿಂದಿನ ಕನಸುಗಳಲ್ಲಿ ಕಳೆದುಹೋಗುತ್ತೀರಿ. ನಿಮ್ಮ ಕೆಲಸದಿಂದ ವಿರಾಮವನ್ನು ತೆಗೆದುಕೊಂಡು ಇಂದು ನೀವು ನಿಮ್ಮ ಸ್ವಲ್ಪ ಸಮಯವನ್ನು ನಿಮ್ಮ ಜೀವನ ಸಂಗಾತಿಯೊಂದಿಗೆ ಕಳೆಯಬಹುದು….